Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿರ್ದೇಶಕ ಸೂರ್ಯ ವಸಿಷ್ಠ ಸಾರಥ್ಯದ ‘ಸಾರಾಂಶ’ದಲ್ಲಿದೆ ವಿಶಿಷ್ಟ ಕಥನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಿರ್ದೇಶಕ ಸೂರ್ಯ ವಸಿಷ್ಠ ಸಾರಥ್ಯದ ‘ಸಾರಾಂಶ’ದಲ್ಲಿದೆ ವಿಶಿಷ್ಟ ಕಥನ

Cinema

ನಿರ್ದೇಶಕ ಸೂರ್ಯ ವಸಿಷ್ಠ ಸಾರಥ್ಯದ ‘ಸಾರಾಂಶ’ದಲ್ಲಿದೆ ವಿಶಿಷ್ಟ ಕಥನ

Public TV
Last updated: February 13, 2024 6:23 pm
Public TV
Share
3 Min Read
Saramsha 2 2
SHARE

ಸೂರ್ಯ ವಸಿಷ್ಠ ನಿರ್ದೇಶನದ `ಸಾರಾಂಶ’ (Saramsha) ಚಿತ್ರ ಇದೇ ಫೆಬ್ರವರಿ 15ರಂದು ತೆರೆಗಾಣಲಿದೆ. ಈಗಾಗಲೇ ಸಿನಿಮಾ, ಧಾರಾವಾಹಿಗಳಲ್ಲಿ ನಟನಾಗಿ ಪರಿಚಿತರಾಗಿರುವ ಸೂರ್ಯ ವಸಿಷ್ಠ (Surya Vasishta) ಸಾರಾಂಶದ ಮೂಲಕ ನಿರ್ದೇಶಕನಾಗಿ ಆಗಮಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಬಿಡುಗಡೆಗೊಂಡಿರುವ ಟ್ರೈಲರ್ ನಲ್ಲಿಯೇ ಕಥೆಯ ವಿಶೇಷತೆ, ಅದಕ್ಕೆ ಹೊಸೆದುಕೊಂಡಿರುವ ಭಾವತೀವ್ರತೆ ಸೇರಿದಂತೆ ಎಲ್ಲವೂ ಹೊಸತನದೊಂದಿಗೆ ಪ್ರೇಕ್ಷಕರನ್ನು ಮುಟ್ಟಿವೆ. ಇದೊಂದು ಬೇರೆಯದ್ದೇ ತೆರನಾದ ಕಥನವಿರಬಹುದೆಂಬ ನಿಖರ ಅಂದಾಜು ನೋಡುಗರಿಗೆ ಸಿಕ್ಕಿದೆ. ಈ ಹಂತದಲ್ಲಿ ಇಂಥಾದ್ದೊಂದು ಕಥೆ ಹುಟ್ಟಿದ ಬಗೆ ಹಾಗೂ ಅದರ ಆಸುಪಾಸಿನ ಒಂದಷ್ಟು ಸೂಕ್ಷ್ಮ ವಿಚಾರಗಳನ್ನು ಸೂರ್ಯ ಹಂಚಿಕೊಂಡಿದ್ದಾರೆ.

Saramsha 3 2

2008ರ ಸುಮಾರಿಗೆ ಜೋಗುಳ ಧಾರಾವಾಹಿಯ ಮೂಲಕ ನಟನಾಗಿ ವೃತ್ತಿ ಬದುಕು ಆರಂಭಿಸಿದ್ದವರು ಸೂರ್ಯ ವಸಿಷ್ಠ. ಓರ್ವ ನಟನಾಗಿ ಹಲವು ಹಂತಗಳನ್ನು ದಾಟಿ ಬಂದಿರುವ ಸೂರ್ಯ ಕಿರುತೆರೆ ಪ್ರೇಕ್ಷಕರು ಸದಾ ನೆನಪಲ್ಲಿಟ್ಟುಕೊಳ್ಳುವಂಥಾ ಪಾತ್ರಗಳಿಗೂ ಜೀವ ತುಂಬಿದ್ದಾರೆ. ಭಾರೀ ಜನಪ್ರಿಯತೆ ಪಡೆದಿದ್ದ `ಸಾಯಿಬಾಬಾ’ ಧಾರಾವಾಹಿಯಲ್ಲಿ ಸಾಯಿಬಾಬಾ ಪಾತ್ರವನ್ನು ಆವಾಹಿಸಿಕೊಂಡು ನಟಿಸಿದ್ದವರು ಸೂರ್ಯ ವಸಿಷ್ಠ. ಆ ಪಾತ್ರವನ್ನು ಈವತ್ತಿಗೂ ಜನ ನೆನಪಲ್ಲಿಟ್ಟುಕೊಂಡಿದ್ದಾರೆ. ಹೀಗೆ ನಟನಾಗಿ ನೆಲೆ ಕಂಡುಕೊಳ್ಳುವ ಇರಾದೆ, ಛಾತಿ ಇದ್ದರೂ ಕೂಡಾ ಸಿನಿಮಾದ ಒಳ ಹೊರಗಿನ ಬಗ್ಗೆ ಅತೀವ ಆಸಕ್ತಿ ಇದ್ದುದರಿಂದ ನಿರ್ದೇಶನ ವಿಭಾಗ ಅವರನ್ನು ತೀವ್ರವಾಗಿ ಆಕರ್ಷಿಸಿತ್ತು. ಇದರ ಭಾಗವಾಗಿಯೇ `ತಮಸ್ಸು’ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದರಂತೆ. ಹಾಗೆ ತಮಸ್ಸು ಚಿತ್ರದ ಭಾಗವಾಗಿ, ಅದರ ಕಾಸ್ಟಿಂಗ್ ಕಾರ್ಯ ನಡೆಯುತ್ತಿದ್ದ ಘಳಿಗೆಯಲ್ಲಿಯೇ ಸೂರ್ಯ ವಸಿಷ್ಠರೊಳಗೆ ಹಲವು ಭಾವಗಳ ಗುಂಗೀಹುಳ ಮಾರ್ಧನಿಸಲಾರಂಭಿಸಿತ್ತು. ಕಥೆ ಮತ್ತು ಪಾತ್ರಗಳು ಅವರೊಳಗೆ ಮುಖಾಮುಖಿಯಾಗಿ ಹೊಸಾ ಸಂಘರ್ಷವನ್ನೇ ಹುಟ್ಟುಹಾಕಿ ಬಿಟ್ಟಿದ್ದವು.

Saramsha 3 1

ಅದರ ಬಗ್ಗೆ ಆಳವಾಗಿ ಆಲೋಚಿಸಿದಾಗ ಕಥೆಗಾರನಿಂದ ಪಾತ್ರವೋ, ಪಾತ್ರದಿಂದ ಕಥೆಗಾರನೋ ಎಂಬಂಥಾ ಸೂಕ್ಷ್ಮ ಎಳೆಯೊಂದು ಆವಿರ್ಭವಿಸಿತ್ತು. ಅದರ ಗುಂಗು ಹತ್ತಿಸಿಕೊಂಡು, ವರ್ಷಾಂತರಗಳ ಕಾಲ ಪ್ರಯತ್ನಿಸಿದ ಫಲವಾಗಿಯೇ `ಸಾರಾಂಶ’ ಕಥೆ ಸಿದ್ಧಗೊಂಡಿತ್ತಂತೆ. ಅದಾದ ನಂತರ ಲೂಸಿಯಾ, ಯೂ ಟರ್ನ್, ಗಂಟುಮೂಟೆ ಮುಂತಾದ ಸಿನಿಮಾಗಳಲ್ಲಿ ಕಾರ್ಯ ನಿರ್ವಹಿಸಿದ್ದರೂ ಸಾರಾಂಶ ಕಥೆ ಮಾತ್ರ ಕಾಡುತ್ತಲೇ ಇತ್ತು. ಈ ಬಗ್ಗೆ ಸ್ನೇಹಿತರ ಬಳಿ ಹೇಳಿಕೊಂಡಾಗ ಅವರ ಮನಸಲ್ಲಿದ್ದದ್ದು ಬೇರೆಯವರಿಂದ ಈ ಕಥೆಯನ್ನು ನಿರ್ದೇಶನ ಮಾಡಿಸಬೇಕೆಂಬ ಯೋಚನೆ. ಆದರೆ, ಬೇರೆ ಯಾರೇ ನಿರ್ದೇಶನ ಮಾಡಿದರೂ ಅದರ ಸೂಕ್ಷ್ಮ ಎಳೆಗಳನ್ನು ದೃಷ್ಯಕ್ಕೆ ಅಳವಡಿಸೋದು ಕಷ್ಟ, ನೀವೇ ಮಾಡಿದರೆ ಚೆನ್ನ ಎಂಬ ನಿಖರ ಅಭಿಪ್ರಾಯ ಸ್ನೇಹಿತರ ಕಡೆಯಿಂದ ಬಂದಿತ್ತಂತೆ.

Saramsha 2 1

ಇಂಥಾದ್ದೊಂದು ಸಲಹೆ ಬಂದಾಗ ನಿರ್ದೇಶನ ಮಾಡಲು ಅರ್ಹನಾ ಎಂಬ ಪ್ರಶ್ನೆಯನ್ನು ತಮಗೆ ತಾವೇ ಕೇಳಿಕೊಂಡಿದ್ದ ಸೂರ್ಯ, ಆ ನಂತರ ಅದಕ್ಕಾಗಿ ಬೇಕಾದ ಸರ್ವ ತಾಲೀಮುಗಳನ್ನೂ ನಡೆಸಿದ ನಂತರವಷ್ಟೇ ನಿರ್ದೇಶನದ ಅಖಾಡಕ್ಕಿಳಿದಿದ್ದರು. ಈ ಮೂಲಕ ಕಂಪ್ಯೂಟರ್ ಸೈನ್ಸ್ ನಲ್ಲಿ ಇಂಜಿನಿಯರಿಂಗ್ ಮುಗಿಸಿಕೊಂಡು, ನಟನಾಗೋ ದಾರಿ ಆಯ್ದುಕೊಂಡಿದ್ದ ಸೂರ್ಯ ವಸಿಷ್ಠ, ಅಚಾನಕ್ಕಾಗಿ ನಿರ್ದೇಶಕನ ಅವತಾರವೆತ್ತಿದ್ದರು. ಅವರ ಪ್ರತಿಭೆ, ಕಸುಬುದಾರಿಕೆಯ ಮೇಲೆ ನಂಬಿಕೆಯಿಟ್ಟೇ ರವಿ ಕಶ್ಯಪ್ ಮತ್ತು ಆರ್.ಕೆ ನಲ್ಲಮ್ ಅವರುಗಳು ಸಾರಾಂಶ ಚಿತ್ರವನ್ನು ನಿರ್ಮಾಣ ಮಾಡಲು ಒಪ್ಪಿಕೊಂಡಿದ್ದರು. ಇದೀಗ ಅತ್ಯಂತ ಅಚ್ಚುಕಟ್ಟಾಗಿ ಈ ಸಿನಿಮಾವನ್ನು ರೂಪಿಸಿದ್ದಾರೆಂಬ ಮೆಚ್ಚುಗೆ ನಿರ್ಮಾಪಕರಲ್ಲಿದೆ.

 

ಆ ಮೆಚ್ಚುಗೆ ಟ್ರೈಲರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಪ್ರೇಕ್ಷಕರ ವಲಯಕ್ಕೂ ಕೂಡಾ ಹಬ್ಬಿಕೊಂಡಿದೆ. ಇನ್ನೇನು ಸಾರಾಂಶ ಬಿಡುಗಡೆಯ ದಿನಗಳೂ ಹತ್ತಿರಾಗುತ್ತಿವೆ. ಇದರ ಬಹುಮುಖ್ಯ ಪಾತ್ರವೊಂದನ್ನು ಖುದ್ದು ಸೂರ್ಯ ವಸಿಷ್ಠ ಅವರೇ ನಿಭಾಯಿಸಿದ್ದಾರೆ. ಇವರೊಂದಿಗೆ ದೀಪಕ್ ಸುಬ್ರಮಣ್ಯ, ಶ್ರುತಿ ಹರಿಹರನ್, ಶ್ವೇತಾ ಗುಪ್ತ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ರವಿ ಕಶ್ಯಪ್ ಮತ್ತು ಆರ್.ಕೆ ನಲ್ಲಮ್ ವಿಭಾ ಕಶ್ಯಪ್ ಪೆÇ್ರಡಕ್ಷನ್ಸ್ ಮತ್ತು ಕ್ಲಾಪ್ ಬೋರ್ಡ್ ಪೆÇ್ರಡಕ್ಷನ್ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಆಸಿಫ್ ಕ್ಷತ್ರಿಯಾ, ರವಿ ಭಟ್, ರಾಮ್ ಮಂಜುನಾಥ್, ಸತೀಶ್ ಕುಮಾರ್, ಪೃಥ್ವಿ ಬನವಾಸಿ ಮುಂತಾದವರ ತಾರಾಗಣ, ಉದಿತ್ ಹರಿತಾಸ್ ಸಂಗೀತ ನಿರ್ದೇಶನ, ಅಪರಾಜಿತ್ ಹಿನ್ನೆಲೆ ಸಂಗೀತ ಮತ್ತು ಪ್ರದೀಪ್ ನಾಯಕ್ ಸಂಕಲನ ಈ ಚಿತ್ರಕ್ಕಿದೆ. ಸಾರಾಂಶದ ಮೂಲಕ ಅನಂತ್ ಭಾರದ್ವಾಜ್ ಎಂಬ ಪ್ರತಿಭಾನ್ವಿತ ಛಾಯಾಗ್ರಾಹಕ ಪರಿಚಯವಾಗುತ್ತಿದ್ದಾರೆ. ಸಾರಾಂಶ ಇದೇ ತಿಂಗಳ 15ರಂದು ತೆರೆಗಾಣಲಿದೆ.

TAGGED:SaramshaShruti HariharanSurya Vasisthaಶ್ರುತಿ ಹರಿಹರನ್ಸಾರಾಂಶಸೂರ್ಯ ವಸಿಷ್ಠ
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

siddaramaiah 2
Bengaluru City

ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಆಕ್ಷೇಪ

Public TV
By Public TV
2 minutes ago
Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
2 hours ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
3 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
3 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?