Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ಭಾಗ್ಯ ಕೊಡದಿದ್ರೂ ಪರವಾಗಿಲ್ಲ, ಬೆಲೆ ಏರಿಕೆ ದೌರ್ಭಾಗ್ಯ ಮಾತ್ರ ಬೇಡ: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಮ್ಮ ಭಾಗ್ಯ ಕೊಡದಿದ್ರೂ ಪರವಾಗಿಲ್ಲ, ಬೆಲೆ ಏರಿಕೆ ದೌರ್ಭಾಗ್ಯ ಮಾತ್ರ ಬೇಡ: ವಿಜಯೇಂದ್ರ

Bengaluru City

ನಿಮ್ಮ ಭಾಗ್ಯ ಕೊಡದಿದ್ರೂ ಪರವಾಗಿಲ್ಲ, ಬೆಲೆ ಏರಿಕೆ ದೌರ್ಭಾಗ್ಯ ಮಾತ್ರ ಬೇಡ: ವಿಜಯೇಂದ್ರ

Public TV
Last updated: June 15, 2024 8:24 pm
Public TV
Share
3 Min Read
B.Y Vijayendra
SHARE

ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ಯಾವ ಭಾಗ್ಯವನ್ನು ಕೊಡದಿದ್ದರೂ ಪರವಾಗಿಲ್ಲ, ಬೆಲೆ ಏರಿಕೆಯ ದೌರ್ಭಾಗ್ಯವನ್ನು ಮಾತ್ರ ನಮ್ಮ ಮೇಲೆ ಹೇರಬೇಡಿ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ  (B.Y Vijayendra) ರಾಜ್ಯ ಸರ್ಕಾರಕ್ಕೆ ಕುಟುಕಿದ್ದಾರೆ.

ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ (Petrol Price Hike) ಏರಿಕೆ ಮಾಡಿರುವ ವಿಚಾರವಾಗಿ ಅವರು ಖಂಡಿಸಿ ಎಕ್ಸ್‍ನಲ್ಲಿ ಸರಣಿ ಪೋಸ್ಟ್ ಹಾಕಿದ್ದಾರೆ. ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ಅಧಿಕಾರಕ್ಕೇರುವ ಒಂದೇ ಕಾರಣಕ್ಕಾಗಿ ಪಂಚ ಭಾಗ್ಯದ ಮೋಡಿ ಮಾಡಿದ್ದೀರಿ. ಈ ಮೂಲಕ ನೀವು ರಾಜ್ಯದ ಮತದಾರರನ್ನು ದಿಕ್ಕು ತಪ್ಪಿಸಿದ್ದು ನಾಡಿನ ದೌರ್ಭಾಗ್ಯವಲ್ಲದೇ ಬೇರೇನೂ ಅಲ್ಲ. ರಾಜ್ಯದ ಜನತೆ ನಿಮ್ಮ ಬಳಿ ಯಾವ ಭಾಗ್ಯವನ್ನು ಬೇಡಿರಲಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಕಾಂಗ್ರೆಸ್ಸಿಗರೇ,
ರಾಜ್ಯದ ಜನತೆ ನಿಮ್ಮ ಬಳಿ ಯಾವ ಭಾಗ್ಯವನ್ನು ಬೇಡಿರಲಿಲ್ಲ … @INCKarnataka ನೀವು ಯಾವ ಭಾಗ್ಯವನ್ನೂ ಕೊಡದಿದ್ದರೂ ಪರವಾಗಿಲ್ಲ, ಬೆಲೆ ಏರಿಕೆಯ ದೌರ್ಭಾಗ್ಯವನ್ನು ಮಾತ್ರ ನಮ್ಮ ಮೇಲೆ ಹೇರಬೇಡಿ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಧಿಕಾರಕ್ಕೇರುವ ಒಂದೇ ಕಾರಣಕ್ಕಾಗಿ ಪಂಚ ಭಾಗ್ಯದ ಮೋಡಿ ಮಾಡಿ ನೀವು ರಾಜ್ಯದ… pic.twitter.com/NE7VfXwyqB

