ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದರ ಕುರಿತು ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪಂಚರಾಜ್ಯ ಚುನಾವಣೆಯ ಫಲಿತಾಂಶಗಳ ಪೈಕಿ ಕಾಂಗ್ರೆಸ್ ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಬಹುಮತದತ್ತ ಮುನ್ನುಗ್ಗುತ್ತಿದೆ. ಅಲ್ಲದೇ ಛತ್ತೀಸಗಢದಲ್ಲಿ ಸ್ಪಷ್ಟ ಮುನ್ನಡೆಯನ್ನು ಪಡೆದಿದೆ. ಈ ಕುರಿತು ಸಿದ್ದರಾಮಯ್ಯ ಟ್ವೀಟ್ ಮಾಡಿಕೊಂಡಿದ್ದಾರೆ.
ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ.
ಪ್ರಚಾರದ ಗಾಳಿಪಟಗಳು ನೆಲಕ್ಕುರುಳುತ್ತಿವೆ.
ಇದು ಗೆದ್ದು ಬೀಗುವ ಸಮಯ ಅಲ್ಲ.
ಸೈದ್ಧಾಂತಿಕವಾಗಿ ಗಟ್ಟಿಗೊಂಡು ನೆಲದಲ್ಲಿ ಕಾಲೂರಿ ಹೋರಾಟದಲ್ಲಿ ತೊಡಗಬೇಕಾದ ಕಾಲ.#AssemblyElections2018 @INCKarnataka
— Siddaramaiah (@siddaramaiah) December 11, 2018
ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಪ್ರಚಾರದ ಗಾಳಿಪಟಗಳು ನೆಲಕ್ಕುರುಳುತ್ತಿವೆ. ಇದು ಗೆದ್ದು ಬೀಗುವ ಸಮಯವಲ್ಲ. ಸೈದ್ಧಾಂತಿಕವಾಗಿ ಗಟ್ಟಿಕೊಂಡು ನೆಲದಲ್ಲಿ ಕಾಲೂರಿ ಹೋರಾಟದಲ್ಲಿ ತೊಡಬೇಕಾದ ಕಾಲ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ಕೇಂದ್ರದಲ್ಲಿರುವ ಆಡಳಿತಾರೂಢ ಬಿಜೆಪಿ ಹಾಗೂ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಆರೋಪ ಮಾಡಿ, ಚುನಾವಣೆಯಲ್ಲಿ ಅಬ್ಬರದ ಪ್ರಚಾರದ ಗಾಳಿಪಟಗಳು ನೆಲಕ್ಕುರುಳುತ್ತಿವೆ. ಈ ವೇಳೆ ಕಾರ್ಯಕರ್ತರಿಗೆ ಇದು ಗೆದ್ದು ಬೀಗುವ ಸಮಯವಲ್ಲ. ಎಚ್ಚರಿಕೆಯಿಂದ ಮುನ್ನಡೆಯಬೇಕೆಂದು ಸಲಹೆ ನೀಡಿದ್ದಾರೆ.
ಮಧ್ಯಾಹ್ನ 2.45ರ ವೇಳೆಗೆ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ 110 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 109 ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ರಾಜಸ್ಥಾನದಲ್ಲಿ 101 ಸ್ಥಾನಗಳನ್ನು ಕಾಯ್ದುಕೊಂಡಿದ್ದು, ಬಿಜೆಪಿ 71 ಸ್ಥಾನಗಳಲ್ಲಿ ಮುನ್ನಡೆ ಹೊಂದಿದೆ. ಇದಲ್ಲದೇ ಛತ್ತೀಸಗಢದಲ್ಲಿ ಈ ಬಾರಿ 67 ಸ್ಥಾನಗಳಲ್ಲಿ ಮುನ್ನಡೆ ಹೊಂದಿದೆ. ಆದರೆ ಮಿಜೋರಾಮ್ ಹಾಗೂ ತೆಲಂಗಾಣದಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv