Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಮಾರ್ಟ್ ಮೀಟರ್ ಖರೀದಿ ಟೆಂಡರ್‌ನಲ್ಲಿ 15,568 ಕೋಟಿ ಮೊತ್ತದ ಹಗರಣ ಆಗಿದೆ – ಅಶ್ವಥ್ ನಾರಾಯಣ್ ಬಾಂಬ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ಮಾರ್ಟ್ ಮೀಟರ್ ಖರೀದಿ ಟೆಂಡರ್‌ನಲ್ಲಿ 15,568 ಕೋಟಿ ಮೊತ್ತದ ಹಗರಣ ಆಗಿದೆ – ಅಶ್ವಥ್ ನಾರಾಯಣ್ ಬಾಂಬ್

Bengaluru City

ಸ್ಮಾರ್ಟ್ ಮೀಟರ್ ಖರೀದಿ ಟೆಂಡರ್‌ನಲ್ಲಿ 15,568 ಕೋಟಿ ಮೊತ್ತದ ಹಗರಣ ಆಗಿದೆ – ಅಶ್ವಥ್ ನಾರಾಯಣ್ ಬಾಂಬ್

Public TV
Last updated: March 25, 2025 12:45 pm
Public TV
Share
3 Min Read
Ashwath Narayana
SHARE

ಬೆಂಗಳೂರು: ಬೆಸ್ಕಾಂ ಸೇರಿ ಎಲ್ಲ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಖರೀದಿ ಟೆಂಡರ್‌ನಲ್ಲಿ 15,568 ಕೋಟಿ ರೂ. ಮೊತ್ತದ ಹಗರಣ ಆಗಿದೆ. ಇದು ರಾಜ್ಯದ ದೊಡ್ಡ ಹಗರಣ ಎಂದು ಶಾಸಕ ಅಶ್ವಥ್ ನಾರಾಯಣ್ (Ashwath Narayan) ಬಾಂಬ್ ಸಿಡಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ (BJP Office) ಎಸ್.ಆರ್ ವಿಶ್ವನಾಥ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸ್ಮಾರ್ಟ್ ಮೀಟರ್ ಹಗರಣ ಆರೋಪ ಕುರಿತು ಮಾತನಾಡಿದ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, ಸ್ಮಾರ್ಟ್ ಮೀಟರ್‌ಗಳ ಖರೀದಿಯಲ್ಲಿ ಸಾಕಷ್ಟು ಅವ್ಯವಹಾರ ಆಗಿದೆ. ನಾನು, ವಿಶ್ವನಾಥ್ ಇಬ್ಬರು ಸದನದಲ್ಲೂ ಇದರ ಬಗ್ಗೆ ಮಾತಾಡಿದ್ದೇವೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಸರ್ಕಾರ ಅವ್ಯವಹಾರ ನಡೆಸಿದೆ. ನಮ್ಮ ಆರೋಪಕ್ಕೆ ಸದನದಲ್ಲೇ ಉತ್ತರ ಕೊಡುತ್ತೇನೆ ಎಂದು ಇಂಧನ ಸಚಿವರು ಹೇಳಿದ್ದರು. ಆದರೆ, ಸದನಕ್ಕೆ ಆ ದಿನ ಬಂದಿದ್ದರೂ ಕೂಡ ಸಚಿವ ಜಾರ್ಜ್ ನಾಪತ್ತೆಯಾಗಿದ್ದರು. ನಮ್ಮ ಆರೋಪಗಳಿಗೆ ಸಚಿವರು ಉತ್ತರ ಕೊಡಲಿಲ್ಲ. ಆದರೆ ಸೋಮವಾರ ಅಧಿಕಾರಿಗಳ ಮೂಲಕ ಹಗರಣ ಆಗಿಲ್ಲ ಎಂದು ಸರ್ಕಾರ ಹೇಳಿಸಿದೆ ಎಂದು ತಿಳಿಸಿದರು.ಇದನ್ನೂ ಓದಿ:ಗುಡ್‌ ನ್ಯೂಸ್‌ ಕೊಟ್ಟ ‘ದಿ ವಿಲನ್‌’ ನಟಿ- ಆ್ಯಮಿ ಜಾಕ್ಸನ್‌ಗೆ ಗಂಡು ಮಗು

ಬೆಸ್ಕಾಂ (BESCOM) ಸೇರಿ ಎಲ್ಲ ಎಸ್ಕಾಂಗಳ (ESCOM) ಸ್ಮಾರ್ಟ್ ಮೀಟರ್ ಖರೀದಿ ಟೆಂಡರ್‌ನಲ್ಲಿ 15,568 ಕೋಟಿ ರೂ. ಮೊತ್ತದ ಹಗರಣ ಆಗಿದೆ. ಇದೊಂದು ರಾಜ್ಯದ ದೊಡ್ಡ ಹಗರಣವಾಗಿದೆ. ಸ್ಮಾರ್ಟ್ ಮೀಟರ್ ಕಡ್ಡಾಯನಾ? ಕೆಇಆರ್‌ಸಿ ಗೈಡ್‌ಲೈನ್ಸ್ ಪ್ರಕಾರ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡುವಂತಿಲ್ಲ. ತಾತ್ಕಾಲಿಕ ಗ್ರಾಹಕರಿಗೆ ಮಾತ್ರ ಕಡ್ಡಾಯ ಮಾಡಬಹುದೇ ಹೊರತು ಹೊಸ ಗ್ರಾಹಕರಿಗೆ ಕಡ್ಡಾಯ ಮಾಡುವಂತಿಲ್ಲ. ಇನ್ನೂ ಸ್ಮಾರ್ಟ್ಮೀಟರ್‌ಗಳ ಖರೀದಿಯಲ್ಲಿ ಕೆಟಿಪಿಪಿ ಕಾಯ್ದೆ ಉಲ್ಲಂಘನೆಯಾಗಿದೆ. ರಾಜಶ್ರೀ ಕಂಪನಿಗೆ ಅನುಕೂಲ ಆಗುವಂತೆ ಟೆಂಡರ್ ಕೊಟ್ಟಿದ್ದಾರೆ. ಕೆಟಿಪಿಪಿ ಕಾಯ್ದೆ ಪ್ರಕಾರ ಟೆಂಡರ್ ಪಡೆದುಕೊಳ್ಳುವ ಸಂಸ್ಥೆ ಬಳಿ 6,800 ಕೋಟಿ ರೂ. ಬಿಡ್ ಸಾಮರ್ಥ್ಯ ಮೊತ್ತ ಇರಬೇಕು. ಆದರೆ ಟೆಂಡರ್ ಪಡೆದ ರಾಜಶ್ರೀ ಕಂಪನಿ ಬಳಿ ಇದ್ದಿದ್ದು ಕೇವಲ 400 ಕೋಟಿ ರೂ. ಅಷ್ಟೇ. ಟೆಂಡರ್ ಮೌಲ್ಯ 1,920 ಕೋಟಿ ಇಡಬೇಕಿತ್ತು. ಆದರೆ ಟೆಂಡರ್‌ನಲ್ಲಿ ಇಟ್ಟಿದ್ದು ಕೇವಲ 107 ಕೋಟಿ ರೂ. ಬ್ಲಾಕ್‌ಲಿಸ್ಟ್ನಲ್ಲಿ ಇರುವ ಸಂಸ್ಥೆಗೆ ಟೆಂಡರ್ ಕೊಡುವಂತಿಲ್ಲ ಅಂತ ಕೆಟಿಪಿಪಿ ಕಾಯ್ದೆಯಲ್ಲಿದೆ. ಆದರೆ ಉತ್ತರ ಪ್ರದೇಶದಲ್ಲಿ ಬ್ಲಾಕ್‌ಲಿಸ್ಟ್ ಆಗಿದ್ದ ಬಿಸಿಐಟಿಎಸ್ ಕಂಪನಿಗೆ ಸಾಪ್ಟ್ವೇರ್ ಟೆಂಡರ್ ಕೊಟ್ಟಿರುತ್ತಾರೆ ಎಂದು ಆರೋಪಿಸಿದರು.

ಸ್ಮಾರ್ಟ್ಮೀಟರ್‌ಗಳ ದರಗಳಲ್ಲಿ ಬೇರೆ ರಾಜ್ಯಗಳಿಗೂ ನಮಗೂ ಬಹಳ ವ್ಯತ್ಯಾಸವಿದೆ. ಒಂದು ಮೀಟರ್‌ಗೆ ನಮ್ಮಲ್ಲಿ 8,160 ರೂ. ತೆಗೆದುಕೊಳ್ಳುತ್ತಾರೆ. ನಮ್ಮಲ್ಲಿ ತಿಂಗಳಿಗೆ ಕೊಡುವ ದರ ಹತ್ತು ವರ್ಷಗಳಿಗೆ ಲೆಕ್ಕ ಹಾಕಿದರೆ ಪ್ರತೀ ಮೀಟರ್‌ಗೆ 17 ಸಾವಿರ ರೂ. ಆಗಲಿದೆ. ಬೇರೆ ರಾಜ್ಯಗಳಲ್ಲಿ 7,400 ರೂ.ಯಿಂದ 9,260 ಆಗಲಿದೆ. ಸ್ಮಾರ್ಟ್ಮೀಟರ್ ದರ, ಸಾಫ್ಟ್ವೇರ್ ನಿರ್ವಹಣೆ ದರ ಹಾಗೂ ಸಿಬ್ಬಂದಿ ವೇತನ ದರಗಳನ್ನು ಸೇರಿಸಿ ಹತ್ತು ವರ್ಷಕ್ಕೆ ಜನರಿಂದ ಸಂಗ್ರಹ ಮಾಡುತ್ತಿದ್ದಾರೆ ಎಂದರು.

ಸ್ಮಾರ್ಟ್ಮೀಟರ್‌ಗೆ ಗ್ಲೋಬಲ್ ಟೆಂಡರ್ ಕರೆಯಬೇಕಿತ್ತು. ಆದರೆ ಇವರು ಕರೆದಿಲ್ಲ. ಭಂಡತನದಿಂದ ಕಣ್ಮುಂದೆ ಸುಳ್ಳು ಹೇಳಿ ಅವ್ಯವಹಾರ ಮಾಡಿದ್ದಾರೆ. ರಾಜಶ್ರೀ, ಸಹ್ಯಾದ್ರಿ ಹಾಗೂ ವಿಆರ್ ಪಾಟೀಲ್ ಕಂಪನಿಗಳು ಬಿಡ್ ಹಾಕಿದ್ದವು. ಇವರ ಟೆಂಡರ್ ದಾಖಲೆ ಪ್ರಕಾರ ಒಂದೇ ಒಂದು ಕಂಪನಿ ಅರ್ಹವಾಗಿದ್ದು, ಅದೇ ರಾಜಶ್ರೀ ಕಂಪನಿ ಎಂದಿದ್ದಾರೆ. ನಾವು ರಾಜಕೀಯ ಪ್ರೇರಿತ ಆರೋಪ ಮಾಡುತ್ತಿಲ್ಲ. ಸತ್ಯ ಹೇಳಿದ್ದೀವಿ. ಸರ್ಕಾರ ಎಚ್ಚೆತ್ತುಕೊಳ್ಳಬೇಕು, ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಾವು ಬಿಸಿ ಮುಟ್ಟಿಸಬೇಕಾಗುತ್ತದೆ. ಹಗಲು ದರೋಡೆ ನಿಲ್ಲಿಸಬೇಕು, ಈಗ ಆಗಿರುವ ಟೆಂಡರ್ ರದ್ದು ಮಾಡಬೇಕು. ಮತ್ತೆ ನಿಯಮಾನುಸಾರ ಟೆಂಡರ್ ಕರೆಯಲಿ ಎಂದು ಆಗ್ರಹಿಸಿದರು.

ಕೆಟಿಪಿಪಿ ಕಾಯ್ದೆ ಪ್ರಕಾರ ಸ್ಮಾರ್ಟ್ಮೀಟರ್ ಟೆಂಡರ್ ಕೊಟ್ಟಿಲ್ಲ. ಇದು ಜಿಟಿಪಿಪಿ ಕಾಯ್ದೆ, ಜಾರ್ಜ್ ಟ್ರಾನ್‌ಪರೆನ್ಸಿ ಇನ್ ಪಬ್ಲಿಕ್ ಪ್ರೊಕ್ಯೂರ್‌ಮೆಂಟ್ ಪ್ರೊಸೀಜರ್ ಕಾಯ್ದೆ. ಟೆಂಡರ್ ನಿಯಮಗಳನ್ನು ತಮಗೆ ಬೇಕಾದಂತೆ ರೂಪಿಸಿಕೊಂಡಿದ್ದಾರೆ ಎಂದರು.ಇದನ್ನೂ ಓದಿ:ದೆಹಲಿ ಬಜೆಟ್ ಮಂಡಿಸಿದ ಸಿಎಂ ರೇಖಾ ಗುಪ್ತಾ – ಮಹಿಳಾ ಸಮೃದ್ಧಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ.

TAGGED:Ashwath NarayanSmart Meter Scamಅಶ್ವಥ್ ನಾರಾಯಣ್ಬೆಂಗಳೂರುಸ್ಮಾರ್ಟ್‌ ಮೀಟರ್
Share This Article
Facebook Whatsapp Whatsapp Telegram

Cinema news

BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories
ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows

You Might Also Like

Karnataka State Budget 2025
Bengaluru City

ನಾಯಕತ್ವ ಬದಲಾವಣೆ ಚರ್ಚೆ ಮಧ್ಯೆಯೇ ಇಂದಿನಿಂದ ಸಿಎಂ ಬಜೆಟ್ ಸಿದ್ಧತೆ

Public TV
By Public TV
2 minutes ago
Narendra Modi 1
Latest

ನಾನು ಬಿಜೆಪಿ ಕಾರ್ಯಕರ್ತ, ನಿತಿನ್ ನನ್ನ ಬಾಸ್: ನರೇಂದ್ರ ಮೋದಿ

Public TV
By Public TV
16 minutes ago
M.B. Patil 1
Bengaluru City

ದಾವೋಸ್‌ ಸಮಾವೇಶ | ಕೋಕಾ – ಕೋಲಾದ 25,760 ಕೋಟಿ ಹೂಡಿಕೆಯ ಬಹುಪಾಲು ರಾಜ್ಯಕ್ಕೆ ಸೆಳೆಯಲು ಎಂ.ಬಿ. ಪಾಟೀಲ್ ಯತ್ನ‌

Public TV
By Public TV
32 minutes ago
Bidar Crime
Bidar

ದಾರಿ ಬಿಡದಿದ್ದಕ್ಕೆ ಬಸ್ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ

Public TV
By Public TV
44 minutes ago
Jaggesh
Bengaluru City

ರಾಯರನ್ನ ಅಪಮಾನ ಮಾಡಿದವರು ಉದ್ಧಾರ ಆದ ಇತಿಹಾಸವಿಲ್ಲ – ಸಿಎಂ ನಡೆಗೆ ಜಗ್ಗೇಶ್ ಖಂಡನೆ

Public TV
By Public TV
1 hour ago
Rajasthan Photographer Acid Attack
Crime

ಅಪರಿಚಿತರೊಂದಿಗೆ ಮಾತಾಡಲ್ಲ ಎಂದಿದ್ದಕೆ ಬಾಲಕಿ ಮೇಲೆ ಆಸಿಡ್ ದಾಳಿ – ಫೋಟೋಗ್ರಾಫರ್ ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?