ಹಾವು ತಪ್ಪಿಸಲು ಹೋಗಿ ತುಂಗಾ ನಾಲೆಗೆ ಬಿದ್ದ ಕಾರು – ಮಹಿಳೆ ಸಾವು

Public TV
1 Min Read
car palti tunga river

ಶಿವಮೊಗ್ಗ: ರಸ್ತೆಯಲ್ಲಿ ಅಡ್ಡಲಾಗಿ ಬಂದ ಹಾವು ತಪ್ಪಿಸಲು ಹೋಗಿ ಕಾರೊಂದು ತುಂಗಾ ನಾಲೆಗೆ ಬಿದ್ದಿದ್ದು, ಕಾರಿನಲ್ಲಿದ್ದ ಮಹಿಳೆಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರು ಬಳಿ ಬೆಳಗಿನ ಜಾವ ನಡೆದಿದೆ.

ಸುಷ್ಮಾ (28) ಮೃತ ದುರ್ದೈವಿ. ಚಾಲಕ ಚೇತನ್ ಕುಮಾರ್‌ ಅವರು ತನ್ನ ತಾಯಿಯ ಅನಾರೋಗ್ಯದ ಹಿನ್ನೆಲೆ ಗಾಜನೂರಿನಿಂದ ತುಮಕೂರಿಗೆ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಅಡ್ಡಲಾಗಿ ಹಾವು ಬಂದ ಪರಿಣಾಮ ಕಾರಿನ ಬ್ರೇಕ್ ಹಾಕಿದ್ದಾರೆ. ಕಾರು ನಿಯಂತ್ರಣಕ್ಕೆ ಸಿಗದೇ ತುಂಗಾ ನಾಲೆಗೆ ಪಲ್ಟಿಯಾಗಿ ಬಿದ್ದಿದೆ. ಈ ಸಂದರ್ಭದಲ್ಲಿ ಚಾಲಕ ಕಾರು ನಾಲೆಗೆ ಪಲ್ಟಿಯಾಗುತ್ತಿದ್ದಂತೆ ಸ್ಥಳೀಯ ಜನರನ್ನು ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ. ಇದನ್ನೂ ಓದಿ: ತೈಲ ಖರೀದಿಸಲು ಶ್ರೀಲಂಕಾಗೆ 3 ಸಾವಿರ ಕೋಟಿ ಸಾಲ ನೀಡಿದ ಭಾರತ

Police Jeep

ಜನರು ಬೆಳಗಿನ ಜಾವ ಆಗಿದ್ದರಿಂದ ಸಹಾಯಕ್ಕಾಗಿ ಯಾರೂ ಬಂದಿರಲಿಲ್ಲ. ಮುಂಜಾನೆ ಜನರು ಸ್ಥಳಕ್ಕೆ ಹೋಗಿ ಸಹಾಯ ಮಾಡುವಷ್ಟರಲ್ಲಿ ಚೇತನ್ ಕುಮಾರ್ ಅವರ ಪತ್ನಿ ಸುಷ್ಮಾ ಸಾವನ್ನಪ್ಪಿದ್ದಾರೆ. ಸ್ಥಳೀಯರು ಚಾಲಕ ಚೇತನ್‍ರವರನ್ನು ಸುರಕ್ಷಿತವಾಗಿ ದಡಕ್ಕೆ ಸೇರಿಸಿದ್ದಾರೆ. ಇದನ್ನೂ ಓದಿ: ಅಜ್ಮೀರ್ ದರ್ಗಾಕ್ಕೆ ಚಾದರ ಕಳಿಸಿಕೊಟ್ಟ ಪ್ರಧಾನಿ ಮೋದಿ

ಘಟನೆ ಕುರಿತು ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ನಾಲೆಯಲ್ಲಿ ಬಿದ್ದಿದ್ದ ಕಾರನ್ನು ಮೇಲಕ್ಕೆ ಎತ್ತಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *