Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

IndependenceDay: ಭಾಗ-3: ಕರ್ನಾಟಕ ಸ್ವಾತಂತ್ರ್ಯ ಹೋರಾಟದಲ್ಲಿ ಈಸೂರು ದುರಂತ ಸ್ಮರಣೀಯ

Public TV
Last updated: August 15, 2023 10:47 am
Public TV
Share
4 Min Read
Thumbnail 2
SHARE

ಕ್ವಿಟ್‌ ಇಂಡಿಯಾ ಚಳವಳಿ (1942): ಬ್ರಿಟಿಷ್ ಸರ್ಕಾರವು ಭಾರತೀಯ ನಾಯಕರೊಂದಿಗೆ ಸಂಧಾನಕ್ಕಾಗಿ ಕಳುಹಿಸಿದ್ದ ಸ್ಟಾಫರ್ಡ್ ಕ್ರಿಪ್ಸ್ ಆಯೋಗವು 1942ರಲ್ಲಿ ಕೆಲವು ಸಲಹೆಗಳನ್ನು ಭಾರತೀಯರ ಮುಂದಿಟ್ಟಿತು. ಈ ಆಯೋಗವು ಭಾರತಕ್ಕೆ ಡೊಮಿನಿಯನ್ ಸ್ಥಾನಮಾನ ನೀಡುವುದು, ಅದಕ್ಕಾಗಿ ಸಂವಿಧಾನ ರಚಿಸಲು ಸಭೆ ಕರೆಯುವುದು, ಹೊಸ ಸಂವಿಧಾನದಲ್ಲಿ ಭಾರತ ಒಕ್ಕೂಟವನ್ನು ಸೇರುವ ಅಥವಾ ಬಿಡುವ ಸ್ವಾತಂತ್ರ್ಯವನ್ನು ಸಂಬಂಧಿಸಿದ ರಾಜ್ಯಗಳಿಗೆ ಬಿಡುವಂತಹ ಸಲಹೆಗಳನ್ನು ನೀಡಿತು. ಈ ಸಲಹೆಗಳನ್ನು ಕಾಂಗ್ರೆಸ್‌ ಒಪ್ಪದೆ ಕ್ವಿಟ್‌ ಇಂಡಿಯಾ ಚಳವಳಿಗೆ ಕರೆ ನೀಡಿತು. ಸಲಹೆಗಳನ್ನು ಕಾಂಗ್ರೆಸ್ ಒಪ್ಪದೆ ‘ಭಾರತ ಬಿಟ್ಟು ತೊಲಗಿ’ ಎನ್ನುವುದು ಕ್ವಿಟ್ ಇಂಡಿಯಾ ಚಳವಳಿಯ ಆಶಯವಾಗಿತ್ತು. 

Contents
ಈಸೂರು ದುರಂತ-1942: ಭಾರತದ ವಿಭಜನೆ: 

Independence Day 10

ಈಸೂರು ದುರಂತ-1942: 

ಈಸೂರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕುಮುದಿನಿ ನದಿಯ ದಂಡೆಯ ಮೇಲಿರುವ ಒಂದು ಚಿಕ್ಕ ಗ್ರಾಮ. ಈ ಗ್ರಾಮವು ಭಾರತದಲ್ಲೇ ಸ್ವಾತಂತ್ರ್ಯವನ್ನು ಘೋಷಿಸಿಕೊಂಡ ಮೊದಲ ಗ್ರಾಮವಾಯಿತು. ಈ ಗ್ರಾಮದ ಜನರು ಗಾಂಧೀಜಿಯವರ ಕರೆಗೆ ಓಗೊಟ್ಟು ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾಗಿದ್ದರು. ಚಲೇಜಾವ್‌ ಚಳವಳಿಯಿಂದ ಪ್ರಭಾವಿತರಾದ ಈ ಗ್ರಾಮದ ಯುವಕರೆಲ್ಲರೂ ಗಾಂಧೀ ಟೋಪಿ ಧರಿಸಿ ರಾಷ್ಟ್ರಧ್ವಜ ಹಿಡಿದು ಸಭೆಗಳನ್ನ ನಡೆಸುತ್ತಿದ್ದರು. 1942ರ ಸೆಪ್ಟೆಂಬರ್‌ 25ರಂದು ಈ ಗ್ರಾಮದ ಜನರು ತಮ್ಮ ಗ್ರಾಮವು ಸ್ವತಂತ್ರವೆಂದು ಘೋಷಿಸಿ ವೀರಭದ್ರನ ದೇವಾಲಯದ ಮೇಲೆ ರಾಷ್ಟ್ರಧ್ವಜ ಹಾರಿಸಿದರು. ಪಟೇಲ ಮತ್ತು ಶಾನುಭೋಗರ ದಫ್ತರುಗಳನ್ನು ಕಿತ್ತುಕೊಂಡು ಸುಟ್ಟು ಹಾಕಿದರು. ಈ ಘಟನೆ ಘಟಿಸಿದ 3 ದಿನಗಳ ತರುವಾಯ ಒಬ್ಬ ಅಮಲ್ದಾರ್‌ ಮತ್ತು ಒಬ್ಬ ಪೊಲೀಸ್‌ ಅಧಿಕಾರಿಯು ಪೊಲೀಸರೊಂದಿಗೆ ಬಂದು ಪ್ರತಿಭಟನೆ ನಡೆಸಿದ ಗ್ರಾಮಸ್ಥರ ಮೇಲೆ ಗುಂಡು ಹಾರಿಸಿ 3 ಜನ ಗ್ರಾಮಸ್ಥರನ್ನು ಕೊಂದು ಹಾಕಿದರು. 

Independence Day 14

ಈ ಘಟನೆಯಿಂದ ಕ್ರೋಧಗೊಂಡ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ದಂಗೆಯೆದ್ದರು. ಈ ಗಲಭೆಯಲ್ಲಿ ಪೊಲೀಸ್‌ ಅಧಿಕಾರಿಗಳೂ ಮರಣ ಹೊಂದಿದರು. ಈ ಸುದ್ದಿ ತಿಳಿದ ತಕ್ಷಣ ಸರ್ಕಾರವು ಈಸೂರು ಗ್ರಾಮಕ್ಕೆ ಸೈನ್ಯ ಮತ್ತು ಪೊಲೀಸ್‌ ಪಡೆಯನ್ನ ಕಳಿಸಿತು. ಈ ಸೈನ್ಯವು ಮುಗ್ಧ ಜನರ ಮೇಲೆ ಚಿತ್ರಹಿಂಸೆಯನ್ನು ಕೈಗೊಂಡಿತು. ಗುಂಡು ಹಾರಿಸಿ 41 ಜನರನ್ನು ಬಂಧಿಸಿತು. ದಂಗೆಗೆ ಕಾರಣರಾದವರ ಮೇಲೆ ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ಹೂಡಿತು. 1943ರ ಜನವರಿ 9 ರಂದು ಅಂದು ರಾಜ್ಯವಾಗಿದ್ದ ಮೈಸೂರು ಉಚ್ಚ ನ್ಯಾಯಾಲಯದ ತೀರ್ಪಿನ ಪ್ರಕಾರ ಗುರಪ್ಪ, ಮಲ್ಲಪ್ಪ, ಹಾಲಪ್ಪ, ಸೂರ್ಯನಾರಾಯಣಾಚಾರ್ಯ ಮತ್ತು ಶಂಕರಪ್ಪ ಎಂಬ 5 ಮಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿತು. ಸಿದ್ಧಮ್ಮ, ಹಾಲಮ್ಮ ಮತ್ತು ಪಾರ್ವತಮ್ಮ ಎಂಬ ಐದು ಜನರಿಗೆ ಜೀವಾವಧಿ ಗಡಿಪಾರು ಶಿಕ್ಷೆ ನೀಡಿತು. 1946ರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಮೂವರು ಮಹಿಳೆಯರನ್ನು ಬಿಡುಗಡೆಗೊಳಿಸಲಾಯಿತು. ಕರ್ನಾಟಕ ಸ್ವಾತಂತ್ರ್ಯ ಹೋರಾಟದಲ್ಲಿ ಈಸೂರು ದುರಂತವು ಸ್ಮರಣೀಯವಾದುದಾಗಿದೆ. 

ಭಾರತದ ವಿಭಜನೆ: 

ಸ್ವಾತಂತ್ರ್ಯ ಚಳವಳಿಯ ಉದ್ದಕ್ಕೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಖಂಡ ರಾಷ್ಟ್ರದ ಕಲ್ಪನೆ ಹೊಂದಿತ್ತು. ಆದರೆ ಮಹಮ್ಮದ್‌ ಅಲಿ ಜಿನ್ನಾ ಅವರು ಮುಸ್ಲಿಮರಿಗೆ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಮಂಡಿಸುತ್ತಲೇ ಇದ್ದರು. 1940ರಲ್ಲಿ ನಡೆದ ಮುಸ್ಲಿಂ ಲೀಗ್‌ನ ಲಾಹೋರ್ ಅಧಿವೇಶನದಲ್ಲಿ ಜಿನ್ನಾ ಹಿಂದೂ ಮತ್ತು ಮುಸ್ಲಿಮರು ಒಂದು ದೇಶವಾಗಲು ಸಾಧ್ಯವೇ? ಎಂದು ಘೋಷಿಸಿದರು. ಇದನ್ನೂ ಓದಿ: IndependenceDay: ಭಾಗ-1: ಸ್ವಾತಂತ್ರ್ಯ ಹೋರಾಟದ ಹಾದಿ ವಿಭಿನ್ನ… ತ್ಯಾಗ ಬಲಿದಾನಗಳ ಸಂಕೇತ

3 1

2ನೇ ಮಹಾಯುದ್ಧ ಮುಗಿದು ಬ್ರಿಟನ್‌ನಲ್ಲಿ ಲೇಬರ್ ಪಕ್ಷ ಅಧಿಕಾರಕ್ಕೆ ಬಂದಿತು. ಇದು ಭಾರತದಲ್ಲಿನ ರಾಜಕೀಯ ಬಿಕ್ಕಟ್ಟನ್ನು ಶಮನಗೊಳಿಸಲು ಕ್ರಮ ಕೈಗೊಂಡಿತು. ಇದು ಕ್ಯಾಬಿನೆಟ್‌ ನಿಯೋಗವನ್ನು ಭಾರತಕ್ಕೆ ಸ್ವಯಂ ಅಧಿಕಾರವನ್ನು ನೀಡುವ ಕುರಿತು ಚರ್ಚಿಸಲು ಕಳುಹಿಸಿತು. ಈ ನಿಯೋಗವು ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್‌ನೊಂದಿಗೆ ಚರ್ಚಿಸಿತು. ಭಾರತಕ್ಕೆ ಫೆಡರಲ್ ಮಾದರಿ ಸರ್ಕಾರವನ್ನು ಸೂಚಿಸಿತು. ಸಂವಿಧಾನ ರಚನಾ ಸಮಿತಿ ಕರೆಯುವುದಾಗಿ  ಮತ್ತು ಮಧ್ಯಂತರ ರಾಷ್ಟ್ರೀಯ ಸರ್ಕಾರವನ್ನು ಸ್ಥಾಪಿಸಲು ಶಿಫಾರಸು ಮಾಡಿತು. ಆದ್ರೆ ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್ ನಡುವೆ ಭಿನ್ನತೆ ಉಂಟಾಯಿತು.

