ಅಂಗನವಾಡಿ ಶಿಕ್ಷಕಿಯಾಗಿ ದಲಿತೆ ನೇಮಕವಾಗಿದ್ದಕ್ಕೆ ಮಕ್ಕಳನ್ನು ಕಳುಹಿಸದ ಮೇಲ್ಜಾತಿ ಪಾಲಕರು!

Public TV
1 Min Read
bidar dalit Anganwadi 1

ಬೀದರ್: 12ನೇ ಶತಮಾನದಲ್ಲಿ ಬಸವಾದಿ ಶರಣರು ಅಸ್ಪೃಶ್ಯತೆ ವಿರುದ್ಧ ಹೋರಾಡಿದ ನೆಲದಲ್ಲೇ ಇನ್ನೂ ಕೂಡ ಅಸ್ಪೃಶ್ಯತೆ ಜೀವಂತವಾಗಿದೆ.

bidar dalit Anganwadi 2

ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹತ್ಯಾಳ ಗ್ರಾಮದಲ್ಲಿ ಅಂಗನವಾಡಿಗೆ ದಲಿತ ಮಹಿಳೆಯರು ನೇಮಕವಾಗಿರುವ ಹಿನ್ನೆಲೆ ಮೇಲ್ಜಾತಿ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೌರಿಂಗ್, ಲೇಡಿ ಕರ್ಜನ್ ಆಸ್ಪತ್ರೆಗೆ ವಕ್ಫ್ ಮಹಿಳಾ ಪರಿಷತ್ತಿನಿಂದ 5 ಲಕ್ಷ ಸಹಾಯಧನ

ಅಂಗನವಾಡಿ ಶಿಕ್ಷಕಿಯಾಗಿ ದಲಿತ ಸಮುದಾಯದ ಸುಮಿತ್ರಾ ಬಾಯಿ ನೇಮಕವಾಗಿದ್ದರೆ, ಶಾಲೆಯ ಸಹಾಯಕಿಯೂ ದಳಿತ ಮಹಿಳೆಯಾಗಿದ್ದಾರೆ. ಈ ಹಿನ್ನೆಲೆ ಮೇಲ್ಜಾತಿಯ ಜನರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕಿದ್ದಾರೆ.

bidar dalit Anganwadi 3

ಗ್ರಾಮದ 3 ಅಂಗನವಾಡಿ ಕೇಂದ್ರಗಳ ಪೈಕಿ 2 ಅಂಗನವಾಡಿಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಆದರೆ ಸಾಮಾನ್ಯ ವಾರ್ಡಿನ ಅಂಗನವಾಡಿ ಕೇಂದ್ರ ಅಸ್ಪೃಶ್ಯತೆಯ ವಿವಾದಕ್ಕೀಡಾಗಿದೆ. 2 ವರ್ಷಗಳಿಂದ ಕೋವಿಡ್ ಕಾರಣದಿಂದ ಬಂದ್ ಆಗಿದ್ದ ಅಂನವಾಡಿ ಇದೀಗ ಅಸ್ಪೃಶ್ಯತೆ ಕಾರಣಕ್ಕೆ ಮಕ್ಕಳೇ ಮರಳದಂತಾಗಿದೆ. ಇದನ್ನೂ ಓದಿ: ಅಗ್ನಿಫಥ್‌ನಿಂದ ಹೆಚ್ಚಿದ ಕಿಚ್ಚು- ನಾಲ್ಕೇ ದಿನಗಳಲ್ಲಿ 200 ಕೋಟಿ ಆಸ್ತಿ ನಷ್ಟ

Live Tv

Share This Article
Leave a Comment

Leave a Reply

Your email address will not be published. Required fields are marked *