Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟ ಚೇತನ್ ವಿರುದ್ಧ ಸಿಡಿದೆದ್ದ ಚಿತ್ರರಂಗ : ಸರಿ ಹೋಗದಿದ್ದರೆ ಅಸಹಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಟ ಚೇತನ್ ವಿರುದ್ಧ ಸಿಡಿದೆದ್ದ ಚಿತ್ರರಂಗ : ಸರಿ ಹೋಗದಿದ್ದರೆ ಅಸಹಕಾರ

Cinema

ನಟ ಚೇತನ್ ವಿರುದ್ಧ ಸಿಡಿದೆದ್ದ ಚಿತ್ರರಂಗ : ಸರಿ ಹೋಗದಿದ್ದರೆ ಅಸಹಕಾರ

Public TV
Last updated: March 31, 2023 5:22 pm
Public TV
Share
2 Min Read
chetan 3
SHARE

ಆ ದಿನಗಳು ಖ್ಯಾತಿಯ ನಟ, ಸಾಮಾಜಿಕ ಹೋರಾಟಗಾರ ನಟ ಚೇತನ್ (Chetan) ವಿರುದ್ಧ ಚಿತ್ರರಂಗ ಸಿಡಿದೆದ್ದಿದೆ. ಚಿತ್ರರಂಗದ ವಿರುದ್ಧ ಮಾತನಾಡುತ್ತಾ ಬಂದಿರುವ ಚೇತನ್ ವಿರುದ್ಧ ಕಾನೂನು ಕ್ರಮಕ್ಕಾಗಿ ಆಗ್ರಹಿಸಿದೆ. ಈಗಾಗಲೇ ಹಲವಾರು ಬಾರಿ ಚಿತ್ರೋದ್ಯಮದ ಬಗ್ಗೆ ಕೀಳುಮಟ್ಟದಲ್ಲಿ ಮಾತನಾಡಿರುವ ಚೇತನ್, ಆಗಾಗ್ಗೆ ಅದನ್ನು ಮುಂದುವರೆಸುತ್ತಲೇ ಬಂದಿದ್ದಾರೆ. ಇತ್ತೀಚೆಗಷ್ಟೇ ಅಂಬರೀಶ್ (Ambarish) ಸ್ಮಾರಕ ವಿಚಾರವಾಗಿ ವ್ಯಂಗ್ಯವಾಗಿ ಚೇತನ್ ಟ್ವೀಟ್ ಮಾಡಿದ್ದರು. ಈ ಹಿಂದೆಯೂ ಪುನೀತ್ ರಾಜ್ ಕುಮಾರ್ ಸ್ಮಾರಕ ವಿಚಾರವಾಗಿಯೂ ಅವರು ಮಾತನಾಡಿದ್ದರು.

Karnataka Film Chamber

ಕಲಾವಿದರ ಸಂಘ ಸೇರಿದಂತೆ ಹಲವು ಅಂಗ ಸಂಸ್ಥೆಗಳು ಚೇತನ್ ವಿರುದ್ದ ಕ್ರಮಕ್ಕೆ ಮನವಿ ಮಾಡಿದ್ದರ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ (Film Chamber) ಮಂಡಳಿಯಲ್ಲಿ ಸುದ್ದಿಗೋಷ್ಠಿ ಆಯೋಜನೆಯಾಗಿತ್ತು. ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಚೇಂಬರ್ ಅಧ್ಯಕ್ಷ ಭಾಮ‌ ಹರೀಶ್ (Bha.Ma.Harish), ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ (Umesh Bankar) ಹಾಗೂ ಪದಾಧಿಕಾರಿಗಳು ಚೇತನ್ ವಿರುದ್ಧದ ಕ್ರಮಕ್ಕೆ ಆಗ್ರಹಿಸಿದರು. ಇದನ್ನೂ ಓದಿ: ಹಿಂದಿ ಚಿತ್ರರಂಗದಲ್ಲಿ ಸೌತ್‌ನಷ್ಟು ಶಿಸ್ತಿಲ್ಲ: ಕಾಜಲ್ ಅಗರ್‌ವಾಲ್

