ರಾಯಚೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರ ಮಾನ್ವಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಪೈಪೋಟಿ ನೀಡಿ ಎರಡನೇ ಸ್ಥಾನ ಪಡೆದಿದ್ದ ಡಾ.ತನುಶ್ರಿ ಜಾತಿ ಪ್ರಮಾಣಪತ್ರ ರದ್ದಾಗಿದೆ.
ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಚುನಾವಣೆ ಎದುರಿಸಿದ್ದಾರೆ ಎಂದು ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಕಾರ್ಯದರ್ಶಿ ಎನ್.ರಘುವೀರ ನಾಯಕ ಹಾಗೂ ರಂಗಾರೆಡ್ಡಿ ಎಂಬುವವರು ದೂರು ದಾಖಲಿಸಿದ್ದರು. ಇದನ್ನೂ ಓದಿ: ಚುನಾವಣಾ ರಾಜಕಾರಣಕ್ಕೆ ಈಶ್ವರಪ್ಪ ಗುಡ್ಬೈ
ಬೀದರ್ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಜಾತಿ ಪ್ರಮಾಣಪತ್ರ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ನಮ್ಮ ಹೋರಾಟಕ್ಕೆ ಐದು ವರ್ಷದ ಬಳಿಕ ಜಯ ಸಿಕ್ಕಿದೆ ಎಂದು ರಘುವೀರ್ ನಾಯಕ್ ಹೇಳಿದ್ದಾರೆ.
ಹಿಂದುಳಿದ ವರ್ಗದ ಧನಗಾರ ಜಾತಿಯಲ್ಲಿದ್ದರೂ ಗೊಂಡ ಎಂದು ನಮೂದಿಸಿ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಪಡೆದಿದ್ದರು ಎಂದು ಆರೋಪಿಸಿ ರಾಯಚೂರು ಹಾಗೂ ಬೀದರ್ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ತನುಶ್ರೀ ಕಳೆದ ಚುನಾವಣೆಯಲ್ಲಿ 37,733 ಮತಗಳನ್ನು ಪಡೆದು ರಾಜಾ ವೆಂಕಟಪ್ಪ ನಾಯಕ್ ವಿರುದ್ಧ ಪರಾಭವಗೊಂಡಿದ್ದರು. ಇದನ್ನೂ ಓದಿ: ಪಕ್ಷೇತರನಿಗೆ ಬಿದ್ದ ಅನಿರೀಕ್ಷಿತ ಮತ ಸಿದ್ದು ಪಾಲಿಗೆ ವರವಾಯ್ತು!