ಬಿಜೆಪಿ ಬೆದರಿಕೆ ಪತ್ರಕ್ಕೆ ಡಿಕೆಶಿ ಆಗ್ಲಿ, ಕಾಂಗ್ರೆಸ್ ಆಗ್ಲಿ ಹೆದರೋ ಪ್ರಶ್ನೆಯೇ ಇಲ್ಲ : ಡಿ.ಕೆ ಸುರೇಶ್

Public TV
2 Min Read
D. K. Suresh

ರಾಮನಗರ: ಡಿ.ಕೆ ಶಿವಕುಮಾರ್‌ಗೆ ಕಳುಹಿಸಿರುವುದು ಇಡಿ ನೋಟಿಸ್(ED Notice) ಅಲ್ಲ, ಬಿಜೆಪಿ ಬೆದರಿಕೆ ಪತ್ರ. ಬಿಜೆಪಿ ಬೆದರಿಕೆ ಪತ್ರಕ್ಕೆ ಡಿ.ಕೆ. ಶಿವಕುಮಾರ್ ಆಗಲಿ ಕಾಂಗ್ರೆಸ್ ಆಗಲಿ ಹೆದರುವ ಪ್ರಶ್ನೆಯೇ ಇಲ್ಲ ಎಂದು ಸಂಸದ ಡಿ.ಕೆ. ಸುರೇಶ್(D. K. Suresh) ಹೇಳಿದ್ದಾರೆ.

DKSHI 1

ಚನ್ನಪಟ್ಟಣದಲ್ಲಿ(Channapatna) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಮೇಲೆ ಆಗಾಗ ಇಂತಹ ಪ್ರಯತ್ನಗಳು ನಡೆಯುತ್ತಿವೆ. ಇದು ಇಡಿ ನೋಟಿಸ್ ಅಲ್ಲ, ಬಿಜೆಪಿ ಬೆದರಿಕೆ ಪತ್ರ. ಬಿಜೆಪಿ ಬೆದರಿಕೆ ಪತ್ರಕ್ಕೆ ಡಿ.ಕೆ. ಶಿವಕುಮಾರ್ ಆಗಲಿ ಕಾಂಗ್ರೆಸ್(Congress) ಆಗಲಿ ಹೆದರುವ ಪ್ರಶ್ನೆಯೇ ಇಲ್ಲ. ಅವರು ಏನೇ ಮಾಡಿದರೂ ಅದನ್ನು ಎದುರಿಸಲು ಸಿದ್ಧರಾಗಿದ್ದೇವೆ. ಡಿಕೆಶಿ ಅವರನ್ನು ಮಾನಸಿಕವಾಗಿ ಕುಗ್ಗಿಸುತ್ತಿದ್ದಾರೋ ದೈಹಿಕವಾಗಿ ಕುಗ್ಗಿಸುತ್ತಿದ್ದಾರೋ ಗೊತ್ತಿಲ್ಲ. ಆದರೆ ಇದು ಬಿಜೆಪಿ ಪಕ್ಷದ ನೋಟಿಸ್ ಅಷ್ಟೇ. ಬಿಜೆಪಿ ಕಚೇರಿಯಿಂದ ಇಡಿ ಕಚೇರಿಗೆ, ಇಡಿ ಕಚೇರಿಯಿಂದ ಬಿಜೆಪಿ ಕಚೇರಿ ಪತ್ರ ವ್ಯವಹಾರ ಇದೆ. ಹಾಗಾಗಿ ಇದು ಬಿಜೆಪಿ ಪಕ್ಷದ ವತಿಯಿಂದ ಬಂದಿರುವ ಬೆದರಿಕೆ ಪತ್ರವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಚಿವರೇ ಉತ್ತರ ಸಾಕು ಕುಳಿತುಕೊಳ್ಳಿ – ವಿಧಾನ ಪರಿಷತ್‍ನಲ್ಲಿ ಹಾಸ್ಯ ಪ್ರಸಂಗ

