Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1 ತಿಂಗಳಲ್ಲಿ ವಕ್ಫ್ ಆಸ್ತಿ ಖಾತಾ ಅಪ್ಡೇಟ್ ಕೆಲಸ ಮುಗಿಸಬೇಕು – ಸಚಿವ ಜಮೀರ್‌ ಗಡುವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 1 ತಿಂಗಳಲ್ಲಿ ವಕ್ಫ್ ಆಸ್ತಿ ಖಾತಾ ಅಪ್ಡೇಟ್ ಕೆಲಸ ಮುಗಿಸಬೇಕು – ಸಚಿವ ಜಮೀರ್‌ ಗಡುವು

Districts

1 ತಿಂಗಳಲ್ಲಿ ವಕ್ಫ್ ಆಸ್ತಿ ಖಾತಾ ಅಪ್ಡೇಟ್ ಕೆಲಸ ಮುಗಿಸಬೇಕು – ಸಚಿವ ಜಮೀರ್‌ ಗಡುವು

Public TV
Last updated: September 19, 2024 4:56 pm
Public TV
Share
3 Min Read
Zameer Ahmed Khan 3
SHARE

– 1.08 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85,000 ಎಕರೆ ಪ್ರದೇಶ ಒತ್ತುವರಿಯಾಗಿದೆ
– ಖಬರಸ್ತಾನ್ ಬೇಡಿಕೆ ಪರಿಶೀಲಿಸಿ ಎಂದು ಸೂಚನೆ

ಕಲಬುರಗಿ: ಯಾದಗಿರಿ ಮತ್ತು ಕಲಬುರಗಿ (Kalaburagi) ಜಿಲ್ಲೆಗಳಲ್ಲಿನ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಖಾತಾ ಅಪ್ಡೇಟ್‌ ಮಾಡುವ ಕಾರ್ಯ ಮುಂದಿನ 1 ತಿಂಗಳೊಳಗೆ ಮುಗಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಅವರು ಅಧಿಕಾರಿಗಳಿಗೆ ಗಡುವು ನೀಡಿದರು.

Zameer Ahmed Khan 2

ಗುರುವಾರ ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ವಕ್ಫ್ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಕಲಬುರಗಿ ಜಿಲ್ಲೆಯಲ್ಲಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ 2,566, ನಗರ ಸ್ಥಳೀಯ ಸಂಸ್ಥೆಗಳಲ್ಲಿ 572 ಹಾಗೂ ಆರ್‌ಡಿಪಿಆರ್‌ (RDPR) ಕಚೇರಿಯಲ್ಲಿ ನೂರಾರು ಸಂಖ್ಯೆಯಲ್ಲಿ ಬಾಕಿ ಇವೆ. ಬಹಳ ವರ್ಷಗಳಿಂದ ಈ ಕಾರ್ಯ ನಾನಾ ಕಾರಣಕ್ಕೆ ನೆನೆಗುದ್ದಿಗೆ ಬಿದ್ದಿದ್ದು, ಇದನ್ನು ಆದ್ಯತೆ ಮೇಲೆ ಮುಗಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಇದನ್ನೂ ಓದಿ: J&K ಚುನಾವಣೆಯಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟ ಗೆಲ್ಲುವ ಸಾಧ್ಯತೆ ಹೆಚ್ಚಿದೆ: ಪಾಕ್‌ ರಕ್ಷಣಾ ಸಚಿವ

