Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತೆ ಅಂತ ವಿಪಕ್ಷಗಳು ಬೊಬ್ಬೆ ಹಾಕ್ತಿದ್ವು – ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತೆ ಅಂತ ವಿಪಕ್ಷಗಳು ಬೊಬ್ಬೆ ಹಾಕ್ತಿದ್ವು – ವಿಜಯೇಂದ್ರ

Bengaluru City

ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತೆ ಅಂತ ವಿಪಕ್ಷಗಳು ಬೊಬ್ಬೆ ಹಾಕ್ತಿದ್ವು – ವಿಜಯೇಂದ್ರ

Public TV
Last updated: October 8, 2024 1:13 pm
Public TV
Share
2 Min Read
R Ashok BY Vijayendra e1760176960266
SHARE

– ಮೋದಿ ಅವರ ಕೆಲಸ, ವರ್ಚಸ್ಸು ಗೆಲುವು ತರಲಿದೆ ಎಂದ ಆರ್.ಅಶೋಕ್

ಬೆಂಗಳೂರು: ಹರಿಯಾಣದಲ್ಲಿ (Hariyana) ಬಿಜೆಪಿ (BJP) ಧೂಳಿಪಟ ಆಗುತ್ತದೆ ಎಂದು ವಿಪಕ್ಷಗಳು ಬೊಬ್ಬೆ ಹಾಕುತ್ತೀವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತದೆ ಎಂದು ವಿಪಕ್ಷಗಳು ಬೊಬ್ಬೆ ಹಾಕುತ್ತಿದ್ದವು. ಆದರೆ ಬಿಜೆಪಿ ಸತತವಾಗಿ ಮೂರನೇ ಬಾರಿಗೆ ಅಧಿಕಾರದತ್ತ ದಾಪುಗಾಲು ಇಡುತ್ತಿದೆ. 3ನೇ ಬಾರಿ ಬಿಜೆಪಿ ಅಧಿಕಾರದತ್ತ ಬರ್ತಿದೆ ಎನ್ನುವುದು ಸಂತೋಷದ ವಿಷಯವಾಗಿದೆ ಎಂದರು.

ಚುನಾವಣಾ ಫಲಿತಾಂಶ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ (R Ashok) ಮಾತನಾಡಿ, ಚುನಾವಣಾ ಫಲಿತಾಂಶ ಬಿಜೆಪಿ ಪರವಾಗಿ ಬರುತ್ತಿದೆ ಎನ್ನುವದು ಮೇಲ್ನೋಟಕ್ಕೆ ಕಂಡು ಬರ್ತಿದೆ. ಇದೇ ಮುಂದುವರೆದರೆ ಬಿಜೆಪಿ ಬಹುಮತ ಶತಸಿದ್ದ. ಸಮೀಕ್ಷೆ ಫಲಿತಾಂಶಕ್ಕೆ ಅಜಗಜಾಂತರ ವ್ಯತ್ಯಾಸ ಇದೆ. ಬಿಜೆಪಿ ಎರಡೂ ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಬಹುದು. ಮೋದಿ ಅವರ ಕೆಲಸ, ವರ್ಚಸ್ಸು ಈ ಗೆಲುವು ತರಲಿದೆ. ಇದೇ ಟ್ರೆಂಡ್ ಇದ್ದರೆ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರು.ಇದನ್ನೂ ಓದಿ: Jammu Kashmir Results | ಅಧಿಕಾರದತ್ತ ಎನ್‌ಸಿ, ಕಾಂಗ್ರೆಸ್‌ ಮೈತ್ರಿ – ಬಿಜೆಪಿಗೆ ಹಿನ್ನಡೆ

ಜಾತಿ ಜನಗಣತಿ ವಿಚಾರ:
ವಿಜಯೇಂದ್ರ ಮಾತನಾಡಿ, ಇದು ನನ್ನ ವೈಯಕ್ತಿಕ ಅಭಿಪ್ರಾಯ ವರದಿ ಅವೈಜ್ಞಾನಿಕವಾಗಿ ಇದೆ. ಕಾಂಗ್ರೆಸ್ (Congress) ನಾಯಕರು ಸಹ ಇದೇ ಹೇಳಿದ್ದಾರೆ. ಬಿಜೆಪಿ ಸ್ಪಷ್ಟ ನಿಲುವನ್ನು ಹೊಂದಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ, ಹಿಂದುಳಿದ ದಲಿತ ವರ್ಗಕ್ಕೂ ಸಾಮಾಜಿಕ ನ್ಯಾಯ ಸಿಗಬೇಕು. ಈಗ ಸಿದ್ದರಾಮಯ್ಯ ಅವರ ಕುರ್ಚಿ ಅಲ್ಲಾಡುತ್ತಿದೆ. ಅದಕ್ಕಾಗಿ ಈಗ ಜಾತಿಗಣತಿ ವಿಚಾರ ಮುನ್ನೆಲೆಗೆ ಬಂದಿದೆ. ಆದರೆ ಇದು ಅವೈಜ್ಞಾನಿಕ ಎಂದು ಶಾಮನೂರು ಹೇಳಿದ್ದಾರೆ. ಡಿಕೆಶಿ ಕೂಡ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯ ಆಗುತ್ತದೆ ಎಂದಿದ್ದಾರೆ. ಖರ್ಗೆ ಹೇಳಿದ್ದನ್ನು ಎಲ್ಲರೂ ಗಮನಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಜಾತಿಗಣತಿ ಮಾಡೋಕೆ ಅವಕಾಶ ಇಲ್ಲ. ವರದಿ ಜಾರಿಗೆ ಯಾಕೆ ಇಷ್ಟೊಂದು ಆತುರ? ಈ ಮೊದಲು ನೀವೇ ಅಧಿಕಾರದಲ್ಲಿ ಇದ್ದಾಗ ಯಾಕೆ ಬಿಡುಗಡೆ ಮಾಡಿಲ್ಲ. ಖರ್ಚಿಯಲ್ಲಿ ಸಿದ್ದರಾಮಯ್ಯ ಜಾಸ್ತಿ ದಿನ ಇರುವುದಿಲ್ಲ. ಆದರೆ ಅವರ ಮೊಂಡುತನ ಜಾಸ್ತಿ ದಿನ ನಡೆಯಲ್ಲ. ಹೀಗಾಗಿ ಇದೊಂದು ಬ್ರಹ್ಮಾಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ ಎಂದರು.

