Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ ಕ್ಯಾಬಿನೆಟ್ ಒಪ್ಪಿಗೆ – ಏನಿದು ಎನ್‍ಪಿಆರ್? ಏನು ದಾಖಲೆ ನೀಡಬೇಕು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ ಕ್ಯಾಬಿನೆಟ್ ಒಪ್ಪಿಗೆ – ಏನಿದು ಎನ್‍ಪಿಆರ್? ಏನು ದಾಖಲೆ ನೀಡಬೇಕು?

Latest

ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ ಕ್ಯಾಬಿನೆಟ್ ಒಪ್ಪಿಗೆ – ಏನಿದು ಎನ್‍ಪಿಆರ್? ಏನು ದಾಖಲೆ ನೀಡಬೇಕು?

Public TV
Last updated: December 25, 2019 11:50 am
Public TV
Share
2 Min Read
modi cabinet meeting 2 1
SHARE

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಯಶಸ್ವಿಯಾಗಿ ಪಾಸ್ ಮಾಡಿರುವ ಕೇಂದ್ರ ಸರ್ಕಾರ ಈಗ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‍ಪಿಆರ್) ಜಾರಿ ಮಾಡಲು ಮುಂದಾಗುತ್ತಿದೆ.

ಇಂದು ಮೋದಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ದೇಶಾದ್ಯಂತ ಎನ್‍ಪಿಆರ್ ನಡೆಸಲು ಒಪ್ಪಿಗೆ ನೀಡಿದ್ದು ಇದಕ್ಕಾಗಿ 8,700 ಕೋಟಿ ರೂ. ಅನುದಾನಕ್ಕೂ ಅನುಮೋದನೆ ನೀಡಿದೆ.

ಏಪ್ರಿಲ್ 1, 2020ರಿಂದ ಸೆಪ್ಟೆಂಬರ್ 20, 2020ರವರೆಗೆ ಎನ್‍ಪಿಆರ್ ಪ್ರಕ್ರಿಯೆ ನಡೆಯಲಿದೆ. ದೇಶದ ಪ್ರತಿ ಮನೆಗೂ ಗಣತಿದಾರರು ಮೊಬೈಲ್ ಅಪ್ಲಿಕೇಶನ್ ನಲ್ಲಿ ದೇಶದ ನಿವಾಸಿಗಳ ಗುರುತಿನ ಡೇಟಾವನ್ನು ಸಂಗ್ರಹಿಸಲಿದ್ದಾರೆ.

NPR Population e1577182309104

ಯುಪಿಎ ಎರಡನೇ ಅವಧಿಯಾದ 2010ರಲ್ಲಿ ಮನಮೋಹನ್ ಸಿಂಗ್ ಸರ್ಕಾರ ಎನ್‍ಪಿಆರ್ ಆರಂಭಿಸಿತ್ತು. ಅಂದಿನ ಗೃಹ ಸಚಿವ ಪಿ. ಚಿದಂಬರಂ ಅವರು ಎನ್‍ಪಿಆರ್ ಆರಂಭಿಸಿ ಕರಾವಳಿಯಲ್ಲಿ ನೆಲೆಸಿರುವ ಜನರ ದತ್ತಾಂಶ ಸಂಗ್ರಹಕ್ಕೆ ನಿರ್ಧರಿಸಿದ್ದರು. ಆದರೆ ನಂತರ ಈ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಈಗ ಕೇಂದ್ರ ಸರ್ಕಾರ ಮತ್ತೆ ಚಾಲನೆ ನೀಡಿ ದೇಶವ್ಯಾಪಿ ನಡೆಸಲು ಮುಂದಾಗುತ್ತಿದೆ.

ಏನಿದು ಎನ್‍ಪಿಆರ್?
ದೇಶದ ಜನಗಣತಿಗೆ ಪೂರಕವಾದ ಪ್ರಕ್ರಿಯೆಯೇ ಎನ್‍ಪಿಆರ್. 1955ರ ಪೌರತ್ವ ಕಾಯ್ದೆ ಮತ್ತು 2003ರ ಪೌರತ್ವ ನಿಯಮದ ಅಡಿಯಲ್ಲಿ ಈ ಗಣತಿ ನಡೆಯಲಿದೆ. ದೇಶದ ಯಾವುದೇ ಪ್ರದೇಶದಲ್ಲಿ 6 ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಅವಧಿ ವಾಸವಾಗಿರುವವರು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯಲ್ಲಿ ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ದೇಶದ ಪ್ರತಿ ಪ್ರಜೆಯ ಸಮಗ್ರ ಗುರುತಿನ ದತ್ತಾಂಶಗಳನ್ನು ಸೃಷ್ಟಿಸಲು ಈ ಎನ್‍ಪಿಆರ್ ಪ್ರಕ್ರಿಯೆ ನಡೆಸಲಾಗುತ್ತದೆ.

population3 NPR e1577182365143

ಏನು ಸಂಗ್ರಹಿಸಲಾಗುತ್ತದೆ?
ಈ ದತ್ತಾಂಶ ಸಂಗ್ರಹದಲ್ಲಿ ಆಧಾರ್(ಆಧಾರ್ ಮಾಹಿತಿ ಕಡ್ಡಾಯವಲ್ಲ), ಮೊಬೈಲ್ ನಂಬರ್, ಪಾನ್, ಡ್ರೈವಿಂಗ್ ಲೈಸೆನ್ಸ್, ವೋಟರ್ ಐಡಿ, ಪಾಸ್ ಪೋರ್ಟ್ ನಂಬರ್ ಸಂಗ್ರಹಿಸಲಾಗುತ್ತದೆ.

ಏನೇನು ವಿವರ ಕೇಳಲಾಗುತ್ತದೆ?
ಹೆಸರು, ಮನೆಯ ಯಜಮಾನನ ಜೊತೆ ಇರುವ ಸಂಬಂಧ, ತಂದೆಯ ಹೆಸರು, ತಾಯಿಯ ಹೆಸರು, ಸಂಗಾತಿಯ ಹೆಸರು(ಮದುವೆಯಾಗಿದ್ದಲ್ಲಿ), ಲಿಂಗ, ಹುಟ್ಟಿದ ದಿನಾಂಕ, ವೈವಾಹಿಕ ಸ್ಥಿತಿ, ರಾಷ್ಟ್ರೀಯತೆ, ವ್ಯಕ್ತಿಯ ಪ್ರಸ್ತುತ ವಿಳಾಸ, ಶಾಶ್ವತ ವಿಳಾಸ, ಶೈಕ್ಷಣಿಕ ಅರ್ಹತೆ, ಉದ್ಯೋಗದ ವಿವರವನ್ನು ನೀಡಬೇಕಾಗುತ್ತದೆ.

Mamata Martyrs Rally

ಕೆಲ ರಾಜ್ಯಗಳು ಒಪ್ಪುತ್ತಿಲ್ಲ:
ಕೇಂದ್ರ ಸರ್ಕಾರದ ಎನ್‍ಪಿಆರ್ ಜಾರಿ ಮಾಡಲು ಬಿಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಈಗಾಗಲೇ ಹೇಳಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರ ಅನುಮೋದನೆ ಇಲ್ಲದೇ ಎನ್‍ಪಿಆರ್ ರಾಜ್ಯದಲ್ಲಿ ಜಾರಿ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಈ ವೇಳೆ ರಾಷ್ಟ್ರದ ಪ್ರಜೆಯ ದತ್ತಾಂಶ ಸಂಗ್ರಹಕ್ಕೆ ನಾವು ಒಪ್ಪಿಗೆ ನೀಡುವುದಿಲ್ಲ ಎಂದು ಕೇರಳ ಮತ್ತು ರಾಜಸ್ಥಾನ ಸರ್ಕಾರ ಪ್ರಕಟಿಸಿದೆ.

ಅಸ್ಸಾಂನಲ್ಲಿ ಇಲ್ಲ:
ಅಸ್ಸಾಂನಲ್ಲಿ ಈಗಾಗಲೇ ರಾಷ್ಟ್ರೀಯ ಪೌರತ್ವ ನೋಂದಣಿ ನಡೆದ ಹಿನ್ನೆಲೆಯಲ್ಲಿ ಈ ರಾಜ್ಯವನ್ನು ಬಿಟ್ಟು ಉಳಿದ ರಾಜ್ಯಗಳಲ್ಲಿ ಎನ್‍ಪಿಆರ್ ಜಾರಿ ಮಾಡಲು ಕೇಂದ್ರ ಸರ್ಕಾರ ಮುಂದಾಗುತ್ತಿದೆ.

NRC

ಯಾಕೆ ಡೇಟಾ ಸಂಗ್ರಹ?
ಎನ್‍ಪಿಆರ್ ಡೇಟಾದ ಡೇಟಾಬೇಸ್ ಸುರಕ್ಷಿತವಾಗಿದ್ದು ಆಯ್ದ ಕೆಲ ಮಂದಿಗೆ ಮಾತ್ರ ಈ ಡೇಟಾ ಬಳಕೆ ಮಾಡಲು ಅನುಮತಿ ನೀಡಲಾಗುತ್ತದೆ. ಸರ್ಕಾರಿ ಯೋಜನೆ ದುರುಪಯೋಗ ತಪ್ಪಿಸಲು ಮತ್ತು ಆಂತರಿಕ ಭದ್ರತೆಗಾಗಿ ಈ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಮಾಡಲಾಗುತ್ತದೆ ಎಂದು ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.

ಎನ್‌ಅರ್‌ಸಿಗೂ ಎನ್‌ಪಿಆರ್‌ಗೂ ಸಂಬಂಧವಿಲ್ಲ?
ಎನ್‌ಪಿಆರ್‌ಗೂ ರಾಷ್ಟ್ರೀಯ ನಾಗರಿಕ ನೋಂದಣಿಗೂ (ಎನ್‌ಆರ್‌ಸಿ) ಯಾವುದೇ ಸಂಬಂಧವಿಲ್ಲ. ದೇಶದ ನಿಜವಾದ ನಾಗರಿಕರನ್ನು ಗುರುತಿಸಲು ಎನ್‍ಆರ್‍ಸಿ ಜಾರಿಯಾಗಿದ್ದರೆ ಜನಗಣತಿಗೆ ಪೂರಕವಾಗಿ ದೇಶದ ಜನರ ದತ್ತಾಂಶ ಸಂಗ್ರಹಿಸಲು ಎನ್‍ಪಿಆರ್ ಜಾರಿಯಾಗುತ್ತಿದೆ.

TAGGED:cabinetindiamodiNational Population RegisterNCRNPRಆಧಾರ್ಎನ್‍ಪಿಆರ್ನರೇಂದ್ರ ಮೋದಿಮಮತಾ ಬ್ಯಾನರ್ಜಿರಾಷ್ಟ್ರೀಯ ಜನಸಂಖ್ಯಾ ನೋಂದಣಿ
Share This Article
Facebook Whatsapp Whatsapp Telegram

Cinema news

Narayana Gowda
BBK 12 | ಅಶ್ವಿನಿ ಗೌಡ ಪರ ನಾರಾಯಣ ಗೌಡ, ಗಿಲ್ಲಿ ಪರ ಪ್ರವೀಣ್‌ ಶೆಟ್ಟಿ ಬ್ಯಾಟಿಂಗ್‌
Bengaluru City Cinema Districts Karnataka Latest Main Post TV Shows
Gilli Rakshita Raghu Kavya
ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?
Bengaluru City Cinema Districts Karnataka Latest Mandya Top Stories TV Shows Udupi
Bigg Boss
6 ಮಂದಿಯಲ್ಲಿ ಕಪ್ ಗೆಲ್ಲೋರು ಯಾರು? ಯಾರ ಪರ ಅಭಿಮಾನಿಗಳ ಬಹುಪರಾಕ್?
Cinema Latest Main Post TV Shows
AR Rahman
8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿ ಕಾರಣವಿರಬಹುದು: ಎ.ಆರ್ ರೆಹಮಾನ್
Bollywood Cinema Latest Main Post National

You Might Also Like

Phool Singh Baraiya
Latest

ಸುಂದರ ಹುಡುಗಿಯನ್ನ ನೋಡಿ ಸೆಳೆತಕ್ಕೊಳಗಾಗಿ ರೇಪ್ ಮಾಡ್ತಾರೆ – ಕಾಂಗ್ರೆಸ್ ಶಾಸಕ ವಿವಾದ

Public TV
By Public TV
20 minutes ago
Kanpur Man Murders Wife
Crime

ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಕತ್ತು ಹಿಸುಕಿ ಕೊಂದ ಪತಿ – ಪೊಲೀಸರ ಮುಂದೆ ಶರಣಾದ

Public TV
By Public TV
20 minutes ago
RCB vs CSK Chinnaswamy Stadium
Bengaluru City

RCB ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಪಂದ್ಯ ನಡೆಸಲು ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌

Public TV
By Public TV
36 minutes ago
Siddaramaiah 15
Bengaluru City

88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡಿನ ವಿಷಯ – ಸಿಎಂ ಬೇಸರ

Public TV
By Public TV
36 minutes ago
Shiroor Math Hore Kanike
Latest

ಉಡುಪಿ ಪರ್ಯಾಯ ಹೊರೆ ಕಾಣಿಕೆ ವೈಭವ; 5000 ಕೆಜಿ ಅಕ್ಕಿ, 40,000 ಕೆಜಿ ಬೆಲ್ಲ ಸಂಗ್ರಹ

Public TV
By Public TV
1 hour ago
R Ashok 5
Bengaluru City

ಬಳ್ಳಾರಿ ಕಾರ್ಯಕರ್ತನ ಕೊಲೆಗೆ ಕಾಂಗ್ರೆಸ್ ಸರ್ಕಾರ ನ್ಯಾಯ ನೀಡಬೇಕು, ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಅಶೋಕ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?