ಕಾರವಾರ: ಬೈಕ್ ಮತ್ತು ಟೆಂಫೋ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮಂಜುನಾಥ್ ಬಸನಗೌಡ ಮತ್ತು ಹನುಮಂತ ವಾಲೇಕರ ಅಪಘಾತದಲ್ಲಿ ಮೃತ ಬೈಕ್ ಸವಾರರು. ಮೃತರು ಮೂಲತಃ ಧಾರವಾಡದ ನಿವಾಸಿಗಳಾಗಿದ್ದಾರೆ. ಮೃತರು ಉಡುಪಿಯಿಂದ ಕಲಘಟಗಿಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.
ಈ ಸಂಬಂಧ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.