Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ ಮೊದಲ ವರ್ಟಿಕಲ್ ಪಂಬನ್ ರೈಲ್ವೆ ಬ್ರಿಡ್ಜ್ – ಇದರ ವಿಶೇಷತೆಯೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇಶದ ಮೊದಲ ವರ್ಟಿಕಲ್ ಪಂಬನ್ ರೈಲ್ವೆ ಬ್ರಿಡ್ಜ್ – ಇದರ ವಿಶೇಷತೆಯೇನು?

Latest

ದೇಶದ ಮೊದಲ ವರ್ಟಿಕಲ್ ಪಂಬನ್ ರೈಲ್ವೆ ಬ್ರಿಡ್ಜ್ – ಇದರ ವಿಶೇಷತೆಯೇನು?

Public TV
Last updated: April 2, 2025 4:14 pm
Public TV
Share
3 Min Read
Pamban Bridge
SHARE

ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆಗೆ ಸಜ್ಜಾಗಿದೆ. ರಾಮೇಶ್ವರಂಗೆ ತೆರಳುವ ಭಕ್ತರಿಗೆ, ಧನುಷ್ಕೋಡಿ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಪಂಬನ್ ಬ್ರಿಡ್ಜ್‌(Pamban Bridge) ಅನ್ನು ನಿರ್ಮಿಸಲಾಗಿದೆ. ಸಮುದ್ರದಲ್ಲಿ ನಿರ್ಮಿಸಲಾದ ಮೊದಲ ವರ್ಟಿಕಲ್ ಲಿಫ್ಟ್ ಸೇತುವೆ ಇದಾಗಿದ್ದು, ಈ ಸೇತುವೆಯನ್ನು ರಾಮನವಮಿಯಂದು ಪ್ರಧಾನಿ ಮೋದಿಯವರು(Narendra Modi) ಲೋಕಾರ್ಪಣೆ ಮಾಡಲಿದ್ದಾರೆ.

Pamban Bridge 5

ಪಂಬನ್ ರೈಲು ಸೇತುವೆಯ ನಿರ್ಮಾಣದ ಕಾರ್ಯವನ್ನು 1870ರಲ್ಲಿ ಬ್ರಿಟಿಷ್ ಸರ್ಕಾರವು ಶ್ರೀಲಂಕಾಕ್ಕೆ ವ್ಯಾಪಾರ ಸಂಪರ್ಕವನ್ನು ವಿಸ್ತರಿಸಲು ನಿರ್ಧರಿಸಿದಾಗ ಪ್ರಾರಂಭಿಸಲಾಯಿತು. ಸುಮಾರು 2.2 ಕಿ.ಮೀ.ಗಳಷ್ಟು ವಿಸ್ತಾರವಿದ್ದ, 143 ಪಿಯರ್‌ಗಳನ್ನು ಹೊಂದಿರುವ ಇದನ್ನು 1914ರಲ್ಲಿ ಅಧಿಕೃತವಾಗಿ ಕಾರ್ಯರೂಪಕ್ಕೆ ತರಲಾಯಿತು.

ಪಂಬನ್ ರೈಲು ಸೇತುವೆಯು ಶೆರ್ಜರ್ ರೋಲಿಂಗ್ ಲಿಫ್ಟ್ ತಂತ್ರಜ್ಞಾನದ ಮೂಲಕ ಕಾರ್ಯನಿರ್ವಹಿಸುತ್ತದೆ. ಇದು ದೋಣಿ ಅಥವಾ ಹಡಗು ಚಲಿಸುವಾಗ 90 ಡಿಗ್ರಿ ಕೋನದಲ್ಲಿ ಮೇಲಕ್ಕೆ ತೆರೆಯುತ್ತದೆ. ಸಮುದ್ರದ ಮೇಲೆ ನಿರ್ಮಿಸಲಾದ ಭಾರತದ ಅತಿ ಉದ್ದದ ಸೇತುವೆಯಾಗಿದೆ. ಪಂಬನ್ ರೈಲ್ವೆ ಸೇತುವೆಯು 1988ರವರೆಗೆ ರಾಮೇಶ್ವರಂ ಮತ್ತು ಮುಖ್ಯ ಭೂಭಾಗದ ನಡುವಿನ ಏಕೈಕ ಸಂಪರ್ಕವಾಗಿತ್ತು. ನಂತರ ಅದಕ್ಕೆ ಸಮಾನಾಂತರವಾಗಿ ರಸ್ತೆ ಸೇತುವೆಯನ್ನು ನಿರ್ಮಿಸಲಾಯಿತು.

Pamban Bridge 3

78 ಮೀಟರ್ ಉದ್ದ ಮತ್ತು 380 ಟನ್ ತೂಕದ ಸೇತುವೆಯ ಒಂದು ಭಾಗವು ಹಡಗು ಸಂಚಾರಕ್ಕಾಗಿ 17 ಮೀಟರ್ ಎತ್ತರಕ್ಕೆ ಹೋಗುತ್ತದೆ. ತಮಿಳುನಾಡಿನ ಮಂಟಪಂದಿಂದ ರಾಮೇಶ್ವರಂ ದ್ವೀಪವನ್ನು ಸಂಪರ್ಕಿಸಲು ಆಧುನಿಕ ತಂತ್ರಜ್ಞಾನದ ಸಹಾಯದಿಂದ ಈ ಸೇತುವೆಯನ್ನು ನಿರ್ಮಿಸಲಾಗಿದೆ. 111 ವರ್ಷಗಳ ಹಿಂದೆ ಇಲ್ಲಿ ನಿರ್ಮಿಸಿದ್ದ ಹಳೆಯ ಸೇತುವೆ ಶಿಥಿಲಗೊಂಡಿದ್ದರಿಂದ ಅದರ ಪಕ್ಕದಲ್ಲಿಯೇ ಈ ಹೊಸ ಸೇತುವೆಯನ್ನು ನಿರ್ಮಿಸಲಾಗಿದೆ. ಈ ಸೇತುವೆಯಲ್ಲಿ ಟ್ರ್ಯಾಕ್ ಡಬ್ಲಿಂಗ್ ಹಾಗೂ ವಿದ್ಯುತ್ ಕಾಮಗಾರಿ ಕೂಡ ಮಾಡಲಾಗಿದೆ. ರೈಲ್ವೆ ಟ್ರ್ಯಾಕ್ ಸೇರಿದಂತೆ ಈ ಸೇತುವೆಯ ತೂಕ 660 ಮೆಟ್ರಿಕ್ ಟನ್ ಇದೆ.

ಸಮುದ್ರದಲ್ಲಿ ಸೇತುವೆ ನಿರ್ಮಾಣಕ್ಕೆ ಮರಳು ಹಾಗೂ ಉಪ್ಪು‌ನೀರು ಸವಾಲಾಗಿರುತ್ತದೆ. ಇದರಿಂದ ಬೇಗ ತುಕ್ಕು ಸಹ ಹಿಡಿಯುತ್ತದೆ. ಇದನ್ನು ತಡೆಗಟ್ಟಲು ಸಾಕಷ್ಟು ತಾಂತ್ರಿಕತೆ ಬಳಸಿಕೊಳ್ಳಲಾಗಿದೆ. ಹಳೇ ಬ್ರಿಡ್ಜ್ 1914ರಿಂದ 2021ರವರೆಗೆ ಕಾರ್ಯನಿರ್ವಹಿಸಿದೆ. ಈ ಬಾರಿಯ ನೂತನ ಪಂಬನ್ ಬ್ರಿಡ್ಜ್ ತುಕ್ಕು ಹಿಡಿಯಬಾರದು ಎಂಬ ಕಾರಣಕ್ಕೆ ನಿರಂತರವಾಗಿ ಡಬಲ್ ಕೋಟ್ ಪೇಯಿಂಟ್ ಹಾಕಲಾಗಿದೆ. ಇದು ತುಕ್ಕು ರಹಿತ ಪೇಯಿಂಟ್ ಆಗಿದೆ.

Pamban Bridge 1

ಹಳೇ ಬ್ರಿಡ್ಜ್‌ ಮಾನವ ಸಹಿತವಾಗಿ ಕಾರ್ಯನಿರ್ವಹಿಸುತ್ತಿತ್ತು. ಆದರೆ ಈ ನೂತನ ಬ್ರಿಡ್ಜ್‌ ಮಾನವ ರಹಿತವಾಗಿ ಕಾರ್ಯನಿರ್ವಹಿಸುತ್ತದೆ. ಇದು ಎಲೆಕ್ಟ್ರಿಕಲ್ ಆಟೋ‌ಮೆಕ್ಯಾನಿಕಲ್ ತಂತ್ರಜ್ಞಾನ ಒಳಗೊಂಡಿದೆ. ಹಳೇ ಬ್ರಿಡ್ಜ್ ತೆರೆದುಕೊಳ್ಳಲು 45 ನಿಮಿಷ ಕಾಲಾವಕಾಶ ತೆಗೆದುಕೊಳ್ಳುತ್ತಿತ್ತು. ಆದರೆ ಹೊಸ ಬ್ರಿಡ್ಜ್ 5.3 ನಿಮಿಷದಲ್ಲಿ ತೆರೆದುಕೊಳ್ಳಲಿದೆ. ಒಂದು ಬಾರಿ ಈ ಸೇತುವೆಯನ್ನು ಮೇಲೆ ಎತ್ತಲು 120 ಕಿಲೋ ವ್ಯಾಟ್ ವಿದ್ಯುತ್ ಬೇಕಾಗುತ್ತದೆ.

ಇದರ ವಿಶೇಷತೆಯೇನು?
– 2.5 ಕಿ.ಮೀ ಉದ್ದದ ದೇಶದ ಮೊದಲ ವರ್ಟಿಕಲ್‌ ಲಿಫ್ಟ್‌ ರೈಲು ಸೇತುವೆ
– ಇದು ಮಾನವ ರಹಿತವಾಗಿ ಕಾರ್ಯನಿರ್ವಹಿಸುತ್ತದೆ
– ಹಡಗು ಸಂಚಾರ ವೇಳೆ ಮೇಲಕ್ಕೆತ್ತಲ್ಪಟ್ಟು ಮತ್ತೆ ಅದೇ ಸ್ಥಾನಕ್ಕೆ ಮರಳುತ್ತದೆ
– ಆರ್ಥಿಕತೆ, ಪ್ರವಾಸೋದ್ಯಮ ಮತ್ತು ಯಾತ್ರಾರ್ಥಿಗಳಿಗೆ ಅನುಕೂಲ
– ಮುಖ್ಯಭೂಮಿಯಿಂದ ರಾಮೇಶ್ವರಂಗೆ 5 ನಿಮಿಷದ ಪ್ರಯಾಣ
– 535 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸೇತುವೆ
– ಸೇತುವೆಯಲ್ಲಿ ಚಲಿಸುವ ರೈಲಿನ ವೇಗದ ಮಿತಿ ಗಂಟೆಗೆ 75 ಕಿ.ಮೀ
– ಶೆರ್ಜರ್ ರೋಲಿಂಗ್ ಲಿಫ್ಟ್ ತಂತ್ರಜ್ಞಾನದ ಬಳಕೆ
– ತುಕ್ಕು ಹಿಡಿಯದಂತೆ ತುಕ್ಕು ರಹಿತ ಡಬಲ್ ಕೋರ್ಟ್ ಪೇಯಿಂಟ್ ಬಳಕೆ
– ಸೇತುವೆಯನ್ನು ಮೇಲೆ ಎತ್ತಲು 120 ಕಿಲೋ ವ್ಯಾಟ್ ವಿದ್ಯುತ್

Pamban Bridge 2

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್(Ashwini Vaishnaw) ಅವರು ಪಂಬನ್ ರೈಲು ಸೇತುವೆಯ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ವೇಗದ ರೈಲುಗಳು ಮತ್ತು ಹೆಚ್ಚಿದ ಜನದಟ್ಟಣೆಯನ್ನು ನಿರ್ವಹಿಸುವಂತೆ ಈ ಸೇತುವೆಯ ನಿರ್ಮಾಣ ಮಾಡಲಾಗಿದೆ. ಹೊಸ ಪಂಬನ್ ಸೇತುವೆ ಕೇವಲ ಕ್ರಿಯಾತ್ಮಕವಾಗಿಲ್ಲ. ಇದು ಪ್ರಗತಿಯ ಸಂಕೇತವಾಗಿದ್ದು, ಈ ಸೇತುವೆ ನಿರ್ಮಾಣಕ್ಕೆ ಆಧುನಿಕ ತಂತ್ರಜ್ಞಾನಗಳನ್ನು ಬಳಸಲಾಗಿದೆ. ಇಂಜಿನಿಯರ್ ಗಳ ಕೈಚಳಕವು ಇಡೀ ಭಾರತ ಹುಬ್ಬೇರಿಸುವಂತೆ ಮಾಡಿದೆ ಎಂದು ಶ್ಲಾಘಿಸಿದ್ದಾರೆ.

Pamban Bridge 4

ಭಾರತದ ಮೊದಲ ಲಂಬ ಲಿಫ್ಟ್ ಪಂಬನ್ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 6 ರಾಮ ನವಮಿಯಂದು ಉದ್ಘಾಟಿಸಲಿದ್ದಾರೆ.

TAGGED:Ashwini VaishnawPamban Bridgerailway bridgerameshwaramVertical Bridgeಅಶ್ವಿನಿ ವೈಷ್ಣವ್ಪಂಬನ್‌ ಬ್ರಿಡ್ಜ್‌ರಾಮೇಶ್ವರಂರೈಲ್ವೆ ಬ್ರಿಡ್ಜ್‌ವರ್ಟಿಕಲ್‌ ಬ್ರಿಡ್ಜ್‌
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Mahendra Reddy Krithika Reddy
Bengaluru City

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ – ಆರೋಪಿ ಮಹೇಂದ್ರ ಕಳಿಸಿದ್ದ ಮೆಸೇಜ್ ರಿಟ್ರೀವ್, 10.3 ಲಕ್ಷ ಡಿಜಿಟಲ್‌ ಫೈಲ್ ಪತ್ತೆ

Public TV
By Public TV
10 minutes ago
Strait of Hormuz
Latest

ಹಾರ್ಮುಜ್‌ ದಾಟುವ ಯಾವುದೇ ಹಡಗಿಗೆ ಸುಂಕ ವಿಧಿಸಲ್ಲ: ಇರಾನ್‌ ಬೇಡಿಕೆಗೆ ಒಮಾನ್‌ ವಿರೋಧ

Public TV
By Public TV
18 minutes ago
fan takes selfie with broken phone sanju samson later gifts the phone
Cricket

ಒಡೆದ ಮೊಬೈಲ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿಗೆ ಹೊಸ ಫೋನ್‌ ಗಿಫ್ಟ್‌ ಕೊಟ್ಟ ಸಂಜು ಸ್ಯಾಮ್ಸನ್!

Public TV
By Public TV
25 minutes ago
Oil Refinery In Iran
Latest

ಕದನ ವಿರಾಮದ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ

Public TV
By Public TV
1 hour ago
CT Ravi 2
Bengaluru City

2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಸಿ.ಟಿ.ರವಿ ಭವಿಷ್ಯ

Public TV
By Public TV
1 hour ago
Hardik Pandya
Cricket

ರಾಜಸ್ಥಾನ ರಾಯಲ್ಸ್ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ಪಾಂಡ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?