Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲ್ಲುಬಂಡೆಗಳ ನಡುವಿನಿಂದ ಧುಮ್ಮಿಕ್ಕಿ ಹರಿಯುತ್ತಿದೆ ಹನುಮನಗುಂಡಿ ಫಾಲ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಕಲ್ಲುಬಂಡೆಗಳ ನಡುವಿನಿಂದ ಧುಮ್ಮಿಕ್ಕಿ ಹರಿಯುತ್ತಿದೆ ಹನುಮನಗುಂಡಿ ಫಾಲ್ಸ್

Chikkamagaluru

ಕಲ್ಲುಬಂಡೆಗಳ ನಡುವಿನಿಂದ ಧುಮ್ಮಿಕ್ಕಿ ಹರಿಯುತ್ತಿದೆ ಹನುಮನಗುಂಡಿ ಫಾಲ್ಸ್

Public TV
Last updated: January 1, 2024 11:25 am
Public TV
Share
3 Min Read
HANUMAN GUNDI
SHARE

ಪಶ್ಚಿಮ ಘಟ್ಟಗಳ ನಿತ್ಯಹರಿದ್ವರ್ಣದ ಕಾಡಿನ ಮಧ್ಯೆ ಸುಂದರವಾದ ಜಲಪಾತವಿದೆ. ಸುತನಬ್ಬೆ ಜಲಪಾತ ಎಂದೂ ಕರೆಯಲ್ಪಡುವ ಈ ಹನುಮನಗುಂಡಿ ಜಲಪಾತವು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಅತ್ಯಂತ ಪ್ರಸಿದ್ಧ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾಗಿದೆ. ನೀವು ಪ್ರಕೃತಿ ಪ್ರಿಯರಾಗಿದ್ದರೆ ಮತ್ತು ಪ್ರಕೃತಿಯೊಂದಿಗೆ ನಿಮ್ಮ ರಜಾದಿನವನ್ನು ಆನಂದಿಸಲು ಬಯಸಿದರೆ ಈ ಸ್ಥಳ ಉತ್ತಮ ಆಯ್ಕೆಯಾಗಿದೆ. ಇದು ನಿಸರ್ಗದ ನಡುವೆ ನಿಮಗೆ ವಿಶ್ರಾಂತಿಯನ್ನು ಒದಗಿಸುತ್ತದೆ. ಕಾಡುಗಳ ಮಧ್ಯೆ ನೀವು ಮೋಜಿನ ದಿನವನ್ನು ಕಳೆಯಬಹುದು.

ಇದು ನೈಸರ್ಗಿಕ ಬಂಡೆಗಳ ಮೇಲೆ ಧುಮುಕುವ ಶ್ರೇಣೀಕೃತ ಜಲಪಾತವಾಗಿದ್ದು, ಹಚ್ಚ ಹಸಿರಿನ ಕಾಡುಗಳು ಮತ್ತು ಗುಡ್ಡಗಾಡು ಪ್ರದೇಶಗಳಿಂದ ಸುತ್ತುವರಿದ ಪ್ರಶಾಂತ ಸ್ಥಳದಲ್ಲಿದೆ. ಕಾರ್ಕಳ ಮತ್ತು ಲಕ್ಯಾ ಅಣೆಕಟ್ಟುಗಳ ನಡುವೆ ಇರುವ ಹನುಮನಗುಂಡಿ ನಿಷ್ಕಲ್ಮಷ ಜಲಪಾತದ ಸೌಂದರ್ಯ ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತಿದೆ. ಈ ಜಲಪಾತವು ಮಂಗಳೂರು-ಶೋಲಾಪುರ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿದೆ. ಆದರೆ ರಸ್ತೆಯಿಂದಾಗಿ ಅದು ಗೋಚರಿಸುವುದಿಲ್ಲ. ಜಲಪಾತದ ಸ್ಥಳದಲ್ಲಿ ಸಣ್ಣ ಬೋರ್ಡ್ ಇದೆ.

ಜಲಪಾತದ ಬುಡಕ್ಕೆ ಹೋಗಬೇಕೆಂದರೆ ನೀವು ಅರಣ್ಯ ಇಲಾಖೆಯ ಪ್ರವೇಶ ಶುಲ್ಕ ಪಾವತಿಸಬೇಕಾಗುತ್ತದೆ. ಜಲಪಾತದ ನೋಟವನ್ನು ಸವಿಯಲು ಸುಮಾರು 300 ಮೆಟ್ಟಿಲುಗಳ ಮೂಲಕ ಸಾಗಬೇಕು. ನೈಸರ್ಗಿಕ ಸೌಂದರ್ಯದಿಂದ ತುಂಬಿರುವ ಉತ್ತಮ ಪ್ರವಾಸಿ ತಾಣವಾಗಿದ್ದು, ಅಕ್ಟೋಬರ್‍ನಿಂದ ಫೆಬ್ರವರಿ ಅವಧಿಯಲ್ಲಿ ಈ ಸ್ಥಳವು ಪ್ರವಾಸಿಗರಿಂದ ತುಂಬಿರುತ್ತದೆ. ಪ್ರವಾಸಿಗರಿಗೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಒಳಗೆ ಉಳಿಯಲು ಅನುಮತಿಸಲಾಗುವುದಿಲ್ಲ. ಆದರೆ ಒಂದು ದಿನ ಅಂದರೆ ಬೆಳಗ್ಗೆಯಿಂದ ಸಂಜೆಯವರಗೆ ಅಲ್ಲಿನ ಪ್ರಕತಿ ಸೌಂದರ್ಯವನ್ನು ಸವಿಯಬಹುದು.

