ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿಯ ದೇವಾಲಯಕ್ಕೆ ಕನ್ನ ಹಾಕಿದ ಖದೀಮರು

Public TV
1 Min Read
RMG

ರಾಮನಗರ: ನೂತನವಾಗಿ ಲೋಕಾರ್ಪಣೆಗೊಂಡಿದ್ದ ಪಂಚಮುಖಿ ಆಂಜನೇಯ ದೇವಾಲಯದ ಬಾಗಿಲು ಮುರಿದು ನಗನಾಣ್ಯ ದೋಚಿರುವ ಘಟನೆ ರಾಮನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ದೇವಾಲಯದಲ್ಲಿ ನಡೆದಿದೆ.

ಮೂರು ತಿಂಗಳ ಹಿಂದಷ್ಟೇ ಪಂಚಮುಖಿ ಆಂಜನೇಯ ದೇವಾಲಯವನ್ನ ಲೋಕಾರ್ಪಣೆ ಮಾಡಲಾಗಿತ್ತು. ರಾತ್ರಿ ದೇವಾಲಯದ ಬಾಗಿಲಿನ ಸರಳು ಮುರಿದು ಒಳ ನುಗ್ಗಿರುವ ಕಳ್ಳರು ಹುಂಡಿ ಒಡೆದು ಹಣ ಹಾಗೂ ಗರ್ಭಗುಡಿಯಲ್ಲಿದ್ದ ಮೂರುವರೆ ಕೆಜಿ ಬೆಳ್ಳಿ ಸಾಮಾಗ್ರಿಗಳನ್ನು ದೋಚಿ ಪರಾರಿಯಾಗಿದ್ದಾರೆ.

ಬಿಡದಿಯ ನಿತ್ಯಾನಂದ ಧ್ಯಾನಪೀಠದ ನಿತ್ಯಾನಂದ ಸ್ವಾಮಿ ಈ ದೇವಾಲಯದ ಲೋಕಾರ್ಪಣೆ ಮಾಡಿದ್ದರು. ಘಟನೆ ಸಂಬಂಧ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

vlcsnap 2018 06 13 18h57m06s127

 

Share This Article
Leave a Comment

Leave a Reply

Your email address will not be published. Required fields are marked *