– ಸಿಕ್ಕಿಬಿದ್ದ ಚೋರನಿಗೆ ಸಾರ್ವಜನಿಕರಿಂದ ಗೂಸಾ
ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಕಳ್ಳತನ ಹೆಚ್ಚಾಗುತ್ತಿದ್ದು, ರಸ್ತೆಯಲ್ಲಿ ಮೊಬೈಲ್ ಹಾಗೂ ಪರ್ಸ್ ಕದಿಯುತ್ತಿದ್ದ ವೇಳೆ ಕಳ್ಳ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಬಳಿ ನಡೆದಿದೆ.
ಪ್ರಮೋದ್ ಕಳ್ಳತನ ಮಾಡುವಾಗ ಸಿಕ್ಕಿಹಾಕಿಕೊಂಡ ಕಳ್ಳ. ಈತನ ಜೊತೆ ಬೈಕಿನಲ್ಲಿ ಮೂವರು ಕಳ್ಳತನ ಮಾಡಲು ಬಂದಿದ್ದರು. ಭಾನುವಾರ ರಾತ್ರಿ ಸುಮಾರು 8 ಗಂಟೆಗೆ ಅನ್ನಪೂರ್ಣೇಶ್ವರಿ ನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಬೈಕ್ನಲ್ಲಿ ಬಂದ ಮೂವರು ಪ್ರದೀಪ್ ಎಂಬವರ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ್ದರು.
ಈ ವೇಳೆ ಪ್ರದೀಪ್ ಜೋರಾಗಿ ಕೂಗಿಕೊಂಡಿದ್ದಾರೆ. ತಕ್ಷಣ ಎಚ್ಚೆತ್ತ ಸಾರ್ವಜನಿಕರು ಕಳ್ಳ ಪ್ರಮೋದ್ನನ್ನು ಲಾಕ್ ಮಾಡಿದ್ದು, ಇನ್ನುಳಿದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಬಳಿಕ ಸಿಕ್ಕ ಆರೋಪಿಗೆ ಸಾರ್ವಜನಿಕರು ಗೂಸಾಕೊಟ್ಟು ನಂತರ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv