ಮಡಿಕೇರಿ: ಮೂರು ವರ್ಷಗಳಲ್ಲಿ 9 ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತರಾಜ್ಯ ದರೋಡೆಕೋರರನ್ನು ಬಂಧಿಸಲಾಗಿದೆ.
ಪ್ರಕರಣದ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನಾ ಡಿ.ಪೆನ್ನೇಕರ್ ಅವರು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಆರೋಪಿಗಳಾದ ಕೊಡ್ಲಿಪೇಟೆ ನಿವಾಸಿ ಸಣ್ಣಪ್ಪ, ಕುಶಾಲ್ ಹಾಗೂ ಬ್ಯಾಂಕ್ ಅಟೆಂಡರ್ ಕೆಲಸ ಮಾಡುತ್ತಿದ್ದ ಗಣೇಶ್ನನ್ನು ಬಂಧಿಸಿ 61 ಗ್ರಾಂ ಚಿನ್ನಾಭರಣ ಮತ್ತು 100 ಗ್ರಾಂ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.
ಆರೋಪಿಗಳು ಬೆಂಗಳೂರು, ಹಾಸನ ಜಿಲ್ಲೆಗಳಲ್ಲಿ ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಖದೀಮರು ಬೆಳಗ್ಗೆ ಸಂಚು ರೂಪಿಸಿ, ರಾತ್ರಿ ಮನೆ ಕಳವು ಮಾಡುತ್ತಿದ್ದರು. ಬಂಧಿತ ಆರೋಪಿ ಸಣ್ಣಪ್ಪ ಒಟ್ಟು 31 ಪ್ರಕರಣಗಳಲ್ಲಿ ಭಾಗಿಯಾಗಿ 9 ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸಿದ್ದು, ಬೆಟ್ಟದಹಳ್ಳಿಯಲ್ಲಿ ನಡೆದಿದ್ದ ಕಳವು ಪ್ರಕರಣ ಭೇದಿಸುವಾಗ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.