ನಟಿ ಅದಿತಿ ಪ್ರಭುದೇವ್ ನಾಳೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇಂದು ಅವರ ಆರತಕ್ಷತೆ ನಡೆಯಲಿದ್ದು, ನಾಳೆ ಹಸೆಮಣೆ ಏರುತ್ತಿದ್ದಾರೆ. ಇದೊಂದು ಅರೇಂಜ್ಡ್ ಮ್ಯಾರೇಜ್ ಆಗಿದ್ದು, ಮನೆಯವರೇ ತೋರಿಸಿದಿ ಯಶಸ್ವಿ ಜೊತೆ ನಾಳೆ ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ. ಇಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಅದ್ದೂರಿ ಆರತಕ್ಷತೆಯಲ್ಲಿ ಸ್ಯಾಂಡಲ್ ವುಡ್ ಹಾಗೂ ರಾಜಕೀಯ ಗಣ್ಯರು ಆಗಮಿಸಲಿದ್ದಾರೆ.
ಇವರು ಕನ್ನಡ ಸಿನಿಮಾ ರಂಗದ ಬಹುಬೇಡಿಕೆಯ ನಟಿಯಾಗಿದ್ದು, ಒಂದೇ ಒಂದು ವಿವಾದವಿಲ್ಲದೇ ಸ್ಟಾರ್ ನಟಿಯಾಗಿ ಬೆಳೆದಿರುವ ಅದಿತಿ ಪ್ರಭುದೇವ ಅವರ ಅರಿಶಿನ ಶಾಸ್ತ್ರ ನಿನ್ನೆ ನಡೆದದ್ದು ಆ ಫೋಟೋಗಳನ್ನು ಅದಿತಿ ಪ್ರಭುದೇವ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಉದ್ಯಮಿ ಯಶಸ್ ಅವರ ಜೊತೆ ಹೊಸ ಜೀವನಕ್ಕೆ ಅದಿತಿ ಕಾಲಿಡುತ್ತಿದ್ದು, ಈಗಾಗಲೇ ತಮ್ಮ ಭಾವಿ ಪತಿಯನ್ನು ಅಭಿಮಾನಿಗಳಿಗೆ ಹಲವಾರು ಬಾರಿ ಪರಿಚಯಿಸಿದ್ದಾರೆ. ಒಂದು ದಿನ ತಮ್ಮ ಯಶಸ್ವಿ ಜೊತೆ ಕಾಡಿನಲ್ಲಿ ಕಳೆದ ಅನುಭವವನ್ನೂ ಅವರು ಹಂಚಿಕೊಂಡಿದ್ದರು. ಇದನ್ನೂ ಓದಿ: `ಗಾಲ್ವಾನ್ ಹಾಯ್’ ಎಂದ ನಟಿಗೆ ಚಳಿ ಬಿಡಿಸಿದ ಸಚಿವ – ಕಾನೂನು ಕ್ರಮಕ್ಕೆ ಚಿಂತನೆ
ತಾವು ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರೂ, ಅದಿತಿ ಮಾತ್ರ ಹುಡುಗನನ್ನು ಆಯ್ಕೆ ಮಾಡಿಕೊಂಡಿದ್ದು ಉದ್ಯಮ ಕ್ಷೇತ್ರದವರನ್ನು ಯಶಸ್ ಉದ್ಯಮಿಯಾಗಿದ್ದು, ಕಾಫಿ ಪ್ಲಾಂಟರ್ ಕೂಡ ಆಗಿದ್ದಾರೆ. ಇಂತಹ ಹುಡುಗನನ್ನು ಪಡೆಯುವುದಕ್ಕಾಗಿಯೇ ನಾನು ಇಷ್ಟು ದಿನ ಕಾದಿದ್ದೆ ಎಂದೂ ಅವರು ಹುಡುಗನ ಬಗ್ಗೆ ಬರೆದುಕೊಂಡಿದ್ದರು.
ಈಗಾಗಲೇ ತಮ್ಮ ಮದುವೆಯ ಆಹ್ವಾನ ಪತ್ರಿಕೆಯನ್ನು ಚಿತ್ರೋದ್ಯಮದ ಅನೇಕರಿಗೆ ನೀಡಿದ್ದು, ನಾಳೆ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಅದಿತಿ ಪ್ರಭುದೇವ್ ಅವರ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ತಿಂಗಳು ಅದಿತಿ ಅವರ ಎರಡು ಚಿತ್ರಗಳು ರಿಲೀಸ್ ಆಗಿದ್ದು, ಇವರ ಪಾತ್ರಕ್ಕೆ ಮೆಚ್ಚುಗೆಯ ಮಾತೂ ಕೇಳಿ ಬಂದಿದೆ.
ಮದುವೆಯ ನಂತರ ಅದಿತಿ ಸಿನಿಮಾ ರಂಗದಲ್ಲೇ ಮುಂದುವರೆಯುತ್ತಾರಾ ಅಥವಾ ಸಿನಿಮಾ ರಂಗದಿಂದ ದೂರವಾಗುತ್ತಾರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದ್ದು, ಮುಂದಿನ ದಿನಗಳಲ್ಲಿ ಅದಿತಿ ಅವರೇ ಇದಕ್ಕೆ ಉತ್ತರವನ್ನೂ ನೀಡಲಿದ್ದಾರೆ. ಬಹುಶಃ ಸಿನಿಮಾ ರಂಗವನ್ನು ತೊರೆಯುವುದಿಲ್ಲ ಎಂದು ಹೇಳಲಾಗುತ್ತಿದೆ.