Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಯಾಂಡಲ್ ವುಡ್ ನಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಬಿಡುಗಡೆಯಾಯಿತು ‘ವಂದೇ ಮಾತರಂ’ ಹಾಡು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸ್ಯಾಂಡಲ್ ವುಡ್ ನಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಬಿಡುಗಡೆಯಾಯಿತು ‘ವಂದೇ ಮಾತರಂ’ ಹಾಡು

Cinema

ಸ್ಯಾಂಡಲ್ ವುಡ್ ನಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಬಿಡುಗಡೆಯಾಯಿತು ‘ವಂದೇ ಮಾತರಂ’ ಹಾಡು

Public TV
Last updated: August 15, 2022 4:54 pm
Public TV
Share
3 Min Read
FotoJet 3 11
SHARE

ಭವ್ಯ ಪರಂಪರೆ ಹೊಂದಿರುವ ನಮ್ಮ ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದೆ‌. ದೇಶದಾದ್ಯಂತ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ.  ಈ ಸುಸಂದರ್ಭದಲ್ಲಿ ನಮ್ಮ ನಾಡಿನ ಸಾಂಸ್ಕೃತಿಕ ರಂಗದ ಗಣ್ಯರ ಸಮಾಗಮದಲ್ಲಿ ಮೂಡಿಬಂದಿರುವ “ವಂದೇ ಮಾತರಂ” ಎಂಬ ಅದ್ಭುತ ಗೀತೆ ಬಿಡುಗಡೆಯಾಗಿದೆ.

FotoJet 38

ಹೆಸರಾಂತ ನಟ ಹಾಗೂ ರಾಜ್ಯಸಭಾ  ಸದಸ್ಯ ಜಗ್ಗೇಶ್ ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ. ಸಂತೋಷ್ ಆನಂದರಾಮ್ ನಿರ್ದೇಶನ ಮಾಡಿದ್ದಾರೆ. ಪ್ರವೀಣ್ ಡಿ ರಾವ್ ಸಂಗೀತ ನೀಡಿದ್ದು, ವಿಜಯ್ ಪ್ರಕಾಶ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಶ್ರೀಶ ಕುದವಳ್ಳಿ ಛಾಯಾಗ್ರಹಣ ಮಾಡಿದ್ದಾರೆ. ಕಿಚ್ಚ ಸುದೀಪ, ಶಿವರಾಜಕುಮಾರ್,  ರವಿಚಂದ್ರನ್, ಜಗ್ಗೇಶ್, ರಮೇಶ್ ಅರವಿಂದ್,ಅನಂತನಾಗ್, ಅರ್ಜುನ್ ಸರ್ಜಾ,  ಗಣೇಶ್, ಶ್ರೀಮುರಳಿ, ಧನಂಜಯ, ರಿಷಬ್ ಶೆಟ್ಟಿ, ಧ್ರುವ ಸರ್ಜಾ, ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ, ಸಾಲುಮರದ ತಿಮ್ಮಕ್ಕ, ಜೋಗತಿ ಮಂಜಮ್ಮ ಹಾಗೂ ಕ್ರಿಕೆಟ್ ಆಟಗಾರ ವೆಂಕಟೇಶ್ ಪ್ರಸಾದ್ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಇದನ್ನೂ ಓದಿ:ಬಾರ್ಸಿಲೋನದಲ್ಲಿ ನಯನತಾರಾ- ವಿಘ್ನೇಶ್ ಶಿವನ್ ದಂಪತಿ

FotoJet 2 21

ನನಗೆ ಚಿಕ್ಕ ವಯಸ್ಸಿನಿಂದಲೂ “ಮಿಲೇ ಸುರ್ ಮೇರಾ ತುಮಾರ” ಹಾಡೆಂದರೆ  ಬಹಳ ಇಷ್ಟ. ಇಂತಹದೊಂದು ಹಾಡನ್ನು ನಮ್ಮ ಕನ್ನಡ ಕಲಾವಿದರ ಸಮಾಗಮದಲ್ಲಿ ಮಾಡಬೇಕೆಂಬ ಆಸೆಯಿತ್ತು. ಈಗ ಆ ಆಸೆ ಈಡೇರಿದೆ. ಗೆಳೆಯ ಶ್ರೀನಿಧಿ ಅವರು ಕೆಲವು ದಿನಗಳ ಹಿಂದೆ ಈ ಹಾಡಿನ ಬಗ್ಗೆ ಪ್ರಸ್ತಾಪಿಸಿದರು. ನಾನು ನಿರ್ಮಾಣಕ್ಕೆ ಮುಂದಾದೆ. ಕೇವಲ ಹದಿಮೂರು ದಿನಗಳಲ್ಲಿ ಈ ಹಾಡು ನಿರ್ಮಾಣವಾಗಿದೆ. ಸಂತೋಷ್ ಆನಂದ್ ರಾಮ್ ಸೊಗಸಾಗಿ ನಿರ್ದೇಶನ ಮಾಡಿದ್ದಾರೆ.

FotoJet 1 24

ವಿಜಯ್ ಪ್ರಕಾಶ್ ಧ್ವನಿಯಲ್ಲಿ ಈ ಹಾಡನ್ನು ಕೇಳುವುದೆ ಆನಂದ. ಈ ಹಾಡಿನ‌ ನಿರ್ಮಾಣ ಆರಂಭವಾದಾಗ ನನ್ನ ಎಲ್ಲಾ ಕನ್ನಡ ಚಿತರಂಗದ ನಾಯಕ ಮಿತ್ರರನ್ನು ಫೋನ್ ಮೂಲಕ ಸಂಪರ್ಕಿಸಿ, ಈ ವಿಷಯ ಹೇಳಿದಾಗ ಬಹಳ ಪ್ರೀತಿಯಿಂದ ಬಂದು ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ನಾಯಕ ನಟರಷ್ಟೇ ಅಲ್ಲದೇ ವಿವಿಧ ಕ್ಷೇತ್ರಗಳ ಗಣ್ಯರು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಇವರೆಲ್ಲರಿಗೂ ನನ್ನ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾಡಿನ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಹಲವು ಮಂತ್ರಿಗಳು ಈ ಹಾಡನ್ನು ಮೆಚ್ಚಿ ಶೇರ್ ಮಾಡಿದ್ದಾರೆ. ತಾವು ಕೂಡ ಈ ಹಾಡನ್ನು ಶೇರ್ ಮಾಡುವ ಮೂಲಕ ಹೆಚ್ಷಿನ ಜನರಿಗೆ ತಲುಪಿಸಿ ಎಂದು ಜಗ್ಗೇಶ್ ವಿನಂತಿಸಿದ್ದಾರೆ.  ಪ್ರಧಾನಮಂತ್ರಿಗಳಿಗೂ ಈ ಹಾಡನ್ನು ತೋರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಜಗ್ಗೇಶ್ ತಿಳಿಸಿದ್ದಾರೆ.

“ವಂದೇ ಮಾತರಂ”  ಎಂದರೆ ಜಾತಿಮತಧರ್ಮ ಎಲ್ಲವನ್ನೂ ದಾಟಿ ನಾವೆಲ್ಲರೂ ಭಾರತಮಾತೆಯ ಮಕ್ಕಳು ಎನ್ನುವ ಸಾರಾಂಶ. ಭಾರತವನ್ನು ಯಾವ ರೀತಿಯಲ್ಲಿ ವಿವರಿಸಬಹುದು ಎಂದು ಹೋದಾಗ, ಅಲ್ಲಿ ನಾವು ಗೋಮಾತೆಯನ್ನು ತಾಯಿಯ ತರಹ ಪೂಜಿಸುತ್ತೇವೆ. ಆ ಪಾತ್ರದಲ್ಲಿ ಶಿವಣ್ಣ ಅಭಿನಯಿಸಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಮೂಲಕ ಹಾಡು ಆರಂಭವಾಗುತ್ತದೆ ಅಲ್ಲಿ ಸುದೀಪ್ ಇದ್ದಾರೆ. ಹೀಗೆ ಭಾರತದ ಹಿರಿಮೆಯನ್ನು ಈ ಹಾಡಿನಲ್ಲಿ ತೋರಿಸುವ ಪ್ರಯತ್ನವನ್ನು ಹಿರಿಯ ನಟರಾದ ಅನಂತನಾಗ್, ರವಿಚಂದ್ರನ್, ರಮೇಶ್ ಅರವಿಂದ್, ಜಗ್ಗೇಶ್, ಅರ್ಜುನ್ ಸರ್ಜಾ ಹಾಗೂ ಯುವ ಪ್ರತಿಭೆಗಳಾದ ಗಣೇಶ್, ಶ್ರೀಮುರಳಿ, ಧ್ರುವ ಸರ್ಜಾ, ರಿಷಬ್ ಶೆಟ್ಟಿ, ಧನಂಜಯ ಅವರ ಮೂಲಕ ಮಾಡಿದ್ದೇವೆ. ಚಿತ್ರರಂಗದ ನಟರಷ್ಟೇ ಅಲ್ಲದೇ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ, ಸಾಲುಮರದ ತಿಮ್ಮಕ್ಕ, ಜೋಗತಿ ಮಂಜಮ್ಮ ಹಾಗೂ ಕ್ರಿಕೆಟ್ ಆಟಗಾರ ವೆಂಕಟೇಶ್ ಪ್ರಸಾದ್ ಮುಂತಾದವರು ಭಾರತದ ಭವ್ಯ ಪರಂಪರೆಯನ್ನು ಬಿಂಬಿಸುವ ಈ ಹಾಡಿನಲ್ಲಿ ಭಾಗಿಯಾಗಿದ್ದಾರೆ‌. ನಾಲ್ಕುವರೆ ದಿನಗಳಲ್ಲಿ ಈ ಹಾಡಿನ ಚಿತ್ರೀಕರಣ ಮುಗಿದಿದೆ. ಸಹಕಾರ ನೀಡಿದ ನನ್ನ ತಂಡಕ್ಕೆ ಹಾಗೂ ಅಭಿನಯಿಸಿರುವ ಗಣ್ಯರಿಗೆ ಧನ್ಯವಾದ ಎನ್ನುತ್ತಾರೆ ನಿರ್ದೇಶಕ ಸಂತೋಷ್ ಆನಂದ್ ರಾಮ್.

Live Tv
[brid partner=56869869 player=32851 video=960834 autoplay=true]

TAGGED:jaggeshsandalwoodSanthosh Anand Ramvande mataramಗೀಗೆಜಗ್ಗೇಶ್ವಂದೇ ಮಾತರಂಸಂತೋಷ್ ಆನಂದ್ ರಾಮ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories
Beatriz Bach
ಟಾಕ್ಸಿಕ್ ಟೀಸರ್ ಹಾಟ್ ಬೆಡಗಿ ನಟಾಲಿಯಾ ಬರ್ನ್ ಅಲ್ಲ.. ಬೀಟ್ರಿಜ್ ಬಾಚ್..!
Cinema Latest Sandalwood Top Stories
gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows

You Might Also Like

g parameshwara 2
Bengaluru City

ಮಾರ್ಗಸೂಚಿ‌ ಅನ್ವಯ ಸರಿಪಡಿಸಿದ್ರೆ ಆರ್‌ಸಿಬಿ ಮ್ಯಾಚ್‌ಗೆ ಅನುಮತಿ: ಪರಮೇಶ್ವರ್‌

Public TV
By Public TV
13 minutes ago
Delhi weather
Latest

Delhi Cold Wave | ವರ್ಷದಲ್ಲೇ ಅತ್ಯಂತ ಕನಿಷ್ಠ; 4.2° ಸೆಲ್ಸಿಯಸ್‌ಗೆ ಕುಸಿದ ತಾಪಮಾನ

Public TV
By Public TV
28 minutes ago
Ramanagara Arrest
Districts

ನಾಡಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರ ಕೇಸ್ – ಮೂವರು ಆರೋಪಿಗಳ ಬಂಧನ

Public TV
By Public TV
31 minutes ago
Ballari 2 1
Bellary

ಶೂಟೌಟ್‌ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್‌ – ವಿಡಿಯೋನಲ್ಲಿದ್ದ ಬಹುತೇಕರು ಬಳ್ಳಾರಿಯವರೇ ಅಲ್ವಾ?

Public TV
By Public TV
1 hour ago
Charmadi Ghat Elephant
Chikkamagaluru

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ – ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌!

Public TV
By Public TV
1 hour ago
Mohan Raj 2
Bengaluru City

ವಿಚ್ಛೇದಿತೆಗೆ ಬಾಳು ಕೊಡುವ ನೆಪದಲ್ಲಿ ಮಗು ಕೊಟ್ಟ – 36 ಲಕ್ಷ ಪಡೆದು ಎಸ್ಕೇಪ್‌ ಆದ ಮೋಹನ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?