ಸಿಎಂ ಕುರ್ಚಿ ವಿಚಾರ:
ಆರ್.ಅಶೋಕ್ ಮಾತನಾಡಿ, ಮುಡಾ ಹಗರಣ ಮುಚ್ಚಿ ಹಾಕಲು ಸಿದ್ದರಾಮಯ್ಯ (CM Siddaramaiah) ಇಲ್ಲಸಲ್ಲದ ಕಸರತ್ತು ನಡೆಸುತ್ತಿದ್ದಾರೆ. ಬಿಜೆಪಿಯವರನ್ನು ಟೀಕಿಸುವ ಮೊದಲು ನಿಮ್ಮ ಪಕ್ಷದಲ್ಲಿ ಏನಾಗುತ್ತಿದೆ ಎಂದು ನೋಡಿ. ನಿಮ್ಮ ಪಕ್ಷದಲ್ಲಿ ಸಿಎಂ ಆಗಲು ರನ್ನಿಂಗ್ ರೇಸ್ ನಡೆಯುತ್ತಿದೆ. ನಿತ್ಯ ಪ್ರತ್ಯೇಕ ಸಭೆಗಳನ್ನು ಮಾಡುತ್ತಿದ್ದಾರೆ. ಪರಸ್ಪರ ಸಭೆ ನಡೆಸಿ, ತಿಂಡಿ ಭಾಗ್ಯ ಮಾಡಿಕೊಂಡಿದ್ದಾರೆ. ಸಿಎಂ ಇಳಿಸಲು ಸಚಿವರು ಬ್ರೇಕ್‌ಫಾಸ್ಟ್ ಮೀಟಿಂಗ್, ಡಿನ್ನರ್ ಮೀಟಿಂಗ್‌ಗಳಲ್ಲಿ ಮುಳುಗಿದ್ದಾರೆ ಎಂದು ವ್ಯಂಗ್ಯವಾಡಿದರು.

ನಿಮ್ಮ ಪಕ್ಷದಲ್ಲೇ ಒಡಕಿದೆ, ಅದನ್ನು ಸರಿ ಮಾಡದೇ ಬಿಜೆಪಿ, ಜೆಡಿಎಸ್ (JDS) ಮೇಲೆ ವಕ್ರದೃಷ್ಟಿ ಬೀರುತ್ತಿದ್ದಾರೆ. ಸಿಎಂ ಎಷ್ಟು ದಿನ ಅಧಿಕಾರದಲ್ಲಿ ಇರುತ್ತಾರೆ? ಸಿಎಂ ಇಳಿತಾರೆ ಎಂದು ನಿಮ್ಮ ಪಕ್ಷದಲ್ಲೇ ದೊಡ್ಡ ಗಾಳಿ ಸುದ್ದಿ ಹಬ್ಬಿದೆ. ಮಂತ್ರಿಗಳು ಜಿಲ್ಲಾ ಪ್ರವಾಸ ಮಾಡುತ್ತಿಲ್ಲ. ಈ ಸರ್ಕಾರ ತೊಲಗಲಿ ಎಂದು ಜನ ಕೂಡ ಬಯಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಚುನಾವಣಾ ಫಲಿತಾಂಶದಲ್ಲಿ ಹಿನ್ನಡೆ – ಆಯೋಗದ ವೆಬ್‌ಸೈಟ್‌ ದೂರಿದ ಕಾಂಗ್ರೆಸ್‌

TAGGED:bengalurubjpBY VijayendraCaste Censuscm siddaramaiahcongressHaryana Assembly Electionsr ashokಆರ್ ಆಶೋಕ್ಕಾಂಗ್ರೆಸ್ಜಾತಿ ಜನಗಣತಿಬಿಜೆಪಿಬಿವೈ ವಿಜಯೇಂದ್ರಬೆಂಗಳೂರುಸಿಎಂ ಸಿದ್ದರಾಮಯ್ಯಹರಿಯಾಣ ವಿಧಾನಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
4 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
4 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
5 hours ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
5 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
5 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?