Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಗೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿಗೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಹೆಚ್‌ಡಿಕೆ

Districts

ಬಿಜೆಪಿಗೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಹೆಚ್‌ಡಿಕೆ

Public TV
Last updated: October 10, 2024 8:01 pm
Public TV
Share
2 Min Read
HD Kumaraswamy 1
SHARE

ರಾಮನಗರ: ಲೋಕಸಭೆ ಚುನಾವಣೆ ವೇಳೆ ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್ (JDS) ಕಾರ್ಯಕರ್ತರ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದೆ. ಯೋಗೇಶ್ವರ್ ಅವರಿಗೆ ಅಥವಾ ಇನ್ಯಾರಿಗೆ ಆಗಲಿ ಕ್ಷೇತ್ರವನ್ನು ಬಿಟ್ಟುಕೊಡಬೇಕೆಂದು ಬಿಜೆಪಿ (BJP) ವರಿಷ್ಠರ ಜೊತೆ ಒಪ್ಪಂದವಾಗಿರಲಿಲ್ಲ. ಅವತ್ತು ಏನು ನಡೆಯಿತು ಎಂದು ಹೇಳಲೇಬೇಕು. ಜನರಿಗೆ ಸತ್ಯ ಗೊತ್ತಾಗಬೇಕು ಎಂಬುದು ನನ್ನ ಉದ್ದೇಶ. ಬೆಂಗಳೂರು ಗ್ರಾಮಾಂತರ ಲೋಕಾಸಭೆ ಕ್ಷೇತ್ರದಿಂದ ಡಾ.ಸಿ.ಎನ್ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಯಾಗಲು ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರೇ ಮೂಲ ಕಾರಣ. ಅವರ ಒತ್ತಾಯಕ್ಕೆ ಗೌರವ ಕೊಟ್ಟು, ಅವರ ಮಾತಿಗೆ ತಲೆಬಾಗಿ ಅವರನ್ನು ಅಭ್ಯರ್ಥಿ ಮಾಡಲಾಯಿತು ಎಂದರು.ಇದನ್ನೂ ಓದಿ: ರತನ್ ಟಾಟಾ ನಿಧನಕ್ಕೆ ಕಂಬನಿ ಮಿಡಿದ ರಜನಿಕಾಂತ್

ಈ ಕ್ಷಣದ ತನಕ ಚನ್ನಪಟ್ಟಣ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರಾಗಬೇಕು ಎಂದು ನಾನು ನಿರ್ಧಾರ ಮಾಡಿಲ್ಲ. ಕಾರ್ಯಕರ್ತರ ಸಭೆಗಳನ್ನು ಮಾಡಲಾಗುತ್ತಿದೆ. ಅಂತಿಮವಾಗಿ ರಾಜ್ಯ ಮತ್ತು ದೆಹಲಿ ಮಟ್ಟದ ನಾಯಕರ ಜತೆ ಚರ್ಚೆ ನಡೆಸಿ ನಿರ್ಧಾರ ಮಾಡಲಾಗುವುದು. ಬಿಜೆಪಿ ನಾಯಕರು, ಕಾರ್ಯಕರ್ತರು ಸಭೆ ಮಾಡಿರುವುದರಲ್ಲಿ ತಪ್ಪೇನಿಲ್ಲ. ಅದನ್ನು ತಪ್ಪು ಎಂದು ನಾನು ಹೇಳಲಾರೆ. ಚನ್ನಪಟ್ಟಣ ಜೆಡಿಎಸ್ ಭದ್ರಕೋಟೆಯಾಗಿದೆ. ಕಾರ್ಯಕರ್ತರ ಅಭಿಪ್ರಾಯದಂತೆ ನಾನು ನಿರ್ಧಾರ ಕೈಗೊಳ್ಳಬೇಕಿದೆ. ಏಕೆಂದರೆ ಕಾರ್ಯಕರ್ತರು ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡಿಕೊಂಡಿದ್ದಾರೆ. ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ ನಾನು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ನಾನು ಪ್ರಾಥಮಿಕ ಹಂತದಲ್ಲಿಯೇ ಯೋಗೇಶ್ವರ್ ಅವರಿಗೆ ಹೇಳಿದ್ದೆ. ಜೆಡಿಎಸ್-ಬಿಜೆಪಿ ಒಂದಾದರೆ ಇಲ್ಲಿ ಗೆಲ್ಲುವುದು ಕಷ್ಟವಲ್ಲ. ಕಾಂಗ್ರೆಸ್ ಪಕ್ಷವನ್ನು ರಾಷ್ಟ್ರಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕಟ್ಟಿ ಹಾಕಲಾಗಿದೆ. ಅದೇ ರೀತಿ ಚನ್ನಪಟ್ಟಣದಲ್ಲಿಯೂ ಕಟ್ಟಿ ಹಾಕಬೇಕಿದೆ. ಒಮ್ಮತದ ಎನ್‌ಡಿಎ ಅಭ್ಯರ್ಥಿ ಹಾಕಿದರೆ ಇದು ಸುಲಭ ಎಂದಿದ್ದೇನೆ ಎಂದು ತಿಳಿಸಿದರು.