Independence Day 13

ಮುಸ್ಲಿಮರಿಗೆ ಪ್ರತ್ಯೇಕ ರಾಷ್ಟ್ರಕ್ಕಾಗಿ 1946ರ ಆಗಸ್ಟ್ 16 ರಂದು ನೇರ ಕಾರ್ಯಾಚರಣೆ ದಿನಕ್ಕೆ ಕರೆ ನೀಡಿತು. ಇದರಿಂದ ದೇಶಾದ್ಯಂತ ಕೋಮುಗಲಭೆಗಳು ನಡೆದವು. ಬಂಗಾಳ ಒಂದರಲ್ಲೇ ಮುಸ್ಲಿಂ ಮೂಲಭೂತವಾದಿಗಳು ಕೇವಲ 48 ಗಂಟೆಗಳಲ್ಲಿ ಸಾವಿರಾರು ಹಿಂದೂಗಳನ್ನ ಕೊಂದರು. ಡಾ. ಬಾಬು ರಾಜೇಂದ್ರ ಪ್ರಸಾದ್ ಅಧ್ಯಕ್ಷತೆಯಲ್ಲಿ ಸೇರಿದ ಸಂವಿಧಾನ ಸಭೆಯಲ್ಲಿ ಮುಸ್ಲಿಂ ಲೀಗ್ ಭಾಗವಹಿಸಲಿಲ್ಲ. ಇದನ್ನೂ ಓದಿ: ಭಾಗ-2: ಮರೆಯದ ದುರಂತ ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡ – ಗಾಂಧಿಯುಗದಲ್ಲಿ ಏನೆಲ್ಲಾ ಆಯ್ತು?

Independence Day 12

ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್ ಸಂಬಂಧ ತೀರಾ ಹದಗೆಟ್ಟಿತ್ತು. ಈ ಸಮಯದಲ್ಲಿ ಬ್ರಿಟಿಷ್ ಸರ್ಕಾರ ಶೀಘ್ರವಾಗಿ ಅಧಿಕಾರವನ್ನ ಹಸ್ತಾಂತರಿಸುವುದಾಗಿ ತಿಳಿಸಿ, 1946ರ ಮಾರ್ಚ್‌ನಲ್ಲಿ ಲಾರ್ಡ್ ಮೌಂಟ್ ಬ್ಯಾಟನ್ ಅವರನ್ನು ಭಾರತಕ್ಕೆ ವೈಸ್‌ರಾಯ್ ಆಗಿ ಕಳುಹಿಸಿತು. ಬ್ಯಾಟನ್‌ ಅವರು ಗಾಂಧೀಜಿ, ಜಿನ್ನಾ ಮತ್ತಿತರ ನಾಯಕರೊಂದಿಗೆ ಮಾತುಕತೆ ನಡೆಸಿ ಭಾರತವನ್ನು ವಿಭಜಿಸುವ ಯೋಜನೆ ರೂಪಿಸಿದರು. 1947ರ ಜುಲೈನಲ್ಲಿ ಭಾರತ ಸ್ವಾತಂತ್ರ್ಯ ಮಸೂದೆಯು ಕಾಯ್ದೆಯ ರೂಪವನ್ನು ಪಡೆಯಿತು. ಕಾಯ್ದೆಯನ್ವಯ 1947ರ ಆಗಸ್ಟ್ 15ರಂದು ಭಾರತ ಮತ್ತು ಪಾಕಿಸ್ತಾನ ಎಂಬ ಎರಡು ಪ್ರತ್ಯೇಕ ರಾಷ್ಟ್ರಗಳು ಉದಯಿಸಿದವು. ರಾಡ್‌ ಕ್ಲಿಫ್‌ ಆಯೋಗವು ಈ ದೇಶಗಳ ಗಡಿಗಳನ್ನು ಗುರುತಿಸಿತು. ಪಂಡಿತ್ ಜವಾಹರಲಾಲ್ ನೆಹರೂರವರು ಭಾರತದ ಪ್ರಥಮ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

