ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನಿಗೆ ಚಾಕು ಇರಿತವಾಗಿದ್ದು, ಹಲ್ಲೆಗೊಳಗಾದ ವ್ಯಕ್ತಿ ರಕ್ತಸಿಕ್ತ ಪರಿಸ್ಥಿತಿಯಲ್ಲೇ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಬಂದ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ.
ಕರ್ಜಗಿ ಓಣಿಯ ನಿವಾಸಿ ಮಹಮ್ಮದ್ ಹಲ್ಲೆಗೊಳಗಾಗಿದ್ದು, ಇರ್ಫಾನ್ ಎಂಬಾತನಿಂದ ಚಾಕು ಇರಿತವಾಗಿದೆ. ಕಸಬಾ ಠಾಣಾ ವ್ಯಾಪ್ತಿಯ ಕೊತಂಬರಿ ಆಟೋ ಸ್ಟ್ಯಾಂಡ್ ಬಳಿ ಈ ಘಟನೆ ನಡೆದಿದೆ. ಆಟೋ ಸ್ಟ್ಯಾಂಡ್ (Auto Stand) ಬಳಿ ಮಹಮ್ಮದ್ ನಿಂತಿದ್ದಾಗ ಜಗಳ ತೆಗೆದ ಇರ್ಫಾನ್ ಮಹಮ್ಮದ್ ಎದೆಗೆ ಚಾಕು ಇರಿದು ಪರಾರಿಯಾಗಿದ್ದಾನೆ. ಇದನ್ನೂ ಓದಿ: ಸಿದ್ದರಾಮೋತ್ಸವಕ್ಕೆ ದುಡ್ಡನ್ನು ಸಿದ್ದರಾಮಯ್ಯ ಅವರ ಅಪ್ಪನ ಮನೆಯಿಂದ ತಂದ್ರಾ: ಕಟೀಲ್ ಪ್ರಶ್ನೆ
ಘಟನೆ ಬಳಿಕ ಸೀದಾ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ (Police Station) ಮಹಮ್ಮದ್ ಬಂದಿದ್ದಾನೆ. ಮಹಮ್ಮದ್ ಎದೆಯಿಂದ ರಕ್ತ ಸುರಿಯುತ್ತಿದ್ದ ಹಿನ್ನೆಲೆ ಮಾಹಿತಿ ಪಡೆದ ಪೊಲೀಸರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ. ಕಸಬಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಸಾವಿರಾರು ಪಿಎಫ್ಐ ಉಗ್ರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಕ್ಷಮಾದಾನ: ಸುನಿಲ್ ಕುಮಾರ್