ಆರತಕ್ಷತೆ ಮುಗಿಸಿ ಬರುತ್ತಿದ್ದವರ ಕಾರು ಪಲ್ಟಿ – ಇಬ್ಬರು ಶಿಕ್ಷಕರು ಸಾವು, ಮತ್ತಿಬ್ಬರು ಗಂಭೀರ

Public TV
1 Min Read
Tumakuru Accident

ತುಮಕೂರು: ಚಲಿಸುತಿದ್ದ ಕಾರು (Car) ಪಲ್ಟಿಯಾಗಿ ಇಬ್ಬರು ಶಿಕ್ಷಕರು (Teachers) ಸಾವನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರು (Tumakuru) ಜಿಲ್ಲೆ ಪಾವಗಡ (Pavagada) ತಾಲೂಕಿನ ಕಣಿವೇನಹಳ್ಳಿ ಗೇಟ್ ಬಳಿ ನಡೆದಿದೆ.

ಧನಂಜಯ (58) ಹಾಗೂ ಶ್ರೀಕೃಷ್ಣ (49) ಘಟನೆಯಲ್ಲಿ ಮೃತಪಟ್ಟಿದ್ದಾರೆ. ನರಸಿಂಹ ಮತ್ತು ವೆಂಕಟಾಚಲಪತಿಗೆ ಗಂಭೀರ ಗಾಯವಾಗಿದೆ. ತುಮಕೂರಿನಿಂದ ಮದುವೆ ಆರತಕ್ಷತೆ ಕಾರ್ಯಕ್ರಮ ಮುಗಿಸಿ ಪಾವಗಡಕ್ಕೆ ವಾಪಸ್ ಹೋಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಇದನ್ನೂ ಓದಿ: ಗೋವಾದಿಂದ ಆಂಧ್ರಕ್ಕೆ ಅಕ್ರಮ ಸಾಗಾಟ – 28 ಲಕ್ಷ ರೂ. ಮೌಲ್ಯದ ಮದ್ಯ ವಶ

ಮೃತರು ಸೇರಿದಂತೆ ಕಾರಿನಲ್ಲಿದ್ದ 4 ಜನರು ಶಿಕ್ಷಕರಾಗಿ ಸೇವೆ ಸಲ್ಲಿಸುತಿದ್ದರು. ಘಟನೆ ಸಂಬಂಧ ಪಾವಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಕಳೆದ ಐದು ದಿನದಲ್ಲಿ ಧರೆಗುರುಳಿದ 271 ಮರ

Share This Article