Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

1 ತಿಂಗಳಲ್ಲಿ ವಕ್ಫ್ ಆಸ್ತಿ ಖಾತಾ ಅಪ್ಡೇಟ್ ಕೆಲಸ ಮುಗಿಸಬೇಕು – ಸಚಿವ ಜಮೀರ್‌ ಗಡುವು

Public TV
Last updated: September 19, 2024 4:56 pm
Public TV
Share
3 Min Read
Zameer Ahmed Khan 3
SHARE

– 1.08 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85,000 ಎಕರೆ ಪ್ರದೇಶ ಒತ್ತುವರಿಯಾಗಿದೆ
– ಖಬರಸ್ತಾನ್ ಬೇಡಿಕೆ ಪರಿಶೀಲಿಸಿ ಎಂದು ಸೂಚನೆ

ಕಲಬುರಗಿ: ಯಾದಗಿರಿ ಮತ್ತು ಕಲಬುರಗಿ (Kalaburagi) ಜಿಲ್ಲೆಗಳಲ್ಲಿನ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಖಾತಾ ಅಪ್ಡೇಟ್‌ ಮಾಡುವ ಕಾರ್ಯ ಮುಂದಿನ 1 ತಿಂಗಳೊಳಗೆ ಮುಗಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಅವರು ಅಧಿಕಾರಿಗಳಿಗೆ ಗಡುವು ನೀಡಿದರು.

Zameer Ahmed Khan 2

ಗುರುವಾರ ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ವಕ್ಫ್ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಕಲಬುರಗಿ ಜಿಲ್ಲೆಯಲ್ಲಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ 2,566, ನಗರ ಸ್ಥಳೀಯ ಸಂಸ್ಥೆಗಳಲ್ಲಿ 572 ಹಾಗೂ ಆರ್‌ಡಿಪಿಆರ್‌ (RDPR) ಕಚೇರಿಯಲ್ಲಿ ನೂರಾರು ಸಂಖ್ಯೆಯಲ್ಲಿ ಬಾಕಿ ಇವೆ. ಬಹಳ ವರ್ಷಗಳಿಂದ ಈ ಕಾರ್ಯ ನಾನಾ ಕಾರಣಕ್ಕೆ ನೆನೆಗುದ್ದಿಗೆ ಬಿದ್ದಿದ್ದು, ಇದನ್ನು ಆದ್ಯತೆ ಮೇಲೆ ಮುಗಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಇದನ್ನೂ ಓದಿ: J&K ಚುನಾವಣೆಯಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟ ಗೆಲ್ಲುವ ಸಾಧ್ಯತೆ ಹೆಚ್ಚಿದೆ: ಪಾಕ್‌ ರಕ್ಷಣಾ ಸಚಿವ

Zameer Ahmed Khan 1

85 ಸಾವಿರ ಎಕರೆ ಪ್ರದೇಶ ಒತ್ತುವರಿ:
ರಾಜ್ಯದಲ್ಲಿ 1.08 ಲಕ್ಷ ಎಕರೆ ವಕ್ಫ್ ಆಸ್ತಿ (Waqf Property) ಇದ್ದು, ಇದರಲ್ಲಿ 85 ಸಾವಿರ ಎಕರೆ ಪ್ರದೇಶ ಒತ್ತುವರಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ 21,440 ಎಕರೆ ಆಸ್ತಿ ಪೈಕಿ 3,610 ಮತ್ತು ಯಾದಗಿರಿ ಜಿಲ್ಲೆಯಲ್ಲಿ 6,194 ಪೈಕಿ 123 ಎಕರೆ ಆಸ್ತಿ ಒತ್ತುವರಿಯಾಗಿದ್ದು, ಇದನ್ನು ತೆರವುಗೊಳಿಸಲು ಆಯಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಎಸ್ಪಿ ಸಹಕಾರ ಅತ್ಯಗತ್ಯವಾಗಿದೆ. ವಕ್ಫ್ ಆಸ್ತಿ ಸಾರ್ವಜನಿಕರು ಮುಸ್ಲಿಂ ಸಮಾಜಕ್ಕೆ ನೀಡಿದ ದೇಣಿಗೆ ಆಸ್ತಿಯಾಗಿದೆ. ಈ ಆಸ್ತಿ ಸಂರಕ್ಷಿಸುವುದು ಪುಣ್ಯದ ಕೆಲಸವಾಗಿದ್ದು, ಈ ಕುರಿತು ಸಮನ್ವಯತೆ ಸಾಧಿಸಬೇಕು ಎಂದು ವಕ್ಫ್ ಅಧಿಕಾರಿಗಳಾದ ಕಲಬುರಗಿಯ ಹಜರತ್ ಅಲಿ ಮತ್ತು ಯಾದಗಿರಿಯ ಜರೀನಾ ಬೇಗಂ ಅವರಿಗೆ ಸಚಿವರು ಖಡಕ್ ಸೂಚನೆ ನೀಡಿದರು.

