ಬೆಂಗಳೂರು: ಧರ್ಮಸ್ಥಳ ಕೇಸ್ನಲ್ಲಿ ಸರ್ಕಾರ ಎಸ್ಐಟಿ (SIT) ರಚನೆ ಮಾಡಿದೆ. ತನಿಖೆ ಬಳಿಕ ಸತ್ಯ ಹೊರಗೆ ಬರಲಿದೆ ಎಂದು ಸಚಿವ ಮಹದೇವಪ್ಪ (Mahadevappa) ತಿಳಿಸಿದ್ದಾರೆ.ಇದನ್ನೂ ಓದಿ: ಶಿವಣ್ಣನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು
ಧರ್ಮಸ್ಥಳ ಕೇಸ್ ಎಸ್ಐಟಿಗೆ (SIT) ವಹಿಸಬೇಕು ಎಂಬ ಸತೀಶ್ ಜಾರಕಿಹೋಳಿ (Satish Jarkiholi) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಸವಣ್ಣ ನಮ್ಮ ಮಾನ ಅಪಮಾನ ನಿಮ್ಮದಯ್ಯ ಅಂತ ಹೇಳಿದ್ದಾರೆ. ಅದೆಲ್ಲವನ್ನು ತಿಳಿಯೋಕೆ ಈಗ ಎಸ್ಐಟಿ ರಚನೆ ಮಾಡಲಾಗಿದೆ. ಎಸ್ಐಟಿ ತನಿಖೆಯಲ್ಲಿ ಎಲ್ಲವೂ ಹೊರಗೆ ಬರುತ್ತದೆ ಎಂದು ತಿಳಿಸಿದರು.
ತನಿಖೆಯಿಂದ ಯಾರು ಏನೇನು ಮಾಡಿದ್ದಾರೆ ಎಂದು ಹೊರಗೆ ಬಂದಾಗ ಕಾನೂನು ತನ್ನ ಕ್ರಮ ತೆಗೆದುಕೊಳ್ಳುತ್ತದೆ. ಸರ್ಕಾರ ಧರ್ಮಸ್ಥಳ ಕೇಸ್ನಲ್ಲಿ ಎಡವಿಲ್ಲ. ಅಪಪ್ರಚಾರಕ್ಕೆ ಎಡ ಮಾಡಿಕೊಡೋದಾಗಲಿ ಯಾವ ಪ್ರಶ್ನೆಯೂ ಇಲ್ಲ. ಯಾರು ಸುಳ್ಳು ಸುದ್ದಿ, ಅಪಪ್ರಚಾರ ಮಾಡ್ತಾರೆ ಒಂದು ಸೂಕ್ತ ತನಿಖೆ ಮೂಲಕ ತಾರ್ಕಿಕ ಅಂತ್ಯಕ್ಕೆ ಹೋಗಬೇಕು. ತಾರ್ಕಿಕ ಅಂತ್ಯಕ್ಕೆ ಹೋದ ಮೇಲೆ ಎಲ್ಲದ್ದಕ್ಕೂ ಸ್ಪಷ್ಟತೆ ಸಿಗುತ್ತದೆ. ಇದರಲ್ಲಿ ಸರ್ಕಾರ ಮಾಡುವುದು ಏನು ಇಲ್ಲ. ಪರಿಶುದ್ಧವಾಗಿ ಹೊರಗೆ ಬರಬೇಕು ಅನ್ನೋದು ನಮ್ಮ ಆಸೆ ಎಂದು ಸ್ಪಷ್ಟಪಡಿಸಿದರು.ಇದನ್ನೂ ಓದಿ: ಗೃಹ ಶುದ್ಧಿ ಅಭಿಯಾನಕ್ಕೆ ಚಾಲನೆ – ಮಾನವ ಕಳ್ಳ ಸಾಗಣೆಯನ್ನು ಸರ್ಕಾರ, ಸಮಾಜ ಒಗ್ಗೂಡಿ ಎದುರಿಸಬೇಕು: ಗೆಹ್ಲೋಟ್