Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುರು ಆತ್ಮಹತ್ಯೆಗೆ ಅಸಲಿ ಕಾರಣ ಇನ್ನೂ ನಿಗೂಢ – ಮೊಬೈಲ್‌, ಟ್ಯಾಬ್‌ FSLಗೆ ಕಳಿಸಲು ತಯಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗುರು ಆತ್ಮಹತ್ಯೆಗೆ ಅಸಲಿ ಕಾರಣ ಇನ್ನೂ ನಿಗೂಢ – ಮೊಬೈಲ್‌, ಟ್ಯಾಬ್‌ FSLಗೆ ಕಳಿಸಲು ತಯಾರಿ

Bengaluru City

ಗುರು ಆತ್ಮಹತ್ಯೆಗೆ ಅಸಲಿ ಕಾರಣ ಇನ್ನೂ ನಿಗೂಢ – ಮೊಬೈಲ್‌, ಟ್ಯಾಬ್‌ FSLಗೆ ಕಳಿಸಲು ತಯಾರಿ

Public TV
Last updated: November 4, 2024 8:36 am
Public TV
Share
2 Min Read
Guruprasad 3
SHARE

– ತನಿಖೆ ವೇಳೆ 4 ಮೊಬೈಲ್‌, ಲ್ಯಾಪ್‌ಟಾಪ್‌, ಟ್ಯಾಬ್‌ ಪತ್ತೆ

ಬೆಂಗಳೂರು: ಮಠ ಖ್ಯಾತಿಯ ಸ್ಯಾಂಡಲ್‌ವುಡ್ ನಿರ್ದೇಶಕ, ನಟ ಗುರುಪ್ರಸಾದ್ (Guruprasad) ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗುರುಪ್ರಸಾದ್ ಶವ ಪತ್ತೆಯಾಗಿದೆ. ಆದ್ರೆ ಆತ್ಮಹತ್ಯೆಗೆ ಅಸಲಿ ಕಾರಣ ಇನ್ನೂ ನಿಗೂಢವಾಗಿಯೇ ಇದೆ.

Guruprasad 1

ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದ ಫ್ಲಾಟ್‌ನಲ್ಲಿ ಪೊಲೀಸರು ತಡಕಾಡಿದ್ರೂ ಡೆತ್‌ನೋಟ್‌ ಸಿಕ್ಕಿಲ್ಲ. 4 ಮೊಬೈಲ್, ಎರಡು ಟ್ಯಾಬ್, ಒಂದು ಲ್ಯಾಪ್‌ಟಾಪ್ (Mobile, Laptop And Tab) ಪತ್ತೆಯಾಗಿದೆ. ಕಳೆದ ನಾಲ್ಕು ದಿನಗಳಿಂದ ಚಾರ್ಜ್‌ ಮಾಡದ ಹಿನ್ನೆಲೆ ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ. ಈ ಮೊಬೈಲ್‌, ಟ್ಯಾಬ್‌ ಹಾಗೂ ಲ್ಯಾಪ್‌ಟಾಪ್‌ಗಳನ್ನ ಎಫ್‌ಎಸ್‌ಎಲ್‌ಗೆ ಕಳುಹಿಸಲು ಪೊಲೀಸ್‌ ಅಧಿಕಾರಿಗಳು ತಯಾರಿ ಶುರು ಮಾಡಿದ್ದಾರೆ. ಒಂದು ವೇಳೆ ಸಾಯುವ ಮುನ್ನ ಮೊಬೈಲ್‌ನಲ್ಲಿ ವೀಡಿಯೋ ಮಾಡಿಕೊಂಡಿದ್ದರೆ, ಅದಕ್ಕೆ ಕಾರಣ ತಿಳಿಯಲಿದೆ. ಅಲ್ಲಿಯ ವರೆಗೂ ಸಾಲದ ಸುಳಿಗೆ ಸಿಲುಕಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂಬ ಪತ್ನಿಯ ಹೇಳಿಕೆಯನ್ನೇ ಪರಿಗಣಿಸಲಾಗುತ್ತದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮರಣೋತ್ತರ ಪರೀಕ್ಷೆಯಲ್ಲಿ ಗುರುಪ್ರಸಾದ್‌ ಸಾವಿನ ಸತ್ಯ ಸ್ಫೋಟ!

ಗುರುಪ್ರಸಾದ್ ಇತ್ತೀಚಿಗೆ ನಿರ್ದೇಶಿಸಿದ್ದ ರಂಗನಾಯಕ ಹೀನಾಯ ಸೋಲು ಕಂಡಿತ್ತು. ಇದರಿಂದ ಗುರುಪ್ರಸಾದ್ ಸಾಲದ ಸುಳಿಗೆ ಸಿಲುಕಿದ್ರು. ಅವರ ವಿರುದ್ಧ ಚೆಕ್‌ಬೌನ್ಸ್ ಕೇಸ್ ಕೂಡ ದಾಖಲಾಗಿತ್ತು. ಅಲ್ಲದೇ ಅವರ ಆರೋಗ್ಯ ಕೂಡ ಕೈಕೊಟ್ಟಿತ್ತು. ಇದ್ರ ನಡುವೆಯೂ ಗುರುಪ್ರಸಾದ್ 2ನೇ ಮದ್ವೆ ಮಾಡಿಕೊಂಡಿದ್ರು. ಈ ಎಲ್ಲವನ್ನೂ ಸಂಭಾಳಿಸಲಾಗದೇ ಖಿನ್ನತೆಗೆ ಒಳಗಾಗಿದ್ದ ಗುರುಪ್ರಸಾದ್, ಅಕ್ಟೋಬರ್ 28 ರಿಂದ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. 4-5 ದಿನಗಳ ಹಿಂದೆ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ವಿಷಯ ಗೊತ್ತಾಗಿದೆ. ಅಷ್ಟೊತ್ತಿಗೆ ಗುರುಪ್ರಸಾದ್ ಶವ ಕೊಳೆತು ಹೋಗಿತ್ತು. ತವರು ಮನೆಯಲ್ಲಿದ್ದ 2ನೇ ಪತ್ನಿಯನ್ನು ಕರೆಯಿಸಿದ ಪೊಲೀಸರು, ಅವರ ಸಮ್ಮುಖದಲ್ಲಿ ಮುಂದಿನ ಪ್ರಕ್ರಿಯೆ ಮುಗಿಸಿದ್ರು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೀತು. ಕುಟುಂಬಸ್ಥರ ಸಮಕ್ಷಮದಲ್ಲಿ ಸಂಜೆಯೇ ವಿಲ್ಸನ್‌ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಗುರುಪ್ರಸಾದ್ ಅಂತ್ಯಕ್ರಿಯೆ ನಡೀತು. ನಟ ಧನಂಜಯ್, ದುನಿಯಾ ವಿಜಿ ಸೇರಿ ಹಲವರು ಅಂತಿಮ ನಮನ ಸಲ್ಲಿಸಿದ್ರು.. ಗುರುಪ್ರಸಾದ್ 2ನೇ ಪತ್ನಿಯ ದೂರು ಆಧರಿಸಿ ಪೊಲೀಸರು ತನಿಖೆ ನಡೆಸಿದ್ದಾರೆ.

1972ರಲ್ಲಿ ಕನಕಪುರದಲ್ಲಿ ಜನಿಸಿದ ಗುರುಪ್ರಸಾದ್ ರಾಮಚಂದ್ರ ಶರ್ಮಾ 2006 ರಲ್ಲಿ ತೆರೆಕಂಡ `ಮಠ’ ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಸಿನಿಪಯಣ ಆರಂಭಿಸಿದರು. ಇದು ನವರಸ ನಾಯಕ ಜಗ್ಗೇಶ್‌ರ 100ನೇ ಚಿತ್ರ. ಇದನ್ನೂ ಓದಿ: ಕಾರವಾರ | ಖಿನ್ನತೆಯಿಂದ ಬಳಲುತಿದ್ದ ವ್ಯಕ್ತಿಗೆ ಹೊಸ ಬಟ್ಟೆ ಕೊಡಿಸಿ ಮಾನವೀಯತೆ ಮೆರೆದಿದ್ದ ಗುರುಪ್ರಸಾದ್!

2009 ರಲ್ಲಿ ಇದೇ ಜೋಡಿ `ಎದ್ದೇಳು ಮಂಜುನಾಥ’ ಚಿತ್ರದ ಮೂಲಕ ಮತ್ತೊಂದು ಸಮಾಜಿಕ ಚಿತ್ರ ನೀಡಿತು. ಈ ಚಿತ್ರಕ್ಕೆ ಫಿಲ್ಮಫೇರ್ ಪ್ರಶಸ್ತಿ ದೊರಕಿತು. ನಂತರ `ಡೈರೆಕ್ಟರ್ ಸ್ಪೇಷಲ್’,`ಎರಡನೇ ಸಲ’ ಚಿತ್ರಗಳನ್ನು ನಿರ್ದೇಶಿಸಿದರು. ನಿರ್ದೇಶಕ ಮಾತ್ರವಲ್ಲದೇ ನಟನಾಗಿ `ಮಠ’, `ಎದ್ದೇಳು ಮಂಜುನಾಥ’,`ಮೈಲಾರಿ’, `ಹುಡುಗರು’,`ಅನಂತು v/s ನುಸ್ರತ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್‌ಬಾಸ್ ಅವತರಣಿಕೆಯಲ್ಲಿ ಭಾಗವಹಿಸಿದ್ದ ಇವರು ಹಲವು ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದಾರೆ. ಇದನ್ನೂ ಓದಿ: ಏಕಾಂಗಿಯಾಗಿ ಬದುಕನ್ನು ಅಂತ್ಯ ಮಾಡಿಕೊಂಡಿರೋದು ಬೇಜಾರಿನ ಸಂಗತಿ: ಮಾಳವಿಕಾ

TAGGED:bengaluruBengaluru city policeguruprasadMata Movieಗುರುಪ್ರಸಾದ್ಡಾಲಿ ಧನಂಜಯ್ದುನಿಯಾ ವಿಜಯ್ನೀನಾಸಂ ಸತೀಶ್
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
1 hour ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
1 hour ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
2 hours ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
2 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
2 hours ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?