Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Exclusive |  ಕ್ಯಾಬಿನೆಟ್ ಕ್ಲೈಮ್ಯಾಕ್ಸ್, ಜಾತಿ ಗಣತಿ ಮಂಡನೆಗೆ ಪ್ಲ್ಯಾನ್‌ – ಮಾಸ್ಟರ್‌ಸ್ಟ್ರೋಕ್‌ ಕೊಡ್ತಾರಾ ಸಿಎಂ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Exclusive |  ಕ್ಯಾಬಿನೆಟ್ ಕ್ಲೈಮ್ಯಾಕ್ಸ್, ಜಾತಿ ಗಣತಿ ಮಂಡನೆಗೆ ಪ್ಲ್ಯಾನ್‌ – ಮಾಸ್ಟರ್‌ಸ್ಟ್ರೋಕ್‌ ಕೊಡ್ತಾರಾ ಸಿಎಂ?

Bengaluru City

Exclusive |  ಕ್ಯಾಬಿನೆಟ್ ಕ್ಲೈಮ್ಯಾಕ್ಸ್, ಜಾತಿ ಗಣತಿ ಮಂಡನೆಗೆ ಪ್ಲ್ಯಾನ್‌ – ಮಾಸ್ಟರ್‌ಸ್ಟ್ರೋಕ್‌ ಕೊಡ್ತಾರಾ ಸಿಎಂ?

Public TV
Last updated: April 9, 2025 7:53 am
Public TV
Share
3 Min Read
jayaprakash hegde caste census report siddaramaiah
SHARE

ಬೆಂಗಳೂರು: ಪರ, ವಿರೋಧದ ಚರ್ಚೆ ನಡುವೆಯೇ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 2015ರಲ್ಲಿ ನಡೆಸಿದ್ದ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ (ಜಾತಿವಾರು ಜನಗಣತಿ) ವರದಿ ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಮಂಡನೆಯಾಗುವ ಸಾಧ್ಯತೆಯಿದೆ.

ತಳ ಸಮುದಾಯಗಳು ಸೇರಿದಂತೆ ಹಿಂದುಳಿದ ವರ್ಗಗಳ ಸಮಾಜದವರು ಜಾತಿ ಗಣತಿ ವರದಿ ಸ್ವೀಕಾರ ಮತ್ತು ಜಾರಿ ಮಾಡುವಂತೆ ಆಗ್ರಹಿಸುತ್ತಿದ್ದರೆ ಮೇಲ್ವರ್ಗದ ಲಿಂಗಾಯತ, ಒಕ್ಕಲಿಗ ಸಮುದಾಯಗಳು ಸಮೀಕ್ಷೆ ಅವೈಜ್ಞಾನಿಕವಾಗಿದ್ದು ವರದಿ ಸ್ವೀಕರಿಸದಂತೆ ಒತ್ತಾಯಿಸುತ್ತಿವೆ. ಹಾಗಾಗಿ ಜಾತಿ ಗಣತಿ ವರದಿ ಬಗ್ಗೆ ಸರ್ಕಾರಗಳು ಯಾವುದೇ ನಿರ್ಧಾರ ತೆಗೆದುಕೊಳ್ಳದೇ ಮುಂದೂಡುತ್ತಲೇ ಬಂದಿದ್ದವು.

ಸಿದ್ದರಾಮಯ್ಯ (Siddaramaiah) ಸರ್ಕಾರ ರಚನೆಯಾದ ನಂತರ ಹಲವು ಬಾರಿ ಕ್ಯಾಬಿನೆಟ್‌ ಸಭೆಯಲ್ಲಿ ಈ ವರದಿ ಮಂಡನೆಯಾಗಲಿದೆ ಎಂಬ ವಿಚಾರ ಮುನ್ನೆಲೆಗೆ ಬಂದಿತ್ತು. ಆದರೆ ಈಗ ಶುಕ್ರವಾರ ನಡೆಯಲಿರುವ ಸಭೆಯಲ್ಲಿ ಈ ವರದಿ ಮಂಡನೆಯಾಗುವ ಸಾಧ್ಯತೆಯಿದೆ. ಒಂದು ವೇಳೆ ಮಂಡನೆಯಾದರೆ ಕರ್ನಾಟಕ ರಾಜಕಾರಣದಲ್ಲಿ (Karnataka Politics) ಅಲ್ಲೋಲ್ಲ ಕಲ್ಲೋಲ ಸೃಷ್ಟಿಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಕಾನೂನು ಸ್ವರೂಪ ಪಡೆದ ʻವಕ್ಫ್ ಬಿಲ್ʼ – ಕೇಂದ್ರ ಅಧಿಸೂಚನೆ

Congress Cabinet Meeting

 

ಈಗಾಗಲೇ ಹಿಂದುಳಿದ ವರ್ಗಗಳ ಇಲಾಖೆ ಅಡಿ ಕ್ಯಾಬಿನೆಟ್ ಅಜೆಂಡಾದಲ್ಲಿ ಈ ವಿಚಾರ ಪ್ರಸ್ತಾಪವಾಗಿದೆ. ವರದಿಯನ್ನು ಮಂಡಿಸಿ ಚರ್ಚೆ ನಡೆಸಲು ಈಗಾಗಲೇ ಸಿಎಂ ಸಿದ್ದರಾಮಯ್ಯ ಸಿದ್ಧತೆ ಮಾಡಿದ್ದಾರೆ. ಮಂಡನೆಯಾದ ಬಳಿಕ ಜಾತಿಗಣತಿ ವರದಿ ಅಂಗೀಕಾರವೋ? ಅಥವಾ ಸಂಪುಟ ಉಪಸಮಿತಿ ರಚನೆಯೋ ಎಂಬ ಪ್ರಶ್ನೆಗೆ ಶುಕ್ರವಾರ ಉತ್ತರ ಸಿಗಲಿದ್ದು ಸಿದ್ದರಾಮಯ್ಯನವರ ಕ್ಯಾಬಿನೆಟ್ ನಡೆ ಕುತೂಹಲ ಮೂಡಿಸಿದೆ.

ಕಳೆದ ವರ್ಷದ ಫೆಬ್ರವರಿ 14ರಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಜಾತಿ ಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದರು. ಒಂದು ವರ್ಷದಿಂದಲೂ ವರದಿಯನ್ನು ಮುಟ್ಟದೇ ರಾಜ್ಯ ಸರ್ಕಾರ ಸುಮ್ಮನಿತ್ತು. ಕಳೆದ ವರ್ಷ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕ್ಯಾಬಿನೆಟ್‌ಗೆ ವರದಿ ತರಲು ಹಿಂದೇಟು ಹಾಕಿತ್ತು. ಆದರೆ ಈಗ ಕ್ಯಾಬಿನೆಟ್ ಮುಂದೆ ವರದಿ ಇಡಲು ಸರ್ಕಾರ ಸಿದ್ಧತೆ ನಡೆಸಿದೆ. ಇದನ್ನೂ ಓದಿ: ಡೀಸೆಲ್ ಬೆಲೆ ಏರಿಕೆ – ಖಾಸಗಿ ಬಸ್ ಪ್ರಯಾಣ ದರ ದುಬಾರಿ!

ಜಾತಿ ಗಣತಿ ಉದ್ದೇಶ ಏನು?
1931ರ ಜನಗಣತಿಯ ನಂತರ ಯಾವುದೇ ಜನಗಣತಿ ದಾಖಲೆಗಳಿಂದ ಜಾತಿ / ಸಮುದಾಯವಾರು ಜನಸಂಖ್ಯೆಯ ಅಂಕಿ-ಅಂಶಗಳು ಖಚಿತವಾಗಿ ದೊರೆಯುತ್ತಿಲ್ಲ. ಜಾತಿವಾರು ಜನಗಣತಿ ಅಂಕಿ-ಅಂಶಗಳು ಲಭ್ಯವಿಲ್ಲದೇ ಇರುವುದರಿಂದ ಕಾರ್ಯಕ್ರಮಗಳ ಮುಖಾಂತರ ಸೌಲಭ್ಯಗಳನ್ನು ಸಾಮಾಜಿಕ ನ್ಯಾಯ ತತ್ವದ ಆಧಾರದ ಮೇಲೆ ಒದಗಿಸುವುದು ಸರ್ಕಾರಕ್ಕೆ ಕಷ್ಟವಾಗುತ್ತಿತ್ತು.

Cabinet

ಸಮುದಾಯಗಳ ಈಗಿರುವ ಸ್ಥಿತಿಗಳಿಗೆ ಸಂಬಂಧಿಸಿದಂತೆ ವೈಜ್ಞಾನಿಕವಾದ ವಿಶ್ಲೇಷಣೆ ನಡೆಸುವುದು, ಜನಸಂಖ್ಯೆಯ ಪ್ರಮಾಣವನ್ನು ತಿಳಿಯುವುದು ಅಗತ್ಯವಾಗಿದೆ ಎಂಬ ಉದ್ದೇಶಕ್ಕಾಗಿ ಆಗಿನ ಸಿದ್ದರಾಮಯ್ಯ ಸರ್ಕಾರ ಸಮೀಕ್ಷೆಗೆ ಆದೇಶಿಸಿತ್ತು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿಗಳು ಹಾಗೂ ಇತರ ಜಾತಿಗಳನ್ನೊಳಗೊಂಡಂತೆ ರಾಜ್ಯದ ಪ್ರತಿಯೊಂದು ಕುಟುಂಬದ ಸಮಗ್ರ ಸಮೀಕ್ಷೆಯನ್ನು ಕೈಗೊಂಡು ವಿವಿಧ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಬಗ್ಗೆ ವಿಶ್ಲೇಷಣೆ ಮಾಡಿ, ಹಿಂದುಳಿದ ವರ್ಗಗಳ ಪಟ್ಟಿಯನ್ನು ಪರಿಷ್ಕರಿಸುವ ಕುರಿತು ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಜವಾಬ್ದಾರಿಯನ್ನು ಆಯೋಗಕ್ಕೆ ‌ನೀಡಲಾಗಿತ್ತು. ರಾಜ್ಯದ ಎಲ್ಲ ವರ್ಗಗಳ / ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ಮುಖಾಂತರ ಸಮಗ್ರ ಅಂಕಿ-ಅಂಶಗಳನ್ನು ಸಂಗ್ರಹಣೆಗೆ ಸೂಚಿಸಲಾಗಿತ್ತು.

ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಅರಿಯಲು 158.47 ಕೋಟಿ ರೂ. ವೆಚ್ಚದಲ್ಲಿ ಹೆಚ್‌. ಕಾಂತರಾಜ (Kantharaju) ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು 2015ರಲ್ಲಿ ಸಮೀಕ್ಷೆ (Socio-Economic Survey) ನಡೆಸಿತ್ತು. ಈ ಆಯೋಗದ ಅವಧಿ ಮುಕ್ತಾಯದ ಸಂದರ್ಭದಲ್ಲಿ ವರದಿಯನ್ನು ಅಧಿಕೃತವಾಗಿ ಸರ್ಕಾರಕ್ಕೆ ಸಲ್ಲಿಸಿರಲಿಲ್ಲ. ಕಳೆದ ವರ್ಷ ಕೆ. ಜಯಪ್ರಕಾಶ್‌ ಹೆಗ್ಡೆ (Jayaprakash Hegde) ಅಧ್ಯಕ್ಷತೆಯ ಈಗಿನ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ವಿವಿಧ ವಿಷಯಕ್ಕೆ ಸಂಬಂಧಿಸಿದ ಟಿಪ್ಪಣಿಗಳೊಂದಿಗೆ 2015ರ ಸಮೀಕ್ಷಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿತ್ತು.

TAGGED:cabinetcastecongresskarnatakasiddaramaiahಕರ್ನಾಟಕಕಾಂಗ್ರೆಸ್ಕ್ಯಾಬಿನೆಟ್ಜಾತಿ ಸಮೀಕ್ಷೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories
Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories
Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post

You Might Also Like

MM Naravane Book
Latest

ತಮ್ಮ ಪುಸ್ತಕ ವಿವಾದದ ಬಗ್ಗೆ ಕೊನೆಗೂ ಮೌನ ಮುರಿದ ನರವಾಣೆ

Public TV
By Public TV
6 minutes ago
TIRUPATI LADDU
Latest

ತಿರುಪತಿ ಲಡ್ಡು ಕಲಬೆರಕೆ ವಿವಾದ – ಸಿಬಿಐ ಬಳಿಕ ಇ.ಡಿ ಎಂಟ್ರಿ

Public TV
By Public TV
15 minutes ago
Byrati Basavaraj 1
Bengaluru City

ಬಿಕ್ಲುಶಿವ ಕೊಲೆ ಕೇಸ್ – ಬೈರತಿ ಬಸವರಾಜುಗೆ ಮತ್ತೆ ಸಂಕಷ್ಟ, ನಿರೀಕ್ಷಣಾ ಜಾಮೀನು ಅರ್ಜಿ ವಜಾ

Public TV
By Public TV
33 minutes ago
Mysuru Prathap simha
Districts

ಯತೀಂದ್ರ ವಿರುದ್ಧ ಮತ್ತೆ ವರ್ಗಾವಣೆ ದಂಧೆ ಬಾಂಬ್ – ಪ್ರತಾಪ್ ಸಿಂಹ ಕಿಡಿ

Public TV
By Public TV
1 hour ago
Tim Seifert and Finn Allen
Cricket

T20 ವಿಶ್ವಕಪ್‌ನಲ್ಲಿ ಇತಿಹಾಸ ಸೃಷ್ಟಿಸಿದ ಅಲೆನ್, ಸೀಫರ್ಟ್ ಜೊತೆಯಾಟ; ಯುಎಇ ವಿರುದ್ಧ ನ್ಯೂಜಿಲೆಂಡ್‌ಗೆ 10 ವಿಕೆಟ್‌ಗಳ ಜಯ

Public TV
By Public TV
2 hours ago
Karnataka State Seeds Corporation
Bengaluru City

ಕರ್ನಾಟಕ ರಾಜ್ಯ ಬೀಜ ನಿಗಮದಿಂದ ಸರ್ಕಾರಕ್ಕೆ 1.69 ಕೋಟಿ ರೂ. ಲಾಭಾಂಶ ಪಾವತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?