ಸ್ಥಳದ ವಿಶೇಷತೆ ಏನು?: ಸ್ಥಳೀಯರ ಪ್ರಕಾರ, ಹನುಮಂತನು ಸಂಜೀವಿನಿ ಪರ್ವತವನ್ನು ಹೊತ್ತುಕೊಂಡು ಹೋಗುವಾಗ ಈ ಸ್ಥಳದಲ್ಲಿ ತನ್ನ ಕಾಲನ್ನಿಟ್ಟು ಮುಂದೆ ಸಾಗಿದ್ದಾನೆ. ಹೀಗಾಗಿ ಹನುಂತನಿಂದ ಈ ಗುಂಡಿ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತಿದೆ. ಹನುಮಂತನಿಂದ ಗುಂಡಿ ಸೃಷ್ಟಿಯಾದ ಕಾರಣ ಹನುಮನ ಗುಂಡಿ ಎಂದು ಕರೆಯಲಾಗುತ್ತದೆ. ಅಲ್ಲದೇ ಈ ಜಲಪತಾದ ರಚನೆಯು ಪಾದದ ಆಕಾರದಲ್ಲಿ ಕಾಣಿಸುತ್ತದೆ ಎನ್ನುವುದು ಈ ಸ್ಥಳದ ವಿಶೇಷತೆಯಾಗಿದೆ.

ಹೋಗುವುದು ಹೇಗೆ?: ವಿಮಾನದಲ್ಲಿ ಬೆಂಗಳೂರಿನಿಂದ ಬಂದರೆ ಮಂಗಳೂರು ವಿಮಾನ ನಿಲ್ದಾಣದಿಂದ ಹನುಮನ ಗುಂಡಿ ಜಲಪಾತಕ್ಕೆ 150 ಕಿ.ಮೀ. ಇದ್ದು, ಅಲ್ಲಿಂದ ಬಸ್ ಅಥವಾ ಕಾರಿನ ಮೂಲಕ ಬರಬಹುದು. ರಸ್ತೆಯ ಮೂಲಕ ಬರುವುದಾದರೆ ಶೃಂಗೇರಿಯಿಂದ 26 ಕಿಮೀ ಮತ್ತು ಕುದುರೆಮುಖದಿಂದ 15 ಕಿಮೀ ದೂರ ಇದೆ. ಚಿಕ್ಕಮಗಳೂರಿನ ಬೀರೂರು ಜಲಪಾತಗಳಿಗೆ ಹತ್ತಿರದ ನಿಲ್ದಾಣವಾಗಿದೆ. ಬೀರೂರು ರಸ್ತೆಯ ಮೂಲಕ ಬೆಂಗಳೂರು ಮತ್ತು ಇತರ ಸ್ಥಳಗಳಿಗೆ ಉತ್ತಮ ಸಂಪರ್ಕವಿದೆ. ಬೆಂಗಳೂರಿಂದ 248 ಕಿ.ಮೀ ಮತ್ತು ಮಂಗಳೂರಿನಿಂದ 150 ಕಿ.ಮೀ. ಕ್ರಮಿಸಿದರೆ ಈ ಜಲಪಾತವನ್ನು ವೀಕ್ಷಿಸಬಹುದಾಗಿದೆ.

ಇದು ಕುದುರೆಮುಖ ಪಟ್ಟಣದಿಂದ ಸರಿಸುಮಾರು 20 ಕಿಮೀ ದೂರದಲ್ಲಿದೆ. 22 ಮೀಟರ್ ಎತ್ತರದಿಂದ ಕೆಳಗೆ ಬೀಳುವ ನೀರು ನೈಸರ್ಗಿಕ ಬಂಡೆಗಳ ಮೇಲೆ ಭವ್ಯವಾಗಿ ಬೀಳುವ ಒಂದು ರೋಮಾಂಚನಕಾರಿ ನೋಟ. ಈ ಸ್ಥಳದಲ್ಲಿ ನೀವು ಸ್ನಾನವನ್ನು ಮಾಡಬಹುದು. ಜಲಪಾತದ ಶಾಂತ ಮತ್ತು ಅದ್ಭುತ ಸೌಂದರ್ಯವನ್ನು ಆನಂದಿಸಬಹುದು. ಮಳೆಗಾಲದ ಸಮಯದಲ್ಲಿ ಮತ್ತು ನಂತರ ಈ ಜಲಪಾತಗಳಿಗೆ ಭೇಟಿ ನೀಡುವುದು ಅದ್ಭುತವಾಗಿದೆ, ಏಕೆಂದರೆ ಜಲಪಾತವು ಸಂಪೂರ್ಣ ವೈಭವದಿಂದ ಕೂಡಿರುತ್ತದೆ.

