ಕೆಲವು ಮುಸ್ಲಿಮರ ಮನಸ್ಥಿತಿ ಬದಲಾವಣೆ ಆಗಬೇಕಿದೆ: ಈಶ್ವರಪ್ಪ

Public TV
1 Min Read
KS ESHWARAPPA

ಶಿವಮೊಗ್ಗ: ರಾಜ್ಯದಲ್ಲಿ ಹಿಜಬ್ ಸಮಸ್ಯೆ ಹುಟ್ಟಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಕೆಲವು ಮುಸ್ಲಿಮರ ಮನಸ್ಥಿತಿ ಬದಲಾವಣೆಯಾಗಬೇಕಿದೆ. ಮುಸಲ್ಮಾನರಲ್ಲಿ ಇರುವ ಹಿರಿಯರೇ ಇಂತಹವರಿಗೆ ಬುದ್ಧಿ ಹೇಳುವ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

BJP Flag Final 6

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೆಲವು ಮುಸ್ಲಿಮರು ಭಾರತೀಯ ಸಂಸ್ಕೃತಿಗೆ ಹೊಂದಿಕೊಳ್ಳಲು ಆಗುತ್ತದೋ, ಇಲ್ಲವೋ ಎಂಬ ಮನಸ್ಥಿತಿ ಹೊಂದಿದ್ದಾರೆ. ಭಾರತೀಯ ಸಂಸ್ಕೃತಿಗೆ ಹೊಂದಿಕೊಳ್ಳಬಾರದು ಅಂತಾ ಕೆಲವರು ನಿಶ್ಚಯ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಬದುಕಿರುವಾಗಲೆ ರೈತನಿಗೆ ಮರಣ ಪ್ರಮಾಣ ಪತ್ರ – ಗ್ರಾಮ ಲೆಕ್ಕಿಗ ಅಮಾನತು 

HIJAB

ನ್ಯಾಯಾಲಯ, ಸಂವಿಧಾನ ಮತ್ತು ಸರ್ಕಾರಕ್ಕೆ ಎಲ್ಲರೂ ಬೆಲೆ ಕೊಡಬೇಕು. ಮುಸ್ಲಿಮರು ಕಾನೂನು ಮೀರಿ ಇರುತ್ತೇವೆ ಅಂತಾ ಹೇಳಿ ಈ ದೇಶದಲ್ಲಿ ಇರಲು ಸಾಧ್ಯವಿಲ್ಲ. ಈ ದೇಶದಲ್ಲಿ ಇರಬೇಕು ಅಂತಾದರೆ ಈ ದೇಶದ ಕಾನೂನಿಗೆ ಸಂವಿಧಾನಕ್ಕೆ ಬೆಲೆ ಕೊಡಬೇಕು. ರಾಷ್ಟ್ರದ್ರೋಹಿಗಳು ಯಾರಿದ್ದಾರೆ ಎಂಬ ಬಗ್ಗೆ ಮಾಹಿತಿ ತೆಗೆಯುತ್ತಿದ್ದೇವೆ. ಕಠಿಣಕ್ರಮ ಕೈಗೊಂಡೇ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.

Share This Article
Leave a Comment

Leave a Reply

Your email address will not be published. Required fields are marked *