ಬುಧವಾರ ಕಲಬುರಗಿಯಲ್ಲಿ ವಕ್ಫ್ ಅದಾಲತ್ ನಡೆಸಿದ್ದು, ಕಲಬುರಗಿ ಜಿಲ್ಲೆಯಿಂದ 368 ಅರ್ಜಿ ಸ್ವೀಕರಿಸಲಾಗಿದೆ. ಇದರಲ್ಲಿ 100 ಒತ್ತುವರಿ, 55 ಖಬರಸ್ತಾನ್ ಬೇಡಿಕೆ ಹಾಗೂ ಇತರೆ ವಿಷಯಕ್ಕೆ 213 ಸೇರಿವೆ. ಅದೇ ರೀತಿ ಯಾದಗಿರಿ ಜಿಲ್ಲೆಯಿಂದ ಸಲ್ಲಿಕೆಯಾದ 82 ಅರ್ಜಿಯಲ್ಲಿ 38 ಅರ್ಜಿ ಒತ್ತುವರಿ, 33 ಖಬರಸ್ತಾನ್ ಬೇಡಿಕೆ ಹಾಗೂ ಉಳಿದ 11 ಅರ್ಜಿಗಳು ಭೂಮಿ ಮಂಜೂರಾತಿ, ಖಾತಾ ಅಪ್ಡೇಡ್‌, ಸರ್ವೇ ಸಮಸ್ಯೆಗಳಿಗೆ ಸಂಬಂಧಿಸಿವೆ. ಇವುಗಳನ್ನು ಸಹ ಆದ್ಯತೆ ಮೇಲೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು ಎಂದರು. ಇದನ್ನೂ ಓದಿ: ಮೋದಿಯನ್ನ ಹಾವು, ಚೇಳು, ರಾಕ್ಷಸ ಎಂದೆಲ್ಲ ಕರೆದಿದ್ದಾರೆ – ಕೈ ನಾಯಕರ ಆಕ್ಷೇಪಾರ್ಹ ಹೇಳಿಕೆ ಪಟ್ಟಿ ರಿಲೀಸ್

ಖಬರಸ್ತಾನ್ ಬೇಡಿಕೆ ಪರಿಶೀಲಿಸಿ:
ಮುಸ್ಲಿಂ ಸಮುದಾಯದ ಜನರ ಅಂತ್ಯ ಸಂಸ್ಕಾರಕ್ಕೆ ಸರ್ಕಾರಿ ಜಮೀನು ಇಲ್ಲದಿದ್ದಲ್ಲಿ ಖಾಸಗಿ ಜಮೀನು ಖರೀದಿಸಿ ಖಬರಸ್ತಾನಕ್ಕೆ ಜಮೀನು ಮಂಜೂರು ಮಾಡಬೇಕು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಡಿಸಿಗಳಿಗೆ ಸೂಚಿಸಿದರು. ಕಲಬುರಗಿ ಡಿಸಿ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಜಿಲ್ಲೆಯಲ್ಲಿ ಖಬರಸ್ತಾನ್ ಮಂಜೂರಾತಿಗೆ ಸಲ್ಲಿಕೆಯಾದ 23ರಲ್ಲಿ ಈಗಾಗಲೇ ಎರಡು ಮಂಜೂರು ಮಾಡಿದ್ದು, ಉಳಿದವು ಇಲಾಖಾ ಹಂತದಲ್ಲಿ ಪರಿಶೀಲನೆಯಲ್ಲಿವೆ ಎಂದರು. ಇದನ್ನೂ ಓದಿ: ಜಮ್ಮು & ಕಾಶ್ಮೀರದಲ್ಲಿ ಮತ್ತೊಂದು ಪೀಳಿಗೆಯನ್ನು ನಾಶ ಮಾಡಲು ಬಿಡುವುದಿಲ್ಲ: ಮೋದಿ ಪ್ರತಿಜ್ಞೆ

