– ಕೆಜಿಗೆ 10 ರೂ.ನಂತೆ ಕೇಳುತ್ತಿರುವ ವ್ಯಾಪಾರಿಗಳು
ಕೋಲಾರ: ಸಾಲು ಸಾಲು ಹಬ್ಬಗಳು ಮುಗಿದ ಬಳಿಕ ಚೆಂಡು ಹೂವಿನ (Marigold Flower) ಬೆಲೆ ತೀವ್ರ ಕುಸಿತವಾಗಿದೆ. ಈ ಹಿನ್ನೆಲೆ ರೈತರೊಬ್ಬರು ತಾವು ಬೆಳೆದ ಹೂವನ್ನು ರಸ್ತೆಬದಿ ಸುರಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ (Bangarpet) ತಾಲೂಕಿನ ನೆರ್ನಹಳ್ಳಿಯ ನಾರಾಯಣಪ್ಪ ಎಂಬ ರೈತ ದೇವರ ಪಾದದ ಬಳಿ ಇರಬೇಕಾದ ಹೂವನ್ನು ರಸ್ತೆಯಲ್ಲಿ ಚೆಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ವ್ಯಾಪಾರಿಗಳು ಕೆಜಿಗೆ 10 ರೂ.ನಂತೆ ಕೇಳುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಹೂವಿನ ಬೆಲೆ ಇಲ್ಲದೆ ಹೂವಿನ ಬೆಳೆಗಾರರು ಕಂಗಾಲಾಗಿದ್ದಾರೆ. ಇದನ್ನೂ ಓದಿ: ಬೆಳಗಾವಿ| ಗಂಡು ಮಗುವಿಗೆ ಜನ್ಮ ನೀಡಿದ ತಾಯಿ ಸಾವು – ಬಿಮ್ಸ್ ಮುಂದೆ ಸಂಬಂಧಿಕರ ಪ್ರತಿಭಟನೆ
ನಾರಾಯಣಪ್ಪ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಎಕರೆಗೆ 50 ಸಾವಿರದಂತೆ ಖರ್ಚು ಮಾಡಿ ಚೆಂಡು ಹೂವು ಬೆಳೆದಿದ್ದರು. ಆದರೆ ಚೆಂಡು ಹೂವು ಬೆಲೆ ಕುಸಿತ ಕಂಡ ಹಿನ್ನೆಲೆ ಕೋಲಾರ ಮುಖ್ಯರಸ್ತೆ ಬದಿಯಲ್ಲಿ ಸುರಿದು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಸರ್ಕಾರ ರೈತರ ನೆರವಿಗೆ ಧಾವಿಸುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ದಿನಸಿಗೆಂದು ಬಂದಿದ್ದ ವಿಕ್ರಂಗೌಡ ಉಡೀಸ್ – ಎನ್ಕೌಂಟರ್ಗೂ ಮುನ್ನ ಪೊಲೀಸರಿಂದ ಮನೆಯವರ ಶಿಫ್ಟ್