ಮನೆಯ ಮೇಲ್ಛಾವಣಿ ಕುಸಿತ- ಅವಶೇಷಗಳಡಿಯಿಂದ ವೃದ್ಧೆಯ ರಕ್ಷಣೆ

Public TV
1 Min Read
bij2

ವಿಜಯಪುರ: ಮಳೆಯಿಂದ ನೆನೆದು ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ದೇವರ ಹುಲಗಬಾಳ ಗ್ರಾಮದಲ್ಲಿ ಘಟನೆ ನಡೆದಿದೆ.

bij 1

ನಿನ್ನೆ ತಡರಾತ್ರಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಮಣ್ಣಿನ ಅವಶೇಷಗಳಡಿ ಸಿಲುಕಿದ್ದ ಮಹಾಂತಮ್ಮ ಹೂಗಾರ ಎಂಬ ಅಜ್ಜಿಯನ್ನು ರಕ್ಷಣೆ ಮಾಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ಸಿಗೆ ಹೆಚ್‍ಡಿಕೆ ಟಕ್ಕರ್ – ಸಿ.ಎಂ ಇಬ್ರಾಹಿಂ ಜೆಡಿಎಸ್ ಸೇರೋದು ಪಕ್ಕಾ!

bij3

ಅಜ್ಜಿ ಮನೆಯಲ್ಲಿ ಒಬ್ಬರೇ ವಾಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ಭಾರೀ ಮಳೆಯಾಗಿತ್ತು. ಮಳೆಯಿಂದ ಮನೆಯ ಮೇಲ್ಛಾವಣಿ ನೆನೆದಿತ್ತು. ಹೀಗೆ ನೆನೆದಿದ್ದ ಮನೆ ನಿನ್ನೆ ರಾತ್ರಿ ಕುಸಿದ ಪರಿಣಾಮ ಮಹಾಂತಮ್ಮ ಮಣ್ಣಲ್ಲಿ ಸಿಲುಕಿದ್ದಾರೆ. ಇದನ್ನು ಕಂಡ ಸ್ಥಳೀಯರು ಕೂಡಲೇ ವೃದ್ಧೆಯನ್ನು ರಕ್ಷಣೆ ಮಾಡಿದ್ದಾರೆ.  ಇದನ್ನೂ ಓದಿ: ಭೋಜನ ಕೂಟದಲ್ಲೂ ಆಪರೇಷನ್ ಹಸ್ತದ ಬಗ್ಗೆ ಎಚ್ಚರಿಕೆ ನೀಡಿದ ಬಿಎಸ್‍ವೈ

muddebihal

ಸದ್ಯ ಮಹಾಂತಮ್ಮಳನ್ನ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಾಣಾಪಾಯದಿಂದ ಮಹಾಂತಮ್ಮ ಪಾರಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *