ನವದೆಹಲಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನನ್ನ ಅಭ್ಯಂತರವಿಲ್ಲ. ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿಗಳಿಲ್ಲ, ಅನಿತಾ ಕುಮಾರಸ್ವಾಮಿಯವ್ರು ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಪಕ್ಷದಿಂದ ಯಾವುದೇ ತಡೆ ಇಲ್ಲ ಅಂತಾ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ನಾಳೆ ನಡೆಯುವ ಕಾವೇರಿ ಕುರಿತ ಸಭೆಯಲ್ಲಿ ಭಾಗಿಯಾಗಲಿದ್ದೇನೆ. ಸಭೆಯಲ್ಲಿ ಕೇಂದ್ರ ಸಚಿವರೆಲ್ಲಾ ಇದ್ದರೆ ಒಳ್ಳೆಯದು. ಸಂಸತ್ ಅಧಿವೇಶನ ಇರುವುದರಿಂದ ಬಿಜೆಪಿ ಸಂಸದರು ಬರುತ್ತಾರೋ ಇಲ್ಲವೋ ಗೊತ್ತಿಲ್ಲ. ಈಗಾಗಲೇ ನಾನು ಒಂದು ಸ್ಕೀಂ ಮಾಡಿಕೊಟ್ಟಿದ್ದೇನೆ. ತಮಿಳುನಾಡಿನ ಎಲ್ಲಾ ಪಕ್ಷದ ಸಂಸದರು ಒಗ್ಗಟ್ಟಾಗಿದ್ದು, ನಮ್ಮ ರಾಜ್ಯದ ಸಂಸದರೆಲ್ಲಾ ಒಗ್ಗಾಟಗಬೇಕಿದೆ ಅಂತಾ ದೇವೇಗೌಡ್ರು ತಿಳಿಸಿದ್ರು.
ಜೆಡಿಎಸ್ ನಿಂದ ಅಮಾನತಾಗಿದ್ದ ಶಾಸಕ ಎಚ್.ಸಿ.ಬಾಲಕೃಷ್ಣ ಮಾತುಕತೆಗೆ ಸಿದ್ಧ ಎಂಬ ಹೇಳಿಕೆ ಪ್ರತಿಕ್ರಿಯಿಸಿದ ದೇವೇಗೌಡ್ರು, ಈಗಾಗಲೇ ಅವರಿಗೆ ಸಾಕಷ್ಟು ಸಮಯವಕಾಶ ಕೊಟ್ಟಿದ್ದೇವೆ. ಅವರನ್ನು ಅಮಾನತು ಮಾಡಲಾಗಿತ್ತು ಅಷ್ಟೆ, ಪಕ್ಷದಿಂದ ಉಚ್ಛಾಟಿಸುವ ನಿರ್ಧಾರ ತೆಗೆದುಕೊಂಡಿರಲಿಲ್ಲ. ಈ ಹಿಂದೆ ಗೋಪಾಲಯ್ಯ ತಪ್ಪು ಒಪ್ಪಿಕೊಂಡ ನಂತರ ಅವರನ್ನು ಬಿಟ್ಟಿಲ್ಲವೆ. ಮೊದಲು ಸ್ಪೀಕರ್ ಕೋರ್ಟ್ ತೀರ್ಪು ಬರಲಿ. ಮುಂದೆ ಏನಾಗುತ್ತೆ ಎಂಬುದನ್ನು ನೋಡೋಣ ಅಂತಾ ಅಂದ್ರು.
ಹೆಚ್.ಡಿ.ಕುಮಾರಸ್ವಾಮಿ ಮುಂದಿನ ಚುನಾವಣೆಗೆ ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರಗಳಿಂದ ನಿಲ್ಲಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದು, ಜೆಡಿಎಸ್ನಿಂದ ಅಧಿಕೃತವಾಗಿ ಈ ವಿಚಾರ ಪ್ರಕಟವಾಗಿಲ್ಲ