ಬಿಸಿಲ ಬೇಗೆಗೆ ಕಂಗೆಟ್ಟ ಕರುನಾಡಿಗರು- ರಾಜ್ಯಕ್ಕೆ ಮತ್ತೆ ಹೀಟ್ ವೇವ್ ಆತಂಕ

Public TV
2 Min Read
SUMMER

– ಮಕ್ಕಳು, ಹಿರಿಯರ ಆರೋಗ್ಯದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ದಿನಕಳೆದಂತೆ ಬಿಸಿಲಿನ ಬೇಗೆ ಹೆಚ್ಚಾಗ್ತಾ ಇದೆ. ಈ ನಡುವೆ ಹೀಟ್ ವೇವ್ (Heat Wave) ಆತಂಕ ಕೂಡ ಹೆಚ್ಚಾಗಿದ್ದು, ಹವಾಮಾನದ ತಾಪಮಾನದ ಬಗ್ಗೆ ಕಡ್ಡಾಯ ಗಮನ ಹರಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹೌದು. ಬೇಸಿಗೆ ಬಂದಾಗಿದೆ. ಜೊತೆಗೆ ಸುಡುಬಿಸಿಲಿನ ಅಬ್ಬರ ಕೂಡ ಜೋರಾಗಿಯೇ ಇದೆ. ಈ ನಡುವೆ ರಾಜ್ಯದಲ್ಲಿ ಹೀಟ್ ವೇವ್ ಆತಂಕ ಶುರುವಾಗಿದ್ದು, ಆರೋಗ್ಯದ ಬಗ್ಗೆ ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

SUMMER 2

ಗರಿಷ್ಠ ತಾಪಮಾನವು ಬಯಲು ಪ್ರದೇಶಗಳಲ್ಲಿ ಕನಿಷ್ಠ 40 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಕನಿಷ್ಠ 30 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚಿನ ತಾಪಮಾನವನ್ನು ತಲುಪಿದರೆ ಆ ಪ್ರದೇಶವನ್ನು ಶಾಖದ ಅಲೆಯ ಹಿಡಿತ ಅಥವಾ ಹೀಟ್ ವೇವ್ ಎಂದು ಕರೆಯಲಾಗುತ್ತೆ. ಗರಿಷ್ಠ ತಾಪಮಾನ ನಿರ್ಗಮನವು 4.5 ಮತ್ತು 6 ಡಿಗ್ರಿಗಳ ನಡುವೆ ಇದ್ದಾಗ, ಭಾರತೀಯ ಹವಾಮಾನ ಇಲಾಖೆ ಶಾಖದ ಅಲೆಯನ್ನು ಘೋಷಿಸುತ್ತದೆ. ಇದನ್ನೂ ಓದಿ: ಅಬ್ಬಾ..! ಇದೆಂಥಾ ಮೀನು? – ಡೆಡ್ಲಿ ಫಿಶ್‌ ಸೇವಿಸಿ ಮಹಿಳೆ ಸಾವು; ಕೋಮಾದಲ್ಲಿ ಪತಿ

SUMMER 4

ಸದ್ಯ ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ದಕ್ಷಿಣದ ಜಿಲ್ಲೆಗಳಲ್ಲೂ ತಾಪಮಾನ ಹೆಚ್ಚಾಗ್ತಿರೋದು ಆತಂಕ ಹೆಚ್ಚಿಸಿದೆ. ಉತ್ತರ ಕರ್ನಾಟಕದಲ್ಲಿ ಸದ್ಯ ತಾಪಮಾನದಲ್ಲಿ 38-39ರ ಅಸುಪಾಸಿನಲ್ಲಿ ಉಷ್ಣಾಂಶ ದಾಖಲಾಗಿದ್ದು, ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ 34-36 ಡಿಗ್ರಿ ಸೆಲ್ಸಿಯಸ್, ದಾಖಲಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ 35 ಡಿಗ್ರಿ ಸೆಲ್ಸಿಯಸ್‍ಗೆ ಏರಿದೆ. ಜೂನ್‍ವರೆಗೆ ಬಿರುಬಿಸಿಲು ಕಾಡಲಿದೆ ಎಂದು ಹವಾಮಾನ ಇಲಾಖೆ (Weather Department) ಮುನ್ಸೂಚನೆ ನೀಡಿದೆ.

SUMMER 1

ಆರೋಗ್ಯದ ಬಗ್ಗೆ ಇರಲಿ ಎಚ್ಚರಿಕೆ: ಹೊರಗೆ ಹೋಗುವಾಗ ಸನ್‍ಸ್ಕ್ರೀನ್ ಲೋಷನ್ ಹಚ್ಚಿಕೊಳ್ಳಿ. ದೇಹಕ್ಕೆ ತಂಪು ನೀಡುವ ಹತ್ತಿ ಹಾಗೂ ಸಡಿಲ ಬಟ್ಟೆ ಧರಿಸಿ. ನೀರು, ನೈಸರ್ಗಿಕ ಪಾನೀಯ ಸೇರಿ ಹೆಚ್ಚು ದ್ರವಾಹಾರ ಸೇವಿಸಿ. ವಾಂತಿ-ಭೇದಿಯಾದರೆ ಜ್ಯೂಸ್, ಎಳನೀರು, ಓಆರ್‍ಎಸ್ ಸೇವಿಸಿ. ಮಧುಮೇಹಿಗಳು ಮಜ್ಜಿಗೆ, ನೀರು, ಗಂಜಿ ಸೇವಿಸುವುದು ಉತ್ತಮ. ಮಕ್ಕಳು, ಗರ್ಭಿಣಿಯರು, ವೃದ್ಧರು ಅನಗತ್ಯ ಹೊರ ಹೋಗಬೇಡಿ. ಸೊಳ್ಳೆಗಳು ಕಚ್ಚದಂತೆ ಎಚ್ಚರವಹಿಸಿ.. ಮನೆ, ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಿ.

SUMMER 3

ಉತ್ತರದಿಂದ ದಕ್ಷಿಣದತ್ತ ಬಿಸಿ ಗಾಳಿ ಬೀಸುತ್ತಿರುವುದು, ವಾತಾವರಣದಲ್ಲಿ ತೇವಾಂಶ ಇಲ್ಲದಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆಯಾಗುತ್ತಿದೆ. ಸಂಜೆ 5 ಗಂಟೆವರೆಗೆ ಬಿಸಿಲಿನ ಪ್ರಖರತೆ ಕಂಡು ಬರುತ್ತಿದೆ. ಒಟ್ಟಾರೆ ಬಿಸಿಲು ಹೆಚ್ಚಾಗುತ್ತಿದೆ. ಮಕ್ಕಳು, ಹಿರಿಯರ ಆರೋಗ್ಯದ ಬಗ್ಗೆ ಅಗತ್ಯ ಎಚ್ಚರಿಕೆ ವಹಿಸಿದ್ರೆ ಸೂಕ್ತ.

Share This Article