— Vijayendra Yediyurappa (@BYVijayendra) June 15, 2024

ದಿನ ಬಳಕೆ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಸರಣಿ ರೂಪದಲ್ಲಿ ಏರಿಸುತ್ತಲೇ ಇದ್ದೀರಿ. ಇದೀಗ ಪೆಟ್ರೋಲ್ 3ರೂ. ಹಾಗೂ ಡೀಸೆಲ್ ಮೇಲೆ 3.50 ರೂ. ದರ ಏರಿಸಿ ಜನಸಾಮಾನ್ಯರ ಕೈ ಸುಟ್ಟಿದ್ದೀರಿ. ಈ ಬೆಲೆ ಏರಿಕೆಯ ಪ್ರತಿಕೂಲ ಪರಿಣಾಮ ಸಹಜವಾಗಿಯೇ ಸರಕು ಸಾಗಾಣಿಕೆ, ಹಾಗೂ ಸಾರಿಗೆ ದರಗಳೂ ವಿಪರೀತ ಹೆಚ್ಚಳವಾಗಲಿದೆ. ಇದರಿಂದ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯೂ ಏರಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ಬರಿದಾಗಿರುವ ನಿಮ್ಮ ಖಜಾನೆ ತುಂಬಿಸಲು ಜನಸಾಮಾನ್ಯರು ಹಾಗೂ ಕಡು ಬಡವರ ಜೇಬು ಖಾಲಿ ಮಾಡಲು ಹೊರಟಿದ್ದೀರಿ. ನಿಮ್ಮ ಜನ ವಿರೋಧಿ ನೀತಿ ನಿರ್ಧಾರಗಳನ್ನು ಬಿಜೆಪಿ ಪ್ರಬಲವಾಗಿ ಖಂಡಿಸಿ ಪ್ರತಿಭಟಿಸುತ್ತದೆ. ಈ ಕೂಡಲೇ ಪೆಟ್ರೋಲ್ ಡೀಸೆಲ್ ದರ ಏರಿಕೆ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳದಿದ್ದರೆ ಜನಾಕ್ರೋಶವನ್ನು ಪ್ರತಿನಿಧಿಸಿ ಬಿಜೆಪಿ ಬೀದಿಗಿಳಿದು ಹೋರಾಡಲಿದೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಬಿಜೆಪಿಗೆ ಮತ ಹಾಕಿದ್ದಕ್ಕೆ‌ ಕಾಂಗ್ರೆಸ್‌ ಸರ್ಕಾರ ಸೇಡು ತೀರಿಸಿಕೊಳ್ತಿದೆ – ಅಶೋಕ್‌

ತುಘಲಕ್ ಸರ್ಕಾರದ ನಿರ್ಧಾರ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯಿಸಿರುವ ಕಾರ್ಕಳದ ಶಾಸಕ ಸುನೀಲ್ ಕುಮಾರ್ ಇದು ತುಘಲಕ್ ಸರ್ಕಾರದ ನಿರ್ಧಾರ ಎಂದು ಕಿಡಿಕಾರಿದ್ದಾರೆ.

Sunil Kumar 2

ಸಾರ್ವತ್ರಿಕ ಚುನಾವಣೆ ಮುಗಿದು 10 ದಿನ ಕಳೆದಿಲ್ಲ. ಚುನಾವಣೆಗೂ ಮುನ್ನ ಎಲ್ಲಾ ಯೋಜನೆಗಳನ್ನು ರದ್ದು ಮಾಡಿ, ಗ್ಯಾರಂಟಿ ಯೋಜನೆ ಜಪ ಮಾಡುತ್ತಿತ್ತು. ಫಲಿತಾಂಶ ಬಂದ ಬಳಿಕ ಏಕಾಏಕಿ ತೆರಿಗೆ ಹೆಚ್ಚಳ ಮಾಡಿದ್ದಾರೆ. ರಾಜ್ಯ ಸರ್ಕಾರದ ಆಡಳಿತ ವೈಖರಿಗೆ ಇದು ಸಾಕ್ಷಿಯಾಗಿದೆ. ಸರ್ಕಾರದ ಈ ನಡೆಯ ವಿರುದ್ಧ ಬಿಜೆಪಿಯಿಂದ ಭಾನುವಾರದಿಂದಲೇ ಹೋರಾಟ ಆರಂಭ ಮಾಡುತ್ತೇವೆ. ತಕ್ಷಣ ಸರ್ಕಾರ ಬೆಲೆ ಏರಿಕೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನೂ ಹಾಲಿಗೆ ಸಬ್ಸಿಡಿ ಇಲ್ಲ, ಕಂದಾಯ ಇಲಾಖೆ ಕಾಗದ ಪತ್ರಗಳ ದರ ಹೆಚ್ಚಳವಾಗಿದೆ. ಎಂಜಿನಿಯರಿಂಗ್, ಮೆಡಿಕಲ್ ಕಾಲೇಜಿನ ಶುಲ್ಕ ಹೆಚ್ಚಳವಾಗಿದೆ. ಈಗ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಮಾಡಿ ಖಜಾನೆ ತುಂಬಿಸುವ ಕಾರ್ಯ ಆರಂಭ ಮಾಡಿದ್ದಾರೆ. ರಾಜ್ಯದಲ್ಲಿ 13,000 ಕೋಟಿ ರೂ. ತೆರಿಗೆ ಸಂಗ್ರಹದಲ್ಲಿ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ದುರ್ಗಾದೇವಿಗೆ ಭಂಡಾರದ ನೈವೇದ್ಯ – ಮುಧೋಳ ಲೋಕಾಪುರದಲ್ಲಿ 7 ವರ್ಷಕ್ಕೊಮ್ಮೆ ನಡೆಯುತ್ತದೆ ವಿಶಿಷ್ಟ ಜಾತ್ರೆ

TAGGED:B.Y vijayendrabjpcongressPetrol price hike
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
4 minutes ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
4 minutes ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
16 minutes ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
21 minutes ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
38 minutes ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?