chetan 13 5

ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ. ಮಾ. ಹರೀಶ್ ಮಾತನಾಡಿ, ‘ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಟ್ಟು ಇತ್ತಿಚೆಗೆ ಉದ್ಘಾಟನೆ ಆಗಿದೆ. ಇದರ ವಿರುದ್ಧ ನಟ ಚೇತನ್ ಮಾತನಾಡಿದ್ದಾರೆ. ಉದ್ಘಾಟನೆ ಇಡೀ ಇಂಡಸ್ಟ್ರಿಯ ಒತ್ತಾಯ ಆಗಿತ್ತು. ಎಲ್ಲರೂ ಅದನ್ನು ಸುಲಲಿತವಾಗಿ ನಡೆಸಿಕೊಟ್ಟರು. ನಮ್ಮ ಕುಟುಂಬದಲ್ಲಿಯೇ ಆಗಾಗ ಗೊಂದಲ ಆಗುತ್ತೆ. ಚೇತನ್ ಮುಜುಗರವಾಗುವಂತ ಹೇಳಿಕೆ ನೀಡುತ್ತಾ ಇರುತ್ತಾರೆ. ಅಂಬರೀಶ್ ಅವರ ವಿಚಾರದಲ್ಲಿ ಸ್ಮಾರಕ ನಿರ್ಮಾಣ ಕುಟುಂಬದ ಒತ್ತಾಯ ಅಂತ ಚೇತನ್ ಆರೋಪ ಮಾಡ್ತಾರೆ. ಆದರೆ ಅದು ಕುಟುಂಬದ ಒತ್ತಾಯ ಅಲ್ಲ ಇಂಡಸ್ಟ್ರಿಯದ್ದು ಆಗಿತ್ತು ಎಂದು ಚೇತನ್ ಗೆ ಈ ಮೂಲಕ ಹೇಳಲು ಬಯಸುತ್ತೇನೆ. ಇದು ಸುಮಲತಾ ಒತ್ತಾಯ ಅಲ್ಲ’ ಎಂದರು.

Actor chetan (1)

ಉಮೇಶ್ ಬಣಕಾರ ಮಾತನಾಡಿ, ‘ನಮ್ಮ ಚಿತ್ರರಂಗದ ವಿಚಾರಕ್ಕೆ ಅಂಬರೀಶ್ ತುಂಬಾ ಸ್ಪಂದಿಸಿದ್ದಾರೆ. ನಮ್ಮ ಕುಟುಂಬದಲ್ಲಿಯೇ ಇದ್ದುಕೊಂಡು ಆರೋಪ ಮಾಡಿದರೆ ನೋವಾಗುತ್ತೆ. ಅಣ್ಣಾವ್ರದ್ದೇ ಆಗಲಿ, ಅಂಬರೀಶ್,  ಅಪ್ಪು ಅವರದ್ದಾಗಲಿ ಕುಟುಂಬದವರ ಒತ್ತಾಯವಲ್ಲ. ಚೇತನ್ ಅವರು ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಯಾರು ಕೇಳದೆ ಇದ್ದರು ಹೇಳಿಕೆ ಕೊಡುತ್ತಿದ್ದಾರೆ. ನಿನ್ನೆಯೆಲ್ಲಾ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳ ಜೊತೆ, ಕಲಾವಿದರ ಸಂಘದಲ್ಲೂ ಚರ್ಚೆ ಮಾಡಿದ್ದೇವೆ. ಆತನೂ ನಮ್ಮ ಚಿತ್ರರಂಗದ ವ್ಯಕ್ತಿಯೇ. ಹೀಗಾಗಿ ತಿಳಿ ಹೇಳಿ ಎಂಬ ಮಾತುಗಳು ಕೇಳಿ ಬಂದಿದೆ. ಬುದ್ದಿ ಹೇಳಿದಾಗಲೂ ಸರಿ ಹೋಗಲಿಲ್ಲ ಎಂದರೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇಡೀ ಇಂಡಸ್ಟ್ರಿ ಆತನ ವಿರುದ್ಧ ಅಸಹಕಾರದ ತೀರ್ಮಾನ ತೆಗೆದುಕೊಳ್ಳಬೇಕು ಎಂದು ತೀರ್ಮಾನ ಮಾಡಬೇಕು ಎಂದುಕೊಂಡಿದ್ದೇವೆ’ ಎಂದರು.

chetan 13 2

ಈ ಕುರಿತಾಗಿ ಚೇತನ್ ಅವರನ್ನು ಸಂಪರ್ಕಿಸಿ ಎಲ್ಲರೂ ಕೂತು ಅವರ ಜೊತೆ ಮಾತನಾಡುತ್ತೇವೆ. ಮಾತು ಕೇಳದೆ ಹೋದಲ್ಲಿ ಮುಂದೆ ಏನು ಮಾಡಬೇಕು ಎಂಬುದನ್ನು ಮತ್ತೆ ಕೂತು ತೀರ್ಮಾನ ಮಾಡುತ್ತೇವೆ. ಈ ಹಿಂದೆ ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಆರೋಪ ಮಾಡಿದ್ರು. ಅದು ಕೋರ್ಟ್ ನಲ್ಲಿ ಸುಳ್ಳು ಆಗಿದೆ. ಅರ್ಜುನ್ ಸರ್ಜಾ ಪರ ಜಯ ಸಿಕ್ಕಿದೆ. ಅದರ ಹಿಂದೆ ಯಾರೆಲ್ಲ ಇದ್ದರೂ ಎನ್ನುವುದನ್ನು ಬಿಡಿಸಿ ಹೇಳಬೇಕಿಲ್ಲ ಎನ್ನುವ ಮಾತುಗಳೂ ಸುದ್ದಿಗೋಷ್ಠಿಯಲ್ಲಿ ಕೇಳಿ ಬಂದವು.

TAGGED:ambarishBha. Ma.HarishChetanControversyFilm ChamberMemorialUmesh Bankarಅಂಬರೀಶ್ಉಮೇಶ್ ಬಣಕಾರ್ಚೇತನ್ಫಿಲ್ಮ್ ಚೇಂಬರ್ಭಾ.ಮಾ ಹರೀಶ್ವಿವಾದಸ್ಮಾರಕ
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

Vijayapura Raid 1
Districts

48 ಪ್ರಕರಣದ 14 ಆರೋಪಿಗಳು ಅರೆಸ್ಟ್ – 1.17 ಕೋಟಿ ಮೌಲ್ಯದ ಸ್ವತ್ತು ಜಪ್ತಿ

Public TV
By Public TV
22 seconds ago
JDS
Districts

ಜೆಡಿಎಸ್‌ಗೆ 25 ರ ಸಂಭ್ರಮ – ಭದ್ರಕೋಟೆ ಹಾಸನದಲ್ಲಿ ಇಂದು ಬೃಹತ್ ಸಮಾವೇಶ

Public TV
By Public TV
13 minutes ago
Bengaluru Traffic 3
Bengaluru City

ಬೆಂಗಳೂರಿಗೆ ಟ್ರಾಫಿಕ್ ಸಿಟಿ ಹಣೆಪಟ್ಟಿ – ಸಂಚಾರ ದಟ್ಟಣೆ ಕಡಿವಾಣಕ್ಕೆ ಬ್ಲೂ ಪ್ರಿಂಟ್ ಸಿದ್ಧಪಡಿಸಿದ ಖಾಕಿ

Public TV
By Public TV
32 minutes ago
Honnavara
Crime

ಹೊನ್ನಾವರ ಸೂಳೆಮುರ್ಕಿ ಬಳಿ ಇಬ್ಬರು ಸಜೀವ ದಹನ ಕೇಸ್‌ – ಹಣಕ್ಕಾಗಿ ನಡೆದಿತ್ತು ಕೊಲೆ!

Public TV
By Public TV
40 minutes ago
REPUBLIC DAY
Karnataka

77ನೇ ಗಣರಾಜ್ಯೋತ್ಸವ ಸಂಭ್ರಮ – ಈ ಬಾರಿಯ ವಿಶೇಷತೆಗಳೇನು?

Public TV
By Public TV
56 minutes ago
Suryakumar Yadav
Cricket

ಒಂದೇ ಓವರ್‌ನಲ್ಲಿ 24 ರನ್‌ ಚಚ್ಚಿ 24 ಇನ್ನಿಂಗ್ಸ್‌ ಬಳಿಕ ಫಿಫ್ಟಿ ಹೊಡೆದ ಸ್ಕೈ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?