ಸಭೆಯಲ್ಲಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಕೆ.ಅನ್ವರ್ ಭಾಷಾ, ಯಾದಗಿರಿ ಜಿಲ್ಲಾಧಿಕಾರಿ ಬಿ.ಸುಶೀಲಾ, ಕಲಬುರಗಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಡಿಸಿಪಿ ಕನಿಕಾ ಸಿಕ್ರಿವಾಲ್, ಯಾದಗಿರಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಎಸ್.ಪಿ ಧರಣೇಶ, ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ, ಯಾದಗಿರಿ ಸಿಇಒ ಲವೀಶ್ ಓರ್ಡಿಯಾ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ವಕ್ಫ್ ಬೋರ್ಡ್ ಸಿಇಒ ಜಿಲಾನಿ ಮೊಕಾಶಿ, ಕಲಬುರಗಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಸೈಯದ್ ಹಬೀಬ್ ಸರ್ಮಸ್ತ್, ಯಾದಗಿರಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಜಹಿರುದ್ದಿನ್ ಸವೆರಾ ಸೇರಿದಂತೆ ಎರಡು ಜಿಲ್ಲೆಗಳ ಅಲ್ಪಸಂಖ್ಯಾತ, ವಕ್ಫ್ ಇಲಾಖೆಗಳ ಅಧಿಕಾರಿಗಳು, ತಾಲೂಕಿನ ತಹಶೀಲ್ದಾರರು, ಎಡಿಎಲ್‌ಆರ್, ಡಿಡಿಎಲ್‌ಆರ್, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

TAGGED:KabristanKalaburagimuslimsWaqf PropertyZameer Ahmed Khanಕಲಬುರಗಿಜಮೀರ್ ಅಹ್ಮದ್ ಖಾನ್ವಕ್ಫ್ ಆಸ್ತಿ
Share This Article
Facebook Whatsapp Whatsapp Telegram

You Might Also Like

Chhangur Baba
Latest

ಮತಾಂತರಕ್ಕೆ ‘ಮಿಟ್ಟಿ, ಕಾಜಲ್‌, ದರ್ಶನ್‌’ ಅಂತ ಕೋಡ್‌ ವರ್ಡ್‌ ಬಳಸುತ್ತಿದ್ದ ಛಂಗೂರ್‌ ಬಾಬಾ

Public TV
By Public TV
5 minutes ago
ramalinga reddy
Bengaluru City

ಗಾಳಿ ಆಂಜನೇಯ ದೇವಸ್ಥಾನ | ಅವ್ಯವಹಾರ ನಡೆದ್ರೆ 5 ವರ್ಷ ವಶಕ್ಕೆ ಪಡೆಯಲು ಅವಕಾಶವಿದೆ:ರಾಮಲಿಂಗಾ ರೆಡ್ಡಿ ಸಮರ್ಥನೆ

Public TV
By Public TV
11 minutes ago
Delhi Teen Missing
Crime

ತ್ರಿಪುರದ ಯುವತಿ ದೆಹಲಿಯಲ್ಲಿ ನಿಗೂಢವಾಗಿ ನಾಪತ್ತೆ – ಪ್ರಕರಣದ ಸುತ್ತ ಹಲವು ಅನುಮಾನಗಳ ಹುತ್ತ!

Public TV
By Public TV
14 minutes ago
Wife Kept Eloping I Stayed Silent Assam Man Bathes In Milk After Divorce
Latest

ಪತ್ನಿಯಿಂದ ವಿಚ್ಛೇದನ – 40 ಲೀಟರ್ ಹಾಲಲ್ಲಿ ಸ್ನಾನ ಮಾಡಿ ಸಂಭ್ರಮಿಸಿದ ಪತಿ!

Public TV
By Public TV
43 minutes ago
trump tariff
Latest

14ಕ್ಕೂ ಹೆಚ್ಚು ರಾಷ್ಟ್ರಗಳ ಮೇಲೆ ಟ್ರಂಪ್‌ ಸುಂಕ; ಭಾರತ ಬಚಾವ್‌ ಆಗಿದ್ದು ಯಾಕೆ?

Public TV
By Public TV
56 minutes ago
Mission Indradhanus
Latest

ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ವಿಶ್ವಕ್ಕೇ ಮಾದರಿಯಾದ ಭಾರತ – ಮಿಷನ್ ಇಂದ್ರಧನುಷ್ ಯಶಸ್ಸಿಗೆ ವಿಶ್ವಸಂಸ್ಥೆ ಶ್ಲಾಘನೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?