Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜೃಂಭಣೆಯ ಅಂಬಾದೇವಿ ಮಹಾರಥೋತ್ಸವ – ಜಂಬೂಸವಾರಿಗೆ ಸಿಎಂ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವಿಜೃಂಭಣೆಯ ಅಂಬಾದೇವಿ ಮಹಾರಥೋತ್ಸವ – ಜಂಬೂಸವಾರಿಗೆ ಸಿಎಂ ಚಾಲನೆ

Districts

ವಿಜೃಂಭಣೆಯ ಅಂಬಾದೇವಿ ಮಹಾರಥೋತ್ಸವ – ಜಂಬೂಸವಾರಿಗೆ ಸಿಎಂ ಚಾಲನೆ

Public TV
Last updated: January 3, 2026 8:34 pm
Public TV
Share
4 Min Read
Siddaramaiah 1
SHARE

– ಗ್ಯಾರಂಟಿಗಳಿಗೆ 1 ಲಕ್ಷದ 12 ಸಾವಿರ ಕೋಟಿ ರೂ. ಮೀಸಲು: ಸಿದ್ರಾಮಯ್ಯ

ರಾಯಚೂರು: ಜಿಲ್ಲೆಯ ಸಿಂಧನೂರಿನ ಐತಿಹಾಸಿಕ ಅಂಬಾದೇವಿ ಜಾತ್ರೆಯ (Amba Jatra) ಮಹಾರಥೋತ್ಸವ ಹಾಗೂ ಅಂಬಾ ಮಾತೆಯ ಜಂಬೂ ಸವಾರಿ ವಿಜೃಂಭಣೆಯಾಗಿ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಜಂಬೂಸವಾರಿಗೆ ಚಾಲನೆ ನೀಡಿದರು.

ಮೊದಲ ಬಾರಿಗೆ ಅಂಬಾ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದ್ದು, ತಾಯಿಯ ದರ್ಶನವಾಗಿದ್ದು ನನ್ನ ಪುಣ್ಯ. ಇಂದು ಈ ಕ್ಷೇತ್ರದಲ್ಲಿ ಸಾಲಗುಂದಾ ಏತನೀರಾವರಿ, ಮುಳ್ಳೂರು ಏತ ನೀರಾವರಿ ಮತ್ತು ವಳಬಳ್ಳಾರಿ ವಿಯರ್ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.

ನಾವು ಅಧಿಕಾರಕ್ಕೆ ಬಂದ ಮೇಲೆ ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಎಲ್ಲಾ ನಿಗಮಗಳಡಿ ₹176… pic.twitter.com/FV5Q6hzyc7

— Siddaramaiah (@siddaramaiah) January 3, 2026

ಹೊರ ರಾಜ್ಯಗಳಿಂದಲೂ ಭಕ್ತರ ದಂಡು
ಮಹಾ ರಥೋತ್ಸವದಲ್ಲಿ ರಾಜ್ಯ ಮಾತ್ರವಲ್ಲದೇ ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಿಂದಲೂ ಲಕ್ಷಾಂತರ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಜನವರಿ 2 ರಿಂದ ಜನವರಿ 6ರ ವರೆಗೆ ನಡೆಯಲಿರುವ ಅಂಬಾದೇವಿ ಜಾತ್ರೆಯಲ್ಲಿ ನಿತ್ಯ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿವಿಧೆಡೆಯಿಂದ ಆಗಮಿಸುವ ಭಕ್ತರು ಭಾಗವಹಿಸಿ ಅಂಬಾದೇವಿ ಅನುಗ್ರಹ ಪಡೆಯುತ್ತಿದ್ದಾರೆ.

ಜ.6 ರ ಕುಂಭೊತ್ಸವದೊಂದಿಗೆ ತೆರೆ
ಜನವರಿ 6 ರಂದು ಕುಂಭೋತ್ಸವದೊಂದಿಗೆ ಅಂಬಾದೇವಿ ಜಾತ್ರೆಗೆ ತೆರೆ ಬೀಳಲಿದೆ. ಮಹಾರಥೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಸಚಿವರಾದ ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಶಿವರಾಜ್ ತಂಗಡಿ, ಡಾ.ಶರಣಪ್ರಕಾಶ್ ಪಾಟೀಲ್, ಶಾಸಕ ಹಂಪನಗೌಡ ಬಾದರ್ಲಿ ಸೇರಿ ಹಲವರು ಭಾಗವಹಿಸಿದ್ದರು.

Raichur Jatre 3

ಇದಕ್ಕೂ ಮುನ್ನ ಜಂಬೂಸವಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಮೊದಲ ಬಾರಿಗೆ ಅಂಬಾ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದ್ದು, ತಾಯಿಯ ದರ್ಶನವಾಗಿದ್ದು ನನ್ನ ಪುಣ್ಯ. ಇಂದು ಈ ಕ್ಷೇತ್ರದಲ್ಲಿ ಸಾಲಗುಂದಾ ಏತನೀರಾವರಿ, ಮುಳ್ಳೂರು ಏತ ನೀರಾವರಿ ಮತ್ತು ವಳಬಳ್ಳಾರಿ ವಿಯರ್ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.

ನಾವು ಅಧಿಕಾರಕ್ಕೆ ಬಂದ ಮೇಲೆ ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಎಲ್ಲಾ ನಿಗಮಗಳಡಿ 176 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಸಾಲಗುಂದಾ ಏತ ನೀರಾವರಿಗೆ 71 ಕೋಟಿ ರೂ., ಮಳ್ಳೂರು ಏತ ನೀರಾವರಿಗೆ 21 ಕೋಟಿ ರೂ., ಒಳಬಳ್ಳಾರಿ ಏತ ನೀರಾವರಿಗೆ 43 ಕೋಟಿ ರೂ.ಗೂ ಹೆಚ್ಚು ಅನುದಾನವನ್ನು ಒದಗಿಸಲಾಗಿದೆ. ಹಂಪನಗೌಡ ಬಾದರ್ಲಿ ಅವರು ಈ ಕ್ಷೇತ್ರದ ಅಭಿವೃದ್ಧಿಯನ್ನು ಉತ್ತಮವಾಗಿ ಮಾಡುತ್ತಿದ್ದಾರೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನೀರು ಒದಗಿಸುವ ಪ್ರಯತ್ನದಲ್ಲಿ 30 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಲಾಗಿದೆ. ಉಳಿದ 12 ಲಕ್ಷ ಪ್ರದೇಶಕ್ಕೆ ನೀರು ಒದಗಿಸುವ ಕಾರ್ಯ ವಿವಿಧ ಹಂತಗಳಲ್ಲಿದೆ.

Raichur Jatre

431 ಕೋಟಿ ರೂ. ವೆಚ್ಚದಲ್ಲಿ ಪಾಪಯ್ಯ ಟನಲ್ ಮತ್ತು ಕಾಲುವೆ ಅಭಿವೃದ್ಧಿಗೆ ಹಾಗೂ ತುಂಗಭದ್ರಾ 33 ಗೇಟ್ ಗಳನ್ನು ಅಳವಡಿಸುವ ಕೆಲಸ ಮಾಡಲಾಗುತ್ತಿದೆ. ಜೂನ್ ಒಳಗೆ ಈ ಕೆಲಸವನ್ನು ಪೂರ್ಣಗೊಳಿಸಿ ಮುಂದಿನ ಮುಂಗಾರು ಬೆಳೆಗೆ ನೀರು ಒದಗಿಸಲಾಗುವುದು. ಎಷ್ಟೇ ವೆಚ್ಚವಾದರೂ ಹೊಸ ಗೇಟ್ ಗಳನ್ನು ಅಳವಡಿಸಿ ನೀರು ಒದಗಿಸುತ್ತೇವೆ ಎಂದು ಭರವಸೆ ನೀಡಿದರು.

ಗ್ಯಾರಂಟಿಗಳಿಗೆ 1 ಲಕ್ಷದ 12 ಸಾವಿರ ಕೋಟಿ ರೂ. ಮೀಸಲು
ನಮ್ಮ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎನ್ನುವುದು ಅಪ್ಪಟ ಸುಳ್ಳು. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳಿಗೆ ತಡೆ ಉಂಟಾಗಿಲ್ಲ. ಗ್ಯಾರಂಟಿಗಳಿಗೆ ಒಂದು ಲಕ್ಷದ 12 ಸಾವಿರ ಕೋಟಿ ರೂ. ಗಳನ್ನು ವೆಚ್ಚ ಮಾಡಲಾಗಿದೆ. ಶಕ್ತಿ ಯೋಜನೆಯಡಿ 643 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದಕ್ಕಾಗಿ ಸುಮಾರು 16 ಸಾವಿರ ಕೋಟಿ ವೆಚ್ಚವಾಗಿದೆ. 52,000 ಕೋಟಿ ಗಳನ್ನು ಈ ವರ್ಷ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತಕ್ಕೆ ಅಧಿಸೂಚನೆ ಹೊರಡಿಸಿಲ್ಲ
ದೇಶದಲ್ಲಿಯೇ ಕರ್ನಾಟಕ ಅತಿ ಹೆಚ್ಚು ಒಣ ಭೂಮಿಯನ್ನು ಹೊಂದಿರುವ 2ನೇ ರಾಜ್ಯ. ಆದ್ದರಿಂದ ರಾಜ್ಯದಲ್ಲಿ ಹೆಚ್ಚಿನ ನೀರಾವರಿ ಯೋಜನೆ ಕೈಗೆತ್ತಿಕೊಂಡು ಹಸಿರು ವಲಯ ಮಾಡುವುದು ನಮ್ಮ ಉದ್ದೇಶ. ಸಿಂಧನೂರು ಮಾತ್ರವಲ್ಲದೆ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಚುರುಕುಗೊಳಿಸಲಾಗುತ್ತಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕೆ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆಯನ್ನು ಇನ್ನೂ ಹೊರಡಿಸಿಲ್ಲ. 2003 ರಲ್ಲಿಯೇ ಇತ್ಯರ್ಥವಾಗಿ ನಮಗೆ ನ್ಯಾಯ ದೊರಕಿದ್ದರೂ 173 ಟಿಎಂಸಿ ನೀರನ್ನು ಬಳಕೆ ಮಾಡಬೇಕಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯವನ್ನು ಹೇರಲಾಗಿದೆ ಎಂದು ವಿವರಿಸಿದ್ರು.

Siddaramaiah 1

ನೀರಾವರಿ ಯೋಜನೆಗಳ ಮೂಲಕ ಆದಷ್ಟು ಶೀಘ್ರವಾಗಿ ಕಟ್ಟಕಡೆಯ ಭಾಗದ ರೈತರಿಗೆ ನೀರು ಒದಗಿಸುವ ಕೆಲಸವನ್ನು ಮಾಡುತ್ತೇವೆ. ದೇವಸ್ಥಾನದ ಅಭಿವೃದ್ಧಿಗೆ ಮೊದಲನೇ ಹಂತದಲ್ಲಿ 6.30 ಕೋಟಿ ರೂ. ಅನುದಾನದ ಪೈಕಿ 2 ಕೋಟಿ ರೂ. ಈಗಾಗಲೇ ವೆಚ್ಚ ಮಾಡಲಾಗಿದೆ. ಉಳಿದ ಹಣವನ್ನೂ ಬಿಡುಗಡೆ ಮಾಡಲಾಗುವುದು. ದೇವಸ್ಥಾನ ಮತ್ತು ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು. ಮನರೇಗಾ ಯೋಜನೆಗೆ 6,000 ಕೋಟಿ ರೂ.ಗಳನ್ನು ಪ್ರತಿ ವರ್ಷ ಖರ್ಚು ಮಾಡಲಾಗುತ್ತಿತ್ತು. ಆದರೆ ಕೇಂದ್ರದವರು ಈಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಯೋಜನೆಯನ್ನು ಬದಲಾಯಿಸಿ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಜಾರಿ ಮಾಡಿದ್ದಾರೆ. ಬಡವರು, ಮಹಿಳೆಯರು, ದಲಿತರು, ಸಣ್ಣ ರೈತರಿಗೆ ತೀವ್ರ ತೊಡಕುಂಟು ಮಾಡುವ ಈ ಹೊಸ ಕಾಯ್ದೆಯನ್ನು ರಾಜ್ಯ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಎಂದು ಅಸಮಾಧಾನ ಹೊರಹಾಕಿದ್ರು.

ವಿಬಿ ಜಿ ರಾಮ್ ಜಿ ಕಾನೂನನ್ನು ರದ್ದು ಮಾಡಿ, ಮನರೇಗಾ ಕಾನೂನು ಪುನರ್ ಸ್ಥಾಪನೆಯಾಗಬೇಕೆಂಬುದೇ ನಮ್ಮ ಉದ್ದೇಶ. ಈ ಕಾನೂನಿನ ಸ್ವರೂಪವನ್ನೇ ಬದಲಾಯಿಸಲಾಗಿದೆ. ಹಿಂದಿನ ಕಾಯ್ದೆ ಪ್ರಕಾರ ಕೇಂದ್ರ ಸರ್ಕಾರ ಪೂರ್ಣ ಅನುದಾನವನ್ನು ಭರಿಸುತ್ತಿತ್ತು. ಆದರೆ ಈಗ ಕೇಂದ್ರವು ಶೇ.60 ರಷ್ಟು ಹಾಗೂ ರಾಜ್ಯ ಸರ್ಕಾರ ಶೇ. 40 ರಷ್ಟು ಅನುದಾನ ಭರಿಸಬೇಕೆಂಬ ಹೊಸ ನಿಯಮ ತಂದಿರುವುದು ಒಕ್ಕೂಟ ನಿಯಮಕ್ಕೆ ವಿರುದ್ಧ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜಾರಿಗೊಳಿಸಿದ್ದ, ಜನಪರವಾಗಿದ್ದ ಮನರೇಗಾ ಕಾನೂನನ್ನು 20 ವರ್ಷಗಳ ನಂತರ ಪ್ರಧಾನಿ ಮೋದಿಯವರು ಹೆಸರು ಬದಲಿಸಿ ವಿಬಿ ಜಿ ರಾಮ್ ಜಿ ಎಂದು ನಾಮಕರಣ ಮಾಡಿದ್ದಾರೆ. ಕೇಂದ್ರದ ಈ ಕ್ರಮವನ್ನು ರಾಜ್ಯದ ಜನರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕು ಎಂದು ಕರೆ ನೀಡಿದರು.

TAGGED:Amba Jatra MahotsavaAmba Matharaichursiddaramaiahರಾಯಚೂರು ಅಂಬಾ ದೇವಿ ಜಾತ್ರೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National
Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood

You Might Also Like

Thawar Chand Gehlot 1
Bengaluru City

ರಾಜ್ಯದಲ್ಲಿ ಸಾಮಾಜಿಕ, ರಾಜಕೀಯ ಚೈತನ್ಯ ಉದಯಿಸುತ್ತಿದೆ: ಗೆಹ್ಲೋಟ್‌

Public TV
By Public TV
17 minutes ago
Thawar Chand Gehlot 2
Bengaluru City

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗೆಹ್ಲೋಟ್‌ರಿಂದ ಧ್ವಜಾರೋಹಣ

Public TV
By Public TV
19 minutes ago
russian s400 missilere
Latest

ಗಣರಾಜ್ಯೋತ್ಸವ ಸಂಭ್ರಮ – ಪರೇಡ್‌ನಲ್ಲಿಂದು ಪಾಕ್‌ ಹುಟ್ಟಡಗಿಸಿದ S-400 ವಾಯು ರಕ್ಷಣಾ ವ್ಯವಸ್ಥೆ ಪ್ರದರ್ಶನ

Public TV
By Public TV
25 minutes ago
Anekal Car Accident
Bengaluru City

ಕುಡಿದ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ – ಮರಕ್ಕೆ ಡಿಕ್ಕಿಯಾಗಿ ಓರ್ವ ದುರ್ಮರಣ

Public TV
By Public TV
36 minutes ago
Republic Day Narendra Modi
Latest

ಈ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ, ಉತ್ಸಾಹ ತುಂಬಲಿ – 77ನೇ ಗಣರಾಜ್ಯೋತ್ಸವಕ್ಕೆ ಮೋದಿ ಶುಭಾಶಯ

Public TV
By Public TV
2 hours ago
Tumkur Accident
Crime

ತುಮಕೂರಿನಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ಮೂವರು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?