Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಆತ್ಮೀಯರ ಮೇಲೆ ಐಟಿ ರೇಡ್ ಮಾಡುವ ಹುನ್ನಾರ ನಡೆದಿದೆ: ವಿನಯ್ ಕುಲಕರ್ಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ನನ್ನ ಆತ್ಮೀಯರ ಮೇಲೆ ಐಟಿ ರೇಡ್ ಮಾಡುವ ಹುನ್ನಾರ ನಡೆದಿದೆ: ವಿನಯ್ ಕುಲಕರ್ಣಿ

Belgaum

ನನ್ನ ಆತ್ಮೀಯರ ಮೇಲೆ ಐಟಿ ರೇಡ್ ಮಾಡುವ ಹುನ್ನಾರ ನಡೆದಿದೆ: ವಿನಯ್ ಕುಲಕರ್ಣಿ

Public TV
Last updated: May 1, 2023 8:17 pm
Public TV
Share
3 Min Read
vinay kulkarni
SHARE

ಬೆಳಗಾವಿ: ಇವತ್ತು ಕೋರ್ಟ್ ನನಗೆ ಧಾರವಾಡ (Dharwad) ಜಿಲ್ಲಾ ಪ್ರವೇಶಕ್ಕೆ ಅನುಮತಿ ಕೊಟ್ಟಿಲ್ಲ. ಹೊರಗಡೆ ಇದ್ದುಕೊಂಡೇ ನಾನು ಚುನಾವಣೆ ಮಾಡುತ್ತಿದ್ದೇನೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ಹೇಳಿದರು.

ಬೆಳಗಾವಿ (Belagavi)  ಜಿಲ್ಲೆಯ ಕಿತ್ತೂರಿನಲ್ಲಿ ಮನೆ ಮಾಡಿಕೊಂಡು ಇರುವ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿ ವಿನಯ್ ಕುಲಕರ್ಣಿ, ಕ್ಷೇತ್ರದ ಜನ ಇದೀಗ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಮರಳಿ ನನಗೆ ಅವಕಾಶ ಕೊಡಲು ಉತ್ಸುಕರಾಗಿದ್ದಾರೆ ಎಂದು ತಿಳಿಸಿದರು.

VINAY KULKARNI

ನನ್ನ ಮೇಲೆ ಬಿಜೆಪಿ (BJP) ಷಡ್ಯಂತ್ರ ನಡೆಸಿದೆ ಎಂಬ ಹೇಳಿಕೆಗೆ ನಾನು ಈಗಲೂ ಬದ್ಧನಿದ್ದೇನೆ. ಏಕೆಂದರೆ ಕೋರ್ಟ್‌ನಲ್ಲಿ ಯರ‍್ಯಾರು ಬಂದು ಕುಳಿತಿರುತ್ತಾರೆ ಎಂಬುದನ್ನು ನೀವು ನೋಡಿದರೆ ನಿಮಗೇ ಗೊತ್ತಾಗುತ್ತದೆ. ನಾನು ಅಷ್ಟೇ ಅಲ್ಲ ರಾಜ್ಯದ ಅನೇಕ ನಾಯಕರ ಮೇಲೆ ಬಿಜೆಪಿ ಷಡ್ಯಂತ್ರ ನಡೆಸಿದೆ. ಇಂದಿಗೂ ಅನೇಕರ ಮೇಲೆ ಐಟಿ ರೇಡ್ ಮಾಡಿಸಲಾಗುತ್ತಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿಯವರು ನಮ್ಮ ಪಿಎ ಮನೆಗಳ ಮೇಲೆ ಐಟಿ ದಾಳಿ ನಡೆಸಿ ಅವರು ಹೊರಗಡೆ ಬರದಂತೆ ಮಾಡಿದರು ಎಂದು ಆರೋಪಿಸಿದರು.

ನನ್ನ ಅವಧಿಯಲ್ಲಿ ಆದಂತಹ ಕೆಲಸಗಳನ್ನು ಮುಂದಿಟ್ಟುಕೊಂಡು ನನ್ನ ಪತ್ನಿ ಹಾಗೂ ಕಾರ್ಯಕರ್ತರು ಮತ ಕೇಳುತ್ತಿದ್ದಾರೆ. ರೈತರಿಗೆ, ವಿದ್ಯಾರ್ಥಿಗಳಿಗೆ, ಯುವಕರಿಗೆ ನಾವು ಕೊಟ್ಟಂತಹ ಯೋಜನೆಗಳು ಇಂದು ನನ್ನ ಕೈ ಹಿಡಿಯುತ್ತಿವೆ. ಕಳೆದ 5 ವರ್ಷಗಳ ಅವಧಿಯಲ್ಲಿ ಬಿಜೆಪಿ ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನೇ ಮಾಡಿಲ್ಲ. ಒಂದೂ ಜನಸಂಪರ್ಕ ಸಭೆ ನಡೆಸಿಲ್ಲ. ಕಾಂಗ್ರೆಸ್‌ಗೆ ಬೆಂಬಲ ನೀಡಿದಂತಹವರಿಗೆ ಕಿರುಕುಳ ನೀಡುವ ಕೆಲಸ ಮಾಡಿದ್ದಾರೆ. 1 ಲಕ್ಷ ರೂ. ಕೊಟ್ಟವರಿಗೆ ಮಾತ್ರ ಮನೆ ಹಾಕಿಸಿಕೊಟ್ಟಿದ್ದಾರೆ ಎಂದರು.

