Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎರಡು ವರ್ಷಗಳಿಂದ ನನ್ನ ಫೈಲನ್ನೇ ಅಧಿಕಾರಿಗಳು ಕ್ಲಿಯರ್ ಮಾಡಿಲ್ಲ: ಮುರುಗೇಶ್ ನಿರಾಣಿ ಅಸಹಾಯಕತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎರಡು ವರ್ಷಗಳಿಂದ ನನ್ನ ಫೈಲನ್ನೇ ಅಧಿಕಾರಿಗಳು ಕ್ಲಿಯರ್ ಮಾಡಿಲ್ಲ: ಮುರುಗೇಶ್ ನಿರಾಣಿ ಅಸಹಾಯಕತೆ

Bengaluru City

ಎರಡು ವರ್ಷಗಳಿಂದ ನನ್ನ ಫೈಲನ್ನೇ ಅಧಿಕಾರಿಗಳು ಕ್ಲಿಯರ್ ಮಾಡಿಲ್ಲ: ಮುರುಗೇಶ್ ನಿರಾಣಿ ಅಸಹಾಯಕತೆ

Public TV
Last updated: September 20, 2022 3:44 pm
Public TV
Share
4 Min Read
VIDHANAPARISHAD MURUGESH NIRANI
SHARE

ಬೆಂಗಳೂರು: ವಿಧಾನ ಪರಿಷತ್ (Vidhana Parishad) ನಲ್ಲಿಂದು ಸಚಿವರೇ, ನನ್ನ ಕೆಲಸ ಆಗುತ್ತಿಲ್ಲ. ಅಧಿಕಾರಿಗಳು ನನ್ನ ಫೈಲ್ ಕ್ಲಿಯರ್ ಮಾಡಿಲ್ಲ ಅಂತ ಅಸಹಾಯಕತೆ ತೋಡಿಕೊಂಡ ಘಟನೆ ನಡೆಯಿತು.

ಮಂಡ್ಯದ ಪಾಂಡವಪುರ ಸಕ್ಕರೆ ಕಾರ್ಖಾನೆ (Sugar Factory) ಗುತ್ತಿಗೆ ಒಡಂಬಡಿಕೆ ಕಡತ ವಿಲೇವಾರಿ ಎರಡು ವರ್ಷವಾದರೂ ಆಗಿಲ್ಲ. ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ (Pankaj Kumar Pandey) ತಡೆ ಹಿಡಿದಿದ್ದಾರೆ ಎಂದು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ (Murugesh Nirani) ಸದನದಲ್ಲೇ ನೇರ ಆರೋಪ ಮಾಡಿದರು. ಇದು ಸದನದಲ್ಲಿ ಗದ್ದಲಕ್ಕೆ ಕಾರಣವಾಯ್ತು.

VIDHANAPARISHAD

ಈ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಪ್ರತಿಪಕ್ಷ ಸದಸ್ಯರು ಪಟ್ಟುಹಿಡಿದರು. ಆದರೆ ಇದಕ್ಕೆ ಅವಕಾಶ ನಿರಾಕರಿಸಿದ ಸಭಾಪತಿ (Speaker) ನೋಟಿಸ್ ನೀಡಿ ನಂತರ ಚರ್ಚೆಗೆ ಅವಕಾಶ ಕಲ್ಪಿಸುವುದಾಗಿ ರೂಲಿಂಗ್ ನೀಡಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ (BJP) ಸದಸ್ಯ ಸುನೀಲ್ ವಲ್ಯಾಪುರೆ ಪ್ರಶ್ನೆಗೆ ಉತ್ತರಿಸಿದ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಸಕ್ಕರೆ ಕಾರ್ಖಾನೆಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಎಥನಾಲ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿದೆ. ಎಥೆನಾಲ್ ಉತ್ಪಾದನೆ ನಮ್ಮ ಇಲಾಖೆ ವ್ಯಾಪ್ತಿಗೆ ಬರಲಿದೆ ಆದರೆ ಮಾರಾಟ ಅಬಕಾರಿ ಇಲಾಖೆ (Excise Department) ಗೆ ಬರಲಿದೆ. ಸಮಸ್ಯೆ ಇದ್ದರೆ ನಮ್ಮ ಅಬಕಾರಿ ಇಲಾಖೆ ನಡುವೆ ಸಭೆ ನಡೆಸಲಾಗುತ್ತದೆ. ರೈತರಿಗೆ ಹಣ ಪಾವತಿ ವಿಳಂತ ತಪ್ಪಿಸುವ ಕೆಲಸ ಮಾಡಲಾಗುತ್ತದೆ ಎಂದರು.

VIDHANAPARISHAD.1png

ಈ ವೇಳೆ ಮಾತನಾಡಿದ ಬಿಜೆಪಿ ಸದಸ್ಯ ಲಕ್ಮಣ ಸವದಿ, ಮೂರು ತಿಂಗಳಾದರೂ ಕಡತ ವಿಲೇವಾರಿ ಆಗಲ್ಲ ಎಂದು ಅಧಿಕಾರಿಗಳ ಧೋರಣೆಗೆ ಆಕ್ಷೇಪಿಸಿ ಇದನ್ನು ಸರಿಪಡಿಸುವಂತೆ ಮನವಿ ಮಾಡಿದರು. ಸವದಿ ಹೇಳಿಕೆ ಸಮರ್ಥಿಸಿಕೊಂಡ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ನಾನು ಲೀಸ್ ಗೆ ತೆಗೆದುಕೊಂಡಿದ್ದೇನೆ. ಆದರೆ ನಮಗೆ ಒಪ್ಪಂದ ಮಾಡಿಕೊಡುತ್ತಿಲ್ಲ ಎಂದು ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಹೆಸರು ಉಲ್ಲೇಖಿಸಿ ಅವರು ಇಲ್ಲೇ ಇದ್ದಾರೆ ಎಂದು ನೇರ ಆರೋಪ ಮಾಡಿದರು.

ನಾನು 40 ವರ್ಷ ರಾಜಕೀಯ ಜೀವನದಲ್ಲಿದ್ದೇನೆ. ನನಗೇ ಹೀಗಾಗಿದೆ ಎಂದು ಕಡತ ವಿಲೇವಾರಿ ವಿಳಂಬ ಕುರಿತು ತಮ್ಮ ಸ್ವಂತ ಅನುಭವವನ್ನು ಪ್ರಸ್ತಾಪಿಸಿದರು. ಯಾವುದೇ ಪತ್ರಗಳಿಲ್ಲದೇ ನಾನು ಈಗಾಗಲೇ 50 ಕೋಟಿ ಹೂಡಿಕೆ ಮಾಡಿದ್ದೇನೆ ಎಂದರು. ನಿರಾಣಿ ಹೇಳಿಕೆ ನಂತರ ಸರ್ಕಾರ (Government) ದ ವಿರುದ್ಧ ಪ್ರತಿಪಕ್ಷ ಸದಸ್ಯರು ಮುಗಿಬಿದ್ದರು. ಮಂತ್ರಿಗಳಿಗೇ ಹೀಗಾದರೆ ಜನರ ಕಥೆಯೇನು? ಸಚಿವರು ಅಧಿಕಾರಿ ಹೆಸರೇಳಿದ್ದಾರೆ ಅವರು ಮಾತನಾಡಲು ಅವಕಾಶ ನೀಡಿ ಎಂದರು.

VIDHANAPARISHAD.2png

ಪ್ರತಿಪಕ್ಷದ ಸಚೇತಕ ಪ್ರಕಾಶ್ ರಾಥೋಡ್ ಮಾತನಾಡಿ, ಒಬ್ಬ ಮಂತ್ರಿ ಒಬ್ಬ ಅಧಿಕಾರಿ ಹೆಸರೇಳಿ ಎರಡು ವರ್ಷ ಕಡತ ವಿಲೇವಾರಿ ಮಾಡಿಲ್ಲ ಎಂದಿದ್ದಾರೆ. ಈ ವಿಚಾರದಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಇದಕ್ಕೆ ಸಮಂಜಸ ಉತ್ತರ ನೀಡಬೇಕು ಎಂದರು. ಇದಕ್ಕೆ ಸಭಾಪತಿಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ ಸದನ (Session) ದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಇದನ್ನೂ ಓದಿ; ರಾಜ್ಯದಲ್ಲಿ ಯಾವುದೇ ಕಾರಣಕ್ಕೂ APMC ಕಾಯ್ದೆ ರದ್ದು ಮಾಡೋದಿಲ್ಲ- ಎಸ್.ಟಿ ಸೋಮಶೇಖರ್

