ಬೆಂಗಳೂರು: ಪತ್ನಿ ಬಗ್ಗೆ ಅವಾಚ್ಯವಾಗಿ ಮಾತನಾಡುತ್ತಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಮೂಲತಃ ಕನಕಪುರದವನಾಗಿರುವ ಈತನನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಆಪ್ ಗೆದ್ದರೂ ದೆಹಲಿ ಮೇಯರ್ ಹುದ್ದೆ ಬಿಜೆಪಿಗೆ ಸಿಗುತ್ತಾ?
ಗದಗ (Gadag) ಮೂಲದವನಾಗಿದ್ದ ಬಸವರಾಜ್ ಮತ್ತು ಅಭಿಷೇಕ್ 2 ವರ್ಷಗಳಿಂದ ಪ್ಲಂಬಿಂಗ್, ಪೈಯಿಂಟಿಂಗ್ ಕೆಲಸ ಮಾಡಿಕೊಂಡಿದ್ದರು. ಆದರೆ ಬಸವರಾಜ್ ಮನೆಗೆ ಹೋಗುತ್ತಿರಲಿಲ್ಲ. ಅಭಿಷೇಕ್ ಪತ್ನಿಗೆ ಬಸವರಾಜ್ ಅವಾಚ್ಯ ಶಬ್ದಗಳಿಂದ ಬೈಯುತ್ತಿದ್ದ ಜೊತೆ ಅಪಪ್ರಚಾರ ಮಾಡುತ್ತಿದ್ದ. ಇದರಿಂದ ಕೋಪಗೊಂಡ ಅಭಿಷೇಕ್ ಎಣ್ಣೆ ಮತ್ತಿನಲ್ಲೆ ಬಸವರಾಜ್ ನನ್ನ ಕೊಲೆ ಮಾಡಿರೊದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.
ಸದ್ಯ ಆರೋಪಿಯನ್ನ ಬಂಧಿಸಿರುವ ಪುಟ್ಟೆನಹಳ್ಳಿ ಪೊಲೀಸರು (Puttenahalli Police) ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.