Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೂಲಸೌಲಭ್ಯ ಉದ್ಯಮ ದೊಡ್ಡ ಬದಲಾವಣೆ ತರಲಿದೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೂಲಸೌಲಭ್ಯ ಉದ್ಯಮ ದೊಡ್ಡ ಬದಲಾವಣೆ ತರಲಿದೆ: ಬೊಮ್ಮಾಯಿ

Bengaluru City

ಮೂಲಸೌಲಭ್ಯ ಉದ್ಯಮ ದೊಡ್ಡ ಬದಲಾವಣೆ ತರಲಿದೆ: ಬೊಮ್ಮಾಯಿ

Public TV
Last updated: May 17, 2022 11:18 pm
Public TV
Share
3 Min Read
Basavaraj Bommai 1 1
SHARE

ಬೆಂಗಳೂರು: ಮೂಲಸೌಲಭ್ಯ ಉದ್ಯಮ ದೊಡ್ಡ ಬದಲಾವಣೆ ತರಲಿದೆ. ರಸ್ತೆ, ಗಣಿಗಾರಿಕೆ, ಸೇತುವೆ ನಿರ್ಮಾಣ ಸೇರಿದಂತೆ ಎಲ್ಲಾ ವಲಯಗಳಲ್ಲಿ ಮೂಲಸೌಲಭ್ಯದಿಂದ ದೊಡ್ಡ ಬದಲಾವಣೆ ತರಬಹುದಾಗಿದ್ದು, ಇದಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನದ ಬಳಕೆ, ಯಂತ್ರೋಪಕರಣಗಳು ಬಂದಿವೆ. ಇವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಉದ್ಯಮಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಿಎಂ ಬೊಮ್ಮಾಯಿ ಬೆಂಗಳೂರಿನ ಬಿಐಇಸಿಯಲ್ಲಿ ಮಂಗಳವಾರ ಆರಂಭವಾದ ಕಟ್ಟಡ ನಿರ್ಮಾಣ ಸಲಕರಣೆಗಳ ಎಕ್ಸ್ಕಾನ್ 2022 ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, ಕಂಪನಿಗಳ ನಾವೀನ್ಯತೆ, ಹೊಸ ಚಿಂತನೆಗಳ ವಿಚಾರ ವಿನಿಮಯ ಮಾಡಿಕೊಳ್ಳಲು ಎಕ್ಸ್ಕಾನ್ 2022 ವಸ್ತು ಪ್ರದರ್ಶನ ಸೂಕ್ತ ವೇದಿಕೆಯಾಗಿದೆ. ರಾಜ್ಯದಲ್ಲಿ ಹೂಡಿಕೆ ಮಾಡಲಿಚ್ಛಿಸುವ ಉದ್ದಿಮೆಗಳಿಗೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದರು.

Basavaraj Bommai

ಐಟಿಬಿಟಿ, ಸ್ಟಾರ್ಟ್ಅಪ್, ಆರ್‌ಎಂಡಿಗಳಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಈ ಅವಕಾಶವನ್ನು ಬಳಸಿಕೊಂಡು ಕಂಪನಿಗಳು ರಾಜ್ಯದಲ್ಲಿ ಬಂಡವಾಳ ಹೂಡುವ ಮೂಲಕ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ಕರ್ನಾಟಕದಲ್ಲಿ ಸರ್ಕಾರಿ ಹಾಗೂ ಖಾಸಗಿ ಸ್ವಾಮ್ಯದ ಸಂಸ್ಥೆಗಳಿವೆ. ಬಿಹೆಚ್‌ಇಎಲ್, ಹೆಚ್‌ಎಎಲ್ ನಂತಹ ಅನೇಕ ಬೃಹತ್ ಸಂಸ್ಥೆಗಳು ರಾಜ್ಯದಲಿದ್ದು, ರಾಜ್ಯದ ಎಕೋಸಿಸ್ಟಂ ಈ ಸಂಸ್ಥೆಗಳು ಕೊಡುಗೆ ನೀಡಿವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಗರಿಷ್ಟ ಸಂಖ್ಯೆಯ ಸ್ಟಾರ್ಟ್ ಅಪ್‌ಗಳಿವೆ. ದೇಶದ ಶೇ.50 ಕ್ಕಿಂತಲೂ ಹೆಚ್ಚಿನ ಸ್ಟಾರ್ಟ್ ಅಪ್‌ಗಳು ಹಾಗೂ ಯೂನಿಕಾರ್ನ್ಗಳು ರಾಜ್ಯದಲ್ಲಿವೆ. ವಿದೇಶಿ ಬಂಡವಾಳ ರಾಜ್ಯಕ್ಕೆ ಹರಿದು ಬಂದಿದೆ. 400ಕ್ಕೂ ಹೆಚ್ಚು ಖಾಸಗಿ ಹಾಗೂ ಸರ್ಕಾರಿ ಸಂಶೋಧನಾ ಕೇಂದ್ರಗಳು ರಾಜ್ಯದಲ್ಲಿದ್ದು, ಅದರಲ್ಲಿ 180 ಬೆಂಗಳೂರಿನಲ್ಲಿದೆ. ಡಿಆರ್‌ಡಿಒ ಸಂಸ್ಥೆ ರಾಜ್ಯಕ್ಕೆ ಕೊಡುಗೆ ನೀಡಿದೆ. ಸೌರಶಕ್ತಿ ಸಂಗ್ರಹಣೆ, ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ರಾಜ್ಯ ಒತ್ತು ನೀಡುತ್ತಿದೆ. ಕರ್ನಾಟಕವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಲು ಸರ್ವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ನುಡಿದರು. ಇದನ್ನೂ ಓದಿ: ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮಗಳ ಸಕಾಲಿಕ ಅನುಷ್ಠಾನಕ್ಕೆ ಸೂಚನೆ: ಬೊಮ್ಮಾಯಿ

Basavaraj Bommai 6

ಸಂಶೋಧನೆಗಳು ತಳಹಂತದಿಂದ ನಡೆಯಬೇಕು: ಹಣದಿಂದ ಹಣ ಬರುವುದಿಲ್ಲ. ದುಡಿಮೆಯಿಂದ ಹಣ ಬರುತ್ತದೆ. ದುಡಿಮೆಯ ತಳಹಂತದಲ್ಲಿರುವವರ ಬಗ್ಗೆ ಕಾಳಜಿ ವಹಿಸಬೇಕು. ತಳಹಂತದಲ್ಲಿ ದುಡಿಯುವ ವರ್ಗಕ್ಕೆ ಸಹಾಯ ಮಾಡಲು ಹೊಸ ಚಿಂತನೆ ಮಾಡಬೇಕು. ಯೋಜನೆಯ ಪ್ರಾಯೋಗಿಕತೆ, ನೈಜತೆ ಬಗ್ಗೆ ತಿಳಿಯುವುದೇ ತಳಹಂತದಲ್ಲಿ. ಸಂಶೋಧನೆಗಳು ಈ ಹಂತದಲ್ಲಿ ನಡೆಯಬೇಕು. ಕರ್ನಾಟಕದಲ್ಲಿ ಸಣ್ಣ ಗ್ಯಾರೇಜಿನಿಂದ ಹಿಡಿದು ದೊಡ್ಡ ಕೈಗಾರಿಕೆಗಳವರೆಗೆ ಆರ್ ಆ್ಯಂಡ್ ಡಿ(ಸಂಶೋಧನೆ ಹಾಗೂ ಅಭಿವೃದ್ಧಿ) ನೀತಿಯನ್ನು ಜಾರಿಗೊಳಿಸಲಾಗಿದೆ.

ಯುವಕರಲ್ಲಿ ಸ್ವಂತಿಕೆಯನ್ನು ಹಾಗೂ ನಾವೀನ್ಯತೆಯನ್ನು ಪ್ರೋತ್ಸಾಹಿಸಬೇಕು. ಜಪಾನ್ ದೇಶದಂತೆ ಸಂಪೂರ್ಣ ಎಕೋ ಸಿಸ್ಟಂ ಸಂಶೋಧನೆಗೆ ಒತ್ತು ನೀಡುವಂತಿರಬೇಕು. ಸುಸಜ್ಜಿತ ಕ್ಯೂಬಿಕಲ್ಸ್ಗಳಲ್ಲಿ ಮಾತ್ರ ಸೀಮಿತವಾಗಿರದೇ, ಸಂಶೋಧನೆಗಳು ಎಲ್ಲೆಡೆ ನಡೆಯಬೇಕು. ಈ ದಿಸೆಯಲ್ಲಿ ಕರ್ನಾಟಕ ನಡೆಯುತ್ತಿದ್ದು, ಹಲವು ವಿನೂತನ ಯೋಜನೆಗಳನ್ನು ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ನಟಿ ಚೇತನಾ ರಾಜ್ ಸಾವು ಪ್ರಕರಣ – ಆಸ್ಪತ್ರೆ ವಿರುದ್ಧ ನೋಟಿಸ್ ಜಾರಿ

BASAVARAJ BOMMAI 1

ಸವಾಲುಗಳು ಅವಕಾಶಗಳನ್ನು ಒದಗಿಸುತ್ತವೆ: ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಸಾಂಕ್ರಾಮಿಕವಿದ್ದರೂ ಬೆಳೆಯಲು ಸಾಧ್ಯ ಎಂದು ಜಗತ್ತಿಗೆ ಬಿಂಬಿಸಲಾಗಿದೆ. ಸವಾಲುಗಳು ಅವಕಾಶಗಳನ್ನು ಒದಗಿಸುತ್ತವೆ. ಸವಾಲುಗಳಿಲ್ಲದಿದ್ದರೆ, ಅಭಿವೃದ್ಧಿಯೂ ಇಲ್ಲ. ಸವಾಲುಗಳು ಹೆಚ್ಚಿದ್ದಷ್ಟೂ ಅಭಿವೃದ್ಧಿ ಹೆಚ್ಚಾಗುತ್ತದೆ. ಮೊದಲನೇ ಹಾಗೂ ಎರಡನೇ ವಿಶ್ವಯುದ್ದಗಳು ಸಾರಿಗೆ, ಎಲೆಕ್ಟಾçನಿಕ್ಸ್, ಮೆಕ್ಯಾನಿಕಲ್ ಕ್ಷೇತ್ರಗಳಲ್ಲಿ ಹೊಸ ತಂತ್ರಜ್ಞಾನಕ್ಕೆ ಎಡೆ ಮಾಡಿಕೊಟ್ಟಿತು. ವಿಶ್ವಯುದ್ದಗಳು ಆಗದಿದ್ದರೆ ಜಾಗತಿಕ ಬೆಳವಣಿಗೆಯೂ ಆಗುತ್ತಿರಲಿಲ್ಲ. ಯಾವುದೇ ಹೊಸ ಘಟನೆ ಸಂಭವಿಸಿದಾಗ ನೂರು ಹೊಸ ಅವಕಾಶಗಳಿಗೆ ದಾರಿ ಮಾಡಿಕೊಡುತ್ತದೆ ಎಂದರು.

ಮೂಲಸೌಕರ್ಯ ಮೂಲಭೂತ ಅವಶ್ಯಕತೆಗಳಲ್ಲಿ ಒಂದಾಗಿದೆ. ಉತ್ತಮ ವೇಗವನ್ನು ಸಾಧ್ಯವಾಗಿಸುವ ಸಾರಿಗೆ ವ್ಯವಸ್ಥೆ ಅಗತ್ಯವಿದೆ. ಕ್ಷಿಪ್ರಗತಿಯಲ್ಲಿ ನಮ್ಮ ಗಮ್ಯವನ್ನು ತಲುಪಿಸುವ ವೇಗವನ್ನು ಹೊಂದಿರುವ ರೈಲುಗಳ ಅಗತ್ಯವಿದೆ. ಮೂಲಸೌಕರ್ಯದ ಪರಿಕಲ್ಪನೆ ಬದಲಾಗಿದೆ. ಎಕ್ಸ್‌ಕಾನ್-11 ನೇ ಆವೃತ್ತಿಯು ಬೆಳೆವಣಿಗೆಯ ರೇಖೆಯಲ್ಲಿ ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ಯಲು ಸಾಧ್ಯವಿದೆ. ದೇಶಕ್ಕೆ ಲಾಭವಾಗುವಂತೆ ಬೆಳೆಯಬಹುದಾಗಿದೆ ಎಂದು ತಿಳಿಸಿದರು.

TAGGED:Basavaraj BommaibengaluruexconInfrastructureಉದ್ಯಮಎಕ್ಸ್‌ಕಾನ್ಬಸವರಾಜ ಬೊಮ್ಮಾಯಿಬೆಂಗಳೂರುಮೂಲಸೌಲಭ್ಯ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
26 minutes ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
34 minutes ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
1 hour ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
1 hour ago
Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
2 hours ago
Digital Arrest
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?