Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಟ್ಟ ಖ್ಯಾತಿಯ ಗಿರಿರಾಜ್ ನಿರ್ದೇಶನದ ಚಿತ್ರಕ್ಕೆ ‘ರಾಮರಸ’ ಟೈಟಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಜಟ್ಟ ಖ್ಯಾತಿಯ ಗಿರಿರಾಜ್ ನಿರ್ದೇಶನದ ಚಿತ್ರಕ್ಕೆ ‘ರಾಮರಸ’ ಟೈಟಲ್

Cinema

ಜಟ್ಟ ಖ್ಯಾತಿಯ ಗಿರಿರಾಜ್ ನಿರ್ದೇಶನದ ಚಿತ್ರಕ್ಕೆ ‘ರಾಮರಸ’ ಟೈಟಲ್

Public TV
Last updated: April 19, 2024 12:41 pm
Public TV
Share
3 Min Read
Ramarasa 3
SHARE

ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ (Guru Deshpande) ತಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ ಪ್ರೊಡಕ್ಷನ್ ನಂ 4 ಚಿತ್ರದ ಹಾಡುಗಳ ಧ್ವನಿಮುದ್ರಣ (ಸಾಂಗ್ ರೆಕಾರ್ಡಿಂಗ್) ಕೆಲವು ದಿನಗಳ ಹಿಂದೆ ನೆರವೇರಿತ್ತು. ಈಗ ಆ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಚಿತ್ರಕ್ಕೆ ‘ರಾಮರಸ’ (Ramarasa) ಎಂದು ನಾಮಕರಣ ಮಾಡಲಾಗಿದೆ. ಜಟ್ಟ, ಮೈತ್ರಿ ಚಿತ್ರಗಳ ಖ್ಯಾತಿಯ ಬಿ.ಎಂ ಗಿರಿರಾಜ್ (Giriraj BM) ನಿರ್ದೇಶಿಸುತ್ತಿರುವ ಈ ಚಿತ್ರದ ಶೀರ್ಷಿಕೆಯನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಿಡುಗಡೆ ಮಾಡಿದರು.

Ramarasa 4

ಶ್ರೀರಾಮನವಮಿಯ ದಿವಸದಂದೆ ಈ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭ ನಡೆಯಬೇಕಿತ್ತು. ಆದರೆ ಕಾರಣಾಂತರದಿಂದ ಮಾರನೇ ದಿನ ಬಿಡುಗಡೆಯಾಗುತ್ತಿದೆ. “ರಾಮರಸ” ಟೈಟಲ್ ಚೆನ್ನಾಗಿದೆ. ಮೋಷನ್ ಪೋಸ್ಟರ್ ಕೂಡ ಅದ್ಭುತವಾಗಿದೆ. ಗುರು ದೇಶಪಾಂಡೆ ಅವರು ನಮ್ಮ ಅಣ್ಣನ ಎರಡು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಸಾಕಷ್ಟು ನೂತನ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದಾರೆ‌ .ನನ್ನ ಸ್ನೇಹಿತ ಕೂಡ ಈ ಚಿತ್ರದಲ್ಲಿ ನಟಸುತ್ತಿದ್ದಾನೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಧ್ರುವ ಸರ್ಜಾ ಹಾರೈಸಿದರು.

Ramarasa 2

ರಾಮರಸ , ಹಾರಾರ್ ಕಾಮಿಡಿ ಜಾನರ್ ನ ಚಿತ್ರ. ಜಿ ಅಕಾಡೆಮಿಯ ಹದಿನಾರು ಜನ ಹೊಸ ಪ್ರತಿಭೆಗಳಿಗೆ ತರಭೇತಿ ನೀಡಿ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಲಾಗಿದೆ. ಗುರು ದೇಶಪಾಂಡೆ ಅವರು ಈ ಹಿಂದೆ ಸಾಂಗ್ ರೆಕಾರ್ಡಿಂಗ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು. ಇಂದು ಧ್ರುವ ಸರ್ಜಾ ಅವರಿಂದ ಶೀರ್ಷಿಕೆ ಅನಾವರಣವನ್ನು ಮಾಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಂಗ್ ರೆಕಾರ್ಡಿಂಗ್ ಪೂಜೆ ಮಾಡುವುದು ವಿರಳ. ಹಳೆಯ ಸಂಪ್ರದಾಯಗಳನ್ನು ಪುನಃ ಗುರು ದೇಶಪಾಂಡೆ ಅವರು ಚಿತ್ರರಂಗಕ್ಕೆ ತರುತ್ತಿದ್ದಾರೆ ಎಂದು ನಿರ್ದೇಶಕ ಬಿ.ಎಂ.ಗಿರಿರಾಜ್ ತಿಳಿಸಿದರು.

Ramarasa 1

2008 ರಲ್ಲಿ ಮೊದಲ ನಿರ್ದೇಶನದೊಂದಿಗೆ ನಿರ್ದೇಶಕನಾಗಿ ಚಿತ್ರರಂಗ ಪ್ರವೇಶಿಸಿದೆ. ಅಂದಿನಿಂದ ನನ್ನ ಹೆಚ್ಚು ಚಿತ್ರಗಳಲ್ಲಿ‌ ಹೊಸ ಕಲಾವಿದರಿಗೆ ಅವಕಾಶ ಕೊಡುತ್ತಾ ಬಂದಿದ್ದೇನೆ. ಇದು ನಮ್ಮ‌ ಜಿ ಸಿನಿಮಾಸ್ ಲಾಂಛನದಲ್ಲಿ ನಾನು ನಿರ್ಮಾಣ ಮಾಡುತ್ತಿರುವ ನಾಲ್ಕನೇ ಸಿನಿಮಾ.‌ ಈ ಚಿತ್ರದಲ್ಲೂ ಜಿ ಅಕಾಡೆಮಿಯ ಹದಿನಾರು ಜನ ನೂತನ ಪ್ರತಿಭೆಗಳು ಅಭಿನಯಿಸುತ್ತಿದ್ದಾರೆ. ಅವರಿಗೆ ಅಭಿನಯಕ್ಕೆ ಬೇಕಾದ ವರ್ಕ್ ಶಾಪ್ ನಡೆಸಲಾಗಿದೆ. ಇವರೊಂದಿಗೆ ಕನ್ನಡದ ಖ್ಯಾತ ನಟರೊಬ್ಬರು ನಟಿಸುತ್ತಿದ್ದು, .ಮಾತುಕತೆ ಅಂತಿಮ ಹಂತದಲ್ಲಿದೆ. ಮೇ ಎರಡನೇ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬಿ.ಎಂ.ಗಿರಿರಾಜ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅವರ ಹಿಂದಿನ ಚಿತ್ರಗಳು ನನಗೆ ಬಹಳ ಇಷ್ಟವಾಗಿದ್ದವು. ಕನ್ನಡದಲ್ಲಷ್ಟೇ ಕಮರ್ಷಿಯಲ್, ಆರ್ಟ್ ಅಂತ ವಿಭಾಗಗಳಿದೆ. ಆದರೆ ಬೇರೆ ಭಾಷೆಗಳಲ್ಲಿ ಆ ಚಿತ್ರ ಪ್ರಶಸ್ತಿ ಪಡೆದುಕೊಂಡಿರುತ್ತದೆ ಹಾಗೂ ಗಳಿಕೆಯಲ್ಲೂ ಮುಂದಿರುತ್ತದೆ. ಈ ಚಿತ್ರ ಕೂಡ ಅಂತಹ ಚಿತ್ರವಾಗಬೇಕೆಂದು ನನ್ನ ಆಸೆ. ಬಿ.ಜೆ.ಭರತ್ ಈಗಾಗಲೇ “ರಾಮರಸ” ದ ಎರಡು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಪುನೀತ್ ಆರ್ಯ ಹಾಡುಗಳನ್ನು ಬರೆದಿದ್ದಾರೆ. ಸುನೀಲ್ ಹೆಚ್ ಸಿ ಗೌಡ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ‌ ನಿರ್ವಹಿಸುತ್ತಿದ್ದಾರೆ‌. ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ. ಶೀರ್ಷಿಕೆ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ಮಾಪಕ ಗುರು ದೇಶಪಾಂಡೆ.

ಜಿ ಅಕಾಡೆಮಿಯಲ್ಲಿ ಅಭಿನಯ ಕಲಿತಿರುವ ಹದಿನಾರು ನೂತನ ಪ್ರತಿಭೆಗಳು ಹಾಗೂ ಸಹ ನಿರ್ದೇಶಕರಾಗಿ ಕಾರ್ಯ ನಿರವಹಿಸಲಿರುವ ಮೂವರು ನವ ಸಹ ನಿರ್ದೇಶಕರು ಹಾಗೂ ನೂತನ ಸಹ ನಿರ್ಮಾಪಕರೊಬ್ಬರು ತಮ್ಮ ಪರಿಚಯ ಮಾಡಿಕೊಂಡರು.  ಸಂಗೀತ ನಿರ್ದೇಶಕ ಬಿ.ಜೆ.ಭರತ್. ಗೀತರಚನೆಕಾರ ಪುನೀತ್ ಆರ್ಯ, ಕಾರ್ಯಕಾರಿ ನಿರ್ಮಾಪಕ ಸುನೀಲ್ ಹೆಚ್ ಸಿ ಗೌಡ ಹಾಗೂ ವಿತರಕ ವೆಂಕಟ್ ಗೌಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

TAGGED:Giriraj BMGuru DeshpandeTitle Ramarasaಗಿರಿರಾಜ್ ಬಿ.ಎಂಗುರು ದೇಶಪಾಂಡೆಟೈಟಲ್ ರಾಮರಸ
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

siddaramaiah vs Thawar Chand Gehlot
Bengaluru City

ಮತ್ತೆ ಸರ್ಕಾರ Vs ಗವರ್ನರ್; ದ್ವೇಷ ಭಾಷಣ ಮಸೂದೆಗೆ ಕೊಕ್ಕೆ – 29 ಕಾರಣ ಕೊಟ್ಟ ಗವರ್ನರ್‌!

Public TV
By Public TV
15 minutes ago
Gold Silver 2
Latest

ಸತತ 4ನೇ ದಿನವೂ ಚಿನ್ನ, ಬೆಳ್ಳಿ ದರ ಇಳಿಕೆ – ಚಿನ್ನ 10 ಗ್ರಾಂಗೆ 4 ಸಾವಿರ, ಬೆಳ್ಳಿ ಕೆಜಿಗೆ 16 ಸಾವಿರ ಕುಸಿತ

Public TV
By Public TV
36 minutes ago
Electricity
Bengaluru City

ಬೆಂಗಳೂರಿನ ಈ ಭಾಗಗಳಲ್ಲಿ ಫೆ.3, 4ರಂದು ವಿದ್ಯುತ್ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ?

Public TV
By Public TV
36 minutes ago
DK Shivakumar
Districts

ವಿಧಾನಸಭೆಯಲ್ಲಿ ʻಕುರ್ಚಿ ಕದನʼ ಪ್ರಸ್ತಾಪ; ಸಿಎಂ – ಡಿಸಿಎಂ ಒಗ್ಗಟ್ಟು ಪ್ರದರ್ಶನ

Public TV
By Public TV
1 hour ago
Pralhad Joshi 1
Dharwad

ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಸಚಿವ ಜೋಶಿ ಸ್ಪಷ್ಟನೆ

Public TV
By Public TV
2 hours ago
Supreme Court
Karnataka

ದಕ್ಷಿಣ ಪೆನ್ನಾರ್ ನದಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?