Ashwathnarayan

ಇದೇ ವೇಳೆ, 75 ವರ್ಷಗಳಿಂದ ರಾಮನಗರ ಅಭಿವೃದ್ಧಿಯಾಗಿಲ್ಲ ಎಂಬ ಸಚಿವ ಅಶ್ವಥ್ ನಾರಾಯಣ್(Ashwath Narayana) ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಂತಹ ಕೊಳಕು ಹಾಗೂ ಭ್ರಷ್ಟ ರಾಜಕೀಯ 75 ವರ್ಷದಲ್ಲಿ ಇರಲಿಲ್ಲ. ನಾಡಕಚೇರಿ ಹಾಗೂ ತಹಶೀಲ್ದಾರ್ ಕಚೇರಿಯಲ್ಲಿ ಕೆಲಸ ಆಗಬೇಕು ಅಂದರೆ ಹಣ ಕೊಡಬೇಕು. ಪೊಲೀಸ್ ಠಾಣೆಯಲ್ಲಿ ಕೆಲಸ ಆಗಬೇಕಾದರೆ ಹಣ ಕೊಡಬೇಕು. ಯಾರಿಗಾದರೂ ಉದ್ಯೋಗ ಕೊಡಬೇಕಾದರೂ ಹಣ ಕೊಡಬೇಕು. ಬಿಜೆಪಿ(BJP) ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಹೀಗಾಗಿ ಕಾಂಗ್ರೆಸ್(Congress) ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ(Siddaramaiah) ಆಡಳಿತ ಅವಧಿ ಬಗ್ಗೆ ತನಿಖೆ ಮಾಡುತ್ತೇವೆ ಅಂತಿದ್ದಾರೆ. ತನಿಖೆ ಮಾಡಿ ಅವರ ತಾಕತ್ತನ್ನು ಪ್ರದರ್ಶನ ಮಾಡಲಿ. ಬರೀ ಭಾಷಣದಲ್ಲಿ ತಾಕತ್ತು ಪ್ರದರ್ಶನ ಆಗುವುದು ಬೇಡ. ಅವರ ಬಳಿ ಆಧಾರ ಇದ್ದರೆ, ರಾಜ್ಯದ ಜನರ ಬಳಿ ಬಹಿರಂಗ ಪಡಿಸಲಿ. ಇವರ ಈ ಬೆದರಿಕೆಗೆ ಹೆದರುವಂತಹ ವ್ಯಕ್ತಿತ್ವ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಕಾಂಗ್ರೆಸ್‍ಗೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಘಟಾನುಘಟಿಗಳ ಕಾಲದಲ್ಲಿ ರಾಜಕಾಲುವೆ ಒತ್ತುವರಿಯಾಗಿದೆ ಎಂಬ ಅಶ್ವಥ್ ನಾರಾಯಣ್ ಹೇಳಿಕೆಗೆ, ಅಶ್ವಥ್ ನಾರಾಯಣ್ ಅವರೇ ಮೊದಲು ರಾಮನಗರ(Ramanagara) ಕ್ಲೀನ್ ಮಾಡಿ. ಅವರು ಏನ್ ಏನ್ ಕ್ಲೀನ್ ಮಾಡಿದ್ದಾರೆ ಅಂತ ನೀವೇ ನೋಡುತ್ತಿದ್ದೀರಾ. ಸಚಿವರು ರೈತರ ಭೂಮಿ ಕಸಿದುಕೊಂಡಿದ್ದಾರೆ. ಅವರು ಜಮೀನು ಕೊಡಲು ಯೋಗ್ಯತೆ ಇಲ್ಲದಿದ್ದವರು. ಕ್ಷುಲ್ಲಕ ರಾಜಕಾರಣದ ವಿರುದ್ಧ ಮಾಗಡಿ ಭಾಗದ ರೈತರ ಹಾಗೂ ದಲಿತರ ಬಳಿ ಭೂಮಿ ಕಸಿದುಕೊಂಡಿದ್ದಾರೆ. ಅಂತಹ ನೀಚ ಪ್ರವೃತ್ತಿ ಹೊಂದಿರುವವರ ಬಗ್ಗೆ ನಾನು ಏನು ಮಾತನಾಡಲಿ? ಮೊದಲು ಬೆಂಗಳೂರಿನ ಸ್ಯಾಂಕಿ ಟ್ಯಾಕ್ ಬಳಿ ಕ್ಲೀನ್ ಮಾಡಿಸಲಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ವಾಹನ ಸವಾರರೇ ಎಚ್ಚರ- ಹೆಡ್ ಲೈಟ್‌ಗಳಲ್ಲಿ ಹೈ ಬೀಮ್ ಹಾಕಿ ವಾಹನ ಚಲಾಯಿಸಿದರೆ ಕೇಸ್: ಶ್ರೀರಾಮುಲು

Live Tv
[brid partner=56869869 player=32851 video=960834 autoplay=true]

Share This Article