Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೇಪ್ ಮಾಡಿ ನನ್ನ ಸ್ನೇಹಿತನ ಪತ್ನಿಯನ್ನೇ ತುಂಡು ತುಂಡು ಕತ್ತರಿಸಿ ರಸ್ತೆಗೆ ಎಸೆದಿದ್ರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೇಪ್ ಮಾಡಿ ನನ್ನ ಸ್ನೇಹಿತನ ಪತ್ನಿಯನ್ನೇ ತುಂಡು ತುಂಡು ಕತ್ತರಿಸಿ ರಸ್ತೆಗೆ ಎಸೆದಿದ್ರು

Bengaluru City

ರೇಪ್ ಮಾಡಿ ನನ್ನ ಸ್ನೇಹಿತನ ಪತ್ನಿಯನ್ನೇ ತುಂಡು ತುಂಡು ಕತ್ತರಿಸಿ ರಸ್ತೆಗೆ ಎಸೆದಿದ್ರು

Public TV
Last updated: March 18, 2022 9:46 pm
Public TV
Share
3 Min Read
kashmir files 1
SHARE

ಬೆಂಗಳೂರು: ಇತ್ತೀಚೆಗೆ ಬಿಡುಗಡೆಯಾದ ಸಿನಿಮಾ ದಿ ಕಾಶ್ಮೀರ್ ಫೈಲ್ಸ್ ಕಾಶ್ಮೀರದಿಂದ ದಕ್ಷಿಣಕ್ಕೆ ಮಹಾ ವಲಸೆ ಬಂದ ಕಾಶ್ಮೀರಿ ಪಂಡಿತರ ಕಥೆ ಹೇಳುತ್ತದೆ. ಸಿನಿಮಾದಲ್ಲಿರುವ ಕಥೆ ಪ್ರತಿಯೊಬ್ಬರ ರಕ್ತ ಕುದಿಯುವಂತೆ ಮಾಡುತ್ತದೆ. ಇದೀಗ ಕಾಶ್ಮೀರದಿಂದ ವಲಸೆ ಬಂದಿದ್ದ ಮಹಿಳೆಯೊಬ್ಬರು ತಮ್ಮ ಜೀವನದಲ್ಲಿ ನಡೆದ ಕರಾಳ ಘಟನೆ ಹಾಗೂ ನೆನಪನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಕಾಶ್ಮೀರದಿಂದ ವಲಸೆ ಬಂದಿದ್ದ ಮಹಿಳೆ ಬೆಲಾ ಝೂಷಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕೇವಲ ಡೆಮೋ ತೋರಿಸಿದೆ. ಕಾಶ್ಮೀರಿ ಪಂಡಿತರ ಮೇಲಾಗಿದ್ದ ದೌರ್ಜನ್ಯ ಊಹೆಗೂ ಮೀರಿದಷ್ಟು ಕ್ರೂರವಾಗಿತ್ತು ಎಂದು ವಿವರಿಸಿದರು.

The Kashmir Files

ಆ ಕಾಲದಲ್ಲಿ ಕಾಶ್ಮೀರಿ ಪಂಡಿತರನ್ನು ಓಡಿಸಲು ಭಯಾನಕವಾಗಿ ಚಿತ್ರ ಹಿಂಸೆ ನೀಡುತ್ತಿದ್ದರು. ಅವಮಾನ, ಹಿಂಸೆ, ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ, ಕೊಲೆ, ಬೆದರಿಕೆ ಹೀಗೆ ಅಂದಿನ ದಿನಗಳು ಅತ್ಯಂತ ಕ್ರೂರವಾಗಿತ್ತು ಎಂದು ತಮ್ಮ ನೆನಪನ್ನು ತಿಳಿಸಿದರು. ಇದನ್ನೂ ಓದಿ: ಕಡಿಮೆ ಅಂತರದಲ್ಲಿ ಸೋಲು – ಬೂತ್‌ ಮಟ್ಟದಲ್ಲಿ ವಿಶ್ಲೇಷಣೆಗೆ ಮುಂದಾದ ಯುಪಿ ಬಿಜೆಪಿ

ನನ್ನ ಸ್ನೇಹಿತನ ಪತ್ನಿ ಗಿರಿಜಾ ಎಂಬ ಮಹಿಳೆಯ ನಿಜ ಕಥೆಯನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ಆಕೆಯ ಮೇಲೆ ಅತ್ಯಾಚಾರ ಮಾಡಿ, ಮರವನ್ನು ಕತ್ತರಿಸುವ ಯಂತ್ರದಲ್ಲಿ ಹಾಕಿ ದೇಹವನ್ನು ತುಂಡು ತುಂಡು ಮಾಡಿ ರಸ್ತೆಯಲ್ಲಿ ಎಸೆದಿರುವ ಘಟನೆ ನಿಜವಾಗಿಯೂ ನಡೆದಿದೆ ಎಂದು ಭಯಾನಕ ವಿಚಾರವನ್ನು ತಿಳಿಸಿದರು.

ಜನರು ಮಾತು ಎತ್ತಿದರೂ ಅವರನ್ನು ಶೂಟ್ ಮಾಡಿ ಕೊಲ್ಲಲಾಗುತ್ತಿತ್ತು. ಭಯೋತ್ಪಾದಕರ ಗುರಿ ಕಾಶ್ಮೀರಿ ಪಂಡಿತ ಕುಟುಂಬದ ಗಂಡಸರನ್ನು ಓಡಿಸುವುದೇ ಆಗಿತ್ತು. ಕುಟುಂಬದ ಆಧಾರವಾಗಿರುವ ಗಂಡಸರನ್ನು ಓಡಿಸಿ ಅಥವಾ ಕೊಲೆ ಮಾಡಿ ಮಹಿಳೆ, ಮಕ್ಕಳನ್ನು ಅನಾಥರನ್ನಾಗಿ ಮಾಡಿ ಅವರ ಮೇಲೆ ಅತ್ಯಾಚಾರ ಮಾಡುತ್ತಿದ್ದರು.

the kashmir files 2

ಮಹಿಳೆಯರಿಗೆ ಅತ್ಯಾಚಾರ ಮಾಡಿದ್ದಲ್ಲದೇ ಅದೆಷ್ಟೋ ಮಕ್ಕಳ ತಲೆಗೆ ಶೂಟ್ ಮಾಡಿ ಕೊಂದಿದ್ದಾರೆ. 70 ಸಾವಿರಕ್ಕೂ ಹೆಚ್ಚು ಜನರನ್ನು ರಾತ್ರೋರಾತ್ರಿ ಕಾಶ್ಮೀರದಿಂದ ಓಡಿಸಿದ್ದಾರೆ. ಅಲ್ಲಿ ಕಾಶ್ಮೀರಿ ಪಂಡಿತರು ಬದುಕಬೇಕೆಂದಿದ್ದರೆ ಮತಾಂತರವಾಗಬೇಕು ಎಂಬ ಆಯ್ಕೆ ನೀಡಿದ್ದರು. ಇದು ಬಿಟ್ಟು ಒಂದೋ ಸಾಯುವುದು ಇಲ್ಲವೇ ಕಾಶ್ಮೀರ ಬಿಟ್ಟು ಓಡಿಹೋಗುವುದು ಎಂಬ ಆಯ್ಕೆ ನೀಡಿದ್ದರು. ನಮ್ಮನ್ನು ಕಾಪಾಡಲು ಆ ಸಮಯದಲ್ಲಿ ಯಾರೂ ಇರಲಿಲ್ಲ. ಪೊಲೀಸರು, ಅಧಿಕಾರಿಗಳು ಎಲ್ಲರೂ ಕೈ ಚೆಲ್ಲಿ ಕೂತಿದ್ದರು. ಕೇವಲ ಭಯೋತ್ಪಾದಕರ ಅಟ್ಟಹಾಸ ಮಾತ್ರ ನಡಿಯುತ್ತಿತ್ತು. ಭಾರತೀಯ ನಾಯಿಗಳು ಕಾಶ್ಮೀರ ಬಿಟ್ಟು ತೊಲಗಿ ಎಂದು ಮಕ್ಕಳಿಗೂ ಹೇಳಿಕೊಡುತ್ತಿದ್ದರು. ಇದನ್ನೂ ಓದಿ: ಥಿಯೇಟರ್ ಮೇಲೆ ಬಾಂಬ್ ದಾಳಿ – 130 ಮಂದಿಯ ರಕ್ಷಣೆ

ಇದೀಗ ಕಾಶ್ಮೀರದಿಂದ ವಲಸೆ ಬಂದಿರುವ ಪಂಡಿತ ಕುಟುಂಬ ಸಂಖ್ಯೆಯಲ್ಲಿ ಕಡಿಮೆಯಿದ್ದರೂ ಇಡೀ ದೇಶದಲ್ಲಿ ಹರಡಿದ್ದಾರೆ. ಕರ್ನಾಟಕದಲ್ಲಿ ವಲಸೆ ಬಂದಿರುವ ಸುಮಾರು 500 ಕುಟುಂಬಗಳಿವೆ. ದೆಹಲಿಯಲ್ಲಿ ಸಾವಿರ ಕುಟುಂಬಗಳಿವೆ. ಜಮ್ಮುವಿನಲ್ಲಿ 2 ಸಾವಿರ ಕುಟುಂಬಗಳಿವೆ ಎಂದು ತಿಳಿಸಿದರು.

ನಮ್ಮ ಎಲ್ಲಾ ಧಾರ್ಮಿಕ ಆಚರಣೆಗಳು ಕಾಶ್ಮೀರದಲ್ಲೇ ನಡಿಯುತ್ತಿದ್ದವು. ಆದರೆ ನಾವು ಇಲ್ಲಿ ಬಂದ ಬಳಿಕ ಅದೆಲ್ಲವನ್ನೂ ಉಗ್ರರು ಸುಟ್ಟು ಸರ್ವನಾಶ ಮಾಡಿದ್ದಾರೆ. ನಮಗೆ ನಾವು ಹುಟ್ಟಿರುವ ಕಾಶ್ಮೀರಕ್ಕೆ ಹೋಗಲು ಇಂದಿಗೂ ಆಸೆ ಇದೆ. ಆದರೆ ಅಲ್ಲಿಯವರು ಎಲ್ಲಿ ನಮ್ಮನ್ನು ಸಾಯಿಸಿ ಬಿಡುತ್ತಾರೆ ಎನ್ನುವ ಭಯ ಇದೆ. ಸದ್ಯ ನನ್ನ ಕುಟುಂಬದಲ್ಲಿ ಹಿರಿಯರು ಹಾಗೂ ಹೆಚ್ಚಿನವರು ವಿದ್ಯಾವಂತರು ಇದ್ದರು. ಹೀಗಾಗಿ ನಾವು ಎಲ್ಲಿ ಬೇಕಾದರೂ ಹೋಗಿ ಬದುಕಲು ಸಾಧ್ಯವಾಯಿತು. ಇಲ್ಲವೆಂದರೆ ನಾವೂ ಅವರಂತೆ ಅಲ್ಲಿ ಸಾಯಬೇಕಿತ್ತು. ಇಲ್ಲವೇ ಬೇರೆಡೆಗೆ ವಲಸೆ ಹೋಗಿ ಭಿಕ್ಷೆ ಬೇಡಬೇಕಿತ್ತು ಎಂದರು.

ಅಲ್ಲಿಂದ ಮಹಾವಲಸೆ ಕೈಗೊಂಡಿದ್ದ ಅದೆಷ್ಟೋ ಜನರಿಗೆ ಸರಿಯಾಗಿ ಊಟ, ವಸತಿ ಸಿಕ್ಕಿರಲಿಲ್ಲ. ಎಲ್ಲರೂ ಟೆಂಟ್ ಹಾಕಿಕೊಂಡು ಕಷ್ಟದ ದಿನಗಳನ್ನು ಕಳೆದಿದ್ದಾರೆ. ಸಿನಿಮಾದಲ್ಲಿ ಎಲ್ಲವನ್ನೂ ನಿಜವೇ ತೋರಿಸಿದ್ದಾರೆ ಆದರೆ ಅಲ್ಲಿನ ಕ್ರೌರ್ಯ ಇದಕ್ಕಿಂತಲೂ ಭಯಾನಕವಾಗಿತ್ತು.

TAGGED:'ದಿ ಕಾಶ್ಮೀರ್ ಫೈಲ್ಸ್'cinemasandalwoodThe Kashmir Filesಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

crude oil dollar 1
Latest

ಕೋವಿಡ್‌ ಬಳಿಕ ಕಚ್ಚಾ ತೈಲ ಬೆಲೆ ಭಾರೀ ಏರಿಕೆ

Public TV
By Public TV
4 minutes ago
Crude Oil 1
Latest

ದೇಶದಲ್ಲಿ 250 ಮಿಲಿಯನ್ ಬ್ಯಾರಲ್‌ಗೂ ಹೆಚ್ಚು ಕಚ್ಚಾ ತೈಲ ಸಂಗ್ರಹ – ಇಂಧನ ಬಿಕ್ಕಟ್ಟು ವದಂತಿ ತಳ್ಳಿ ಹಾಕಿದ ಕೇಂದ್ರ

Public TV
By Public TV
27 minutes ago
USA Iran War Pakistan petrol price hiked by PKR 55 per litre petrol now selling at 321 17 litre diesel 335 86
Latest

ಪಾಕಿಸ್ತಾನದಲ್ಲಿ ಪೆಟ್ರೋಲ್‌ ದರ 55 ರೂ. ಏರಿಕೆ- ಈಗ 1 ಲೀಟರ್‌ ಪೆಟ್ರೋಲ್‌ಗೆ 321 ರೂ.

Public TV
By Public TV
48 minutes ago
Ahmedabad Modi Stadium
Cricket

ಟಿ20 ವಿಶ್ವಕಪ್‌ ಫೈನಲ್‌ – ಅಹಮದಾಬಾದ್‌ ಪಿಚ್‌ ಹೇಗಿದೆ?

Public TV
By Public TV
2 hours ago
donald trump
Latest

ಅಮೆರಿಕದ ರಕ್ಷಣಾ ಸಂಸ್ಥೆಗಳಿಗೆ ಶಸ್ತ್ರಾಸ್ತ್ರ ಉತ್ಪಾದನೆ ನಾಲ್ಕು ಪಟ್ಟು ಹೆಚ್ಚಿಸುವಂತೆ ಟ್ರಂಪ್ ಆದೇಶ

Public TV
By Public TV
2 hours ago
Death threat to dog Satish FIR filed against Rajat chamarajpet police station
Crime

ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ – ರಜತ್‌ ಮೇಲೆ ಬಿತ್ತು ಮತ್ತೊಂದು ಕೇಸ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?