ಸಿಎಂ ವಿದೇಶ ಪ್ರವಾಸ ಕೈಗೊಂಡ್ರೇ ಅದೇನು ದೊಡ್ಡ ಅಪರಾಧವಲ್ಲ: ಸಚಿವ ಶಿವಶಂಕರರೆಡ್ಡಿ

Public TV
1 Min Read
ckb hd kumaraswamy

ಚಿಕ್ಕಬಳ್ಳಾಪುರ: ಸಿಎಂ ಕುಮಾರಸ್ವಾಮಿ ಎರಡು ದಿನ ಪ್ರವಾಸ ಕೈಗೊಂಡರೆ ಅದೇನು ದೊಡ್ಡ ಅಪರಾಧವಲ್ಲ, ಆರೋಗ್ಯ ದೃಷ್ಟಿ ಹಾಗೂ ಬೇರೆ ಬೇರೆ ಕಾರಣಕ್ಕೆ ಹೋಗಿರಬಹುದು. ಆದರೆ ಇದಕ್ಕೆ ವಿರೋಧ ಪಕ್ಷಗಳು ಬರಗಾಲದಲ್ಲಿ ವಿದೇಶ ಪ್ರವಾಸ ಅಂತ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಕೃಷಿ ಸಚಿವ ಶಿವಶಂಕರರೆಡ್ಡಿ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕು ದಿಬ್ಬೂರು ಗ್ರಾಮದಲ್ಲಿ ನಡೆದ ಉರುಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ಬರ ನಿರ್ವಹಣೆ ಸಂಬಂಧ ಸರ್ಕಾರ ಸೂಕ್ತ ಕ್ರಮಗಳನ್ನ ಕೈಗೊಳ್ಳುತ್ತಿದೆ. ಆದರೆ ವಿಪಕ್ಷದವರು ಬರಗಾಲದಲ್ಲಿ ವಿದೇಶ ಪ್ರವಾಸ ಅಂತ ಬೇರೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.

shivshankar

ಸಮ್ಮಿಶ್ರ ಸರ್ಕಾರದಲ್ಲಿ ಕೆಲ ವಿಷಯಗಳಿಗೆ ಭಿನ್ನಾಭಿಪ್ರಾಯಗಳು ಸಾಮಾನ್ಯ, ಪಕ್ಷದ ನಾಯಕರೇ ಆಗಲಿ, ಮಂತ್ರಿಗಳೇ ಆಗಲಿ ಕೂತು ಬಗೆ ಹರಿಸಿಕೊಳ್ಳಬೇಕು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನ ಹತ್ತಿಕ್ಕಲು ನಾವು ದೇಶ-ರಾಜ್ಯದ ಹಿತದೃಷ್ಟಿಯಿಂದ ಒಂದಾಗಿ ಹೋಗಬೇಕಿದೆ. ಹೀಗಾಗಿ ಯಾರೂ ಕೂಡ ಯಾವುದೇ ಭಿನ್ನಾಭಿಪ್ರಾಯಗಳು ಬಂದಾಗ ಮಿತಿ ಮೀರಿ ಮಾತನಾಡುವುದು ಸರಿಯಲ್ಲ ಎಂದರು.

ಇದೇ ವೇಳೆ ಚಿಕ್ಕಬಳ್ಳಾಪುರ ಶಾಸಕ ಡಾ ಕೆ. ಸುಧಾಕರ್‍ಗೆ ಪರಿಸರ ಮಾಲಿನ್ಯ ಮಂಡಳಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ ಎನ್ನಲಾದ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ಪಿಸಿಬಿ ಅಧ್ಯಕ್ಷ ಸ್ಥಾನಕ್ಕೆ ಅದರದ್ದೇ ಆದ ಮಾನದಂಡಗಳಿವೆ, ಈ ವಿಷಯವನ್ನು ನಾನು ಸಹ ಮಾಧ್ಯಮದಲ್ಲಿ ಗಮನಿಸಿದೆ, ಪಿಸಿಬಿ ಅಧ್ಯಕ್ಷರಾಗಲು ಅದರದ್ದೇ ಆದ ವಿದ್ಯಾಭ್ಯಾಸದ ಅರ್ಹತೆ ಇರಬೇಕು ಜೊತೆಗೆ ಪರಿಸರದ ಬಗ್ಗೆ ಹೆಚ್ಚು ತಿಳಿದುಕೊಂಡಿರಬೇಕು ಅಂತಿದೆ. ಹೀಗಾಗಿ ಪಿಸಿಬಿ ಸ್ಥಾನ ತಪ್ಪಿರಬೇಕೇ ಹೊರತು ಬೇರೆ ಯಾವ ಉದ್ದೇಶಗಳಿಂದಲ್ಲ ಎಂಬುದು ನನ್ನ ಭಾವನೆ ಅಂತ ಸ್ಪಷ್ಟಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *