Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದೇ ಬೃಂದಾವನಕ್ಕೆ ಇಬ್ಬರು ಯತಿಗಳ ಹೆಸರು: ಭಕ್ತರಿಂದ ಪರ-ವಿರೋಧ ವ್ಯಕ್ತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಒಂದೇ ಬೃಂದಾವನಕ್ಕೆ ಇಬ್ಬರು ಯತಿಗಳ ಹೆಸರು: ಭಕ್ತರಿಂದ ಪರ-ವಿರೋಧ ವ್ಯಕ್ತ

Districts

ಒಂದೇ ಬೃಂದಾವನಕ್ಕೆ ಇಬ್ಬರು ಯತಿಗಳ ಹೆಸರು: ಭಕ್ತರಿಂದ ಪರ-ವಿರೋಧ ವ್ಯಕ್ತ

Public TV
Last updated: June 24, 2022 10:06 pm
Public TV
Share
3 Min Read
Brindavan Yati Devotees Vijayanagara Koppal
SHARE

ಕೊಪ್ಪಳ: ಐತಿಹಾಸಿಕ ಹಿನ್ನೆಲೆ ಹೊಂದಿರುವ ಕೊಪ್ಪಳದ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮ ಸಮೀಪದ ನವಬೃಂದಾವನ ಗಡ್ಡೆಯಲ್ಲಿ ಮೂಲ ಬೃಂದಾವನಕ್ಕೆ ಸಂಬಂಧಪಟ್ಟಂತೆ ಎರಡು ಮಠಗಳ ನಡುವೆ ಮತ್ತೊಂದು ವಿವಾದ ಉಂಟಾಗಿದೆ. ಈ ಬಗ್ಗೆ ಭಕ್ತರಲ್ಲಿ ಸಾಕಷ್ಟು ಗೊಂದಲ ಸೃಷ್ಟಿಯಾಗಿದೆ.

ವಿಜಯನಗರ ಕಾಲದ ಪೂರ್ವ ಇತಿಹಾಸವನ್ನು ಹೊಂದಿರುವ ನವಬೃಂದಾವನ ಗಡ್ಡೆಯಲ್ಲಿ ಶ್ರೇಷ್ಠ ಯತಿಗಳ ಬೃಂದಾವನಗಳನ್ನು ನಿರ್ಮಾಣ ಮಾಡಲಾಗಿದೆ. ಹಂತ-ಹಂತವಾಗಿ ಕಾಲಘಟ್ಟಗಳಿಗೆ ಅನುಗುಣವಾಗಿ ಆಗಮಿಸಿದ ಒಟ್ಟು 9 ಯತಿಗಳ ಬೃಂದಾವನಗಳನ್ನು ತುಂಗಭದ್ರಾ ನಡುಗಡ್ಡೆಯಲ್ಲಿ ನಿರ್ಮಾಣಗೊಂಡಿರುವುದನ್ನು ಇಲ್ಲಿ ಕಾಣಬಹುದು. ಇದನ್ನೂ ಓದಿ: ಗಲ್ಫ್ ರಾಷ್ಟ್ರಗಳು ಪ್ರವಾದಿ ವಿವಾದದಲ್ಲಿ ಭಾರತದ ನಿಲುವನ್ನು ಅರ್ಥಮಾಡಿಕೊಂಡಿವೆ: ವಿದೇಶಾಂಗ ಕಾರ್ಯದರ್ಶಿ

Brindavan Yati Devotees Vijayanagara Koppal 5

ಇಂತಹ ಇತಿಹಾಸ ಇರುವ ನವಬೃಂದಾವನ ಗಡ್ಡೆಯ ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಸುಮಾರು ವರ್ಷಗಳಿಂದ ರಾಯರಮಠ ಮತ್ತು ಉತ್ತರಾಧಿಮಠಗಳ ನಡುವೆ ಗಲಾಟೆ ನಡೆಯುತ್ತಿದೆ. ಈ ವಿವಾದ ಇನ್ನೂ ಇತ್ಯರ್ಥವನ್ನು ಪಡೆದುಕೊಂಡಿಲ್ಲ. ಇದರ ನಡುವೆಯೇ ಈಗ ಮತ್ತೊಂದು ವಿವಾದ ಎರಡು ಮಠಗಳ ನಡುವೆ ಇದ್ದು, ಸಾಕಷ್ಟು ಗೊಂದಲಗಳಿಗೆ ಕಾರಣವಾಗಿದೆ.

ನವಬೃಂದಾವನ ಗಡ್ಡೆಯಲ್ಲಿ ಇರುವ ಒಂದೇ ಬೃಂದಾವನಕ್ಕೆ ಇಬ್ಬರು ಯತಿಗಳ ಹೆಸರುಗಳನ್ನು ಕರೆಯುವ ಮೂಲಕ ವಿವಾದ ಹುಟ್ಟು ಹಾಕಲಾಗಿದೆ. ಉತ್ತರಾಧಿ ಮಠದವರು ರಘುವರ್ಯ ತೀರ್ಥರ ಬೃಂದಾವನ ಎಂದು ಕರೆದರೆ, ಅದೇ ಬೃಂದಾವನಕ್ಕೆ ರಾಯರ ಮಠದವರು ಜಯತೀರ್ಥರ ಬೃಂದಾವನ ಎಂದು ಕರೆಯುತ್ತಿದ್ದಾರೆ. ಇದು ಭಕ್ತರಲ್ಲಿ ಸಾಕಷ್ಟು ಗೊಂದಲವನ್ನು ಉಂಟುಮಾಡಿದೆ.

Brindavan Yati Devotees Vijayanagara Koppal 4

ಪೂಜೆಯಲ್ಲಿ ಗೊಂದಲ
ನವಬೃಂದಾವನ ಗಡ್ಡೆಯಲ್ಲಿ ಇರುವ 9 ಯತಿಗಳ ಬೃಂದಾವನಗಳಿಗೂ ಅವರ ಬೃಂದಾವನ ಸ್ಥಾನಗೊಂಡಿರುವ ಸಮಯ, ನಕ್ಷತ್ರಕ್ಕೆ ಅನುಗುಣವಾಗಿ ಆರಾಧನೆ ಮಹೋತ್ಸವವನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದೇ ರೀತಿ ರಘುವರ್ಯತೀರ್ಥರ, ಜಯತೀರ್ಥರ ಆರಾಧನೆ ಮಹೋತ್ಸವವನ್ನು ನಡೆಸಲಾಗುತ್ತಿದೆ. ಕಳೆದ ಜೂನ್ 16ರಿಂದ ಮೂರು ದಿನಗಳ ಕಾಲ ಉತ್ತರಾಧಿ ಮಠದ ನೇತೃತ್ವದಲ್ಲಿ ರಘುವರ್ಯ ತೀರ್ಥರ ಆರಾಧನೆ ಮಹೋತ್ಸವವನ್ನು ಹಮ್ಮಿಕೊಂಡು ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಗಿದೆ.

ಆರಾಧನೆ ಮಹೋತ್ಸವ ಮುಗಿದ ಮಾರನೇ ದಿನ ಅಂದರೆ ಜೂನ್ 19 ರಂದು ಅದೇ ಬೃಂದಾವನಕ್ಕೆ ರಾಯರ ಮಠದವರು ಜಯತೀರ್ಥರ ಅಷ್ಟೋತ್ತರ ಪಾರಾಯಣ ಎಂದು ವಿಶೇಷ ಧಾರ್ಮಿಕ ಪೂಜೆಗಳನ್ನು ಸಲ್ಲಿಸಿ, ಸಾಮೂಹಿಕ ಭಜನೆ ಕಾರ್ಯಕ್ರಮಗಳನ್ನು ನಡೆಸಿದರು. ಅಷ್ಟೇ ಅಲ್ಲದೆ ಮುಂದಿನ ತಿಂಗಳು ರಾಯರ ಮಠದಿಂದ ಜಯತೀರ್ಥರ ಆರಾಧನೆ ಮಹೋತ್ಸವವನ್ನು ನವ ಬೃಂದಾವನ ಗಡ್ಡೆಯಲ್ಲಿ ನಡೆಸಲು ಅದ್ದೂರಿ ತಯಾರಿಯನ್ನು ಮಾಡಿಕೊಳ್ಳುತ್ತಿದ್ದಾರೆ. ಒಂದೇ ಬೃಂದಾವನಕ್ಕೆ ಇಬ್ಬರು ಯತಿಗಳ ಹೆಸರಲ್ಲಿ ಪೂಜಾ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಎರಡು ಮಠಗಳ ಭಕ್ತರ ನಡುವೆ ಗೊಂದಲಗಳು ಉಂಟಾಗುತ್ತಿವೆ.

Brindavan Yati Devotees Vijayanagara Koppal 3

ಸಾಮಾಜಿಕ ಜಾಲತಾಣದಲ್ಲಿ ಚರ್ಚೆ
ಮೂಲ ಬೃಂದಾವನಕ್ಕೆ ಸಂಬಂಧಪಟ್ಟಂತೆ ಎರಡು ಮಠಗಳ ಭಕ್ತರು ಫೇಸ್‍ಬುಕ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯನ್ನು ನಡೆಸುತ್ತಿದ್ದಾರೆ. ರಾಯರಮಠದವರು ಜಯತೀರ್ಥರ ಮೂಲ ಬೃಂದಾವನ ಆನೆಗೊಂದಿಯಲ್ಲಿ ಇದೆ ಎಂದು ಪೋಸ್ಟ್ ಮಾಡಿದ್ದಾರೆ. ಅದಕ್ಕೆ ಕೆಲವರು ಪರವಾಗಿ ಕಾಮೆಂಟ್ ಮಾಡಿದರೆ ಇನ್ನೂ ಕೆಲವರು ಜಯತೀರ್ಥರ ಬೃಂದಾನವ ಇರುವುದು ಆನೆಗೊಂದಿಯಲ್ಲಿ ಅಲ್ಲ, ಕಲಬುರಗಿಯ ಮಳಖೇಡದಲ್ಲಿ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಈ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧಗಳು ಚರ್ಚೆಯಾಗುತ್ತಿದ್ದು, ಎರಡು ಮಠಗಳ ಭಕ್ತರು ಮುಸುಕಿನ ಗುದ್ದಾಟವನ್ನು ನಡೆಸಿದ್ದಾರೆ.

ರಾಯರ ಯತಿಗಳ ಬೃಂದಾನಗಳಿವೆ
ಇತಿಹಾಸವನ್ನು ಹೊಂದಿರುವ ನವಬೃಂದಾವನ ಗಡ್ಡೆಯಲ್ಲಿ ವಿಜಯನಗರ ಕಾಲದ ಕೃಷ್ಣದೇವರಾಯ ಅರಸರ ಗುರುಗಳು ಆಗಿರುವ ವ್ಯಾಸರಾಜ ತೀರ್ಥರು ಬೃಂದಾವನ ಹಾಗೂ ಕಾಲಘಟ್ಟಗಳಿಗೆ ಅನುಗುಣವಾಗಿ ಆಗಮಿಸಿದ ಪದ್ಮನಾಭ ತೀರ್ಥರು, ಕವೀಂದ್ರ ತೀರ್ಥರು, ವಾಗೀಶ್ ತೀರ್ಥರು, ಶ್ರೀನಿವಾಸ್ ತೀರ್ಥರು, ರಾಮ ತೀರ್ಥರು, ಸುಧೀಂದ್ರ ತೀರ್ಥರು ಮತ್ತು ಗೋವಿಂದ್ ಒಡೆಯರ ಮೂಲ ಬೃಂದಾವನಗಳನ್ನು ಇಲ್ಲಿ ಕಾಣಬಹುದು. ಆದರೆ ಒಂದೇ ಬೃಂದಾವನಕ್ಕೆ ರಘುವರ್ಯ ತೀರ್ಥರು ಮತ್ತು ಜಯತೀರ್ಥರ ಬೃಂದಾವನ ಇರುವುದು ಈಗ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ಮಹಿಳಾ ಸಹೋದ್ಯೋಗಿ ಮೇಲೆ ಗುಂಡು ಹಾರಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ಇನ್ಸ್‌ಪೆಕ್ಟರ್

Brindavan Yati Devotees Vijayanagara Koppal 2

ಮಳಖೇಡದಲ್ಲಿ ಎಂದು ವಾದ
ರಾಯರ ಮಠದವರು ಜಯತೀರ್ಥರು ಬೃಂದಾವನ ಆನೆಗೊಂದಿಯಲ್ಲಿ ನವಬೃಂದಾವನ ಗಡ್ಡೆಯಲ್ಲಿ ಇದೆ ಎಂದು ವಾದ ಮಾಡುತ್ತಿದ್ದಾರೆ. ಅದನ್ನು ಒಪ್ಪದ ಉತ್ತರಾಧಿಮಠದವರು ಜಯತೀರ್ಥರ ಮೂಲ ಬೃಂದಾವನ ಕಲಬುರಗಿಯ ಮಳಖೇಡದಲ್ಲಿದೆ. ಅಲ್ಲಿನ ಭಕ್ತರು ಸುಮಾರು ವರ್ಷಗಳಿಂದ ಜಯತೀರ್ಥರ ಬೃಂದಾವನಕ್ಕೆ ಪೂಜೆಯನ್ನು ಸಲ್ಲಿಸಿ ಬರುತ್ತಿದ್ದಾರೆ.

ಆನೆಗೊಂದಿಯ ನವಬೃಂದಾವನ ಗಡ್ಡೆಯಲ್ಲಿ ಇರುವುದು ರಘುವರ್ಯ ತೀರ್ಥರ ಬೃಂದಾವನ ಎನ್ನುವುದು ಉತ್ತರಾಧಿ ಮಠದವರ ವಾದವಾಗಿದೆ. ಅದಕ್ಕೆ ಸಂಬಂಧಪಟ್ಟಂತೆ ಕಲಬುರಗಿ ಹಾಗೂ ಮಳಖೇಡನಲ್ಲಿ ಎರಡು ಮಠಗಳಿಂದ ಪರ-ವಿರೋಧವಾಗಿ ಪ್ರತಿಭಟನೆಗಳು ನಡೆಯುತ್ತಿವೆ.

Live Tv

TAGGED:BrindavandevoteeskoppalavijayanagaraYatiಕೊಪ್ಪಳಬೃಂದಾವನಭಕ್ತರುಯತಿಗಳುವಿಜಯನಗರ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

VIJAYENDRA YATNAL
Latest

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

Public TV
By Public TV
14 seconds ago
TVK Vijay
Latest

ವಿಜಯ್‌ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

Public TV
By Public TV
4 minutes ago
Ashok Pattana
Bengaluru City

ಇಕ್ಬಾಲ್ ಹುಸೇನ್‌ಗೆ ಸ್ವಲ್ಪ ಮೆಚ್ಯೂರಿಟಿ ಕಡಿಮೆ ಇದೆ – ಅಶೋಕ್ ಪಟ್ಟಣ

Public TV
By Public TV
17 minutes ago
mahashivratri 2024 Kedige Flower Why Ketaki Flower is Not Offered to Lord Shiva
Districts

ಶಿವರಾತ್ರಿ ದಿನ ಕೇದಗೆ ಹೂ ಬಳಸಲ್ಲ ಯಾಕೆ?

Public TV
By Public TV
30 minutes ago
COURT
Latest

ಸೇವೆಯಲ್ಲಿರುವ ನ್ಯಾಯಾಧೀಶರ ವಿರುದ್ಧ 8,630 ದೂರು ದಾಖಲು: ಕಾನೂನು & ನ್ಯಾಯ ಸಚಿವಾಲಯ ಮಾಹಿತಿ

Public TV
By Public TV
34 minutes ago
Blessing Muzarabani
Cricket

T20 World Cup | ಆರ್‌ಸಿಬಿ ವೇಗಿಯ ಬೆಂಕಿ ಬೌಲಿಂಗ್‌ ದಾಳಿಗೆ ಆಸ್ಟ್ರೇಲಿಯಾ ಛಿದ್ರ

Public TV
By Public TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?