ಹುಬ್ಬಳ್ಳಿ: ನಮಗೆ 10 ಕೋಟಿ ಧ್ವಜ ಬೇಕು, ಅದನ್ನು ಪೂರೈಕೆ ಮಾಡಲು ಖಾದಿ ಗ್ರಾಮೋದ್ಯೋಗ ಘಟಕಕ್ಕೆ ಆಗುವುದಿಲ್ಲ. ಹೀಗಾಗಿ ಧ್ವಜ ನೀತಿಗೆ ತಿದ್ದುಪಡಿ ತರಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖಾದಿ ಧ್ವಜಕ್ಕೆ ಹೆಚ್ಚು ದುಡ್ಡು ಕೊಡಬೇಕು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಹೀಗಾಗಿ ಧ್ವಜ ನೀತಿಗೆ ತಿದ್ದುಪಡಿ ಮಾಡಲಾಗಿದೆ. ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆಯಿಲ್ಲ ಎಂದು ಹೇಳಿಕೆ ನೀಡಿದರು.
ರಾಹುಲ್ ಗಾಂಧಿ ಅವರಿಗೆ ಮಾಡಲು ಬೇರೆ ಒಳ್ಳೆಯ ಕೆಲಸ ಇದೆ. ಅವರು ಅದನ್ನು ಮಾಡಲಿ. ಅವರು ಹುಬ್ಬಳ್ಳಿ ಬೆಂಗೇರಿಯ ಖಾದಿ ಗ್ರಾಮೋದ್ಯೋಗಕ್ಕೆ ಭೇಟಿ ನೀಡುವ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು. ಇದನ್ನೂ ಓದಿ: ಸಾಧನೆ ಶಿಖರವೇರಿದ ಸಂಕೇತ್ – ಪಾನ್ ಮಾರುತ್ತಿದ್ದ ಹುಡುಗನ `ಬೆಳ್ಳಿ’ ಸಾಧನೆ
75 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಆಗಸ್ಟ್ 13 ರಿಂದ ಆಗಸ್ಟ್ 15 ರ ವರೆಗೆ ಜನರು ರಾಷ್ಟ್ರ ಧ್ವಜವನ್ನು ಅವರ ಮನೆಗಳ ಮೇಲೆ ಹಾರಿಸಬಹುದು. ಒಂದು ಧ್ವಜಕ್ಕೆ 20 ರೂ. ಕೊಟ್ಟು ಸಾರ್ವಜನಿಕರು ಖರೀದಿ ಮಾಡಬೇಕು. ನ್ಯಾಯಬೆಲೆ ಅಂಗಡಿ, ಮಾಲ್, ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ಕಚೇರಿಗಳಲ್ಲಿ ಧ್ವಜ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮುಂಬೈ ವಿವಾದ – ಮಹಾರಾಷ್ಟ್ರ ರಾಜ್ಯಪಾಲರ ಹೇಳಿಕೆ ಒಪ್ಪಲ್ಲ ಎಂದ ಸಿಎಂ ಶಿಂದೆ