ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಕಬ್ಬಿಣ ಸೇತುವೆ ಬಳಿ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಬೈಕ್ಗೆ ಡಿಕ್ಕಿ ಹೊಡೆದು ಕಾರು ನಿಲ್ಲಿಸದೇ ತಮ್ಮ ಅಧಿಕಾರದ ದರ್ಪ ಮೆರೆದಿದ್ದಾರೆ.
ಜನರು ಕಾಶಪ್ಪನವರ ಕಾರನ್ನು ಬೆನ್ನತ್ತಿ, ಬಿಳುಗುಳದ ಬಳಿ ಕಾರಿಗೆ ಮುತ್ತಿಗೆ ಹಾಕಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಪಘಾತದ ಬಳಿಕ ಗಾಯಗೊಂಡಿದ್ದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಯುವಕ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.