Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಐಎಎಸ್ ಅಧಿಕಾರಿಯನ್ನೇ ಒತ್ತೆಯಾಳಾಗಿ ಇರಿಸಿ, ಥಳಿಸಿದ ಜನಸಮೂಹ

Public TV
Last updated: March 9, 2023 9:01 am
Public TV
Share
2 Min Read
crime 1
SHARE

ಗಾಂಧಿನಗರ: ಐಎಎಸ್ ಅಧಿಕಾರಿಯೊಬ್ಬರನ್ನು (IAS officer) ಜನಸಮೂಹವೊಂದು ಒತ್ತೆಯಾಳಾಗಿ (Hostage) ಇರಿಸಿ ಥಳಿಸಿರುವ ಘಟನೆ ಗುಜರಾತ್‌ನಲ್ಲಿ (Gujarat) ನಡೆದಿದೆ.

ಗುಜರಾತ್‌ನ ಐಎಎಸ್ ಅಧಿಕಾರಿ ನಿತಿನ್ ಸಾಂಗ್ವಾನ್ (Nitin Sangwan) ಅವರು ಸಬರ್‌ಕಾಂತ್ ಜಿಲ್ಲೆಯ ಘರೋಯ್ ಅಣೆಕಟ್ಟಿನ ಬಳಿಯ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭ ಮೀನುಗಾರಿಕೆಯಲ್ಲಿ ತೊಡಗಿದ್ದ ಗುಂಪೊಂದು ಅವರನ್ನು ಒತ್ತೆಯಾಳಾಗಿ ಇರಿಸಿ, ಥಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

CRIME 2

ವರದಿಗಳ ಪ್ರಕಾರ ಮೀನುಗಾರಿಕೆ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದ್ದು, ಈ ಹಿನ್ನೆಲೆ ಐಎಎಸ್ ಅಧಿಕಾರಿಯನ್ನು ಜನರ ಗುಂಪು ಒತ್ತೆಯಾಳಾಗಿ ಇರಿಸಿ ಥಳಿಸಿದೆ ಎನ್ನಲಾಗಿದೆ.

ಮೀನುಗಾರಿಕಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸಾಂಗ್ವಾನ್ ಅವರು ಸೋಮವಾರ ತಮ್ಮ ಅಧೀನ ಸಿಬ್ಬಂದಿಯೊಂದಿಗೆ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮೀನುಗಾರಿಕೆಯಲ್ಲಿ ತೊಡಗಿದ್ದವರು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ತಮ್ಮ ಜೊತೆಗಿದ್ದ ಸಿಬ್ಬಂದಿ ಹಲ್ಲೆಯಲ್ಲಿ ಗಾಯಗೊಂಡಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

KILLING CRIME

ಸಾಂಗ್ವಾನ್ ಅವರು ಪೊಲೀಸ್ ಠಾಣೆಗೆ ನೀಡಿರುವ ದೂರಿನ ಪ್ರಕಾರ, ಮೀನುಗಾರಿಕಾ ಗುತ್ತಿಗೆದಾರರಲ್ಲಿ ಒಬ್ಬರಾದ ಬಾಬು ಪರ್ಮಾರ್ ಪ್ರಮುಖ ಆರೋಪಿ. ಸಾಂಗ್ವಾನ್ ಸ್ಥಳಕ್ಕೆ ಭೇಟಿ ನೀಡಿದ್ದಾಗ ಆತ ವಾಗ್ವಾದ ಪ್ರಾರಂಭಿಸಿದ್ದಾನೆ. ಇದಕ್ಕೆ ಸಾಂಗ್ವಾನ್ ಬಾಬು ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿಯಿಂದ ಅಂತರ ಕಾಯ್ದುಕೊಂಡ ನಾರಾಯಣಗೌಡ- ಶಕ್ತಿಪ್ರದರ್ಶನಕ್ಕೆ ಸಿದ್ಧತೆ ನಡೆಸ್ತಿದ್ದಾರಾ ಸಚಿವರು?

ಈ ವೇಳೆ ಕೋಪಗೊಂಡ ಬಾಬು, ಸಾಂಗ್ವಾನ್ ಅವರ ಮೊಣಕಾಲನ್ನು ಕಚ್ಚಿದ್ದಾನೆ. ಬಳಿಕ ಇನ್ನೂ ನಾಲ್ವರು ಅಲ್ಲಿಗೆ ಬಂದು ಐಎಎಸ್ ಅಧಿಕಾರಿಗೆ ಥಳಿಸಿದ್ದಾರೆ. ಬಳಿಕ ಬಾಬು ಇನ್ನೂ 10-12 ಜನರನ್ನು ಕರೆದಿದ್ದು, ಅವರೆಲ್ಲರೂ ಮಾರಕಾಸ್ತ್ರಗಳನ್ನು ಹಿಡಿದು ಬಂದಿದ್ದಾರೆ. ಬಳಿಕ ಸಾಂಗ್ವಾನ್ ಅವರನ್ನು ಒತ್ತೆಯಾಳಾಗಿ ಇರಿಸಿ, ಥಳಿಸಿದ್ದಾರೆ.

CRIME

ತಮ್ಮ ಮೇಲೆ ಪೊಲೀಸ್ ದೂರನ್ನು ನೀಡಬಾರದು ಎಂದು ಜನರ ಗುಂಪು ಸಾಂಗ್ವಾನ್ ಅವರಿಗೆ ಬೆದರಿಕೆ ಹಾಕಿದೆ. ಇದಕ್ಕೆ ಸಾಂಗ್ವಾನ್ ಒಪ್ಪಿದ್ದು, ಕಾಗದದಲ್ಲಿ ಇದನ್ನು ಬರೆದು ಸಹಿಯನ್ನೂ ಹಾಕಿದ್ದಾರೆ. ಬಳಿಕ ಸಾಂಗ್ವಾನ್ ಅವರನ್ನು ಗುಂಪು ಹೋಗಲು ಬಿಟ್ಟಿದೆ.

ಐಎಎಸ್ ಅಧಿಕಾರಿ ಮೇಲೆ ದಾಳಿ ನಡೆಸಿರುವ ಆರೋಪದ ಮೇಲೆ ಪೊಲೀಸರು ಇದೀಗ ಮೂವರನ್ನು ಬಂಧಿಸಿದ್ದಾರೆ. ಇತರ ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೆಎಂಎಫ್ ಹಾಲು ವಿತರಣೆಯಲ್ಲಿ ತೊಂದರೆ- ನಂದಿನಿ ಬೂತ್‍ಗಳಿಗೆ ಅರ್ಧಕರ್ಧ ಸಪ್ಲೈ

TAGGED:fishermengujaratIAS officerಐಎಎಸ್ ಅಧಿಕಾರಿಗುಜರಾತ್ಮೀನುಗಾರರು
Share This Article
Facebook Whatsapp Whatsapp Telegram

You Might Also Like

Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
1 minute ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
7 minutes ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
24 minutes ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
29 minutes ago
Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
32 minutes ago
Untitled 1 copy
Latest

11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?