ಮೈತ್ರಿಗೆ ಮೂಲ ಕಾರಣ ಯಾರು ಎಂಬುದನ್ನು ನಾನು ಬೀದಿಯಲ್ಲಿ ಚರ್ಚೆ ಮಾಡಲಾರೆ. ಹಾಗೆ ಮಾಡುವುದು ರಾಷ್ಟ್ರೀಯ ನಾಯಕರಿಗೆ ಅಪಮಾನ ಮಾಡಿದಂತೆ. ಯೋಗೇಶ್ವರ್ ಅವರು ಮೈತ್ರಿ ಬಗ್ಗೆ ಯಾರ ಜೊತೆ ಚರ್ಚೆ ನಡೆಸಿದ್ದರು ಎಂಬುದು ನನಗೆ ಗೊತ್ತಿಲ್ಲ. ಅಭ್ಯರ್ಥಿ ಆಗಬೇಕು ಎಂದ ಯೋಗೇಶ್ವರ್ ಅವರು ಒಮ್ಮೆ ನನ್ನ ಬಳಿ ಬಂದು, ದೆಹಲಿಯಲ್ಲಿ ಚರ್ಚೆ ಮಾಡಿದ್ದರು. ಹಾಗಿದ್ದರೆ ತಾವು ಕ್ಷೇತ್ರದಲ್ಲಿನ ನಮ್ಮ ಮುಖಂಡರ ಜೊತೆ ಚರ್ಚಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಸಲಹೆ ಮಾಡಿದ್ದೆ. ಆಮೇಲೆ ನಡೆದಿದ್ದು ನನಗೆ ಗೊತ್ತಿಲ್ಲ. ನಮ್ಮ ಪಕ್ಷದಲ್ಲಿಯೂ ಅಭ್ಯರ್ಥಿ ಆಗಬೇಕು ಎಂದು ಅನೇಕ ನಾಯಕರು ಇದ್ದಾರೆ ಎಂದು ತಿಳಿಸಿದರು.

ನಿಖಿಲ್ ಕುಮಾರಸ್ವಾಮಿ ಅವರು ಈ ಚುನಾವಣೆಗೆ ನಿಲ್ಲಬೇಕು ಅಥವಾ ನಿಲ್ಲಿಸಬೇಕು ಎಂಬ ಬಗ್ಗೆ ಈ ಕ್ಷಣದವರೆಗೂ ಚರ್ಚೆ ನಡೆದಿಲ್ಲ. ನಾನು ತೀರ್ಮಾನ ಮಾಡಿಲ್ಲ. ನನ್ನ ಉದ್ದೇಶ ಇಲ್ಲಿ ಕಾಂಗ್ರೆಸ್ ಸೋಲಬೇಕು. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಗೆಲ್ಲಬೇಕು. ಈ ಹಿನ್ನೆಯಲ್ಲಿ ಸೂಕ್ತ ಅಭ್ಯರ್ಥಿ ಯಾರು ಎಂಬುದನ್ನು ಎರಡೂ ಪಕ್ಷಗಳ ರಾಷ್ಟ್ರ, ರಾಜ್ಯ ನಾಯಕರು ಕೂತು ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.ಇದನ್ನೂ ಓದಿ: 3 ದಿನ ದಸರಾ ರಜೆ ಹಿನ್ನೆಲೆ ಮೆಜೆಸ್ಟಿಕ್‌ನಿಂದ 2000ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ

TAGGED:bjpchannapattanah d kumaraswamyjdsndanikhil kumaraswamyramanagarಎನ್‍ಡಿಎಚನ್ನಪಟ್ಟಣಜೆಡಿಎಸ್ನಿಖಿಲ್ ಕುಮಾರಸ್ವಾಮಿಬಿಜೆಪಿರಾಮನಗರಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

Hezbollah new chief Sheikh Naim Qassem
Latest

ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

Public TV
By Public TV
29 minutes ago
pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
57 minutes ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
1 hour ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
1 hour ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
2 hours ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?