ಬಸ್ಸುಗಳ ಮೂಲಕವಾದರೆ ಚಿಕ್ಕಮಗಳೂರು ಬಸ್ ನಿಲ್ದಾಣದಿಂದ ಕುದುರೆಮುಖ ಪಟ್ಟಣಕ್ಕೆ ನೀವು ಅನೇಕ ಬಸ್ಸುಗಳನ್ನು ಕಾಣಬಹುದು. ಕುದುರೆಮುಖದಿಂದ ನೀವು ಪ್ರವೇಶ ದ್ವಾರಕ್ಕೆ ಟ್ಯಾಕ್ಸಿ ಪಡೆಯಬಹುದು. ಜಲಪಾತವು ಪ್ರವೇಶದ್ವಾರದಿಂದ 3-4 ಕಿಮೀ ದೂರದಲ್ಲಿದೆ, ನೀವು ಅರಣ್ಯ ಇಲಾಖೆಯ ಜೀಪ್ ಮೂಲಕ ಕ್ರಮಿಸಬಹುದು.

ಫಾಲ್ಸ್ ವೀಕ್ಷಿಸಲು ಸಮಯ: ಹನುಮನ ಗುಂಡಿ ಫಾಲ್ಸ್ ವೀಕ್ಷಿಸಲು ಸೋಮವಾರದಿಂದ ಭಾನುವಾರದವರೆಗೆ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಅವಕಾಶವಿದೆ. ಇನ್ನು ಹನುಮಾನ್ ಗುಂಡಿ ಜಲಪಾತವು ವರ್ಷವಿಡೀ ಪ್ರವೇಶಿಸಬಹುದಾದರೂ, ಮಳೆಗಾಲದ ನಂತರದ ತಿಂಗಳುಗಳಲ್ಲಿ ಭೇಟಿ ನೀಡಲು ಉತ್ತಮ ಸಮಯವಾಗಿದೆ. ಹಾದಿಯು ಕೆಸರುಮಯವಾಗಿಲ್ಲ ಮತ್ತು ಮೆಟ್ಟಿಲುಗಳು ಜಾರುವುದಿಲ್ಲ. ನೀವು ಚಳಿಗಾಲ ಮತ್ತು ವಸಂತಕಾಲದಲ್ಲಿ ಸಹ ಭೇಟಿ ನೀಡಬಹುದು. ಒಟ್ಟಿನಲ್ಲಿ ಹನುಮಾನ್ ಗುಂಡಿ ಜಲಪಾತಕ್ಕೆ ಭೇಟಿ ನೀಡಲು ಉತ್ತಮ ಸಮಯವೆಂದರೆ ಸೆಪ್ಟೆಂಬರ್ ನಿಂದ ಏಪ್ರಿಲ್ ಆಗಿದೆ.

ಪ್ರವೇಶ ಶುಲ್ಕ ಎಷ್ಟಿರುತ್ತೆ?: ಫಾಲ್ಸ್ ಅನ್ನು ಅರಣ್ಯ ಇಲಾಖೆ ನಿರ್ವಹಿಸುತ್ತಿದೆ. ಹೀಗಾಗಿ ಪ್ರವೇಶ ಪರವಾನಿಗೆಯಾಗಿ ಪ್ರತಿ ವ್ಯಕ್ತಿಗೆ 50 ರೂ. ಶುಲ್ಕವನ್ನು ವಿಧಿಸುತ್ತದೆ. ವಾಹನ ನಿಲುಗಡೆಗೆ 20-30 ರೂ. ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ. ಈ ಜಲಪಾತದ ಬಳಿ ಯಾವುದೇ ಅಂಗಡಿಗಳು ಇಲ್ಲ. ಹೀಗಾಗಿ ಊಟ, ತಿಂಡಿಯ ವ್ಯವಸ್ಥೆಯನ್ನು ಮಾಡಿಕೊಂಡು ಹೋಗಬೇಕು. ಒಟ್ಟಿನಲ್ಲಿ ಪ್ರಕೃತಿಯನ್ನು ಇಷ್ಟಪಡುವವರಿಗೆ ಹನುಮನ ಗುಂಡಿ ಜಲಪಾತ ಇಷ್ಟವಾಗುವುದಂತೂ ಪಕ್ಕಾ.

TAGGED:Chikkamagaluruhanuman gundi fallsಚಿಕ್ಕಮಗಳೂರುಹನುಮಗುಂಡಿ ಜಲಪಾತ
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
1 hour ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
2 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
2 hours ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
3 hours ago
Yogesh Gowda Murder Case Truth will always prevail Vinay Kulkarni
Bengaluru City

ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ: ವಿನಯ್‌ ಕುಲಕರ್ಣಿ

Public TV
By Public TV
3 hours ago
jd vance 1
Latest

ಇರಾನ್‌ ChatGPT ಬಳಸಿ ತಯಾರಿಸಿದ್ದ ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ: JD Vance

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?