ತನ್ನ ಮೇಕೆ ಬಳಿ ಹೋಗಿದ್ದ ವಿದ್ಯಾರ್ಥಿಯ ಕೈ ಕತ್ತರಿಸಿದ ಮಾಲೀಕ

Public TV
0 Min Read
bidar CRIME

ಬೀದರ್: ಕುಡಿದ ಅಮಲಿನಲ್ಲಿ ವಿದ್ಯಾರ್ಥಿಯೊಬ್ಬನ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿದ ಘಟನೆ ಬೀದರ್ ತಾಲೂಕಿನ ಕಾಡವಾದ ಗ್ರಾಮದಲ್ಲಿ ನಡೆದಿದೆ.

9ನೇ ತರಗತಿಯ ಅನಿಲ್ ಕುಮಾರ್ ಹಲ್ಲೆಗೊಳಗಾದ ವಿದ್ಯಾರ್ಥಿ. ಸಾಬಣ್ಣ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಸಾಬಣ್ಣನ ಮೇಕೆ ಮನೆಗೆ ಅನಿಲ್ ಕುಮಾರ್ ಹೋಗಿದ್ದರಿಂದ ಕೋಪಗೊಂಡ ಸಾಬಣ್ಣ ಕುಡಿದ ಅಮಲಿನಲ್ಲಿ ಅನಿಲ್ ಮೇಲೆ ತಲ್ವಾರ್ ನಿಂದ ಹಲ್ಲೆ ಮಾಡಿದ್ದಾನೆ.

ಹಲ್ಲೆಗೊಳಗಾದ ಅನಿಲ್ ಕುಮಾರ್‍ನ ಕೈ ಬಹುತೇಕ ತುಂಡಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯ ಆವರಣದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಬಗದಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *