Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗದಗ, ನರಗುಂದ, ರೋಣ ಕೈ ಅಭ್ಯರ್ಥಿಗಳ ಆಯ್ಕೆ ಅಂತಿಮ – ಸ್ವಪಕ್ಷ ಆಕಾಂಕ್ಷಿಗಳಿಂದಲೇ ಅಪಪ್ರಚಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗದಗ, ನರಗುಂದ, ರೋಣ ಕೈ ಅಭ್ಯರ್ಥಿಗಳ ಆಯ್ಕೆ ಅಂತಿಮ – ಸ್ವಪಕ್ಷ ಆಕಾಂಕ್ಷಿಗಳಿಂದಲೇ ಅಪಪ್ರಚಾರ

Districts

ಗದಗ, ನರಗುಂದ, ರೋಣ ಕೈ ಅಭ್ಯರ್ಥಿಗಳ ಆಯ್ಕೆ ಅಂತಿಮ – ಸ್ವಪಕ್ಷ ಆಕಾಂಕ್ಷಿಗಳಿಂದಲೇ ಅಪಪ್ರಚಾರ

Public TV
Last updated: April 7, 2023 4:50 pm
Public TV
Share
3 Min Read
Gadag Congress Candidates
SHARE

– ಶಿರಹಟ್ಟಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಗೌಪ್ಯ

ಗದಗ: ನಿರೀಕ್ಷೆಯಂತೆ ಜಿಲ್ಲೆಯ ಗದಗ (Gadag Constituency), ರೋಣ (Rona Constituency) ಹಾಗೂ ನರಗುಂದ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಪಟ್ಟಿ (Congress Candidate List)  ಘೋಷಣೆಯಾಗಿದ್ದು, ಶಿರಹಟ್ಟಿ ಕ್ಷೇತ್ರ ಮಾತ್ರ ಗೌಪ್ಯವಾಗಿ ಉಳಿದಿದೆ.

ಕಾಂಗ್ರೆಸ್ (Congress) ಮೊದಲ ಹಾಗೂ 2ನೇ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಇತರ ಪ್ರಬಲ ಟಿಕೆಟ್ ಆಕಾಂಕ್ಷಿಗಳಲ್ಲಿ ತಳಮಳ ಶುರುವಾಗಿದೆ. ಅವರವರ ರಾಜಕೀಯ ಗಾಡ್ ಫಾದರ್, ಮಠಾಧೀಶರ ಮೂಲಕ ರಾಜ್ಯ ಮುಖಂಡರ ಒತ್ತಡ ಹೇರುವ ಪ್ರಕ್ರಿಯೆ ತೀತ್ರಗೊಂಡಿದೆ. ಪ್ರಬಲ ಟಿಕೆಟ್ ಆಕಾಂಕ್ಷಿಗಳು ಸ್ವಪಕ್ಷೀಯರ ವಿರುದ್ಧವೇ ಕ್ಷೇತ್ರದಲ್ಲಿ ಅಪಪ್ರಚಾರಕ್ಕೆ ಕೈಹಾಕಿದ್ದಾರೆ. ಪ್ರತಿಸ್ಪರ್ಧಿಯ ನೈತಿಕ ಬಲ ಕುಗ್ಗಿಸುವ ಚಾಣಾಕ್ಷ ರಾಜಕೀಯ ನಡೆ ಎಗ್ಗಿಲ್ಲದೇ ಸಾಗಿದೆ. ಆಕಾಂಕ್ಷಿಗಳ ಪರ ಜಿಲ್ಲಾ ಪ್ರಭಾವಿ ಮುಖಂಡರು ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿರುವುದೂ ಅಲ್ಲಗೆಳೆಯುವಂತಿಲ್ಲ. ಇದನ್ನೂ ಓದಿ: ಅನಿರೀಕ್ಷಿತ ಬೆಳವಣಿಗೆಗಳಿಂದ ರಾಷ್ಟ್ರೀಯ ಪಕ್ಷಗಳು ವಿಲವಿಲ – ರೋಣ ಕ್ಷೇತ್ರದಲ್ಲಿ ಸಹೋದರರ ಸವಾಲ್

BJP Congress

ಟಿಕೆಟ್ ವಿಚಾರದಲ್ಲಿ ಗೊಂದಲವಿಲ್ಲದ ಕ್ಷೇತ್ರಗಳನ್ನ ಆಯ್ಕೆ ಮಾಡಿಕೊಂಡಿರುವ ಕಾಂಗ್ರೆಸ್, ಪಕ್ಷ ತನ್ನ ಮೊದಲ ಹಾಗೂ 2ನೇ ಪಟ್ಟಿ ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ ಜಿಲ್ಲೆಯ ಗದಗದಿಂದ ಹೆಚ್.ಕೆ ಪಾಟೀಲ, ರೋಣದಿಂದ ಜಿ.ಎಸ್ ಪಾಟೀಲ ಹಾಗೂ ನರಗುಂದ ಕ್ಷೇತ್ರದಿಂದ ಬಿ.ಆರ್ ಯಾವಗಲ್ ಹೆಸರು ಘೋಷಣೆಯಾಗಿದೆ. ಶಿರಹಟ್ಟಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಗೆ ಅಧಿಕೃತ ಮುದ್ರೆ ಹೆಚ್.ಕೆ ಪಾಟೀಲ ಅವರು ಒತ್ತಬೇಕಿದೆ. ಅವರ ಅಭಿಪ್ರಾಯದ ಮೇಲೆಯೇ ಶಿರಹಟ್ಟಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಆಗಲಿದೆ ಎನ್ನಲಾಗಿದೆ. ಶಿರಹಟ್ಟಿಯಲ್ಲಿ ಅಭ್ಯರ್ಥಿಗಳ ಅಂತಿಮ ಆಯ್ಕೆ ವಿಚಾರದಲ್ಲಿ ಹಿಂದೆಂದಿಗಿಂತಲೂ ಈ ಬಾರಿ ಗೊಂದಲ ಸೃಷ್ಟಿಯಾಗಿದ್ದು, ರಾಷ್ಟ್ರೀಯ ಪಕ್ಷಗಳಿಗೆ ತಲೆನೋವಾಗಿ ಪರಿಣಮಿಸಿದೆ. ಇದನ್ನೂ ಓದಿ: ಜೀವ ಬೆದರಿಕೆ ಹಿನ್ನೆಲೆ ದುಬಾರಿ ಬುಲೆಟ್ ಪ್ರೂಫ್ ಕಾರು ಖರೀದಿಸಿದ ಸಲ್ಮಾನ್

Siddaramaiah mallikarjun kharge

ಕ್ಷೇತ್ರದಲ್ಲಿ 14 ಜನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಎಸ್ಸಿ ಮೀಸಲು ಕ್ಷೇತ್ರವಾದ್ದರಿಂದ ಮೋಚಿ, ಮಾದಿಗ, ಲಂಬಾಣಿ ಸಮುದಾಯದ ಆಕಾಂಕ್ಷಿಗಳು ಹೆಚ್ಚು ತವಕದಲ್ಲಿದ್ದಾರೆ. ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮೋಚಿಗ ಸಮುದಾಯದ ನಾಯಕ. ಮೊದಲ ಬಾರಿ ಅದೃಷ್ಟ ಪರೀಕ್ಷೆಗೆ ಸಜ್ಜಾಗಿರುವ ಮಾದಿಗ ಸಮುದಾಯದ ಸುಜಾತಾ ದೊಡ್ಡಮನಿ ಹಾಗೂ ಅಂಬಣ್ಣ ಆರೋಲಿಕರ್ ಕಾಂಗ್ರೆಸ್ಸಿನ ಪ್ರಬಲ ಆಕಾಂಕ್ಷಿಗಳು. ಜಾತಿ ಲೆಕ್ಕಾಚಾರ ಕ್ಷೇತ್ರದಲ್ಲಿ ಮೋಚಿಗ ಸಮುದಾಯದ 1,500 ಮತಗಳಿದ್ದು, 22,000 ಮಾದಿಗ ಮತಗಳಿವೆ. 25,000 ಲಂಬಾಣಿ ಮತಗಳಿದ್ದು, ದೇವಪ್ಪ ಲಂಬಾಣಿ ಸಹ ಅರ್ಜಿ ಹಾಕಿದ್ದಾರೆ. ಹೀಗಾಗಿ ಸುಜಾತಾ ದೊಡ್ಡಮನಿ, ಅಂಬಣ್ಣ ಆರೋಲಿಕರ್ ಇವರು ಕೆ.ಹೆಚ್? ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ ಪರಮೇಶ್ವರ ಬಳಗದವರು. ಇನ್ನೂ ರಾಮಕೃಷ್ಣ ದೊಡ್ಡಮನಿ, ದೇವಪ್ಪ ಲಂಬಾಣಿ ಸಿದ್ದರಾಮಯ್ಯ ಬಳಗದಿಂದ ಸಹಜವಾಗಿ ಟಿಕೆಟ್ ಬೇಡಿಕೆಯಿಟ್ಟಿದ್ದಾರೆ. ಇನ್ನೂ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯನ್ನು ನೋಡಿ ಬಿಜೆಪಿ ತಮ್ಮ ಅಭ್ಯರ್ಥಿಯನ್ನು ಘೋಷಿಸಲಿದೆ ಎನ್ನಲಾಗಿದೆ.

bjp flag

ಮೊದಲಿನಂತೆ ಕಾಂಗ್ರೆಸ್? `ಮೋಚಿ'(ಎಡಗೈ) ಸಮುದಾಯಕ್ಕೆ ಮಣೆ ಹಾಕಿದ್ದಲ್ಲಿ ಬಿಜೆಪಿಯು ಮಾದಿಗ ಮತ್ತು ಲಂಬಾಣಿ ಸಮುದಾಯಕ್ಕೆ ಮಣೆ ಹಾಕಬಹುದು. ಒಂದು ವೇಳೆ ಮಾದಿಗ(ಎಡಗೈ) ಸಮುದಾಯದ ಸುಜಾತ ಅಥವಾ ಅಂಬಣ್ಣ ಅವರಿಗೆ ಕಾಂಗ್ರೆಸ್ ಮಣೆ ಹಾಕಿದ್ದಲ್ಲಿ ಮಹಿಳೆಯ ಪ್ರತಿಸ್ಪಧಿಯಾಗಿ ಗದಗ ನಗರಸಭೆ ಅಧ್ಯೆ ಉಷಾ ದಾಸರ ಅವರನ್ನ ಅಭ್ಯಥಿರ್ಯಾಗಿ ಬಿಜೆಪಿ ಪರಿಗಣಿಸಲೂಬಹುದು ಎಂಬ ಮಾತುಗಳು ಕ್ಷೇತ್ರದಲ್ಲಿ ಚರ್ಚೆಯಲ್ಲಿವೆ.

HC MAHADEVAPPA AND SIDDRAMIHA

ಬಿಜೆಪಿಗೆ ಹೋಲಿಸಿದರೆ, ಕಾಂಗ್ರೆಸ್ ಪಕ್ಷದಲ್ಲಿ ಒಳ ಬೇಗುದಿ ಕಡಿಮೆಯಿದೆ. ಆದ್ರೆ ರೋಣ ಮತ್ತು ಗದಗ ಕ್ಷೇತ್ರದ ಬಿಜೆಪಿಯಲ್ಲಿ ಸ್ವಪಕ್ಷೀಯರಿಂದಲೇ ಒಳಸಂಚು ರೂಪಿಸುತ್ತಿದ್ದು, ಅಭ್ಯರ್ಥಿಗಳಿಗೆ ಅಪಾಯ ತಂದೊಡ್ಡಲು ಪ್ರತ್ಯೇಕ ಗುಂಪು ಸೃಷ್ಟಿಸಲಾಗುತ್ತಿದೆ ಎನ್ನುವ ಮಾತುಗಳೂ ಕೇಳಿಬರುತ್ತಿವೆ. ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿನ ಒಳ ಬೇಗುದಿ ಹೆಚ್ಚಾಗಿದ್ದು, ಶಿರಹಟ್ಟಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ನಂತರ ಮತ್ತಷ್ಟು ವ್ಯಾಪಿಸುತ್ತಾ ಎಂಬುದನ್ನ ಕಾದುನೋಡಬೇಕಿದೆ.

TAGGED:bjpcongressCongress Candidate ListgadagKarnataka assembly electionmallikarjun khargeRona Constituencysiddaramaiahಕರ್ನಾಟಕ ಎಲೆಕ್ಷನ್ಕಾಂಗ್ರೆಸ್ಕಾಂಗ್ರೆಸ್ ಅಭ್ಯರ್ಥಿಪಟ್ಟಿಗದಗಡಿಕೆ ಶಿವಕುಮಾರ್ಬಿಜೆಪಿಮಲ್ಲಿಕಾರ್ಜುನ ಖರ್ಗೆರೋಣಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
4 minutes ago
Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
8 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
36 minutes ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
44 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
46 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?