ವಿನಯ್ ಕುಲಕರ್ಣಿ ಯಾರು ಎಂಬುದು ನನ್ನ ಕ್ಷೇತ್ರದ ಜನರಿಗೆ ಗೊತ್ತಿದೆ. ನ್ಯಾಯಾಂಗದ ಮೇಲೆ ನನಗೆ ಭರವಸೆ ಇದೆ. ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ. ಬಿಜೆಪಿಯವರು ಹಾಲಿನಲ್ಲಿ ಹರಳು ಒಗೆಯುವ ಕೆಲಸ ಮಾಡಿದ್ದಾರೆ. ಇಂದು ಕ್ಷೇತ್ರದಲ್ಲಿ ನನ್ನ ಪತ್ನಿಗೆ ಒಳ್ಳೆಯ ಸ್ಪಂದನೆ ಸಿಗುತ್ತಿದೆ. ಎಲ್ಲರೂ ಆಕೆಯನ್ನು ಮನೆಯ ಮಗಳಂತೆ ಕಾಣುತ್ತಿದ್ದಾರೆ. ನಾನು ಜಿಲ್ಲೆಯ ಹೊರಗಿದ್ದರೂ ಕೆಲಸ ಮಾಡುತ್ತೇನೆ. ಈ ಬಾರಿ ನನ್ನ ಕ್ಷೇತ್ರ ಮಾತ್ರವಲ್ಲ ಇಡೀ ರಾಜ್ಯದಲ್ಲೇ ಕಾಂಗ್ರೆಸ್ ಪರ ಅಲೆ ಇದೆ ಎಂದು ಹೇಳಿದರು. ಇದನ್ನೂ ಓದಿ: ಪ್ರಧಾನಿ ಮೋದಿ ನಾಲಾಯಕ್‌ ಹೇಳಿಕೆ – ಪ್ರಿಯಾಂಕ್‌ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ BJP ದೂರು

ಈಗಿನ ಸರ್ಕಾರ ಮಾಡಿದಷ್ಟು ಭ್ರಷ್ಟಾಚಾರವನ್ನು ಯಾವ ಸರ್ಕಾರವೂ ಮಾಡಿಲ್ಲ. ನಾನು ಮಾಡಿದ ಕೆರೆಗೆ ನೀರು ತುಂಬಿಸುವ ಕೆಲಸ, ಮಂದಿರ ನಿರ್ಮಾಣ ಸೇರಿದಂತೆ ಇತ್ಯಾದಿ ಕೆಲಸಗಳಿಗೆ ಬಿಜೆಪಿ ಶಾಸಕರು ತಮ್ಮ ಹೆಸರು ಹಾಕಿಸಿಕೊಳ್ಳುವ ಕೆಲಸ ಮಾಡಿದ್ದಾರೆ. ನನ್ನ ಕ್ಷೇತ್ರಕ್ಕೆ ಯಾವುದೇ ಸ್ಟಾರ್ ಪ್ರಚಾರಕರ ಅವಶ್ಯಕತೆ ಇಲ್ಲ. ನನ್ನ ಕಾರ್ಯಕರ್ತರೇ ನನ್ನ ಸ್ಟಾರ್ ಪ್ರಚಾರಕರು. ಸಿದ್ದರಾಮಯ್ಯ ಒಬ್ಬರು ನನ್ನ ಕ್ಷೇತ್ರಕ್ಕೆ ಬರುತ್ತೇನೆ ಎಂದಿದ್ದಾರೆ. ದುಂದುವೆಚ್ಚ ಮಾಡುವವನು ನಾನಲ್ಲ ಎಂದರು.

ಸುದೀಪ್ ಅವರು ಕರೆಕ್ಟ್ ಆಗಿಯೇ ಹೇಳಿದ್ದಾರೆ. ಅಭಿವೃದ್ಧಿ ಯಾರು ಮಾಡುತ್ತಾರೋ ಅವರಿಗೆ ಮತ ಹಾಕಿ ಎಂದಿದ್ದಾರೆ. ಅದು ಕರೆಕ್ಟ್ ಆಗಿಯೇ ಇದೆ. ಇಂದಿಗೂ ನಮ್ಮ ಫೋನ್‌ಗಳನ್ನು ಟ್ಯಾಪ್ ಮಾಡಲಾಗುತ್ತಿದೆ. ಕಾಲ್ ರೆಕಾರ್ಡ್ ಮಾಡಲಾಗುತ್ತಿದೆ. ನಾವು ಏನಾದರೂ ಮಾತನಾಡಿದರೆ ಅದು 10 ನಿಮಿಷಕ್ಕೆ ಬಿಜೆಪಿಯವರಿಗೆ ಮಾಹಿತಿ ಮುಟ್ಟುತ್ತದೆ. ಈ ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ. ಆದ್ದರಿಂದ ಪ್ರಜಾಪ್ರಭುತ್ವದ ಉಳಿವಿಗೆ ಕಾಂಗ್ರೆಸ್ ಅವಶ್ಯವಿದೆ. ಈ ಬಾರಿ ನಾವು 146 ಸೀಟುಗಳನ್ನು ಗೆಲ್ಲುತ್ತೇವೆ ಎಂದರು. ಇದನ್ನೂ ಓದಿ: ನನ್ನ ಸೋಲಿಸೋಕೆ ಇದು ಗುಜರಾತ್ ಅಲ್ಲ, ಇದು ಕರ್ನಾಟಕ: ಜಗದೀಶ್ ಶೆಟ್ಟರ್ ಗುಡುಗು

TAGGED:assembly electionbelagavibjpcongressdharwadVinay Kulkarniಕಾಂಗ್ರೆಸ್ಬಿಜೆಪಿಬೆಳಗಾವಿವಿಧಾನಸಭಾ ಚುನಾವಣೆವಿನಯ್ ಕುಲಕರ್ಣಿ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

R Ashok 3
Bengaluru City

ಗೆಜ್ಜಲಗೆರೆ ಗ್ರಾ.ಪಂ ಮದ್ದೂರು ನಗರಸಭೆಗೆ ಸೇರ್ಪಡೆ, ಆದೇಶವನ್ನು ಕೂಡಲೇ ರದ್ದು ಮಾಡಬೇಕು: ಆರ್.ಅಶೋಕ್

Public TV
By Public TV
3 minutes ago
Shivalinge Gowda
Districts

ಸಿದ್ದರಾಮಯ್ಯ ಕಟೌಟ್‌ಗೆ ಹಾಲಿನ ಅಭಿಷೇಕ ಮಾಡಿ ರೇವಣ್ಣಗೆ ಸವಾಲೆಸೆದ ಶಿವಲಿಂಗೇಗೌಡ

Public TV
By Public TV
30 minutes ago
shivalinge gowda
Hassan

ಅರಸೀಕೆರೆಯಲ್ಲಿ ಚುನಾವಣೆಗೆ ನಿಂತ್ಕೊಳಿ, ಜನ ಏನು ಅಂತ ತೋರಿಸ್ತಾರೆ: ಹೆಚ್‌.ಡಿ.ರೇವಣ್ಣಗೆ ಶಿವಲಿಂಗೇಗೌಡ ಸವಾಲ್‌

Public TV
By Public TV
32 minutes ago
cricket news India vs New Zealand 1st ODI india need 301 runs to win
Cricket

IND vs NZ | ಭಾರತಕ್ಕೆ 301 ರನ್‌ಗಳ ಗುರಿ ನೀಡಿದ ಕಿವೀಸ್‌

Public TV
By Public TV
1 hour ago
Basavaraj Bommai
Bengaluru City

ವರದಾ, ಬೇಡ್ತಿ ನದಿ ಜೋಡಣೆ – ಮಠಾಧೀಶರು, ಜನಪ್ರತಿನಿಧಿಗಳ ಜನಜಾಗೃತಿ ಸಭೆ: ಬೊಮ್ಮಾಯಿ

Public TV
By Public TV
1 hour ago
Raichuru Accident NS Bosaraju
Crime

ಟ್ರ‍್ಯಾಕ್ಟರ್‌ಗೆ ಲಾರಿ ಡಿಕ್ಕಿ, ರೈತ ಸಾವು – ಮಾರ್ಗಮಧ್ಯೆ ಘಟನೆ ಕಂಡು ಸ್ಥಳಕ್ಕೆ ಭೇಟಿ, ಸಾಂತ್ವನ ಹೇಳಿದ ಸಚಿವ ಬೋಸರಾಜು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?