Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೆಲದ ಘಮಲಿನ ಚಿತ್ರ ‘ಸಿಂಹರೂಪಿಣಿ’ : ನಿರ್ಮಾಪಕ ನಂಜುಂಡೇಶ್ವರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನೆಲದ ಘಮಲಿನ ಚಿತ್ರ ‘ಸಿಂಹರೂಪಿಣಿ’ : ನಿರ್ಮಾಪಕ ನಂಜುಂಡೇಶ್ವರ

Cinema

ನೆಲದ ಘಮಲಿನ ಚಿತ್ರ ‘ಸಿಂಹರೂಪಿಣಿ’ : ನಿರ್ಮಾಪಕ ನಂಜುಂಡೇಶ್ವರ

Public TV
Last updated: October 17, 2024 1:25 pm
Public TV
Share
3 Min Read
Simha Roopini 4
SHARE

ಸದ್ಯ ಕನ್ನಡ ಚಿತ್ರರಂಗದಲ್ಲಿ ಪ್ಯಾನ್ ಇಂಡಿಯಾ ಲೆವೆಲ್ಲಿನ ಗಾಳಿ ಬಲವಾಗಿ ಬೀಸುತ್ತಿರುವಾಗ, ವಿಶಿಷ್ಟ ರೀತಿಯ ಪ್ರಯತ್ನವಾಗಿ, ಪ್ಯಾನ್ ಇಂಡಿಯಾ ಕಲಾವಿದರನ್ನು ಬಳಸಿಕೊಂಡು ರೂಪಿಸಲ್ಪಟ್ಟಿರುವ ಚಿತ್ರ `ಸಿಂಹರೂಪಿಣಿ’ (Simha Roopini). ಅಕ್ಟೋಬರ್ ೧೭ರಂದು ಬಿಡುಗಡೆ ಆಗಿದೆ. ಈ ಸಿನಿಮಾವನ್ನು ನಿರ್ಮಾಣ ಮಾಡಿರುವವರು ಕೆ.ಎಂ ನಂಜುಂಡೇಶ್ವರ (Nanjundeshwar). ವಿಶೇಷವೆಂದರೆ, ಈ ಚಿತ್ರಕ್ಕೆ ಕಥೆಯನ್ನೂ ಅವರೇ ಒದಗಿಸಿದ್ದಾರೆ. ಸಾಮಾನ್ಯವಾಗಿ, ಸಿನಿಮಾ ನಿರ್ಮಾಣ ಎಂಬುದು ಬ್ಯುಸಿನೆಸ್ ಅಂತಲೇ ಭಾವಿಸಲಾಗುತ್ತದೆ. ಆದರೆ, ಸಿಂಹರೂಪಿಣಿ ನಿರ್ಮಾಣದ ಹಿಂದಿರೋದು ಅಕ್ಷರಶಃ ಭಕ್ತಿ ಎಂಬ ಶಕ್ತಿ. ಈ ಕುರಿತಾದ ಒಂದಷ್ಟು ಮಾಹಿತಿಗಳನ್ನು ಖುದ್ದು ಅವರೇ ತೆರೆದಿಟ್ಟಿದ್ದಾರೆ.

