ಮೊಬೈಲ್ ಕಸಿದು ಪರಾರಿಯಾಗ್ತಿದ್ದ ಯುವಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

Public TV
1 Min Read
TMK MOBILE KALLA

ತುಮಕೂರು: ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ಯುವಕನೋರ್ವನನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ತಡರಾತ್ರಿ ತುಮಕೂರು ನಗರದ ಸರಸ್ವತಿಪುರಂನ ನಾಲ್ಕನೇ ಕ್ರಾಸ್ ನಲ್ಲಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಮಹಾಲಿಂಗಯ್ಯ ಎನ್ನುವರ ಕೈಯಿಂದ ಮೊಬೈಲ್ ಕಸಿದುಕೊಂಡ ಯುವನೋರ್ವ ಪರಾರಿಯಾಗಲು ಯತ್ನಿಸಿದ್ದಾನೆ. ಇದೇ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರ ಸಹಾಯದಿಂದ ಮಹಾಲಿಂಗಯ್ಯ ಕಳ್ಳನನ್ನು ಹಿಡಿದು ಥಳಿಸಿದ್ದಾರೆ.

ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಯುವಕ ಮಾದಕ ಸಲ್ಯೂಶನ್ ಸೇವನೆ ಮಾಡಿದ್ದ ಎಂದು ತಿಳಿದುಬಂದಿದೆ. ಈ ಹಿಂದೆಯೂ ಅನೇಕ ಬಾರಿ ಸರಸ್ವತಿಪುರಂನಲ್ಲಿ ಈ ರೀತಿಯ ಘಟನೆ ನಡೆದಿದೆ. ಸ್ಥಳಕ್ಕೆ ಜಯನಗರ ಪೊಲೀಸರು ಆಗಮಿಸಿ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

TMK MOBILE KALLA 1 1

TMK MOBILE KALLA 1 4

TMK MOBILE KALLA 1 3

TMK MOBILE KALLA 1 5

TMK MOBILE KALLA 1 2

Share This Article
Leave a Comment

Leave a Reply

Your email address will not be published. Required fields are marked *