ಈ ವೇಳೆ ಮಾತನಾಡಿದ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ, ನೋಟಿಸ್ (Notice) ನೀಡಿ ಚರ್ಚೆಗೆ ಅವಕಾಶ ನೀಡುತ್ತೇನೆ ಎಂದರು. ಇದಕ್ಕೆ ಪ್ರತಿಪಕ್ಷ ಸದಸ್ಯರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಪಕ್ಷದ ಉಪ ನಾಯಕ ಗೋವಿಂದರಾಜು ಮಾತನಾಡಿ, ನಿರಾಣಿ ಸದನದಲ್ಲೇ ಹೇಳಿಕೆ ನೀಡಿದ್ದಾರೆ. ಸರ್ಕಾರದ ಭಾಗವಾಗಿಯೇ ಈ ರೀತಿ ಹೇಳಿಕೆ ನೀಡಿದ್ದರಿಂದ ಚರ್ಚೆಗೆ ಅವಕಾಶ ನೀಡಿ ರೂಲಿಂಗ್ ನೀಡಬೇಕು ಎಂದು ಆಗ್ರಹಿಸಿದರು.

VIDHANAPARISHAD KOTA SRINIVAS POOJARY

ಪ್ರತಿಪಕ್ಷದ ಬೇಡಿಕೆ ವಿರೋಧಿಸಿದ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ (Kota Srinivas Poojary), ಸದಸ್ಯರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಈ ವೇಳೆ ಕಡತ ವಿಳಂಬಕ್ಕೆ ನಿರಾಣಿ ಉದಾಹರಣೆ ನೀಡಿದ್ದಾರೆ. ಹಿಂದೆಲ್ಲಾ ಹೀಗಾಗಿತ್ತು ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇವೆ ಎನ್ನುವುದು ಅವರ ಹೇಳಿಕೆಯ ತಾತ್ಪರ್ಯ ಎಂದರು. ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆಗೆ ಪ್ರತಿಪಕ್ಷ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಕ್ಟೋಬರ್ 2 ರಿಂದ ಯಶಸ್ವಿನಿ ಯೋಜನೆ ಜಾರಿ: ಎಸ್.ಟಿ.ಸೋಮಶೇಖರ್

ಈ ವೇಳೆ ಮಧ್ಯಪ್ರವೇಶ ಮಾಡಿದ ಬಿಜೆಪಿ ಸದಸ್ಯ ಲಕ್ಷ್ಮಣ ಸವದಿ, ಕಾರ್ಯಾಂಗ, ಶಾಸಕಾಂಗ ಅನೇಕ ವರ್ಷಗಳಿಂದ ಬಂದ ವ್ಯವಸ್ಥೆ. ಇದರಲ್ಲಿ ಆಗುವ ವ್ಯತ್ಯಾಸಗಳಿಂದ ಕೆಲವೊಮ್ಮೆ ಘಟನೆಗಳು ಹೊರ ಬರಲಿವೆ. ಮನಸ್ಸಿಗೆ ಘಾಸಿಯಾದಾಗ ಇಂತಹ ಮಾತು ಸಚಿವರಿಂದ ಹೊರಬಂದಿದೆ. ಇದನ್ನು ದೊಡ್ಡದು ಮಾಡಬೇಡಿ ಎಂದು ಮನವಿ ಮಾಡಿದರು. ಜೆಡಿಎಸ್ ಸದಸ್ಯ ಭೋಜೇಗೌಡ ಮಾತನಾಡಿ ಸಚಿವರು ಸತ್ಯ ಹೇಳಿದ್ದಾರೆ. ಸಚಿವರೊಬ್ಬರನ್ನೇ ಯಾಕೆ ಹೊಣೆ ಮಾಡಬೇಕು. ಚರ್ಚೆಗೆ ಅವಕಾಶ ನೀಡಿ ಎಂದರು.

LAXMAN SAVADI MURUGESH NIRANI

ನಂತರ ನಿರಾಣಿ ಹೇಳಿಕೆ ಕುರಿತು ಸ್ಪಷ್ಟೀಕರಣ ನೀಡಿದ ಸಕ್ಕರೆ ಸಚಿವ ಶಂಕರಪಾಟೀಲ್ ಮುನೇನಕೊಪ್ಪ (Shankar Patil Munenakoppa) ,ತಮ್ಮ ನೋವಿನ ಸಂಗತಿಯನ್ನು ನಿರಾಣಿ ಹೇಳಿದ್ದಾರೆ. ಪಾಂಡವಪುರ,ಶ್ರೀರಾಮು ಮತ್ತು ಮಲೈ ಶುಗರ್ ಕಾರ್ಖಾನೆಗಳ ಪುನಶ್ಚೇತನ ಸರ್ಕಾರಕ್ಕೆ ಸವಾಲಾಗಿದೆ. ಪಾಂಡವಪುರ ಕಾರ್ಖಾನೆಯನ್ನು ನಿರಾಣಿ ಗ್ರೂಪ್ ಟೆಂಡರ್ ಮೂಲಕ ಪಡೆದುಕೊಂಡಿದೆ. ಅವರು ಸ್ಟಾಂಪ್ ಎಕ್ಸೆಂಪಕ್ಷನ್ ಕೇಳಿದ್ದಾರೆ. ಈ ವಿಚಾರದಲ್ಲಿ ವಿಳಂಬವಾಗಿದೆ. ಇದರ ನೀತಿ ನಿಯಮದಲ್ಲಿ ವಿಳಂಬವಾಗಿದೆ.ಹಣಕಾಸು ಇಲಾಖೆ ಸಲಹೆ ಪಡೆದು ಸಂಪುಟದಲ್ಲಿ ಇಟ್ಟು ಸಿಎಂ (Chief Minister) ಈ ಸಮಸ್ಯೆ ಪರಿಹರಿಸಲಿದ್ದಾರೆ. ಯಾವುದೇ ಅಧಿಕಾರಿ ಆದರೂ ಸರ್ಕಾರದ ನಿಯಮ ಪಾಲಿಸಬೇಕು ಎಂದರು.

ಸಚಿವರ ಉತ್ತರಕ್ಕೆ ತೃಪ್ತರಾಗದ ಪ್ರತಿಪಕ್ಷ ಸದಸ್ಯರು ಚರ್ಚೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದರು. ಆದರೆ ಪ್ರತಿಪಕ್ಷ ಸದಸ್ಯರ ಬೇಡಿಕೆ ತಳ್ಳಿಹಾಕಿದ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಇದು ಪ್ರಶ್ನೋತ್ತರ ಕಲಾಪ ಇಲ್ಲಿ ಚರ್ಚೆಗೆ ಅವಕಾಶ ನೀಡುವುದಿಲ್ಲ. ಬೇರೆ ರೂಪದಲ್ಲಿ ಚರ್ಚೆಗೆ ನೋಟಿಸ್ ನೀಡಿ ಅದಕ್ಕೆ ಅವಕಾಶ ನೀಡಲಾಗುತ್ತದೆ ಎಂದು ರೂಲಿಂಗ್ ನೀಡಿದರು ಗಲಾಟೆಗೆ ಅಂತ್ಯ ಹಾಡಿದರು.

Live Tv
[brid partner=56869869 player=32851 video=960834 autoplay=true]

TAGGED:bengaluruMurugesh niranisessionಅಧಿವೇಶನಬೆಂಗಳೂರುಮುರುಗೇಶ್ ನಿರಾಣಿ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
4 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
15 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
35 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
42 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
55 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?