Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿಮಾನಿಯ ಹೃದಯ ಬಡಿತ ನಿಲ್ಲಿಸಿತ್ತು, ವಿಶ್ವಕಪ್ ಕನಸನ್ನೇ ಭಗ್ನಗೊಳಿಸಿತ್ತು ಆ ಒಂದು ರನೌಟ್..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಅಭಿಮಾನಿಯ ಹೃದಯ ಬಡಿತ ನಿಲ್ಲಿಸಿತ್ತು, ವಿಶ್ವಕಪ್ ಕನಸನ್ನೇ ಭಗ್ನಗೊಳಿಸಿತ್ತು ಆ ಒಂದು ರನೌಟ್..!

Cricket

ಅಭಿಮಾನಿಯ ಹೃದಯ ಬಡಿತ ನಿಲ್ಲಿಸಿತ್ತು, ವಿಶ್ವಕಪ್ ಕನಸನ್ನೇ ಭಗ್ನಗೊಳಿಸಿತ್ತು ಆ ಒಂದು ರನೌಟ್..!

Public TV
Last updated: November 14, 2023 6:30 pm
Public TV
Share
3 Min Read
IND NZ
SHARE

ಬೆಂಗಳೂರು: 2019ರ ಜುಲೈ 9 ರಂದು ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ವಿಶ್ವಕಪ್ (World Cup) ಸೆಮಿಫೈನಲ್ (Semi-Final) ಪಂದ್ಯದಲ್ಲಿ ಎಂ.ಎಸ್ ಧೋನಿ (MS Dhoni) ಕೊನೆಯ ಕ್ಷಣದಲ್ಲಿ ರನೌಟ್‌ಗೆ ತುತ್ತಾದರು. ಈ ರನೌಟ್ ಇಡೀ ವಿಶ್ವಕಪ್ ಗೆಲ್ಲುವ ಕನಸನ್ನೇ ನುಚ್ಚುನೂರು ಮಾಡಿತ್ತು. ಕೋಟ್ಯಂತರ ಅಭಿಮಾನಿಗಳಲ್ಲೂ ನೋವುಂಟುಮಾಡಿತ್ತು. ಮೊಬೈಲ್‌ನಲ್ಲಿ ಈ ದೃಶ್ಯ ನೋಡುತ್ತಿದ್ದಂತೆ ಕೋಲ್ಕತ್ತಾದಲ್ಲಿ (Kolkata) ಕ್ರಿಕೆಟ್ ಅಭಿಮಾನಿಯೊಬ್ಬ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದರು.

ಅಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ ತಂಡ 8 ವಿಕೆಟ್ ನಷ್ಟಕ್ಕೆ 239 ರನ್ ಗಳಿಸಿತ್ತು. ನೆರೆದಿದ್ದ ಅಭಿಮಾನಿಗಳು ಗೆಲುವು ಟೀಂ ಇಂಡಿಯಾದ್ದೇ (India) ಎಂದು ಬೀಗುತ್ತಿದ್ದರು. ಗೆಲ್ಲಲು 240 ರನ್ ಗಳ ಗುರಿಯನ್ನು ಪಡೆದ ಭಾರತ 49.3 ಓವರ್ ಗಳಲ್ಲಿ 221 ರನ್ ಗಳಿಗೆ ಆಲೌಟ್ ಆಗಿ ಸೋಲನ್ನು ಒಪ್ಪಿಕೊಂಡಿತು. ಆರಂಭದಲ್ಲಿ 5 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು 92 ರನ್‌ಗಳಿಗೆ 6 ವಿಕೆಟ್ ಉರುಳಿದಾಗ ನ್ಯೂಜಿಲೆಂಡ್ ಸುಲಭವಾಗಿ ಗೆಲ್ಲುವ ಸಾಧ್ಯತೆ ಇತ್ತು. ಆದರೆ ಜಡೇಜಾ ಮತ್ತು ಧೋನಿ 7ನೇ ವಿಕೆಟಿಗೆ 116 ರನ್ ಜೊತೆಯಾಟವಾಡಿ ಭಾರತವನ್ನು ಗೆಲುವಿನ ಸನಿಹಕ್ಕೆ ತಂದಿಟ್ಟಿದ್ದರು. ಇದನ್ನೂ ಓದಿ: ನನ್ನ ಮಗನ ಹೆಸರಿಗೂ ದ್ರಾವಿಡ್‌-ಸಚಿನ್‌ ಹೆಸರಿಗೂ ಸಂಬಂಧವಿಲ್ಲ: ಕ್ರಿಕೆಟಿಗ ರಚಿನ್‌ ತಂದೆ

Mahi

5 ಓವರ್ ಗಳಲ್ಲಿ 52 ರನ್ ಗಳಿಸುವ ಒತ್ತಡದಲ್ಲಿ ಸಿಲುಕಿದ್ದ ಸಂದರ್ಭದಲ್ಲಿ ಜಡೇಜಾ ತಂಡವನ್ನು ಗೆಲುವಿನ ಸನಿಹ ಕೊಂಡ್ಯೊಯುವ ಪ್ರಯತ್ನ ನಡೆಸಿದರು. 46ನೇ ಓವರಿನಲ್ಲಿ ಬೌಂಡರಿ ಸಮೇತ 10 ರನ್ ಗಳಿಸಿದ ಈ ಜೋಡಿ 7ನೇ ವಿಕೆಟ್‌ಗೆ ಶತಕದ ಜೊತೆಯಾಟ ನೀಡಿದರು. 122 ಎಸೆತಗಳಲ್ಲಿ ಈ ಜೋಡಿ 116 ರನ್ ಗಳಿಸಿತು. ಆದರೆ ಅಂತಿಮ ಹಂತದಲ್ಲಿ ಸಿಕ್ಸರ್ ಸಿಡಿಸಲು ಯತ್ನಿಸಿದ ಜಡೇಜಾ 59 ಎಸೆತಗಳಲ್ಲಿ 77 ರನ್ (4 ಬೌಂಡರಿ, 4 ಸಿಕ್ಸರ್) ಗಳಿಸಿ ಟ್ರೆಂಟ್ ಬೋಲ್ಟ್ ಗೆ ವಿಕೆಟ್ ಒಪ್ಪಿಸಿದರು. ಇತ್ತ ಜಡೇಜಾ ನಿರ್ಗಮನದೊಂದಿಗೆ ತಂಡದ ಗೆಲುವಿನ ಆಸರೆಯಾಗಿದ್ದ ಧೋನಿ 50 ರನ್ (72 ಎಸೆತ, 1 ಬೌಂಡರಿ, 1ಸಿಕ್ಸರ್) ಸಿಡಿಸಿ ರನೌಟ್ ಆದರು. ಇದನ್ನೂ ಓದಿ: ಹೀನಾಯ ಸೋಲಿನ ಬೆನ್ನಲ್ಲೇ ಪಾಕ್‌ಗೆ ಮತ್ತೆ ಶಾಕ್‌ – ಗುಡ್‌ಬೈ ಹೇಳಿದ ಬೌಲಿಂಗ್‌ ಕೋಚ್‌

ಸೆಮಿಫೈನಲ್ ಪಂದ್ಯದಲ್ಲಿ ಕೊನೆಯ 10 ಎಸೆತಗಳಲ್ಲಿ 25 ರನ್ ಬೇಕಿದ್ದಾಗ 48ನೇ ಓವರ್‌ನ 3ನೇ ಎಸೆತದಲ್ಲಿ ಧೋನಿ 2 ರನ್ ಕದಿಯಲು ಪ್ರಯತ್ನಿಸಿದರು. ಆದ್ರೆ ಫೀಲ್ಡಿಂಗ್‌ನಲ್ಲಿದ್ದ ಮಾರ್ಟಿನ್ ಗಪ್ಟಿಲ್ ಎಸೆದ ಡೈರೆಕ್ಟ್ ವಿಕೆಟ್ ಥ್ರೋ ಗೆ ಧೋನಿ ರನೌಟ್ ಆಗಿದ್ದರು. ಈ ಮೂಲಕ ಭಾರತದ ವಿಶ್ವಕಪ್ ಕನಸು ಭಗ್ನಗೊಂಡಿತ್ತು. ಅಲ್ಲದೇ ಅದು ಧೋನಿ ಅವರ ಕ್ರಿಕೆಟ್ ವೃತ್ತಿ ಜೀವನದ ಕೊನೆಯ ವಿಶ್ವಕಪ್ ಟೂರ್ನಿಯೂ ಆಗಿತ್ತು. ಇದನ್ನೂ ಓದಿ: World Cup: ಈ ದಾಖಲೆ ಬರೆದ ಭಾರತದ ಮೊದಲ ಕ್ಯಾಪ್ಟನ್‌ ರೋಹಿತ್‌ ಶರ್ಮಾ

ಅಂತಿಮವಾಗಿ ಭಾರತ 49.3 ಓವರ್‌ಗಳಿಗೆ ಆಲೌಟ್ ಆಯಿತು. ಅದು ಇಡೀ ಭಾರತೀಯರಿಗೆ ಮರೆಯದ ಘಟನೆಯಾಗಿ ಉಳಿಯಿತು. ಇದೀಗ 2023ರ ವಿಶ್ವಕಪ್ ಟೂರ್ನಿಯಲ್ಲೂ ಮತ್ತೆ ಭಾರತ ನ್ಯೂಜಿಲೆಂಡ್ ತಂಡ ಮುಖಾಮುಖಿಯಾಗುತ್ತಿದ್ದು, ಈ ಎಲ್ಲ ಕ್ಷಣಗಳನ್ನ ನೆನಪಿಸಿದೆ. ಇದನ್ನೂ ಓದಿ: World Cup 2023: ಅರ್ಧಶತಕ ಸಿಡಿಸಿದ್ರೂ ಸಚಿನ್‌ ದಾಖಲೆ ಸರಿಗಟ್ಟಿದ ಚೇಸ್‌ ಮಾಸ್ಟರ್‌

ಇದೇ ಆವೃತ್ತಿಯಲ್ಲಿ ಧರ್ಮಶಾಲಾ ಕ್ರೀಡಾಂಗಣದಲ್ಲಿ ಕಿವೀಸ್ ನೀಡಿದ್ದ 274 ರನ್‌ಗಳ ಗುರಿ ಬೆನ್ನಟ್ಟಿ ಭಾರತ ಜಯ ಸಾಧಿಸಿತ್ತು. ಪ್ರಸ್ತುತ ವಿಶ್ವಕಪ್ ಟೂರ್ನಿಯಲ್ಲಿ ಸೋಲಿನ ಮುಖವನ್ನೇ ನೋಡದ ಟೀಂ ಇಂಡಿಯಾ ಇನ್ನೆರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ರೆ ವಿಶ್ವ ಏಕದಿನ ಕ್ರಿಕೆಟ್‌ಗೆ ಸಾಮ್ರಾಟನಾಗಲಿದೆ. ಕೋಟ್ಯಂತರ ಅಭಿಮಾನಿಗಳ ಆಶಯವೂ ಇದೇ ಆಗಿದೆ. ಇದನ್ನೂ ಓದಿ: World Cup 2023: ವಿಶ್ವದ ನಂ.1 T20 ಬ್ಯಾಟರ್‌ಗೆ ಬೆಸ್ಟ್‌ ಫೀಲ್ಡರ್‌ ಪ್ರಶಸ್ತಿ

TAGGED:indiakolkatams dhoninew zealandrohith sharmasemi-finalworld cupಎಂ ಎಸ್ ಧೋನಿನ್ಯೂಜಿಲೆಂಡ್ಭಾರತರೋಹಿತ್ ಶರ್ಮವಿಶ್ವಕಪ್ಸೆಮಿಫೈನಲ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
48 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
50 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
1 hour ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?