Web Stories

ashika ranganath photos
ashika ranganath photos
aradhanaa photos
aradhanaa photos
malaika arora photos
malaika arora photos
chaithra achar photos
chaithra achar photos
samantha ruth prabhu photos
samantha ruth prabhu photos
toby actress chaithra achar photos
toby actress chaithra achar photos
bigg boss deepika das photos
bigg boss deepika das photos
pranitha subhash photos
pranitha subhash photos
ragini dwivedi photoshoot
ragini dwivedi photoshoot


follow icon

TAGGED:Freedom FightersHistory of IndiaIndependenceDayindiaIndian Historynarendra modiRed Fortಕೆಂಪುಕೋಟೆಸ್ವಾತಂತ್ರ್ಯ ದಿನಾಚರಣೆಸ್ವಾತಂತ್ರ್ಯ ಹೋರಾಟಗಾರರು
Share This Article
Facebook Whatsapp Whatsapp Telegram

Cinema Updates

Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
8 hours ago
Vikram Sugumaran
ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
10 hours ago
Vaishnavi Gowda Seetha Rama Serial Anukool Mishra
ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌
12 hours ago
shivarame gowda
ಕಮಲ್ ಹೇಳಿಕೆ ನೋಡಿದ್ರೆ.. ಕನ್ನಡಿಗರೆಲ್ಲಾ ತಮಿಳಿಗೆ ಹುಟ್ಟಿದ್ದಾರೆ ಅನ್ನೋ ರೀತಿಯಿದೆ – ಶಿವರಾಮೇಗೌಡ ಲೇವಡಿ
13 hours ago

You Might Also Like

RCB vs PBKS
Cricket

IPL Final | ಚೊಚ್ಚಲ ಐಪಿಎಲ್‌ ಟ್ರೋಫಿಗಾಗಿ ಮದಗಜಗಳ ಗುದ್ದಾಟ – ಆರ್‌ಸಿಬಿಯೇ ಗೆಲ್ಲುವ ಫೆವರೆಟ್‌

Public TV
By Public TV
5 hours ago
pathrode
Food

ಮಳೆಗಾಲಕ್ಕೆ ಮಲೆನಾಡು ಸ್ಪೆಷಲ್‌ – ಟೇಸ್ಟಿ ಪತ್ರೊಡೆ ರೆಸಿಪಿ!

Public TV
By Public TV
7 hours ago
Vladimir Putin
Latest

ಶಾಂತಿ ಸಭೆ ಮೊಟಕು – ಬೇಷರತ್‌ ಕದನ ವಿರಾಮ ಮಾತುಕತೆ ತಿರಸ್ಕರಿಸಿದ ರಷ್ಯಾ

Public TV
By Public TV
7 hours ago
H K Patil
Districts

ಗದಗ | ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಸ್ಕೂಲ್‌ಗೆ ಸೇರಿಸಿದ ಹೆಚ್.ಕೆ ಪಾಟೀಲ್

Public TV
By Public TV
7 hours ago
Ayodhya Ram Mandir
Latest

ಜೂ.3ರಂದು ಅಯೋಧ್ಯಾ ರಾಮಮಂದಿರದ ಸ್ವರ್ಣಗೋಪುರ ಉದ್ಘಾಟನೆ

Public TV
By Public TV
7 hours ago
MC SUDHAKAR
Chikkaballapur

ಪ್ರತಿ ಬಾರಿ ಕಪ್ ನಮ್ದೆ ಅಂತಿದ್ವಿ, ಈ ಸಲ ಆದ್ರೂ ಕಪ್ ನಮ್ಮದಾಗಲಿ: ಎಂ.ಸಿ ಸುಧಾಕರ್

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ashika ranganath photos aradhanaa photos malaika arora photos chaithra achar photos samantha ruth prabhu photos toby actress chaithra achar photos bigg boss deepika das photos pranitha subhash photos ragini dwivedi photoshoot
Welcome Back!

Sign in to your account

Username or Email Address
Password

Lost your password?