Simha Roopini 3

ದೊಡ್ಡ ಬಳ್ಳಾಪುರದ ಕಲ್ಲುದೇವನಹಳ್ಳಿಯವರು ಕೆ.ಎಂ ನಂಜುಂಡೇಶ್ವರ. ಬದುಕು ಅರಸಿ ಬೆಂಗಳೂರಿಗೆ ಬಂದು ನೆಲೆಗೊಂಡು ಮೂರು ದಶಕಗಳು ಕಳೆದಿವೆ. ಮೆಡಿಕಲ್ ಅಡ್ಮಿನಿಸ್ಟ್ರೇಷನ್ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಂಜುಂಡೇಶ್ವರ ಅವರ ಪಾಲಿಗೆ ಮಾರಮ್ಮದೇವಿ ಆರಾಧ್ಯ ದೇವತೆ. ಅವರ ಬದುಕನ್ನು ಒಂದಷ್ಟು ಸಂಕಷ್ಟಗಳಿಂದ ಪಾರುಮಾಡಿದ ಮಾರಮ್ಮದೇವಿಯ ಆರಾಧಕರಾಗಿಯೂ ಅವರು ಮುಂದುವರೆದು ಬಂದಿದ್ದಾರೆ. ಅವರ ಪಾಲಿಗೆ ಸಿನಿಮಾ ನಿರ್ಮಾಣ ಮಾಡಬೇಕೆಂಬುದು ಬಹು ವರ್ಷಗಳ ಕನಸಾಗಿತ್ತು. ಕಡೆಗೂ ಅದಕ್ಕೊಂದು ಸರಿಕಟ್ಟಾದ ವಾತಾವರಣ ನಿರ್ಮಾಣವಾದ ಘಟ್ಟದಲ್ಲಿ ತನ್ನ ಬದುಕು ಬದಲಿಸಿದ ಮಾರಮ್ಮ ದೇವಿಯ ಕುರಿತಾದ ಸಿನಿಮಾ ನಿರ್ಮಾಣ ಮಾಡಬೇಕೆಂದು ನಂಜುಂಡೇಶ್ವರ ತೀರ್ಮಾನಿಸಿದ್ದರಂತೆ. ಇದಕ್ಕೆ ದೇವಿಯ ಕಡೆಯಿಂದಲೂ ಸಕಾರಾತ್ಮಕ ವಾಗ್ದಾನ ಸಿಗುವ ಮೂಲಕ ಸಿಂಹರೂಪಿಣಿ ಚಿತ್ರಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿತ್ತು.

Simha Roopini 1

ಆ ನಂತರದಲ್ಲಿ ನಿರ್ದೇಶನಕ್ಕೆ ಕಿನ್ನಾಳ್ ರಾಜ್ ವರಿಂದ ಮೊದಲ್ಗೊಂಡು ಎಲ್ಲ ಆಯ್ಕೆಗಳಿಗೂ ಮಾರಮ್ಮದೇವಿಯ ವಾಗ್ದಾನದ ಮೊರೆ ಹೋಗಲಾಗಿದೆ. ದೇವಿಯ ಆಣತಿಯೊಂದಿಗೇ ಪ್ರತೀ ಹೆಜ್ಜೆಯನ್ನಿಟ್ಟಿರುವ ಧನ್ಯತಾ ಭಾವವೊಂದು ನಿರ್ಮಾಪಕ ನಂಜುಂಡೇಶ್ವರರಲ್ಲಿದೆ. ಈಗೊಂದು ಮೂವತ್ತು ವರ್ಷಗಳ ಹಿಂದೆ ಹಳ್ಳಿ ವಾತಾವರಣವೇ ಬೇರೆಯದ್ದಿತ್ತು. ಇಂಥಾ ದೇವರು, ದೇವಿಯರ ಮಹಾತ್ಮೆಗಳ ಬಗ್ಗೆ ಹಿರೀಕರು ಒಂದಷ್ಟು ಕಥೆಗಳನ್ನು ಹೇಳುತ್ತಿದ್ದರು. ಆ ಮೂಲಕ ನೆಲಮೂಲದ ಕಥಾನಕಗಳು ಹೊಸ ತಲೆಮಾರಿಗೆ ದಾಟಿಕೊಳ್ಳುತ್ತಿದ್ದವು. ಈವತ್ತಿಗೂ ನಮ್ಮ ನಡುವಲ್ಲಿರುವ ನಂಬಿಕೆಗಳು ಹಾಗೆ ಹಿರಿಯರಿಂದ ದಾಟಿಕೊಂಡವುಗಳೇ. ಆದರೀಗ, ಅಂಥಾ ಕಥೆಗಳನ್ನು ಹೇಳುವವರೂ ಇಲ್ಲ. ಕೇಳಲು ಪುರಸೊತ್ತಿರುವವರೂ ಇಲ್ಲ. ಈ ಕೊರತೆ ನೀಗಿಸುತ್ತಲೇ, ನೆಲದ ನಂಟಿನ ಮಾರಮ್ಮದೇವಿಯ ಕಥೆಯನ್ನು ಅಜರಾಮರವಾಗಿಸುವ ಸದುದ್ದೇಶದೊಂದಿಗೆ ಸಿಂಹರೂಪಿಣಿ ಚಿತ್ರವನ್ನು ನಿರ್ಮಾಣ ಮಾಡಿದ್ದಾಗಿ ನಂಜುಂಡೇಶ್ವರ ಹೇಳಿಕೊಳ್ಳುತ್ತಾರೆ.

Simha Roopini 2

ಈ ಸಿನಿಮಾದಲ್ಲಿ ಯಾವುದನ್ನೂ ಅತಿಶಯವೆಂಬಂತೆ ಹೇಳಲಾಗಿಲ್ಲ. ಯಾವ ದೃಷ್ಯಗಳೂ ಡ್ರಾಮಾ ಸ್ವರೂಪ ಪಡೆಯದಂತೆ, ಅತ್ಯಂತ ನೈಜವಾಗಿ ಚಿತ್ರೀಕರಿಸಲಾಗಿದೆಯಂತೆ. ವಿಶೇಷವೆಂದರೆ, ನೈಜ ಘಟನೆಗಳನ್ನೇ ಒಟ್ಟು ಸೇರಿಸಿ, ಅದನ್ನು ಕಮರ್ಶಿಯಲ್ ಹಾದಿಯಲ್ಲಿ ನಿರೂಪಿಸಲಾಗಿದೆಯಂತೆ. ಇದರ ಚಿತ್ರೀಕರಣದ ಹಂತದಲ್ಲಿ ಪ್ರತಿಯೊಬ್ಬರಿಗೂ ರೋಮಾಂಚಕ ಅನುಭವಗಳಾಗಿವೆ. ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಂತೂ ಹಲವರಿಗೆ ಶಕ್ತಿಯ ಆವಾಹನೆಯಾದಂತಾಗಿ ಮೂರು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿತ್ತಂತೆ. ಆ ಹಂತದಲ್ಲಿ ನಡೆದ ಘಟನಾವಳಿಗಳನ್ನು ಮೂರು ಕ್ಯಾಮೆರಾಗಳಲ್ಲಿ ಶೂಟ್ ಮಾಡಿಕೊಂಡು ಅದನ್ನು ಹಾಗೆಯೇ ತೋರಿಸಲಾಗಿದೆ. ಅದರ ಮೂಲಕ ರೋಮಾಂಚನವೊಂದು ಪ್ರತಿಯೊಬ್ಬರನ್ನೂ ಆವರಿಸಿಕೊಳ್ಳಲಿದೆ. ಅದನ್ನು ಸ್ವೀಕರಿಸುವ ಬಗೆ ಪ್ರೇಕ್ಷಕರಿಗೆ ಬಿಟ್ಟಿದ್ದೆನ್ನುವ ಅಭಿಪ್ರಾಯ ನಂಜುಂಡೇಶ್ವರರದ್ದು.

 

ಇದು ಪ್ಯಾನಿಂಡಿಯಾ ಭರಾಟೆಯ ಕಾಲ. ಇಂಥಾ ಹೊತ್ತಿನಲ್ಲಿ ದೇವಿಯ ಮೇಲೆ ನಂಬಿಕೆ ಇಟ್ಟು, ಅಪ್ಪಣೆಯೊಂದಿಗೆ ಈ ಚಿತ್ರವನ್ನು ನಿರ್ಮಾಣ ಮಾಡಿರುವ ಧನ್ಯತಾ ಭಾವ ನಂಜುಂಡೇಶ್ವರ ಅವರಲ್ಲಿದೆ. ಓರ್ವ ನಿರ್ಮಾಪಕನಾಗಿ ಪ್ರತಿಯೊಂದರಲ್ಲಿಯೂ ಭಾಗಿಯಾಗಿ, ಒಟ್ಟಾರೆ ಚಿತ್ರವನ್ನು ರೂಪಿಸಿದ  ತೃಪ್ತಿ ಅವರಲ್ಲಿದೆ. ಇದು ಭಕ್ತಿಯಿಂದ ಚಿತ್ರೀಕರಿಸಿರುವ ಸಿನಿಮಾ. ಎಲ್ಲ ವರ್ಗದವರಿಗೂ ಇಷ್ಟವಾಗಬಲ್ಲಂತೆ ಮೂಡಿ ಬಂದಿದೆ. ಬಹು ದಿನಗಳ ನಂತರ ಕುಟುಂಬ ಸಮೇತರಾಗಿ ನೋಡಿ ಮುದಗೊಳ್ಳಬಹುದಾದ ಚಿತ್ರ ಸಿಂಹರೂಪಿಣಿ. ಈ ಸಿನಿಮಾ ನೋಡುವ ಸರ್ವರಿಗೂ ದೇವಿಯ ಕೃಪಾಶೀರ್ವಾದ ಸಿಗುವಂತಾಗಲಿ ಎಂಬ ಸದಾಶಯ ನಂಜುಂಡೇಶ್ವರ ಅವರದ್ದು. ಈ ವಾರ ರಾಜ್ಯಾದ್ಯಂತ ಚಿತ್ರ ಬಿಡುಗಡೆ ಆಗಿದೆ.

TAGGED:Kinnal RajNanjundeshwarSimha Roopiniಕಿನ್ನಾಳ್ ರಾಜ್ನಂಜುಡೇಶ್ವರಸಿಂಹರೂಪಿನಿ
Share This Article
Facebook Whatsapp Whatsapp Telegram

Cinema news

Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories

You Might Also Like

India vs Pakistan 1
Cricket

T20 World Cup | ಫೆ.15 ರಂದು ಇಂಡೋ – ಪಾಕ್‌ ಕದನ ಫಿಕ್ಸ್‌; ಮಂಡಿಯೂರಿದ ಪಾಕಿಸ್ತಾನ

Public TV
By Public TV
3 hours ago
Cylinder blast two seriously injured in K.R Puram
Bengaluru City

ಸಿಲಿಂಡರ್ ಬ್ಲಾಸ್ಟ್ – ಧಗಧಗಿಸಿದ ಕಟ್ಟಡ, ಇಬ್ಬರಿಗೆ ಗಂಭೀರ ಗಾಯ

Public TV
By Public TV
4 hours ago
Jay Shah
Cricket

T20 World Cup | ಪಾಕ್‌ ಬೇಡಿಕೆ ಸಾರಾ ಸಗಟಾಗಿ ತಿರಸ್ಕರಿಸಿದ ಐಸಿಸಿ – ನಿರ್ಧಾರ ತಿಳಿಸಲು ಡೆಡ್‌ಲೈನ್‌ ಫಿಕ್ಸ್‌

Public TV
By Public TV
4 hours ago
C.T. Ravi
Chikkamagaluru

ಅಲ್ಪಸಂಖ್ಯಾತ ನಿಗಮ ಮಂಡಳಿ ಸಾಲದ ಬಡ್ಡಿ ಮನ್ನಾ – ಇದು ಸಂವಿಧಾನ ವಿರೋಧಿ ನಡೆ: ಸಿ.ಟಿ.ರವಿ ಕಿಡಿ

Public TV
By Public TV
4 hours ago
DK Shivakumar 1 1
Bengaluru City

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿ.ಕೆ. ಶಿವಕುಮಾರ್‌

Public TV
By Public TV
5 hours ago
T20WorldCup Scotland
Cricket

T20 World Cup – ಇಟಲಿ ವಿರುದ್ಧ 73 ರನ್‌ಗಳ ಭರ್ಜರಿ ಜಯಗಳಿಸಿದ ಸ್ಕಾಟ್ಲೆಂಡ್

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?