Zameer Ahmed Khan 1

85 ಸಾವಿರ ಎಕರೆ ಪ್ರದೇಶ ಒತ್ತುವರಿ:
ರಾಜ್ಯದಲ್ಲಿ 1.08 ಲಕ್ಷ ಎಕರೆ ವಕ್ಫ್ ಆಸ್ತಿ (Waqf Property) ಇದ್ದು, ಇದರಲ್ಲಿ 85 ಸಾವಿರ ಎಕರೆ ಪ್ರದೇಶ ಒತ್ತುವರಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ 21,440 ಎಕರೆ ಆಸ್ತಿ ಪೈಕಿ 3,610 ಮತ್ತು ಯಾದಗಿರಿ ಜಿಲ್ಲೆಯಲ್ಲಿ 6,194 ಪೈಕಿ 123 ಎಕರೆ ಆಸ್ತಿ ಒತ್ತುವರಿಯಾಗಿದ್ದು, ಇದನ್ನು ತೆರವುಗೊಳಿಸಲು ಆಯಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಎಸ್ಪಿ ಸಹಕಾರ ಅತ್ಯಗತ್ಯವಾಗಿದೆ. ವಕ್ಫ್ ಆಸ್ತಿ ಸಾರ್ವಜನಿಕರು ಮುಸ್ಲಿಂ ಸಮಾಜಕ್ಕೆ ನೀಡಿದ ದೇಣಿಗೆ ಆಸ್ತಿಯಾಗಿದೆ. ಈ ಆಸ್ತಿ ಸಂರಕ್ಷಿಸುವುದು ಪುಣ್ಯದ ಕೆಲಸವಾಗಿದ್ದು, ಈ ಕುರಿತು ಸಮನ್ವಯತೆ ಸಾಧಿಸಬೇಕು ಎಂದು ವಕ್ಫ್ ಅಧಿಕಾರಿಗಳಾದ ಕಲಬುರಗಿಯ ಹಜರತ್ ಅಲಿ ಮತ್ತು ಯಾದಗಿರಿಯ ಜರೀನಾ ಬೇಗಂ ಅವರಿಗೆ ಸಚಿವರು ಖಡಕ್ ಸೂಚನೆ ನೀಡಿದರು.

ಬುಧವಾರ ಕಲಬುರಗಿಯಲ್ಲಿ ವಕ್ಫ್ ಅದಾಲತ್ ನಡೆಸಿದ್ದು, ಕಲಬುರಗಿ ಜಿಲ್ಲೆಯಿಂದ 368 ಅರ್ಜಿ ಸ್ವೀಕರಿಸಲಾಗಿದೆ. ಇದರಲ್ಲಿ 100 ಒತ್ತುವರಿ, 55 ಖಬರಸ್ತಾನ್ ಬೇಡಿಕೆ ಹಾಗೂ ಇತರೆ ವಿಷಯಕ್ಕೆ 213 ಸೇರಿವೆ. ಅದೇ ರೀತಿ ಯಾದಗಿರಿ ಜಿಲ್ಲೆಯಿಂದ ಸಲ್ಲಿಕೆಯಾದ 82 ಅರ್ಜಿಯಲ್ಲಿ 38 ಅರ್ಜಿ ಒತ್ತುವರಿ, 33 ಖಬರಸ್ತಾನ್ ಬೇಡಿಕೆ ಹಾಗೂ ಉಳಿದ 11 ಅರ್ಜಿಗಳು ಭೂಮಿ ಮಂಜೂರಾತಿ, ಖಾತಾ ಅಪ್ಡೇಡ್‌, ಸರ್ವೇ ಸಮಸ್ಯೆಗಳಿಗೆ ಸಂಬಂಧಿಸಿವೆ. ಇವುಗಳನ್ನು ಸಹ ಆದ್ಯತೆ ಮೇಲೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು ಎಂದರು. ಇದನ್ನೂ ಓದಿ: ಮೋದಿಯನ್ನ ಹಾವು, ಚೇಳು, ರಾಕ್ಷಸ ಎಂದೆಲ್ಲ ಕರೆದಿದ್ದಾರೆ – ಕೈ ನಾಯಕರ ಆಕ್ಷೇಪಾರ್ಹ ಹೇಳಿಕೆ ಪಟ್ಟಿ ರಿಲೀಸ್

ಖಬರಸ್ತಾನ್ ಬೇಡಿಕೆ ಪರಿಶೀಲಿಸಿ:
ಮುಸ್ಲಿಂ ಸಮುದಾಯದ ಜನರ ಅಂತ್ಯ ಸಂಸ್ಕಾರಕ್ಕೆ ಸರ್ಕಾರಿ ಜಮೀನು ಇಲ್ಲದಿದ್ದಲ್ಲಿ ಖಾಸಗಿ ಜಮೀನು ಖರೀದಿಸಿ ಖಬರಸ್ತಾನಕ್ಕೆ ಜಮೀನು ಮಂಜೂರು ಮಾಡಬೇಕು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಡಿಸಿಗಳಿಗೆ ಸೂಚಿಸಿದರು. ಕಲಬುರಗಿ ಡಿಸಿ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಜಿಲ್ಲೆಯಲ್ಲಿ ಖಬರಸ್ತಾನ್ ಮಂಜೂರಾತಿಗೆ ಸಲ್ಲಿಕೆಯಾದ 23ರಲ್ಲಿ ಈಗಾಗಲೇ ಎರಡು ಮಂಜೂರು ಮಾಡಿದ್ದು, ಉಳಿದವು ಇಲಾಖಾ ಹಂತದಲ್ಲಿ ಪರಿಶೀಲನೆಯಲ್ಲಿವೆ ಎಂದರು. ಇದನ್ನೂ ಓದಿ: ಜಮ್ಮು & ಕಾಶ್ಮೀರದಲ್ಲಿ ಮತ್ತೊಂದು ಪೀಳಿಗೆಯನ್ನು ನಾಶ ಮಾಡಲು ಬಿಡುವುದಿಲ್ಲ: ಮೋದಿ ಪ್ರತಿಜ್ಞೆ

ಸಭೆಯಲ್ಲಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಕೆ.ಅನ್ವರ್ ಭಾಷಾ, ಯಾದಗಿರಿ ಜಿಲ್ಲಾಧಿಕಾರಿ ಬಿ.ಸುಶೀಲಾ, ಕಲಬುರಗಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಡಿಸಿಪಿ ಕನಿಕಾ ಸಿಕ್ರಿವಾಲ್, ಯಾದಗಿರಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಎಸ್.ಪಿ ಧರಣೇಶ, ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ, ಯಾದಗಿರಿ ಸಿಇಒ ಲವೀಶ್ ಓರ್ಡಿಯಾ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ವಕ್ಫ್ ಬೋರ್ಡ್ ಸಿಇಒ ಜಿಲಾನಿ ಮೊಕಾಶಿ, ಕಲಬುರಗಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಸೈಯದ್ ಹಬೀಬ್ ಸರ್ಮಸ್ತ್, ಯಾದಗಿರಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಜಹಿರುದ್ದಿನ್ ಸವೆರಾ ಸೇರಿದಂತೆ ಎರಡು ಜಿಲ್ಲೆಗಳ ಅಲ್ಪಸಂಖ್ಯಾತ, ವಕ್ಫ್ ಇಲಾಖೆಗಳ ಅಧಿಕಾರಿಗಳು, ತಾಲೂಕಿನ ತಹಶೀಲ್ದಾರರು, ಎಡಿಎಲ್‌ಆರ್, ಡಿಡಿಎಲ್‌ಆರ್, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

TAGGED:KabristanKalaburagimuslimsWaqf PropertyZameer Ahmed Khanಕಲಬುರಗಿಜಮೀರ್ ಅಹ್ಮದ್ ಖಾನ್ವಕ್ಫ್ ಆಸ್ತಿ
Share This Article
Facebook Whatsapp Whatsapp Telegram

Cinema news

Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories

You Might Also Like

Mohammed Nalapad
Bengaluru City

ನಲಪಾಡ್ ಮನೆ ಮೇಲೆ ಇಡಿ ದಾಳಿಗೆ ಆ 10 ಲಕ್ಷ ಕಾರಣಾನಾ?

Public TV
By Public TV
28 minutes ago
kea
Bengaluru City

ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನ: KEA

Public TV
By Public TV
28 minutes ago
Retired RBI Officer Murder
Crime

ಕತ್ತು ಸೀಳಿ ನಿವೃತ್ತ ಆರ್‌ಬಿಐ ಅಧಿಕಾರಿಯ ಬರ್ಬರ ಹತ್ಯೆ

Public TV
By Public TV
44 minutes ago
japan earthquake
Latest

ಉತ್ತರ ಜಪಾನ್‌ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Latest

ನಿಲ್ಲದ ಮಧ್ಯಪ್ರಾಚ್ಯ ಸಂಘರ್ಷ – ಭಾರತದಲ್ಲಿ LPG ಬಳಕೆ 13% ಕುಸಿತ

Public TV
By Public TV
1 hour ago
Crude oil
Latest

ತೀವ್ರಗೊಂಡ ಇರಾನ್ ಸಂಘರ್ಷ – ತೈಲ ವ್ಯಾಪಾರಕ್ಕೆ ಡಾಲರ್ ಬದಲು ಯುವಾನ್ ಬಳಕೆಗೆ UAE ಚಿಂತನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?